ಯಾರು ಭಾರತವನ್ನು ಪ್ರೀತಿಸುತ್ತಾರೋ ಅವರು ಆರ್‌ಎಸ್‌ಎಸ್ ಪ್ರೀತಿಸುತ್ತಾರೆ ಅಭಿಯಾನಕ್ಕೆ ಚಾಲನೆ

ಸಪ್ತ ಸಾಗರ ವಾರ್ತೆ ವಿಜಯಪುರ, ಅ. 14:ಯಾರು ಭಾರತವನ್ನು ಪ್ರೀತಿಸುತ್ತಾರೋ ಅವರು ಆರ್‌ಎಸ್‌ಎಸ್ ಪ್ರೀತಿಸುತ್ತಾರೆ ಎಂಬ ಅಭಿಯಾನದ ಅಂಗವಾಗಿ ಈ ಸಂದೇಶವುಳ್ಳ ಪೋಸ್ಟರ್ ಅಂಟಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಬಿಜೆಪಿ ನಗರ ಮಂಡಳ ವತಿಯಿಂದ ಅಧ್ಯಕ್ಷ ಸಂದೀಪ್ ಪಾಟೀಲ್ (ಝಳಕಿ) ನೇತೃತ್ವದಲ್ಲಿ ವಿಜಯಪುರದ ವಾರ್ಡ್ ನಂ.೭ ರಲ್ಲಿ ವಿದ್ಯುಕ್ತ ಚಾಲನೆ ನೀಡಲಾಯಿತು.ಅಭಿಯಾನದಲ್ಲಿ ಪಾಲ್ಗೊಂಡ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಆರ್‌ಎಸ್‌ಎಸ್ ನಿಷೇಧ ಮಾಡುವ ಹೇಳಿಕೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಬಾಲಿಷತನದಿಂದ ಕೂಡಿದೆ….

Read More

ಕನ್ನೂರ ಜೋಡಿ ಕೊಲೆ ಪ್ರಕರಣ: ಐವರು ಆರೋಪಿಗಳ ಬಂಧನ, ಪರಾರಿಯಾಗಲು ಯತ್ನಿಸಿದ ಓರ್ವ ಆರೋಪಿ ಮೇಲೆ ಫೈರಿಂಗ್

ಸಪ್ತಸಾಗರ ವಾರ್ತೆ,ವಿಜಯಪುರ, ಅ. 14: ತಾಲೂಕಿನ ಕನ್ನೂರು ಗ್ರಾಮದಲ್ಲಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಪೊಲೀಸರ ಮೇಲೆ ಬೈಕ್ ಹಾಯಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.ಸಾಗರ ಬೆಳ್ಳುಂಡಗಿ ಹಾಗೂ ಇಸಾಕ್ ಖರೇಷಿ ಕೊಲೆ ಮಾಡಿದ ಆರೋಪಿಗಳ ಪೈಕಿ ಒಟ್ಟು ಐದು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.ಆರೋಪಿ ಅಕ್ಷಯ ಶಿವಾನಂದ ಜುಲಜುಲೆ ಪೊಲೀಸರ ಮೇಲೆ ಬೈಕ್ ಹಾಯಿಸಿ ಪರಾರಿಯಾಗಲು ಯತ್ನ ನಡೆಸಿದ.ಆಗ ವಿಜಯಪುರ…

Read More

ನವೆಂಬರ್ ನಲ್ಲಿ ಕವಿಗೋಷ್ಠಿ: ಕವಿತೆಗಳಿಗೆ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ, ಅ. 13:ಕನ್ನಡ ಪುಸ್ತಕ ಪರಿಷತ್ತಿನ ವತಿಯಿಂದ ಐತಿಹಾಸಿಕ ನಗರ ವಿಜಯಪುರದಲ್ಲಿ ನವೆಂಬರ್ ತಿಂಗಳಲ್ಲಿ ನಡೆಯುವ ಕನ್ನಡ ಪುಸ್ತಕ ಪರಿಷತ್ತು ಸಮ್ಮೇಳನದಲ್ಲಿ ಈ ಬಾರಿ ಅರ್ಥಪೂರ್ಣವಾದ ವಿಶಿಷ್ಟ ರೀತಿಯ ಕವನ ವಾಚನ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.ನಾಡಿನ ಕವಿಗಳು ತಮ್ಮ ಸ್ವ ರಚಿತ ಕವನ ವನ್ನು ಸ್ಪರ್ಧೆಯಲ್ಲಿ ವಾಚಿಸುವುದರ ಮೂಲಕ ಸಾವಿರದ ಬಹುಮಾನವನ್ನು ಗಿಟ್ಟಿಸಿಕೊಳ್ಳಬಹುದಾಗಿದೆ.ಕವನ ವಾಚನ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ಕವಿಗಳು ತಮ್ಮ ಒಂದು ಸ್ವ ರಚಿತ ಕವನವನ್ನು ಪ್ರೊ, ಎ.ಎಚ್. ಕೊಳಮಲಿ, ಮುಖ್ಯೋಪಾಧ್ಯಾಯರು ಚೇತನಾ ಆಂಗ್ಲ್…

Read More

ವಿಜಯಪುರದಲ್ಲಿ ಎರಡು ದಿನಗಳ ರಾಷ್ಟ್ರೀಯ ಮಟ್ಟದ ಮಧುಮೇಹ ವೈದ್ಯಕೀಯ ಸಮ್ಮೇಳನ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 13:ನಗರದ ಖಾಸಗಿ ಹೊಟೇಲ್ ನಲ್ಲಿ ಎರಡು ದಿನದ ರಾಷ್ಟ್ರೀಯ ಮಟ್ಟದ ಡೈಕಾನ್ ಮಧುಮೇಹ ವೈದ್ಯಕೀಯ ಸಮ್ಮೇಳನ ಯಶಸ್ವಿಯಾಗಿ ನೆರವೇರಿತು.ಶ್ರೀ ತುಳಸಿಗಿರೀಶ ಮಧುಮೇಹ ಆಸ್ಪತ್ರೆ ಮತ್ತು ಸಂಶೋದನೆ ಕೇಂದ್ರದ ನೇತೃತ್ವದಲ್ಲಿ ಶ್ರೀ ತುಳಸಿಗಿರೀಶ ಫೌಂಡೇಶನ್, ಬಿ.ಎಲ್.ಡಿ ವಿಶ್ವವಿದ್ಯಾಲಯ, ಎ.ಸಿ.ಪಿ ಇಂಡಿಯಾ ಚಾಪ್ಟರ್, ರಾಜ್ಯ ಮಧುಮೇಹ ಸಂಶೋಧನಾ ಕೇಂದ್ರ (RSSDI) ಹಾಗೂ ವಿಜಯಪುರದ ಭಾರತೀಯ ವೈದ್ಯಕೀಯ ಸಂಘದ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಮಧುಮೇಹ ವೈದ್ಯಕೀಯ ಸಮ್ಮೇಳನದಲ್ಲಿ‌(ಡೈಕಾನ್) ಭಾರತದ ವಿವಿಧ ಕಡೆಯಿಂದ ಹಾಗೂ ಕರ್ನಾಟಕದ ವಿವಿಧ…

Read More

ವೋಟ್ ಚೋರಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 13:ವೋಟ್ ಚೋರಿ ವಿರುದ್ಧ ಹಾಗೂ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಶೂ ಎಸೆದ ಪ್ರಕರಣ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ರಮೇಶ ಗುಬ್ಬೇವಾಡ ಅವರ ನೇತೃತ್ವದಲ್ಲಿ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆಗೆ ಆಗ್ರಹಿಸಿ ಹಾಗೂ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ…

Read More

ಕುಮಾರಿ ಶಿಫಾ ಜಮಾದಾರಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 13: ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಎಂಟು ದಿನಗಳ ಕಾಲ ನಡೆದ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತ ದೇಶದಿಂದ ಏಕೈಕ ಯುವ ಪ್ರತಿನಿಧಿಯಾಗಿ ಭಾಗವಹಿಸಿ `ವಿಶ್ವಶಾಂತಿ ಅಗತ್ಯತೆ ಹಾಗೂ ವಿಶ್ವಶಾಂತಿಯಲ್ಲಿ ಭಾರತದ ಪಾತ್ರ’ ಕುರಿತು ಮಹತ್ವಪೂರ್ಣ ಸಂದೇಶ ಸಾರಿ ವಿಜಯಪುರದ ಕೀರ್ತಿಯನ್ನು ಹೆಚ್ಚಿಸಿದ ಕುಮಾರಿ ಶಿಫಾ ಜಮಾದಾರ ಅವರನ್ನು ಕೃಷಿ ಉತ್ಪನ್ನ ಮಾರುಕಟ್ಟೆ, ಜವಳಿ, ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ತಮ್ಮ ಗೃಹ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ…

Read More

ತ್ವರಿತವಾಗಿ ಬೆಳೆ ಹಾನಿ ಪರಿಹಾರ ನೀಡಲು ಬಿಜೆಪಿ ರೈತ ಮೋರ್ಚಾ ನಿಯೋಗ ಜಿಲ್ಲಾಧಿಕಾರಿಗಳಿಗೆ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 13:ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಭೇಟಿ ಮಾಡಿ ಬೆಳೆ ಪರಿಹಾರವನ್ನು ಕೂಡಲೇ ನೀಡಬೇಕೆಂದು ಸೋಮವಾರ ಸಂಜೆ ಮನವಿ ಸಲ್ಲಿಸಲಾಯಿತು.ರಾಜ್ಯದಲ್ಲಿ ಯಾವುದೇ ಜಿಲ್ಲೆಯಲ್ಲಿ ಆಗದಷ್ಟು ವಾಡಿಕೆಗಿಂತ ಹೆಚ್ಚಿನ ಮಳೆ ವಿಜಯವುರ ಜಿಲ್ಲೆಯಲ್ಲಿ ಆಗಿದೆ ವರದಿಗಳ ಪ್ರಕಾರ ವಾಡಿಕೆ ಗಿಂತ ಶೇ 150 ಕ್ಕೂ ಹೆಚ್ಚು ಮಳೆಯಾಗಿದೆ ಎಂದು ತಿಳಿದು ಬಂದಿರುತ್ತದೆ. ವಿಜಯಪುರ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ 7.50 ಲಕ್ಷ ಹೆಕ್ಟರ್ ಪ್ರದೇಶದ ಬೆಳೆ ಸಂಪೂರ್ಣ ನಾಶವಾಗಿದೆ. ಮೂರು…

Read More

ಕಲಾವಿದ ರಾಜು ತಾಳಿಕೋಟಿ ನಿಧನಕ್ಕೆ ಡಿಸಿಎಂ ಡಿ. ಕೆ. ಶಿವಕುಮಾರ ಸಂತಾಪ

ಸಪ್ತಸಾಗರ ವಾರ್ತೆ, ಬೆಂಗಳೂರು: ಖ್ಯಾತ ರಂಗಭೂಮಿ‌ ನಟ, ಹಾಸ್ಯ ಕಲಾವಿದ,ಧಾರವಾಡ ರಂಗಾಯಣದ ನಿರ್ದೇಶಕರಾಗಿರುವರಾಜು ತಾಳಿಕೋಟಿ ಅವರು ಹೃದಯಾಘಾತದಿಂದ ನಿಧನರಾಗಿರುವುದು ಅತ್ಯಂತ ದುಃಖಕರ ವಿಷಯವಾಗಿದೆ ಎಃದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸಂತಾಪ ಸೂಚಿಸಿದ್ದಾರೆ.ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆ ಪಡೆದಿದ್ದ ರಾಜು ತಾಳಿಕೋಟಿ ಅವರ ಅಗಲಿಕೆ ಕನ್ನಡ ಚಿತ್ರರಂಗಕ್ಕೆ ನಷ್ಟವಾಗಿದೆ ಎಂದವರು ತಿಳಿಸಿದ್ದಾರೆ.ದೇವರು ರಾಜು ತಾಳಿಕೋಟಿ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಉಪ ಮುಖ್ಯಮಂತ್ರಿ ಶಿವಕುಮಾರ ಅವರು…

Read More

ಡಾಗ್ ಶೆಲ್ಟರ್ ನಿರ್ಮಾಣಕ್ಕೆ ಕ್ರಮ ವಹಿಸಿ : ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ.10: ಸರ್ವೋಚ್ಛ ನ್ಯಾಯಾಲಯದ ತೀರ್ಪಿನಂತೆ ಬೀದಿ ನಾಯಿಗಳಿಗೆ ಆಶ್ರಯ ಒದಗಿಸಲು ಬುರಾಣಪುರದಲ್ಲಿ ಕಾಯ್ದಿರಿಸಿದ ಎರಡು ಎಕರೆ ಜಾಗದಲ್ಲಿ ಡಾಗ್ ಶೆಲ್ಟರ್ ನಿರ್ಮಾಣಕ್ಕಾಗಿ ನೀಲ ನಕ್ಷೆ ತಯಾರಿಸಿ ಸಲ್ಲಿಸುವಂತೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದ್ದಾರೆ.ಸೋಮವಾರ ನಗರದ ಬುರಾಣಪುರದಲ್ಲಿರುವ ಗೋಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ, ಡಾಗ್ ಶೆಲ್ಟರ್ ನಿರ್ಮಾಣಕ್ಕೆ ಸೂಚನೆ ನೀಡಿ, ಗೋಶಾಲೆಗಳಲ್ಲಿರುವ ಜಾನುವಾರುಗಳನ್ನು ಕಾಳಜಿಯಿಂದ ನೋಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ…

Read More

ನಿವೃತ್ತ ಸರಕಾರಿ ನೌಕರರ ಸೇವೆಗಾಗಿ ಸದಾಸಿದ್ದ – ಅಬ್ದುಲ್ ರಹಿಮ್ ಖಾಜಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 12:ನಿವೃತ್ತ ಸರ್ಕಾರಿ ನೌಕರರ ಸೇವೆಗೆ ನಾನು ಸದಾ ಬದ್ಧನಾಗಿರುವೆ ಎಂದು ರಾಜ್ಯ ಸರಕಾರಿ ನಿವೃತ್ತ ಮುಸ್ಲಿಂ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ಅಬ್ದುಲರಹಿಮ್ ಖಾಜಿ ಹೇಳಿದರು.ನಗರದ ಯಾಸೀನ್ ಮಸೀದ್ ಹಿಂದುಗಡೆ ಇರುವ ನ್ಯೂ ಲೈಫ್ ಪ್ರೀ ಪ್ರೈಮರಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ನಿವೃತ್ತ ಸರ್ಕಾರಿ ನೌಕರರ ಸಭೆಯಲ್ಲಿ ಅವರು ಮಾತನಾಡಿದರು.ನಿವೃತ್ತ ಸರಕಾರಿ ನೌಕರರ ಸಮಸ್ಯೆಗಳ ಕುರಿತು ವಿಶೇಷವಾಗಿ ಚರ್ಚಿಸಿ ವಿಜಯಪುರ ಜಿಲ್ಲೆಯ ನಿವೃತ್ತ ನೌಕರರ ಸೇವೆಗಾಗಿ ನಾನು ಸದಾ ಸಿದ್ದ. ಆನ್‌ಲೈನ್ ಯುಗದಲ್ಲಿ ಪ್ರತಿ…

Read More