ಉದ್ಯೋಗ ಮೇಳದಲ್ಲಿ 120 ಯುವಕರು ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 10: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರತಿಷ್ಠಿತ ಟೋಯೋಟಾ ಕಿರ್ಲೋಸ್ಕರ ಪ್ರೈ. ಲಿ. ಸಂಸ್ಥೆ ಆಯೋಜಿಸಿದ್ದ ನೇರ ಸಂದರ್ಶನ ಉದ್ಯೋಗ ಮೇಳದಲ್ಲಿ 120 ಯುವಕರು ಆಯ್ಕೆಯಾಗಿದ್ದಾರೆ.ಅಕ್ಟೋಬರ್ 9 ಗುರುವಾರ ನಡೆದ ಈ ಸಂದರ್ಶನದಲ್ಲಿ 280ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಿರ್ಲೋಸ್ಕರ್ ಸಂಸ್ಥೆಯ ವತಿಯಿಂದ ಮಾನವ ಸಂಪನ್ಮೂಲ ಅಧಿಕಾರಿ ಅಭಿಷೇಕ ಮತ್ತು ಹಿರಿಯ ತರಬೇತಿ ಅಧಿಕಾರಿಗಳು ಸಂದರ್ಶನ ನಡೆಸಿದ್ದರು.ಈ ಸಂದರ್ಶನದಲ್ಲಿ ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಹಾಗೂ ಆಟೋಮೋಬೈಲ್ ಎಂಜಿನೀಯರಿಂಗ್…

Read More

12ರಂದು ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಚುನಾವಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 10:ನಗರದ ಪ್ರತಿಷ್ಠಿತ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿಯ ಚುನಾವಣೆ ಅ. 12ರಂದು ನಡೆಯಲಿದೆ.೨೦೨೫ ರಿಂದ ೨೦೩೦ ರ ಅವಧಿಗೆ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ಚುನಾವಣೆ ಬಿ.ಎಲ್.ಡಿ.ಇ. ರಸ್ತೆಯ ಎಸ್. ಎಸ್. ಹೈಸ್ಕೂಲ್ ಕಟ್ಟಡದಲ್ಲಿ ಅ.೧೨ರಂದು ಬೆಳಿಗ್ಗೆ ೯ ಗಂಟೆಯಿಂದ ಸಾಯಂಕಾಲ ೪ ಗಂಟೆಯವರೆಗೆ ಮತದಾನ ನಡೆಯಲಿದೆ.ಹೈಸ್ಕೂಲ್ ಆವರಣದ ಸುತ್ತಮುತ್ತಲಿನ ೧೦೦ ಮೀಟರ್ ಸ್ಥಳ ಬಿಟ್ಟು ವಾರದ ಸಂತೆಯನ್ನು ಸ್ಥಳಾಂತರಿಸಿ, ಕ್ರಮವಿಡಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದರಿಂದ ಅ. ೧೨ ರಂದು…

Read More

ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 10: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ. ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಮತ್ತು‌ ಸಚಿವ ಎಂ. ಬಿ. ಪಾಟೀಲ ಅವರ ಜನ್ಮದಿನ ಆಚರಿಸಲಾಯಿತು.ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮಿಕಿ‌ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.ಇದೇ ವೇಳೆ ಬಿ.ಎಲ್.ಡಿ.ಇ‌ ಸಂಸ್ಥೆಯ ಅಧ್ಯಕ್ಷ ಮತ್ತು‌‌ ಸಚಿವ ಎಂ. ಬಿ. ಪಾಟೀಲ ಅವರ ಜನ್ಮದಿನವನ್ನು ಸಸಿ ವಿತರಿಸಯವ ಮೂಲಕ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ‌ ಸಹಾಯಕ ಪ್ರಾಧ್ಯಾಪಕ‌ ಡಾ….

Read More

ಸಿದ್ಧಸಿರಿ: ಮಲ್ಟಿಸ್ಟೇಟ್ ಮಲ್ಟಿ ಪರ್ಪೋಸ್ ಕೋ.ಆಪರೇಟಿವ್ ಸೊಸೈಟಿ ಲಿಮಿಟೆಡ್ ಆಗಿ ಪರಿವರ್ತನೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 9: ನಗರದ ಸಿದ್ಧಸಿರಿ ಸೌಹಾರ್ದ ಸಹಕಾರಿ ಸಂಘವು ಸಹಕಾರ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಶೇಷವಾದ ಪ್ರಗತಿಯನ್ನು ಸಾಧಿಸಿ, ಕೇಂದ್ರ ಸರ್ಕಾರದಿಂದ ಅನುಮತಿ ಪಡೆದು ಸಿದ್ಧಸಿರಿ ಮಲ್ಟಿಸ್ಟೇಟ್ ಮಲ್ಟಿ ಪರ್ಪೋಸ್ ಕೋ.ಆಪರೇಟಿವ್ ಸೊಸೈಟಿ ಲಿಮಿಟೆಡ್ ಆಗಿ ಪರಿವರ್ತನೆಯಾಗಿದೆ ಎಂದು ಸೊಸೈಟಿ ಅಧ್ಯಕ್ಷರು ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.ಈ ಕುರಿತು ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, 2006ರ ಮೇ 29 ರಂದು ಶುಭ ಗಳಿಗೆಯಲ್ಲಿ ಪ್ರಾರಂಭವಾಗಿ ಕರ್ನಾಟಕ ರಾಜ್ಯದಾದ್ಯಂತ ಕಾರ್ಯಕ್ಷೇತ್ರ…

Read More

ರಾಜಕಾಲುವೆ ಒತ್ತುವರಿ ತೆರವುಗೊಳಿಸಿ:ಮಹಾಬರಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 9 : ಮಳೆ ನೀರು ಬಂದಾಗ ಅನೇಕ ಬಡಾವಣೆಗಳು ಅಕ್ಷರಶ: ನಡುಗಡ್ಡೆಯಾಗುತ್ತವೆ. ಈ ಎಲ್ಲ ಸಮಸ್ಯೆಗಳಿಗೆ ರಾಜಕಾಲುವೆಗಳ ವ್ಯವಸ್ಥೆ ಪುನರುಜ್ಜೀವನಗೊಳಿಸುವುದೇ ಪರಿಹಾರವಾಗಿದೆ. ಆದಿಲ್‌ಶಾಹಿ ಕಾಲದಲ್ಲಿ ಈಗಿರುವ ಜನಸಂಖ್ಯೆಗಿಂತ ೧೦ ಪಟ್ಟು ಹೆಚ್ಚು ಜನಸಂಖ್ಯೆ ಇತ್ತು. ಅರಸು ನೀರಿನ ಸಮರ್ಥ ಸದ್ಭಳಕೆಯ ಜೊತೆಗೆ ಮಳೆ ನೀರು ಹರಿದು ಹೋಗಲು, ಚರಂಡಿ ನೀರು ಹರಿದು ಹೋಗಲು ರಾಜಕಾಲುವೆ ನಿರ್ಮಿಸಿದ್ದರು. ಈ ವ್ಯವಸ್ಥೆ ಈಗಲೂ ಇದೆ. ಆದರೆ ರಾಜಕಾಲುವೆಗಳ ಒತ್ತುವರಿಯಿಂದಾಗಿ ನಗರದ ನೀರು ಹೊರ ಹೋಗದೇ…

Read More

ಶಿಫಾಗೆ ಜಿಲ್ಲಾಧಿಕಾರಿ ಆನಂದ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 9:ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಎಂಟು ದಿನಗಳ ಕಾಲ ನಡೆದ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತ ದೇಶದಿಂದ ಏಕೈಕ ಯುವ ಪ್ರತಿನಿಧಿಯಾಗಿ ಭಾಗವಹಿಸಿ ವಿಶ್ವ ಶಾಂತಿಯ ಸಂದೇಶ ಸಾರಿದ ವಿಜಯಪುರದ ಹೆಮ್ಮೆಯ ಕುಮಾರಿ ಶಿಫಾ ಜಮಾದಾರ ಅವರಿಗೆ ವಿಜಯಪುರ ಜಿಲ್ಲಾಧಿಕಾರಿ ಡಾ.ಕೆ. ಆನಂದ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೃದಯಪೂರ್ವಕವಾಗಿ ಸನ್ಮಾನಿಸಿ ಗೌರವಿಸಿದರು.ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ….

Read More

ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ: ಸಂವಿಧಾನದ ಮೇಲೆ ನಡೆದ ದಾಳಿ- ರಾಜು ಆಲಗೂರ ಖಂಡನೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 8 : ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಚಪ್ಪಲಿ ಎಸೆತ ಪ್ರಕರಣ ನಡೆದಿರುವುದು ಅತ್ಯಂತ ಒಂದು ರೀತಿ ಸಂವಿಧಾನ ಮೇಲೆ ನಡೆದಿರುವ ದಾಳಿ. ಇದನ್ನು ನಾವು ಕ್ಷಮಿಸುವುದಿಲ್ಲ, ಆರೋಪಿ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಅ.೧೬ ರಂದು ವಿಜಯಪುರ ಬಂದ್ ಕರೆ ನೀಡಲಾಗಿದೆ ಎಂದು ಮಾಜಿ ಶಾಸಕ ರಾಜು ಆಲಗೂರ ಹೇಳಿದರು.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಂತ ಬಲದಿಂದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆ ಅಲಂಕರಿಸಿದ ಬಿ.ಆರ್. ಗವಾಯಿ ಅವರ ಹುದ್ದೆ…

Read More

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿಕೆಶಿ

ಸಪ್ತಸಾಗರ ವಾರ್ತೆ ಬೆಂಗಳೂರು, ಅ.8:“ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆ ತಪ್ಪು. ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದನ್ನು ನಾವೆಲ್ಲರೂ ಖಂಡಿಸಬೇಕು. ತಪ್ಪಿತಸ್ಥನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದರು.ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.ಸುಪ್ರೀಂಕೋರ್ಟ್ ನಲ್ಲಿ ಶೂ ಎಸೆತ ಪ್ರಕರಣದ ಬಗ್ಗೆ ಕೇಳಿದಾಗ, “ಮುಖ್ಯ ನ್ಯಾಯಮೂರ್ತಿಯವರು ತಪ್ಪಿತಸ್ಥನ ವಿರುದ್ಧ ಕ್ರಮ ತೆಗದುಕೊಳ್ಳಬೇಡಿ ಎಂದಿದ್ದಾರೆ. ಆದರೂ ಸುಮೋಟೋ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು” ಎಂದರು….

Read More

ಪ್ರವಾಹ ಪೀಡಿತ ಪ್ರದೇಶಗಳಿಗೆ ತುರ್ತು ಪರಿಹಾರ ಘೋಷಣೆಗೆ ಶಾಸಕ ಯತ್ನಾಳ ಪ್ರಧಾನಿಗೆ ಪತ್ರ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 8: ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಿಗೆ ತುರ್ತು ಪರಿಹಾರಕ್ಕಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಬುಧವಾರ ಪತ್ರ ಬರೆದು ಮನವಿ ಮಾಡಿದ್ದಾರೆ.ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಉಂಟಾಗಿರುವ ಪ್ರವಾಹದಿಂದ ದೊಡ್ಡ ಪ್ರಮಾಣದಲ್ಲಿ ಹಾನಿ ಮತ್ತು ಸ್ಥಳಾಂತರಕ್ಕೆ ಕಾರಣವಾಗಿದೆ. ಭೀಮಾ ನದಿಯ ದಡದಲ್ಲಿ ಉಂಟಾದ ಭಾರಿ ಪ್ರವಾಹವು 10 ಲಕ್ಷ ಹೆಕ್ಟೇರ್ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಷ್ಟಕ್ಕೆ ಕಾರಣವಾಗಿದ್ದು, ರೈತರು ತಾವು ಬೆಳೆದ ಬೆಳೆಗಳು…

Read More

ಬೃಹತ್ ಉದ್ಯೋಗ ಮೇಳದಲ್ಲಿ 65 ಜನ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 8: ಅಂತಾರಾಷ್ಟ್ರೀಯ ದೈತ್ಯ ಕಂಪನಿ ಫಾಕ್ಸ್ ಕಾನ್ ನಗರದ ಬಿಎಲ್.ಡಿ.ಇ ಸಂಸ್ಥೆ ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಎಂಜನಿಯರಿಂಗ್ ಕಾಲೇಜಿನಲ್ಲಿ ಎಂಜನಿಯರಿಂಗ್ ಮತ್ತು ಡಿಪ್ಲೋಮಾ ಪಾಸಾದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳದಲ್ಲಿ 65 ಜನ ಆಯ್ಕೆಯಾಗಿದ್ದಾರೆ.ಅಂತಾರಾಷ್ಟ್ರೀಯ ಬೃಹತ್ ಸಂಸ್ಥೆಯಾಗಿರುವ ಫಾಕ್ಸ್ ಕಾನ್ ಜಗತ್ತಿನಲ್ಲಿಯೇ ಐಪೋನ್ ತಯಾರಿಕೆಯಲ್ಲಿ ಅಗ್ರಗಣ್ಯ ಸಂಸ್ಥೆಯಾಗಿದ್ದು, ಈ ಕಂಪನಿಯ ಆಡಳಿತ ಮಂಡಳಿಗೆ ವಿಜಯಪುರ ಹಾಗೂ ಸುತ್ತಲಿನ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ತಮ್ಮ ಕಂಪನಿಯಲ್ಲಿ ಹೆಚ್ಚಿನ ಅವಕಾಶ ನೀಡಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ…

Read More