ನ್ಯಾಯಾಧೀಶರ ಮೇಲೆ ಶೂ ಎಸೆತ ಪ್ರಕರಣ: ಹೊನಮೋಡೆ ಖಂಡನೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 8: ಸುಪ್ರೀಂಕೋರ್ಟ್ ಸಿಜೆಐ ಮೇಲೆ ಶೂ ಎಸೆತ ಪ್ರಕರಣವನ್ನುಜಿಲ್ಲಾ ಶಿವಶರಣ ಸಮಗಾರ ಹರಳಯ್ಯಸಮಾಜದ ಮುಖಂಡ ವಸಂತ ಹೊನಮೋಡೆ ತೀವ್ರವಾಗಿ ಖಂಡಿಸಿದ್ದಾರೆ.ಭಾರತದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಧೀಶರಾದ ಸಿಜೆಐ ಬಿ. ಆರ್. ಗವಾಯಿ ಅವರ ಮೇಲೆ ರಾಕೇಶ ಕಿಶೋರ್ ಎಂಬ ಹಿರಿಯ ವಕೀಲ ನ್ಯಾಯಾಲಯ ಸಭಾಂಗಣದಲ್ಲಿ ಶೂ ಎಸೆದು ಭಾರತದ ಉಚ್ಛ ನ್ಯಾಯಾಲಯಕ್ಕೆ ಹಾಗೂ ಭಾರತದ ಸಂವಿಧಾನ ರಚಿಸಿದ ಡಾ. ಬಿ.ಆರ್. ಅಂಬೇಡ್ಕರ ಅವರಿಗೆ ತೀವ್ರ ಅವಮಾನ ಮಾಡಿದ್ದು, ಈ ನ್ಯಾಯವಾದಿಗೆ ಕಠಿಣ…

Read More

ಜಗತ್ತಿನ ಮಹಾನ್ ಜ್ಞಾನಿ ಮಹರ್ಷಿ ವಾಲ್ಮೀಕಿ – ಸಾಹಿತಿ ಪ್ರೊ. ಎ.ಎಚ್. ಕೊಳಮಲಿ

ಸಪ್ತಸಾಗರ ವಾರ್ತೆ ವಿಜಯಪುರ,ಅ. 8:ಹಿಂದೂ ಧರ್ಮದ ಪವಿತ್ರಗ್ರಂಥವಾದ ರಾಮಾಯಣವನ್ನು ರಚಿಸುವುದರ ಮೂಲಕ ಹಿಂದೂ ಧರ್ಮಕ್ಕೆ ಅಪಾರ ಕೊಡುಗೆಯನ್ನು ನೀಡಿದ ಜಗತ್ತಿನ ಮಹಾನ್ ಜ್ಞಾನಿ ವಾಲ್ಮೀಕಿ ಋಷಿ ಎಂದು ಸಾಹಿತಿ ಪ್ರೊ. ಎ.ಎಚ್. ಕೊಳಮಲಿ ಹೇಳಿದರು.ಮಂಗಳವಾರ ನಗರದ ಕರ್ನಾಟಕ ಕನಕದಾಸ ಶಿಕ್ಷಣ ಸಂಸ್ಥೆಯ ಕನಕ ಪೂರ್ವ ಪ್ರಾಥಮಿಕ ಪಬ್ಲಿಕ್ ಶಾಲೆ ಹಾಗೂ ನವೋದಯ ಕೋಚಿಂಗ್ ಸೆಂಟರ್ ನಲ್ಲಿ ಹಮ್ಮಿಕೊಂಡ ವಾಲ್ಮೀಕಿ ಜಯಂತಿಯ ಕಾರ್ಯಕ್ರಮದಲ್ಲಿ ವಾಲ್ಮೀಕಿ ಋಷಿಯ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ವಿಶೇಷ ಉಪನ್ಯಾಸವನ್ನು ನೀಡಿದರು. ರತ್ನಾಕರನಾಗಿ ಜನಿಸಿದ ಋಷಿ…

Read More

ರಾಮಾಯಣ ಮೌಲಿಕ ಕೃತಿ – ಡಾ ಸಂಗಮೇಶ ಮೇತ್ರಿ

ಸಪ್ತ ಸಾಗರ ವಾರ್ತೆ ವಿಜಯಪುರ, ಅ. 7: ಕ್ರಿ.ಪೂ. ೫೦೦ ವರ್ಷಗಳ ಹಿಂದೆ ಮಹರ್ಷಿ ವಾಲ್ಮೀಕಿ ಜಗತ್ತಿಗೆ ನೀಡಿದ ಬಹುದೊಡ್ಡ ಕೃತಿ ರಾಮಾಯಾಣ, ಜೀವನ ಮೌಲ್ಯವನ್ನು ತುಂಬಿ ಸರ್ವಕಾಲಿಕ ಸತ್ಯಗಳನ್ನು ಮುಂದಿನ ಜನಾಂಗಕ್ಕೆ ಸಾಗಿಸಿದ. ಮಹಾನ್ ಚೇತನ ವಾಲ್ಮೀಕಿ ಮಹರ್ಷಿಗಳು ಆಗಿದ್ದರು. ತನ್ನ ಹೊಟ್ಟೆ ಪಾಡಿಗೆ ಬೇಟೆ ಆಡಿ ಜೀವನ ಸಾಗುಸುತ್ತಿದ್ದ ಬೇಡ ಒಬ್ಬ ರಾಮಾಯಣ ಕೃತಿ ಜಗತ್ತಿಗೆ ನೀಡಿದ ಶ್ರೇಷ್ಠ ಕವಿಯಾಗಿ ಬದಲಾವಣೆ ಆದದ್ದು ಸರ್ವಕಾಲಿಕ ಸತ್ಯವಾಗಿದೆ ಎಂದು ವಿ.ಎಸ್. ಜಿ ಕಲಾ ಮತ್ತು ವಾಣಿಜ್ಯ…

Read More

ಅಂಬಾ ಭವಾನಿ ದೇವಸ್ಥಾನದಲ್ಲಿ ನವರಾತ್ರೋತ್ಸವ ಸಂಪನ್ನ

ಸಪ್ತಸಾಗರ ವಾರ್ತೆ, ವಿಜಯಪುರ, ಅ.7 : ವಿಜಯಪುರ ನಗರದ ಕವತಾಳ ಲೇಔಟ್‌ನ ಶ್ರೀ ಅಂಬಾ ಭವಾನಿ ದೇವಸ್ಥಾನದಲ್ಲಿ ನವರಾತ್ರೋತ್ಸವ ಭಕ್ತಿಭಾವದಿಂದ ಮತ್ತು ವೈಭವೋಪೇತವಾಗಿ ನೆರವೇರಿತು. ಕೊಜಾಗರಿ ಪೂರ್ಣಿಮೆಯ ದಿನದಂದು ಬೆಳಿಗ್ಗೆ ದೇವಿಗೆ ಮಹಾಪೂಜೆ ಹಾಗೂ ಅಲಂಕಾರ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸಲಾಯಿತು.ನಂತರ ಋತ್ವಿಜ ಗಣದ ನೇತೃತ್ವದಲ್ಲಿ ಚಂಡಿ ಹವನವನ್ನು ವೈದಿಕ ಪದ್ದತಿಯ ಪ್ರಕಾರ ಸಂಪನ್ನಗೊಳಿಸಲಾಯಿತು. ಮಧ್ಯಾಹ್ನ 1 ಗಂಟೆಗೆ ಪೂರ್ಣಾಹುತಿ ನಡೆದಿದ್ದು, ನಂತರ ಮಧ್ಯಾಹ್ನ 1.30ಕ್ಕೆ ಭಕ್ತರಿಗಾಗಿ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ರಾತ್ರಿ 11 ಗಂಟೆಗೆ ಗೊಂಧಳ ಕಾರ್ಯಕ್ರಮವೂ…

Read More

ರಾಜ್ಯಮಟ್ಟದ ಕೃಷಿ ಸಖಿಯರ ಸಂಘ ಅಸ್ತಿತ್ವಕ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 7: ನಗರದ ಕನಕದಾಸ ಬಡಾವಣೆಯಲ್ಲಿ ಇರುವ ಕೃಷಿ ತಂತ್ರಜ್ಞರ ಸಭಾಭವನದಲ್ಲಿ ರಾಜ್ಯಮಟ್ಟದ ಕೃಷಿ ಸಖಿಯರ ಸಮಾವೇಶ ಜರುಗಿತು.ನಿವೃತ್ತ ಸಹ ವಿಸ್ತರಣೆ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಸಮಾವೇಶ ಉದ್ಘಾಟಿಸಿ ಮಾತನಾಡಿ, ಕೃಷಿ ಸಖಿಯರು, ಕೃಷಿ ಇಲಾಖೆ ಹಾಗೂ ರೈತರ ಮಧ್ಯೆ ಕೊಂಡಿಯಾಗಿ ಕೆಲಸವನ್ನು ನಿರ್ವಹಿಸುತ್ತಿದ್ದಾರೆ. ಪಂಚಾಯತ್ ಹಾಗೂ ಇತರೆ ಸಂಸ್ಥೆಯವರು ವಹಿಸಿದ ಜವಾಬ್ದಾರಿಯನ್ನು ಸಮರ್ಪಕವಾಗಿ ಮಾಡುತ್ತಿದ್ದಾರೆ. ಇವರು ಗೌರವಧನದ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದು , ಸಂಘಟಿತರಾಗಿ ಹೆಚ್ಚಿನ ಸೇವೆಯನ್ನು ಸಲ್ಲಿಸಲು…

Read More

16 ಕಿ.ಮಿ ಓಟದ ಮೂಲಕ ಸಚಿವ ಎಂಬಿಪಿ ಹುಟ್ಟುಹಬ್ಬ ಆಚರಣೆ

ಸಪ್ತ ಸಾಗರ ವಾರ್ತೆ,ವಿಜಯಪುರ, ಅ.7: ವಿಜಯಪುರ ಹೊರವಲಯದ ಮಾನವ ನಿರ್ಮಿತ ಅರಣ್ಯ ಪ್ರದೇಶದಲ್ಲಿ 16 ಕಿ.ಮೀ ಓಡುವ ಮೂಲಕ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು ಸಚಿವ ಎಂ.ಬಿ.ಪಾಟೀಲ ಅವರ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದರು.ಇಂದು ಬೆಳಗ್ಗೆ 6 ಗಂಟೆಗೆ ಬಿ.ಎಂ. ಪಾಟೀಲ ವೃತ್ತದಿಂದ ಓಟ ಆರಂಭಿಸಿದ ಸದಸ್ಯರು, ಸೋಲಾಪುರ, ಅರಕೇರಿ ರಸ್ತೆ ಮೂಲಕ ಭೂತನಾಳ ಕೆರೆ ಪರಿಸರದಲ್ಲಿ, ಕರಾಡ ದೊಡ್ಡಿ ಅರಣ್ಯದಲ್ಲಿ ಓಡುತ್ತ, ಬಿ.ಎಂ.ಪಾಟೀಲ ವೃತ್ತಕ್ಕೆ ಮರಳಿದರು. ಒಟ್ಟು 16 ಕಿ.ಮೀ ಓಟದಲ್ಲಿ 15 ಕ್ಕೂ ಹೆಚ್ಚು…

Read More

ವಾಲ್ಮೀಕಿ ಮಹರ್ಷಿ ರಚನೆಯ ಮಹಾಕಾವ್ಯದಲ್ಲಿ ಮಾನವೀಯ ಹಾಗೂ ಸಾಮಾಜಿಕ ಮೌಲ್ಯಗಳು ಅಡಗಿವೆ-ಶಾಸಕ ಕಟಕದೊಂಡ

ಸಪ್ತಸಾಗರ ವಾರ್ತೆ ವಿಜಯಪುರ, ಅ.8: ರಾಮಾಯಣದ ಮಹಾಕಾವ್ಯದಲ್ಲಿ ಮಾನವೀಯ ಹಾಗೂ ಸಾಮಾಜಿಕ ಮೌಲ್ಯಗಳು ಒಳಗೊಂಡಿದ್ದು ಆ ಜೀವನ ಮೌಲ್ಯಗಳನ್ನು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರು ಜಗತ್ತಿಗೆ ನೀಡಿದ್ದಾರ ಎಂದು ಶಾಸಕ ವಿಠ್ಠಲ ಕಟಕದೊಂಡ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ವಿಜಯಪುರ ಇವರ ಸಹಯೋಗದಲ್ಲಿ ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಶ್ರೀ…

Read More

ಭೀಮಾ, ಸೀನಾ ನದಿ ಪ್ರವಾಹ ನಿರ್ವಹಣೆಗೆ ಸಮಿತಿ ರಚನೆ ಅಗತ್ಯ: ಶಾಸಕ ಯಶವಂತರಾಯಗೌಡ

ಸಪ್ತಸಾಗರ ವಾರ್ತೆ ವಿಜಯಪುರ, ಅ. 6 :ಪ್ರತಿವರ್ಷ ಪ್ರವಾಹ ಬಂದಾಗಲೇ ಎಚ್ಚೆತ್ತುಕೊಳ್ಳುವುದಕ್ಕಿಂತ ಪ್ರಭಾವ ನಿರ್ವಹಣೆಗೆ ತುಂಗಭದ್ರಾ ಪ್ರವಾಹ ನಿರ್ವಹಣೆಯನ್ನು ಆಂಧ್ರಪ್ರದೇಶ ಹಾಗೂ ಕರ್ನಾಟಕ ಜಂಟಿಯಾಗಿ ನಿರ್ವಹಣೆ ಮಾಡುತ್ತದೆ. ಅದೇ ಮಾದರಿಯಲ್ಲಿ ಭೀಮಾ, ಸೀನಾ ನದಿ ವಿಚಾರದಲ್ಲೂ ಕರ್ನಾಟಕ ಹಾಗೂ ಮಹಾರಾಷ್ಟ್ರ ಜಂಟಿಯಾಗಿ ಪ್ರವಾಹ ನಿರ್ವಹಣೆ ಸಮಿತಿ ರಚಿಸುವುದು ತೀರಾ ಅಗತ್ಯ ಇದೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಅಭಿಪ್ರಾಯ ಪಟ್ಟರು.ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿ ವರ್ಷ ಪ್ರವಾಹ ವೇಳೆಯಲ್ಲಿ ಮಹಾರಾಷ್ಟ್ರ…

Read More

ಅಕ್ರಮವಾಗಿ ಗೃಹ ಬಳಕೆ ಸಿಲಿಂಡರ್ ಮಾರಾಟ : ಆಹಾರ ಇಲಾಖೆ ಅಧಿಕಾರಿಗಳ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 6: ವಿಜಯಪುರ ನಗರದ ಹುಡ್ಕೋ ಹಾಗೂ ರಾಘವೇಂದ್ರ ಕಾಲೋನಿ ಹತ್ತಿರದಲ್ಲಿ ಗೃಹ ಬಳಕೆ ಸಿಲಿಂಡರ್ ಗಳನ್ನು ಬಳಸಿ ಅಕ್ರಮವಾಗಿ ಆಟೋಗಳಿಗೆ ತುಂಬಿಸುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ನಾಲ್ಕು ಗೃಹ ಬಳಕೆ ಸಿಲಿಂಡರ್ ಹಾಗೂ ತೂಕ ಮಾಡುವ ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ.ದಾಳಿಯಲ್ಲಿ ಆಹಾರ ಇಲಾಖೆ ನಿರೀಕ್ಷಕ ವಿಜಯಕುಮಾರ ಗುಮಶೆಟ್ಟಿ, ಜಲನಗರ ಪೊಲೀಸ್ ಠಾಣೆ ಸಬ್ ಇನ್ಸಪೆಕ್ಟರ್ ಮಹೇಶ ಸಂಖ, ಪೋಲಿಸ ಸಿಬ್ಬಂದಿಗಳಾದ ವಿ.ಎಂ.ಪವಾರ, ಪಿ.ಆರ್.ರಾಠೋಡ, ಎಸ್.ವಾಯ್.ನಾಟಿಕಾರ, ಎಚ್.ಎನ್.ಪೂಜಾರಿ, ಎನ್.ಬಿ.ಚವ್ಹಾಣ,…

Read More

ಯುವನಿಧಿ ಅಭ್ಯರ್ಥಿಗಳು ಕೌಶಲ್ಯ ತರಬೇತಿಗೆ ನೋಂದಾಯಿಸಿಕೊಳ್ಳಲು ಮನವಿ

ಸಪ್ತಸಾಗರ ವಾರ್ತೆ ವಿಜಯಪುರ, ಅ. 6: ಯುವನಿಧಿ ಯೋಜನೆಯಡಿ ನೊಂದಾಯಿಸಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಹಾಗೂ ಪಡೆದಿರುವ ಅಭ್ಯರ್ಥಿಗಳು ಕಡ್ಡಾಯವಾಗಿ ತರಬೇತಿಯನ್ನು ಪಡೆಯಲು kaushalkar.com ಪೋರ್ಟಲ್‍ನಲ್ಲಿ ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳು ತಿಳಿಸಿದ್ದಾರೆ.ಯುವನಿಧಿ ಫಲಾನುಭವಿಗಳು ಕಡ್ಡಾಯವಾಗಿ ತರಬೇತಿ ಪಡೆಯಲು ನೋಂದಾಯಿಸಿಕೊಳ್ಳಬೇಕು. ಪೋರ್ಟಲ್‍ನಲ್ಲಿ ನೋಂದಾಯಿಸಿಕೊಳ್ಳುವುದರಿಂದ ಪ್ರಸ್ತುತ ತಾವು ಪಡೆಯುತ್ತಿರುವ ನಿರುದ್ಯೋಗ ಭತ್ಯೆ ಯಾವುದೇ ಕಾರಣಕ್ಕಾಗಿ ಸ್ಥಗಿತಗೊಳ್ಳವುದಿಲ್ಲ ಮತ್ತು ಈ ಕುರಿತು ಅಭ್ಯರ್ಥಿಗಳು ಆತಂಕ ಪಡುವ ಅವಶ್ಯಕತೆ ಇಲ್ಲ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳ ಕಚೇರಿ,…

Read More