ಚಿದಂಬರ ಸೇವಾ ಸಮಿತಿ ನೇತೃತ್ವದಲ್ಲಿ ಮುರುಗೋಡಕ್ಕೆ ಪಾದಯಾತ್ರೆ
ಸಪ್ತಸಾಗರ ವಾರ್ತೆ, ವಿಜಯಪುರ, ನ. 20 : ಶ್ರೀ ಕ್ಷೇತ್ರ ಕೆಂಗೇರಿ ಮುರಗೋಡದಲ್ಲಿ ಶ್ರೀ ಶಿವ ಚಿದಂಬರ ಮಹಾಸ್ವಾಮಿಗಳ ೨೬೭ ನೇ ಅವತಾರ ಜಯಂತಿ ಶೈವಾಗಮೋಕ್ಷ ಮಹೋತ್ಸವ ನ.೨೬ ರಂದು ನಡೆಯಲಿದ್ದು, ಈ ಉತ್ಸವದಲ್ಲಿ ಪಾಲ್ಗೊಳ್ಳಲು ನಗರದ ಚಿದಂಬರ ದೇವಸ್ಥಾನದಿಂದ ಭಕ್ತರು ಪಾದಯಾತ್ರೆ ಬೆಳೆಸಿದರು.ನಗರದ ಚಿದಂಬರ ದೇವಸ್ಥಾನದಿಂದ ಶ್ರೀ ಕ್ಷೇತ್ರ ಮುರಗೋಡಕ್ಕೆ ಪಾದಯಾತ್ರೆಯಲ್ಲಿ ತೆರಳಿದ ಭಕ್ತರು ವಿಜಯಪುರ ನಗರದಿಂದ ಹಲಗಣಿ, ಮುಧೋಳ, ಯರಗಟ್ಟಿ, ಹಲಕಿ ಕ್ರಾಸ್ ಮೂಲಕ ನ. ೨೬ ಕ್ಕೆ ಶ್ರೀ ಕ್ಷೇತ್ರ ತಲುಪಲಿದ್ದಾರೆ.ಈ ಪಾದಯಾತ್ರೆಯಲ್ಲಿ…


