ಕ್ಯಾಂಪಸ್ ಸಂದರ್ಶನ:11 ವಿದ್ಯಾರ್ಥಿಗಳ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 10: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಶೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಕಾಲೇಜ್ ಆಫ್ ಫಾರ್ಮಸಿ ಆ್ಯಂಡ್ ರಿಸರ್ಚ್ ಸೆಂಟರ್ ನ 11 ಜನ ವಿದ್ಯಾರ್ಥಿಗಳು ನವೆಂಬರ್ 8 ಮತ್ತು 9 ರಂದು ಕಾಲೇಜಿನಲ್ಲಿ ನಡೆದ ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾಗಿ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ.ಕಾಲೇಜಿನ ಪ್ಲೇಸ್ಮೆಂಟ್ ಸೆಲ್, ತುಮಕೂರಿನ ವೆಕ್ಸಪೋರ್ಡ್ ಲ್ಯಾಬೋರೇಟರೀಸ್ ಸಹಯೋಗದಲ್ಲಿ ಕ್ಯಾಂಪಸ್ ಡ್ರೈವ್ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಬಿ. ಫಾರ್ಮಾ, ಎಂ. ಫಾರ್ಮಾ ಪದವೀಧರರು‌‌ ಮತ್ತು ಸ್ಕೂಲ್ ಆಪ್ಲೈಡ್ ಸಾಯಿನ್ಸ್ ಆ್ಯಂಡ್…

Read More

ವಿಜಯಪುರ ಸಿಐಟಿಯು ಆರನೇ ಜಿಲ್ಲಾ ಸಮ್ಮೇಳನ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 10:ವಿಜಯಪುರ ಸಿಐಟಿಯು ಆರನೇ ಜಿಲ್ಲಾ ಸಮ್ಮೇಳನ ನಗರದ ಜಿಲ್ಲಾ ಸಹಕಾರಿ ಯೂನಿಯನ್ ಕೇಂದ್ರ ಬಸ್ ನಿಲ್ದಾಣ ಎದುರುಗಡೆ ನಡೆಯಿತು.ಪ್ರತಿನಿಧಿಗಳ ಸಭೆಯನ್ನು ಉದ್ಘಾಟಿಸಿದ ಸಿಐಟಿಯು ನ ರಾಜ್ಯ ಕಾರ್ಯದರ್ಶಿ ಎಚ್. ಎಸ್. ಸುನಂದ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದುಡಿಮೆಯ ಸಮಯವನ್ನು ಹೆಚ್ಚಿಗೆ ಮಾಡಿದೆ. ಆದರೆ ಅದಕ್ಕೆ ತಕ್ಕಂತೆ ಕೂಲಿಯನ್ನು ಕೊಡುವುದಿಲ್ಲ, ಕನಿಷ್ಠ ಕೂಲಿ ಅಸಂಘಟಿತ ಕಾರ್ಮಿಕರಿಗೆ 36 ಸಾವಿರ ರೂಪಾಯಿ ಕೊಡಬೇಕು, 2011 ರಿಂದ ಇಲ್ಲಿಯವರೆಗೆ ಅಂಗನವಾಡಿ ಅಕ್ಷರ ದಾಸೋಹ ನೌಕರರಿಗೆ…

Read More

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಮುಂದುವರಿದ ಧರಣಿ, ರೈತ ಸಂಘದ ಬೆಂಬಲ

ಸಪ್ತಸಾಗರ ವಾರ್ತೆ ವಿಜಯಪುರ, ನ. 9:ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಬೇಕು ಎಂದು ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಕೈಗೊಂಡ ಅನಿರ್ದಿಷ್ಟ ಧರಣಿ ಸತ್ಯಾಗ್ರಹ 53ನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು ಹೋರಾಟಕ್ಕೆ ಬೆಂಬಲ ಸೂಚಿಸಿದರು.ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ್ ನಾಗೇಂದ್ರ ಅವರು ಮಾತನಾಡಿ “ಉದ್ದೇಶ ಒಳ್ಳೆದಿದೆ. ಜನರ ಹಿತವಿದೆ. ಅದಕ್ಕೆ ಜನ ಹೋರಾಟವನ್ನು ಪ್ರಾರಂಭ ಮಾಡಿದ್ದಾರೆ. ಬಸವಣ್ಣ ಹುಟ್ಟಿದಂತ ನಾಡಿದು. ಇವತ್ತಿನ…

Read More

ಬಿ.ಎಲ್.ಡಿ.ಇ ಆರೋಗ್ಯ ವಾಹಿನಿ ಸೇವೆಗೆ ಚಾಲನೆ

ಸಪ್ತಸಾಗರ ವಾರ್ತೆ ವಿಜಯಪುರ, ನ. 9: ಗ್ರಾಮೀಣ ಬಡ ಜನರಿಗೆ ಸುಲಭವಾಗಿ ಆರೋಗ್ಯ ಸೇವೆಯನ್ನು ಒದಗಿಸಲು ಬಿ.ಎಲ್.ಡಿ.ಇ ಆರೋಗ್ಯ ವಾಹಿನಿ ಕಾರ್ಯ ನಿರ್ವಹಿಸಲಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಹೇಳಿದ್ದಾರೆ.ರವಿವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾನಿಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಕಾಲೇಜು ಹಾಗೂ ಸಂಶೋಧನೆ ಕೇಂದ್ರದಲ್ಲಿ ಎರಡು ನೂತನ ಆರೋಗ್ಯ ವಾಹಿನಿ ಬಸ್ ಸೇವೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆಯನ್ನು ಒದಗಿಸುವಲ್ಲಿ…

Read More

ಬಿ.ಎಲ್.ಡಿ. ಇ ಡೀಮ್ಡ್ ವಿವಿ ಕುಲಾಧಿಪತಿ ಬಸನಗೌಡ ಪಾಟೀಲ ಜನ್ಮ ದಿನ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 9: ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಅವರ ಜನ್ಮದಿನವನ್ನು ಇಂದು ರವಿವಾರ ಗಣ್ಯರೊಂದಿಗೆ ಸೇರಿ ಸಸಿ ನೆಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.ವೃಕ್ಷಥಾನ್ ಹೆರಿಟೇಜ್ ರನ್ ಸಮಿತಿ, ವಿಜಯಪುರ ಜಿಲ್ಲಾ ಸೈಕ್ಲಿಂಗ್ ಗ್ರುಪ್ ಜಂಟಿಯಾಗಿ ಸಂಸ್ಥೆಯ ಆವರಣದಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಬಸನಗೌಡ ಎಂ. ಪಾಟೀಲ, ವೈದ್ಯಕೀಯ ಕಾಲೇಜಿನ ಶರೀರಕ್ರಿಯಾ ಶಾಸ್ತ್ರ ವಿಭಾಗದ ಡಿಸ್ಟಿಂಗ್ವಿಶ್ ಚೇರ್ ಪ್ರೊ. ಕುಸಾಲ ದಾಸ ಮತ್ತೀತರ ಗಣ್ಯರು ಜನ್ಮದಿನದ ಅಂಗವಾಗಿ ಸಸಿ ನೆಟ್ಟರು.ಈ…

Read More

ಅಸಮಾನತೆ ಹೋಗಲಾಡಿಸಲು ಶ್ರಮಿಸಿ: ಪ್ರೊ.ಅಡವಿಸ್ವಾಮಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 9:ನೊಂದವರಿಗೆ ಆತ್ಮಸ್ಥೈರ್ಯವನ್ನು ತುಂಬಿ ಶೋಷಿತ ವರ್ಗದವರ ದನಿಯಾಗಿ ಮನುಕುಲವನ್ನು ಉದ್ಧಾರ ಮಾಡಿದ ಮಹಾನ್ ಮಾನವತವಾದಿ ಕನಕದಾಸರು ಎಂದು ಸಾಹಿತಿ ಪ್ರೊ. ಅಡವಿಸ್ವಾಮಿ ಕೊಳಮಲಿ ಅಭಿಪ್ರಾಯಪಟ್ಟರು.ವಿಜಯಪುರ ನಗರದ ರೇಲ್ವೆ ನಿಲ್ದಾಣದ ಆವರಣದಲ್ಲಿ ನೈರುತ್ಯ ರೇಲ್ವೆ ಇಲಾಖೆ ನೌಕರರ ಸಂಘ ವಿಜಯಪುರ ಇವರ ವತಿಯಿಂದ ಹಮ್ಮಿಕೊಂಡ ಮಹಾನ್ ಮಾನವತವಾದಿ ಕನಕದಾಸರ 538 ನೇ ಜಯಂತೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸಿ ವಿಶೇಷ ಉಪನ್ಯಾಸವನ್ನು ನೀಡಿದ ಅವರು, ಕನಕದಾಸರು ತಮ್ಮ ವಿಶಿಷ್ಟವಾದ ಜ್ಞಾನದಿಂದ ಶಕ್ತಿಯಿಂದ ಕಣ್ಣಿದ್ದವರ ಕಣ್ಣು ತೆರೆಸಿದ…

Read More

ನಾಡಿಗೆ ಸಮಾನತೆಯ ಸಂದೇಶ ಸಾರಿದ ದಾಸಶ್ರೇಷ್ಠರು ಕನಕದಾಸ: ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ

ಸಪ್ತಸಾಗರ ವಾರ್ತೆ ವಿಜಯಪುರ, ನ. 8: “ಸಮಾಜದಲ್ಲಿದ್ದ ಅಸಮಾನತೆ, ಅನಿಷ್ಠ ಪದ್ಧತಿಗಳ ವಿರುದ್ಧ ತಮ್ಮ ಕೀರ್ತನೆಗಳ ಮೂಲಕ ಸಮರ ಸಾರಿದ ದಾಸಶ್ರೇಷ್ಠರು ಕನಕದಾಸರು. ಅವರ ಚಿಂತನೆಗಳು, ವಿಚಾರಗಳು ಮತ್ತು ಸಮಾಜ ಸುಧಾರಣೆಯ ದೃಷ್ಟಿಕೋನಗಳು ಇಂದಿಗೂ ಪ್ರಸ್ತುತ” ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ವಿಜಯಾ ಬಿ ಕೋರಿಶೆಟ್ಟಿ ಹೇಳಿದರು.ಅವರು ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕನಕದಾಸ ಅಧ್ಯಯನ ಪೀಠದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಕನಕದಾಸ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.“ಮೂಲತಃ…

Read More

ಸಮಾಜಕ್ಕೆ ನೀಡಿದ ಸಂತ ಕನಕದಾಸರ ಕೀರ್ತನೆಗಳು ಜನಮಾನಸದಲ್ಲಿ ಜನಜನಿತವಾಗಿವೆ -ಸಚಿವ ಡಾ.ಎಂ.ಬಿ.ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ನ.8: ಮೋಹನ ತರಂಗಿಣಿ, ನಳಚರಿತೆ, ರಾಮಧಾನ್ಯ ಚರಿತೆ, ಹರಿಭಕ್ತಿ ಸಾರ, ಸೇರಿದಂತೆ 316 ಕೀರ್ತನೆಗಳು ನೀಡುವ ಮೂಲಕ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ ಸಂತ ಕನಕದಾಸರ ಕೀರ್ತನೆಗಳು ಜನಮಾನಸದಲ್ಲಿ ಜನಜನಿತವಾಗಿವೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಖಾತೆ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಹೇಳಿದರು.ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಕಂದಗ¯ತ್ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಶನಿವಾರ ಹಮ್ಮಿಕೊಂಡ ಸಂತ ಕನಕದಾಸ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕನಕದಾಸರ…

Read More

10ರಂದು ಶಿವ ಚಿದಂಬರ ಜಯಂತ್ಯುತ್ಸವ

ಸಪ್ತಸಾಗರ ವಾರ್ತೆ, ವಿಜಯಪುರ, ನ. 8 : ವಿಜಯಪುರದ ಚಿದಂಬರ ನಗರದಲ್ಲಿರುವ ಶ್ರೀ ಚಿದಂಬರ ದೇವಾಲಯದಲ್ಲಿ ಇದೇ ದಿನಾಂಕ ೧೦ ರಂದು ಶ್ರೀ ಶಿವಚಿದಂಬರ ಜಯಂತೋತ್ಸವ ನಡೆಯಲಿದೆ.ಶ್ರೀ ಚಿದಂಬರ ಸೇವಾ ಸಮಿತಿ ಸಹಯೋಗದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಲಿದ್ದು ಸಕಲ ಸಿದ್ಧತೆಗಳನ್ನು ಭರದಿಂದ ಕೈಗೊಳ್ಳಲಾಗುತ್ತಿದೆ.ಅಂದು ಬೆಳಿಗ್ಗೆ ೬ ಕ್ಕೆ ಕಾಕಡಾರತಿ, ಬೆಳಿಗ್ಗೆ ೭ ಕ್ಕೆ ರಜತ ನಾಗಭೂಷಣ, ನಂತರ ಶ್ರೀ ಶಿವಚಿದಂಬರೇಶ್ವರರಿಗೆ ಅಭಿಷೇಕ ನಡೆಯಲಿದೆ.ನಂತರ ಸುವರ್ಣ ಮಹೋತ್ಸವ ಪ್ರಯುಕ್ತ ಆರು ಕೋಟಿ ಶ್ರೀ ಶಿವ ಚಿದಂಬರ ನಾಮಜಪ ಸಂಕಲ್ಪ…

Read More