ಬೀದಿ ನಾಯಿಗಳ ನಿಯಂತ್ರಣಕ್ಕೆ ಎಸ್. ಯು.ಸಿ.ಐ ನಿಯೋಗ ಮನವಿ
ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 6: ನಗರದಲ್ಲಿ ಕಣ್ಣು ನೊಣ ಹಾಗೂ ಬೀದಿ ನಾಯಿಗಳ ನಿಯಂತ್ರಣಕ್ಕೆ ಒತ್ತಾಯಿಸಿ ಮಹಾನಗರ ಪಾಲಿಕೆ ಆಯುಕ್ತರಿಗೆ ಎಸ್ ಯು ಸಿ ಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಮಿತಿಯಿಂದ ಶುಕ್ರವಾರ ಮನವಿ ಪತ್ರ ಸಲ್ಲಿಸಲಾಯಿತು.ಪಾಲಿಕೆ ಅಭಿವೃದ್ಧಿ ವಿಭಾಗದ ಉಪ ಆಯುಕ್ತರು ಮನವಿ ಸ್ವೀಕರಿಸಿ, ಈಗಾಗಲೇ ಬೀದಿ ನಾಯಿಗಳಿಗೆ ಸಂತಾನೋತ್ಪತ್ತಿ ಹರಣ ಶಸ್ತ್ರ ಚಿಕಿತ್ಸೆ ಸುಮಾರು ೮೦೦೦ ನಾಯಿಗಳಿಗೆ ಏಜೆನ್ಸಿ ಮೂಲಕ ಮಾಡಿಸಲಾಗಿದೆ. ಇನ್ನುಳಿದ ನಾಯಿಗಳಿಗೆ ಈ ತಿಂಗಳ ಒಳಗಾಗಿ ಟೆಂಡರ್ ಕರೆದು ಶಸ್ತ್ರ…


