ನಾಡ ಹಬ್ಬ ಮೈಸೂರು ದಸರಾಕ್ಕೆ ಡಿಸಿಎಂ ಡಿಕೆಶಿ ಅವರಿಗೆ ಆಮಂತ್ರಣ

ಸಪ್ತಸಾಗರ ವಾರ್ತೆ ಬೆಂಗಳೂರು, ಸೆ. 4: ನಾಡಹಬ್ಬ ಮೈಸೂರು ದಸರಾ ಉತ್ಸವಕ್ಕೆ ಆಗಮಿಸುವಂತೆ ಡಿಸಿಎಂ ಡಿ.ಕೆ. ಶಿವಕುಮಾರ ಅವರಿಗೆ ಮೈಸೂರು ಜಿಲ್ಲಾಧಿಕಾರಿ ಲಕ್ಷೀಕಾಂತ ರೆಡ್ಡಿ, ಸಿಇಒ ಮುಖೇಶಕುಮಾರ್, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಎಸ್.ಪಿ. ವಿಷ್ಣುವರ್ಧನ್, ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪ ಅವರನ್ನು ಒಳಗೊಂಡ ನಿಯೋಗವು ವಿಧಾನಸೌಧದಲ್ಲಿ ಗುರುವಾರ ಆಹ್ವಾನ ಪತ್ರ ನೀಡಿತು.

Read More

ಸೆ. 8ರಿಂದ 13ರ ವರೆಗೆ ಉಚಿತ ಆರೋಗ್ಯ ಶಿಬಿರ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 4: ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯದಲ್ಲಿ ಶಲ್ಯತಂತ್ರ ವಿಭಾಗದ ವತಿಯಿಂದ ಸೆಪ್ಟೆಂಬರ್ 8 ರಿಂದ ಸೆಪ್ಟೆಂಬರ್ 13ರ ವರೆಗೆ ಆರು ದಿನಗಳ ಕಾಲ ಉರುಪು ಮೂಲವ್ಯಾಧಿ ಮತ್ತು ಸೊಂಟ ನೋವು(ಸಿಯಾಟಿಕಾ) ಉಚಿತ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಚಿಕಿತ್ಸೆ ಶಿಬಿರವನ್ನು ಆಯೋಜಿಸಲಾಗಿದೆ.ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 7019656245 ಮತ್ತು‌ 8147740460ನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ…

Read More

ಸರಳ ರೀತಿಯಲ್ಲಿ ನಡೆದ ಗಜಾನನ ವಿಸರ್ಜನೆ ಮೆರವಣಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 4:ಗಣೇಶೋತ್ಸವ ವಿಸರ್ಜನೆ ವೇಳೆ ವಿದ್ಯುತ್ ಅವಘಡದಿಂದ ಯುವಕ ಅಸುನೀಗಿ, ಕೆಲವು ಯುವಕರು ಗಾಯಗೊಂಡಿರುವ ಘಟನೆ ನಡೆದ ಹಿನ್ನೆಲೆಯಲ್ಲಿ ಈ ಬಾರಿ ಗಜಾನನ ಮಹಾಮಂಡಳ ಗಣೇಶನ ಉತ್ಸವ ಮೂರ್ತಿಯ ಮೆರವಣಿಗೆ ಸಾಂಕೇತಿಕವಾಗಿ ನಡೆಯಿತು.ಪ್ರತಿ ವರ್ಷ ಹತ್ತಾರು ರೀತಿಯ ಕಲಾ ತಂಡಗಳೊಂದಿಗೆ ವಿಜೃಂಭಣೆಯಿಂದ ನಡೆಯುವ ಮೆರವಣಿಗೆಗೆ ಈ ಬಾರಿ ಸಾಂಪ್ರದಾಯಿಕತೆ ಮಾತ್ರ ಸೀಮಿತವಾಗಿತ್ತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದ ಸಾಧಕರಿಗೂ ಸಹ ಈ ಬಾರಿ ಪ್ರಶಸ್ತಿ ಪ್ರದಾನ ಮಾಡಲಿಲ್ಲ.ಗಣೇಶನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.ವಿವಿಧ…

Read More

ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಮಹಿಳಾ ಸಾಂಸ್ಕೃತಿಕ ಸಂಘಟನೆ ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 4: ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳಿಗೆ ಕೊನೆಹಾಕಿ ಸೂಕ್ತ ಭದ್ರತೆ ಒದಗಿಸಲು ಆಗ್ರಹಿಸಿ ಮಹಿಳಾ ಸಾಂಸ್ಕೃತಿಕ ಸಂಘಟನೆ ಪ್ರತಿಭಟನೆ ನಡೆಸಿತು.ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯು ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಖಿಲ ಭಾರತ ಸಾಂಸ್ಕೃತಿಕ ಸಂಘಟನೆ ಸಮಿತಿಯ ಕರೆಯ ಮೇರೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಸಂಘಟನೆಯು ದೇಶದಾದ್ಯಂತ ಮಹಿಳೆಯರ ಹಕ್ಕುಗಳಿಗಾಗಿ, ಮಹಿಳೆಯರ ಘನತೆಯ ಬದುಕಿಗಾಗಿ…

Read More

ಭೀಮಾ ನದಿಗೆ ಹಾರಿ ಮಹಿಳೆ ಆತ್ಮಹತ್ಯ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 4: ಸೊಲ್ಲಾಪುರ -ವಿಜಯಪುರ ಗಡಿಯ ಭೀಮಾ ನದಿಗೆ ಕಟ್ಟಲಾಗಿರುವ ಬ್ಯಾರೇಜ್ ಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಮೃತ ಮಹಿಳೆಯನ್ನು ಇಂಡಿ ಪಟ್ಟಣದ ಬೀರಪ್ಪನಗರ ನಿವಾಸಿ ಸುಶಿಲಾಬಾಯಿ ಶಾಂತಪ್ಪ ಬಿರಾದಾರ (62) ಎಂದು ಗುರುತಿಸಲಾಗಿದೆ.ವಿಜಯಪುರ -ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಭೀಮಾನದಿ ಬ್ಯಾರೇಜ್ ಮೇಲಿನಿಂದ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.ಮೃತ ಮಹಿಳೆಯ ಪತಿ ಮನೆ ಇಂಡಿ ಪಟ್ಟಣದಲ್ಲಿದ್ದು, ತವರು ಮನೆ ಸೊಲ್ಲಾಪುರ ಜಿಲ್ಲೆಯ ಟಾಕಳಿಯಲ್ಲಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು,…

Read More

ಸೆ.6ರಂದು ಆಲಮಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಕೃಷ್ಣಗೆ ಬಾಗಿನ ಅರ್ಪಣೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 4: ಆಲಮಟ್ಟಿಯ ಲಾಲ್ ಬಹಾದ್ದೂರ್‌ಶಾಸ್ತ್ರಿ ಜಲಾಶಯ ಈಗ ಭರ್ತಿಯಾಗಿದ್ದು, ಹೀಗಾಗಿ ಉತ್ತರ ಕರ್ನಾಟಕದ ಜೀವನದಿ ಕೃಷ್ಣಗೆ ಸೆ.6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ ಎಂದು ಕೆಬಿಜೆಎನ್‌ಎಲ್ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆಗಸ್ಟ್ ಎರಡನೆಯ ವಾರದವರೆಗೆ ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ವ್ಯಾಪಕ ಮಳೆಯಾಗಿ ಕೃಷ್ಣೆಯ ಮುಖ್ಯ ಹರಿವು ಹಾಗೂ ಅದರ ಉಪನದಿಗಳಲ್ಲಿ ಅಪಾರ ಪ್ರಮಾಣದ ನೀರು ಬಂದಿರುವುದರಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ.ಜನ, ಜಾನುವಾರಗಳಿಗೆ ಜೀವ ಹಾನಿಯಾಗದಿರಲಿ ಎನ್ನುವ ಉದ್ದೇಶದಿಂದ ಕರ್ನಾಟಕ ಹಾಗೂ…

Read More

ಹೈಟೆಕ್ ಹಾರ್ವೆಸ್ಟರ್ ಹಬ್ : ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.3: 2025-26 ನೇ ಸಾಲಿಗೆ ಕೃಷಿ ಇಲಾಖೆ ವತಿಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ ಕಾರ್ಯಕ್ರಮದಡಿ ಶುಗರ್ ಕೇನ ಹಾರ್ವೆಸ್ಟರ್ ಹಬ್ ಗಳನ್ನು ಹಾಗೂ ಕಂಬೈನ್ಸ್ ಹಾರ್ವೆಸ್ಟರ್ ಹಬ್‍ಗಳನ್ನು ಸಹಾಯಧನದಡಿ ವಿತರಿಸಲು ವೈಯಕ್ತಿಕ ಫಲಾನುಭವಿಗಳಿಗೆ ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಅವಕಾಶ ನೀಡುವ ನಿಟ್ಟಿನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.18 ಕೊನೆಯ ದಿನಾಂಕವಾಗಿದೆ.ಸಾಮಾನ್ಯ ಹಾಗೂ ಪರಿಶಿಷ್ಟ ವರ್ಗದಡಿ ವೈಯಕ್ತಿಕ ಫಲಾನುಭವಿಗಳಿಗೆ ಶುಗರ್ ಕೇನ ಹಾರ್ವೆಸ್ಟರ್ ಹಾಗೂ ಕಂಬೈನ್ಸ್ ಹಾರ್ವೆಸ್ಟರ್ ಹಬ್‍ಗಳನ್ನು ಸಹಾಯಧನದಡಿ ಅನುಷ್ಠಾನಗೊಳಿಸಲಾಗುತ್ತಿದ್ದು,…

Read More

ಅಂಜನಾದ್ರಿಬೆಟ್ಟವನ್ನು ಪ್ರವಾಸೋದ್ಯಮ‌ ಮತ್ತು ಪೌರಾಣಿಕ ಹಾಗೂ ಅಧ್ಯಾತ್ಮಿಕ ಮಹತ್ವವನ್ನು ತಿಳಿಸುವ ರೀತಿಯಲ್ಲಿ ಅಭಿವೃದ್ಧಿ : ಸಿ.ಎಂಸೂಚನೆ

ಸಪ್ತಸಾಗರ ವಾರ್ತೆ ಬೆಂಗಳೂರು, ಸೆ. 3:ಅಂಜನಾದ್ರಿ ಬೆಟ್ಟದ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ಇಂದು ನಡೆದ ಸಭೆಯಲ್ಲಿ ಅವರು ಮಾತನಾಡಿದರು.ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ.‌ ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ , ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ…

Read More

ಜಿಬಿಎವ್ಯಾಪ್ತಿಯನೂತನಪಾಲಿಕೆಕಚೇರಿಗಳನಿರ್ಮಾಣಕ್ಕೆನ. 1 ರಂದುಭೂಮಿಪೂಜೆ: ಡಿಸಿಎಂಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಸೆ.3:“ಐದು ಪಾಲಿಕೆಗಳ ನೂತನ ಕಚೇರಿಗೆ ಭೂಮಿಪೂಜೆಯನ್ನು ನವೆಂಬರ್ 1 ರಂದು ನೆರವೇರಿಸಲಾಗುವುದು. ಎಲ್ಲಾ ಪಾಲಿಕೆಗಳ ಗಡಿ ಭಾಗಗಳಲ್ಲಿ ಗಡಿ ಗೋಪುರಗಳನ್ನು ನಿರ್ಮಾಣ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಚೇರಿಯ ನಾಮಫಲಕ ಅನಾವರಣಗೊಳಿಸಿದ ನಂತರ ಶಿವಕುಮಾರ್ ಅವರು ಬುಧವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.“ಪ್ರತಿ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳ ಸುಧಾರಣೆ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ 500 ಮಂದಿ ಎಂಜಿನಿಯರ್ ಗಳಿಗೆ ಅನುಮೋದನೆ ನೀಡಲಾಗಿದೆ. ಈ ಹಿಂದೆ 198 ವಾರ್ಡ್ ಗಳಿದ್ದವು….

Read More

ಕ್ರೀಡಾ ಕ್ಷೇತ್ರದಲ್ಲಿ ಸಾಧಕರಾಗಿ ಜಿಲ್ಲೆಯ ಕೀರ್ತಿ ಹೆಚ್ಚಿಸಿ -ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.3: ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಹೆಚ್ಚು ಹೆಚ್ಚು ಪ್ರಶಸ್ತಿ ಪಡೆದು ಜಿಲ್ಲೆಗೆ ಕೀರ್ತಿ ತರಬೇಕು ಎಂದು ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಡಾ. ಬಿ.ಆರ್.ಅಂಬೆಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ಪಠ್ಯದೊಂದಿಗೆ ಕ್ರೀಡೆಗಳಲ್ಲಿಯೂ ಭಾಗಿಯಾಗಿ ಸತತ ಪರಿಶ್ರಮದಿಂದ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ…

Read More