“ಒಣದ್ರಾಕ್ಷಿ ಹರಾಜಿಗೆ ಆನ್‌ಲೈನ್ ಟಚ್” ₹5 ಕೋಟಿಯಿಂದ ₹12 ಕೋಟಿಗೆ ವಹಿವಾಟು ಜಿಗಿತ; ಪಾರದರ್ಶಕ ಮಾರುಕಟ್ಟೆಯಿಂದ ರೈತರಿಗೆ ಲಾಭ: ಯತ್ನಾಳ

ಸಪ್ತಸಾಗರ ವಾರ್ತೆ | ವಿಜಯಪುರ, ಆ.8:ರೈತರ ಹಿತದೃಷ್ಟಿಯಿಂದ ಪಾರದರ್ಶಕ ವಹಿವಾಟಿಗೆ ಒತ್ತು ನೀಡಿರುವ ಆನ್‌ಲೈನ್ ಟ್ರೇಡಿಂಗ್ ಮಾರುಕಟ್ಟೆಗೆ ವಿಜಯಪುರದ ಒಣದ್ರಾಕ್ಷಿ ವಹಿವಾಟು ವೇಗವಾಗಿ ಶಿಫ್ಟ್ ಆಗುತ್ತಿದ್ದು, ಇದರ ಪರಿಣಾಮ ವಹಿವಾಟಿನ ಪ್ರಮಾಣದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಈವರೆಗೆ ಸರಾಸರಿ ₹5 ಕೋಟಿಯಷ್ಟಿದ್ದ ವಹಿವಾಟು ಇದೀಗ ₹12 ಕೋಟಿಗೆ ಏರಿಕೆಯಾಗಿದ್ದು, ರೈತರಿಗೆ ಸ್ಪರ್ಧಾತ್ಮಕ ಬೆಲೆ ದೊರೆಯುವ ವಾತಾವರಣ ನಿರ್ಮಾಣವಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.ವಿಜಯಪುರದಲ್ಲಿ ಒಣದ್ರಾಕ್ಷಿ ಆನ್‌ಲೈನ್ ಟ್ರೇಡಿಂಗ್ ಮಾರುಕಟ್ಟೆ ಆರಂಭಗೊಂಡಿದ್ದರೂ, ಕೆಲವರು ಖಾಸಗಿ…

Read More

ಹಿರಿಯ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪ ಶ್ರದ್ಧಾಂಜಲಿ

ಸಪ್ತಸಾಗರ ವಾರ್ತೆ,ವಿಜಯಪುರ, ಆ.8: ಜಿಲ್ಲೆಯ ಪತ್ರಿಕಾ ಕ್ಷೇತ್ರದಲ್ಲಿ ಮೂರು ದಶಕಗಳ ಕಾಲ ಸೇವೆ ಸಲ್ಲಿಸಿ, ಹಲವು ಯುವ ಪತ್ರಕರ್ತರಿಗೆ ಮಾರ್ಗದರ್ಶನ ನೀಡುವ ಮೂಲಕ ಉತ್ತಮ ಬರಹಗಾರರನ್ನು ರೂಪಿಸಿದ ಹಿರಿಯ ಪತ್ರಕರ್ತ ಬಾಬು ಮುರಾಳ ಅವರ ಸೇವೆ ಸಮಾಜಕ್ಕೆ ಇನ್ನಷ್ಟು ಅಗತ್ಯವಾಗಿತ್ತು ಎಂದು ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಶೋಕ ಯಡಳ್ಳಿ ಹೇಳಿದರು.ನಗರದ ಜಿಲ್ಲಾ ಪಂಚಾಯಿತಿ ಮುಖ್ಯರಸ್ತೆಯಲ್ಲಿರುವ ಪತ್ರಿಕಾ ಭವನದಲ್ಲಿ ಶನಿವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಬಾಬು ಮುರಾಳ…

Read More

ನಾಳೆ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿದತ್ತಕ ಯೋಜನೆ ಹಾಗೂ ಗೌರವ ಸಮರ್ಪಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ.8: ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಗೌರವಿಸುವ ಉದ್ದೇಶದಿಂದ ಸಿರಿಗನ್ನಡ ವೇದಿಕೆ ವತಿಯಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿದತ್ತಕ ಯೋಜನೆ ಹಾಗೂ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಆ.9ರಂದು ಬೆಳಗ್ಗೆ 10.30ಕ್ಕೆ ನಗರದ ಶ್ರೀ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.ಡಾ. ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಸಂಯೋಜನಾಧಿಕಾರಿ ಡಾ. ವಿ.ಡಿ. ಐಹೊಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಸಾಹಿತಿ ಹಾಗೂ ಚಿಂತಕ ಡಾ. ಸಂಗಮೇಶ ಮೆತ್ರಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಾಧಕರಿಗೆ ಗೌರವ…

Read More

ಬರ ಘೋಷಣೆಗೆ ಜೆಡಿಎಸ್ ಒತ್ತಾಯ:ರೈತರ ಸಾಲಮನ್ನಾ, ಕಾಲುವೆಗಳಿಗೆ ನೀರು ಹರಿಸದಿದ್ದರೆ ಹೋರಾಟದ ಎಚ್ಚರಿಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 8:ಮಳೆ ಕೈಕೊಟ್ಟು ಮುಂಗಾರು ಬೆಳೆ ಸಂಪೂರ್ಣ ನೆಲಕಚ್ಚಿರುವ ಬೆನ್ನಲ್ಲೇ ವಿಜಯಪುರ ಜಿಲ್ಲೆಯಲ್ಲಿ ರೈತರ ಸಂಕಷ್ಟ ತೀವ್ರಗೊಂಡಿದೆ. ಕೂಡಲೇ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ ರೈತರ ಸಾಲ ಮನ್ನಾ ಮಾಡಬೇಕು, ಜಾನುವಾರುಗಳಿಗೆ ಮೇವು ಒದಗಿಸಬೇಕು ಹಾಗೂ ಆಲಮಟ್ಟಿ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಡಿಗೇರಿ ಸರ್ಕಾರವನ್ನು ಒತ್ತಾಯಿಸಿದರು.ನಗರದ ಜೆಡಿಎಸ್ ಕಚೇರಿಯಲ್ಲಿ ನಡೆದ ಪಕ್ಷದ ಮುಖಂಡರು ಹಾಗೂ ತಾಲೂಕು ವೀಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ರೈತರು ಸಂಕಷ್ಟದಲ್ಲಿರುವಾಗ…

Read More

ಇಂಡಿಯಲ್ಲಿ ಮತ್ತೆ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಾಯ

ಮುಖಕ್ಕೆ ಗಂಭೀರ ಗಾಯಗೊಂಡ 9 ವರ್ಷದ ಬಾಲಕಿ – 5 ವರ್ಷದ ಬಾಲಕನ ಕೈಗೆ ಕಚ್ಚಿದ ನಾಯಿ ಸಪ್ತಸಾಗರ ವಾರ್ತೆ,ವಿಜಯಪುರ, ಆ.7: ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಮತ್ತೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಎರಡು ಪ್ರತ್ಯೇಕ ಘಟನೆಗಳಲ್ಲಿ 9 ವರ್ಷದ ಬಾಲಕಿ ಹಾಗೂ 5 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿವೆ. ಇತ್ತೀಚಿನ ತಿಂಗಳುಗಳಲ್ಲಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬೀದಿ ನಾಯಿಗಳ ದಾಳಿಯ ಘಟನೆಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿರುವ ಬೆನ್ನಲ್ಲೇ ಈ…

Read More

ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ನೀತಿ ವಿರೋಧಿಸಿ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 7:ಸರ್ಕಾರಿ ಶಾಲೆಗಳಲ್ಲಿ ಜಾರಿಗೊಳಿಸಿರುವ ದ್ವಿಭಾಷಾ ಶಿಕ್ಷಣ ನೀತಿ ಹಾಗೂ ಶಿಕ್ಷಕರ ನೇಮಕಾತಿ ಕರಡು ಅಧಿಸೂಚನೆಗೆ ವಿರೋಧ ವ್ಯಕ್ತಪಡಿಸಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳ ನಿಯೋಗವು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.ಈ ಸಂದರ್ಭದಲ್ಲಿ ಪರಿಷತ್‌ನ ಸಹ ಕಾರ್ಯದರ್ಶಿ ಮಯೂರಕುಮಾರ ತಿಳಗೂಳಕರ ಮಾತನಾಡಿ, ರಾಜ್ಯ ಸರ್ಕಾರವು ಈ ಶೈಕ್ಷಣಿಕ ವರ್ಷದಿಂದ 15 ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿ ಐದನೇ ತರಗತಿಯವರೆಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮಗಳಲ್ಲಿ ಬೋಧನೆ ನಡೆಸುವ ದ್ವಿಭಾಷಾ…

Read More

ಬಣಜಿಗ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸಿ: ಸರ್ಕಾರಕ್ಕೆ ಗುರುಲಿಂಗಪ್ಪ ಅಂಗಡಿ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಆ.7: ಬಣಜಿಗ ಸಮಾಜವನ್ನು ಕೂಡಲೇ ಪ್ರವರ್ಗ 2ಎ ಅಡಿಯಲ್ಲಿ ಸೇರ್ಪಡೆಗೊಳಿಸಿ ನ್ಯಾಯಾಲಯದ ಆದೇಶವನ್ನು ಜಾರಿಗೆ ತರಬೇಕು ಎಂದು ಬಿಜೆಪಿ ವಿಜಯಪುರ ಜಿಲ್ಲಾಧ್ಯಕ್ಷ ಹಾಗೂ ಬಣಜಿಗ ಸಮಾಜದ ಮುಖಂಡ ಗುರುಲಿಂಗಪ್ಪ ಅಂಗಡಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್ ಆದೇಶದಂತೆ ಬಣಜಿಗ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಸರ್ಕಾರ ವಿಳಂಬ ಮಾಡದೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.1994ರ ಮೊದಲು ಬಣಜಿಗ ಸಮಾಜ ಶಿಕ್ಷಣ ಮತ್ತು ರಾಜಕೀಯ ಮೀಸಲಾತಿಯಲ್ಲಿ ಪ್ರವರ್ಗ…

Read More

ಬಸರಕೋಡ ಬಸವೇಶ್ವರ ದೇವಸ್ಥಾನ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು

₹52.70 ಲಕ್ಷ ಮೌಲ್ಯದ ಬೆಳ್ಳಿ ಮೂರ್ತಿ ಹಾಗೂ ವಸ್ತುಗಳ ವಶ – ಗುಜರಾತ್, ರಾಜಸ್ಥಾನದ ಮೂವರು ಆರೋಪಿಗಳ ಬಂಧನ ಸಪ್ತಸಾಗರ ವಾರ್ತೆ,ವಿಜಯಪುರ, ಆ.6: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಶ್ರೀ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದಿದ್ದ ಬಹುಚರ್ಚಿತ ಬೆಳ್ಳಿ ಮೂರ್ತಿ ಕಳ್ಳತನ ಪ್ರಕರಣವನ್ನು ವಿಜಯಪುರ ಜಿಲ್ಲಾ ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿ ₹52.70 ಲಕ್ಷ ಮೌಲ್ಯದ ಕಳುವಾದ ಮೂರ್ತಿ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಸಂದೀಪ ಪಾಟೀಲ…

Read More

ಸಚಿವ ಸ್ಥಾನ ಕೈತಪ್ಪಿದ ಬೇಸರ; ಜನರ ಒತ್ತಾಯಕ್ಕೆ ಮಣಿದು ರಾಜೀನಾಮೆ ವಾಪಸ್: ಯಶವಂತರಾಯಗೌಡ ಪಾಟೀಲ್

ಸಪ್ತಸಾಗರ ವಾರ್ತೆ,ವಿಜಯಪುರ, ಆ.6: ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್, ಬೆಂಬಲಿಗರು, ಹಿತೈಷಿಗಳು ಹಾಗೂ ಕ್ಷೇತ್ರದ ಜನರ ಒತ್ತಾಯದ ಮೇರೆಗೆ ತಮ್ಮ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ಸ್ಪಷ್ಟಪಡಿಸಿದರು.ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “2023ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್‌ಗೆ ಜನರು ಬಹುಮತ ನೀಡಿದ್ದರು. ಕಳೆದ ಮೂರು ವರ್ಷಗಳಲ್ಲಿ ಸರ್ಕಾರ ಉತ್ತಮ ಆಡಳಿತ ನೀಡಿದೆ. ಆದರೆ ಸಚಿವ ಸಂಪುಟ ವಿಸ್ತರಣೆಯ…

Read More

ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ: ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ.5: ಜಿಲ್ಲೆಯ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಿ, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹರು ಸೇರ್ಪಡೆಯಾಗದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಸೂಚಿಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ವಿಡಿಯೊ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಆಗಸ್ಟ್ 4ರವರೆಗೆ ಜಿಲ್ಲೆಯಲ್ಲಿ 16,79,495 ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿದ್ದು, ಆನ್‌ಲೈನ್ ಮೂಲಕ 4,069 ಮತದಾರರು…

Read More