ಕನ್ಹೇರಿ ಶ್ರೀಗಳಿಗೆ ಜಿಲ್ಲಾ ಪ್ರವೇಶ ನಿರ್ಬಂಧ: ಜಿಗಜಿಣಗಿ ಖಂಡನೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 16 :ಕನ್ಹೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳ ವಿಜಯಪುರ ಜಿಲ್ಲಾ ಪ್ರವೇಶ ನಿರ್ಬಂಧಿಸಿರುವ ಕ್ರಮ ಖಂಡನೀಯ. ಸಂತರನ್ನು ಮುಟ್ಟಿದವರು ಯಾರು ಉಳಿದಿಲ್ಲ. ಜನ ಕಳಕಳಿಯ ಮತ್ತು ಸಮಾಜಮುಖಿ ಸಂತರನ್ನು ಅಡ್ಡಿಪಡಿಸಿ, ಕಾಂಗ್ರೆಸ್ ಸರ್ಕಾರ ತನ್ನ ಸಂಕುಚಿತ ಮನಸ್ಸನ್ನು ಮತ್ತೊಮ್ಮೆ ಸಾಬೀತುಮಾಡಿದೆ ಎಂದು ಸಂಸದ ರಮೇಶ ಜಿಗಜಿಣಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಿಂದೂ ಧರ್ಮದ ಪರವಾಗಿ ಮಾತನಾಡುವೆ. ಅದು ಅಪರಾಧವೇ? ಹಿಂದೂ ದೇವರ ಬಗ್ಗೆ ಅವಹೇಳನದ ಬಗ್ಗೆ…

Read More

ಬಸವನಬಾಗೇವಾಡಿ ಕ್ಷೇತ್ರಕ್ಕೆ 3 ಕೆ.ಪಿ.ಎಸ್ ಶಾಲೆ ಮಂಜೂರು

ಸಪ್ತಸಾಗರ ವಾರ್ತೆ, ವಿಜಯಪುರ, ಅ. 16 : ರಾಜ್ಯ ಸರ್ಕಾರ ರಾಜ್ಯದ ಆಯ್ದ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ (ಕೆ.ಪಿ.ಎಸ್.) ಉನ್ನತೀಕರಿಸಿ ಆದೇಶ ಹೊರಡಿಸಿದೆ. ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರ ತವರು ಕ್ಷೇತ್ರವಾದ ಬಸವನಬಾಗೇವಾಡಿ ವಿಧಾನಸಭೆ ಕ್ಷೇತ್ರಕ್ಕೂ 3 ಕೆ.ಪಿ.ಎಸ್ ಶಾಲೆಗಳನ್ನು ಮಂಜೂರು ಮಾಡಿ ಆದೇಶಿಸಿದೆ.ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರ ಪ್ರಯತ್ನದ ಫಲವಾಗಿ ಕೊಲ್ಹಾರದ ಸರ್ಕಾರಿ…

Read More

ಕನ್ಹೇರಿ ಶ್ರೀಗಳಿಗೆ ಎರಡು ತಿಂಗಳ ಕಾಲ ಜಿಲ್ಲಾ ಪ್ರವೇಶ ನಿರ್ಬಂಧಿಸಿ ಡಿಸಿ ಆದೇಶ

ಸಪ್ತಸಾಗರ ವಾರ್ತೆ ವಿಜಯಪುರ, ಅ. 16:ಮಹಾರಾಷ್ಟ್ರದ ಕನ್ಹೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ ವಿಜಯಪುರ ಜಿಲ್ಲಾ ಪ್ರವೇಶ ನಿರ್ಬಂಧಿಸಿಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಆದೇಶ ಹೊರಡಿಸಿದ್ದಾರೆ.ಇತ್ತೀಚೆಗೆ ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು ಗ್ರಾಮದಲ್ಲಿ ಸಿಎಂ ಕೃಪಾಪೋಷಿತ ಲಿಂಗಾಯತ ಮಠಾಧೀಶರ ಒಕ್ಕೂಟ ಎಂದು ಪ್ರಚೋದನಕಾರಿ ಭಾಷಣ ಮಾಡಿದ್ದ ಹಿನ್ನೆಲೆ ಕನ್ಹೇರಿ ಶ್ರೀಗಳಿಗೆ ದಿನಾಂಕ 16-10-2025 ರಿಂದ 14-12- 2025 ವರೆಗೆ ಎರಡು ತಿಂಗಳ ಕಾಲ ಜಿಲ್ಲಾ ಪ್ರವೇಶ ನಿರ್ಬಂಧಿಸಿ ಆದೇಶ ಮಾಡಿದ್ದಾರೆ.ಅ. 16, 17 ರಂದು ಬಸವನ ಬಾಗೇವಾಡಿಯಲ್ಲಿ ನಡೆಯುವ…

Read More

ಪ್ರೀತಿಸುವಂತೆ ಅಪ್ರಾಪ್ತ ಬಾಲಕಿಗೆ ಯುವಕನ ಕಿರುಕುಳ: ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿ ಶವ ಪತ್ತೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 15:ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಯುವಕನೋರ್ವ ಪ್ರೀತಿಸುವಂತೆ ಪೀಡಿಸಿದ ಹಿನ್ನೆಲೆಯಲ್ಲಿ ಅಪ್ರಾಪ್ತ ಬಾಲಕಿ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 3 ಜ‌ನ ಆರೋಪಿಗಳನ್ನು ಬಂಧಿಸಲಾಗಿದೆ.ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಮಾಳಿಂಗರಾಯ ದ್ಯಾಮಣ್ಣ ದಂಡೋಜಿ, ಶಿವನಗೌಡ ಚನ್ನಪ್ಪಗೌಡ ಬಿರಾದಾರ, ಜುಮ್ಮಣ್ಣ ದಳವಾಯಿ ಬಂಧಿತ ಆರೋಪಿಗಳು.ಈ ಆರೋಪಿಗಳ ಪೈಕಿ ಮಾಳಿಂಗರಾಯ ದಂಡೋಜಿ ಈತ ಅಪ್ರಾಪ್ತೆಯನ್ನು ಪ್ರೀತಿಸಿ, ನನ್ನನ್ನೆ ಮದುವೆ ಆಗು ಎಂದು ಕೆಲ ದಿನಗಳಿಂದ ಪೀಡಿಸುತ್ತಿದ್ದ. ಈ ವಿಷಯ ಬಾಲಕಿ ತಂದೆ ತಾಯಿಗೆ…

Read More

ನಿಡಗುಂದಿ ತಾಲೂಕಾ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ ಅ.15: ಜಿಲ್ಲೆಯ ನಿಡಗುಂದಿ ತಾಲೂಕಿನ ತಹಶೀಲ್ದಾರ ಕಚೇರಿ, ನ್ಯಾಯಬೆಲೆ ಅಂಗಡಿ, ಅಂಗನವಾಡಿ-ಗ್ರಾಮ ಒನ್ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಿಡಗುಂದಿ ತಹಶೀಲ್ದಾರ ಕಚೇರಿ ಹಾಗೂ ಅಟಲ್ ಜನಸ್ನೇಹಿ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ವಿವಿಧ ಕೆಲಸ ಕಾರ್ಯಗಳಿಗೆ ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಕಾರ್ಯಗಳಿಗೆ ಸ್ಪಂದಿಸಬೇಕು. ಸಕಾಲ ಅರ್ಜಿಗಳನ್ನು ಕೂಡಲೇ ವಿಲೇ ಮಾಡಬೇಕು. ಯಾವುದೇ ಬಾಕಿ ಕಡತಗಳನ್ನು ಉಳಿಸಿಕೊಳ್ಳದೇ…

Read More

ನಾಳೆ ವಿಜಯಪುರ ಬಂದ್ ಗೆ ಕರೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 15: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದಿರುವ ಆರೋಪಿ ಬಂಧನಕ್ಕೆ ಆಗ್ರಹಿಸಿ ನಾಳೆ (ಅ. 16ರಂದು) ವಿವಿಧ ಪ್ರಗತಿಪರ ಸಂಘಟನೆಗಳು ವಿಜಯಪುರ ಬಂದ್ ಗೆ ಕರೆ ನೀಡಿವೆ.ಅವಶ್ಯಕ ವಸ್ತುಗಳು, ಔಷಧ ಹಾಗೂ ಆರೋಗ್ಯ ಸೇರಿದಂತೆ ತುರ್ತು ಸೇವೆಗಳು ಹೊರತುಪಡಿಸಿ ಉಳಿದೆಲ್ಲ ಸೇವೆಗಳು ಬಹುತೇಕ ಸ್ತಬ್ಧವಾಗಲಿವೆ.ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ನ್ಯಾಯವಾದಿಯೊಬ್ಬರು ಶೂ ಎಸೆದಿರುವುದು ಅತ್ಯಂತ ಖಂಡನಾರ್ಹ. ಇದು ಪ್ರಜಾಪ್ರಭುತ್ವ ಮೇಲೆ ಹಾಗೂ…

Read More

ಉದ್ಯೋಗ ಮೇಳದಲ್ಲಿ 32 ಜನರ ಆಯ್ಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 15: ನಗರದ‌ ಬಿ.ಎಲ್.ಡಿ.ಇ ಸಂಸ್ಥೆಯ‌ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ ಕಾಲೇಜಿನಲ್ಲಿ ಅಕ್ಟೋಬರ್ 13 ಮತ್ತು 14‌ ರಂದು ದಕ್ಷಿಣ ಕೋರಿಯಾದ ಪ್ರತಿಷ್ಠಿತ ಸಿ.ಎನ್.ಸಿ‌ ಯಂತ್ರಗಳ ಉತ್ಪಾದಕ ಸಂಸ್ಥೆ ಡಿ. ಎನ್. ಸೊಲೂಶನ್ಸ್ ಆಯೋಜಿಸಿದ್ದ ಎರಡು ದಿನಗಳ ಉದ್ಯೋಗ ಮೇಳದಲ್ಲಿ 32 ಜನ ಆಯ್ಕೆಯಾಗಿದ್ದಾರೆ.ಬೆಂಗಳೂರಿನ‌ ಡಿ. ಎನ್. ಸೊಲೂಶನ್ಸ್ ಸಂಸ್ಥೆಯ ಉಪಾಧ್ಯಕ್ಷ ಸುರೇಶ ನಾರಾಯಣ ಮತ್ತು ಮಾನವ ಸಂಪನ್ಮೂಲ ಅಧಿಕಾರಿ ಸ್ಮೀತಾ ಆರ್. ಅವರು ಈ ಉದ್ಯೋಗ‌ ಮೇಳದಲ್ಲಿ‌ ನಡೆಸಿದ ಸಂದರ್ಶನದಲ್ಲಿ‌ ವಿಜಯಪುರ…

Read More

ನಾಳೆ ಅಲೋಪಥಿ ಮತ್ತು ಆಯುರ್ವೇದ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 15: ಒಂದೇ ಸೂರಿನಡಿ ಅಲೊಪಥಿ ಮತ್ತು ಆಯುರ್ವೇದ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ನಗರದ ಬಿ.ಎಲ್.ಡಿ.ಇ ಆಯುರ್ವೇದ ಕಾಲೇಜಿನ ಆವರಣದಲ್ಲಿರುವ ನಗರ ಆರೋಗ್ಯ ಕೇಂದ್ರ ಮತ್ತು ಬಿ.ಎಲ್.ಡಿ.ಇ ಹೈಟೆಕ್ ಆಯುರ್ವೇದ ಆಸ್ಪತ್ರೆಯಲ್ಲಿ ಅಕ್ಟೋಬರ್ 17 ರಂದು ಶುಕ್ರವಾರ ನಡೆಯಲಿದೆ.ಅಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಗೆ ಈ ಶಿಬಿರ ನಡೆಯಲಿದ್ದು, ಅಲೋಪಥಿ ಚಿಕಿತ್ಸೆಗಳು, ಬೆಂಬಲಿತ ಸೇವೆಗಳು, ಆಯುರ್ವೇದ ಚಿಕಿತ್ಸೆಗಳು ಲಭ್ಯವಿರಲಿವೆ. ಈ ಶಿಬಿರದಲ್ಲಿ ಅಲೋಪತಿ ಚಿಕಿತ್ಸೆಗಳಾದ ವೈದ್ಯಕೀಯ…

Read More

ಸಹಕಾರಿ ಯುನಿಯನ್ ಅಧ್ಯಕ್ಷರಾಗಿ ಮುಲ್ಲಾ, ಉಪಾಧ್ಯಕ್ಷರಾಗಿ ಅಮರಗೊಂಡ ಅವಿರೋಧ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 14 :ಹಿರಿಯ ಸಹಕಾರಿಗಳಾದ ಸಚಿವ ಶಿವಾನಂದ ಪಾಟೀಲ ಅವರ ಪ್ರಯತ್ನದಿಂದಾಗಿ ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಯಲ್ಲಿ ಎದುರಾಳಿಗಳನ್ನು ಹಳೆಯ ಪೆನಲ್ ಕ್ಲೀನಸ್ವೀಪ್ ಮಾಡಿದ ಬೆನ್ನಲ್ಲೇ ಸಚಿವರ ಪ್ರಯತ್ನದಿಂದಾಗಿ ವಿಜಯಪುರ ಜಿಲ್ಲಾ ಸಹಕಾರಿ ಯುನಿಯನ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ.ವಿಜಯಪುರ ಜಿಲ್ಲಾ ಸಹಕಾರಿ ಯುನಿಯನ್ ನಿ. ಅಧ್ಯಕ್ಷರಾಗಿ ಎಂ.ಸಿ. ಮುಲ್ಲಾ, ಉಪಾಧ್ಯಕ್ಷರಾಗಿ ನಾಗಪ್ಪ ಅಮರಗೊಂಡ ಅವಿರೋಧ ಆಯ್ಕೆಯಾಗಿದ್ದಾರೆ.ಈಚೆಗೆ ನಡೆದ ಚುನಾವಣೆಯಲ್ಲಿ 2025-30 ರ ಅವಧಿಗೆ ಆಡಳಿತ ಮಂಡಳಿಯ…

Read More

ನಾಯಿ ಕಡಿತಕ್ಕೆ ನಿರ್ಲಕ್ಷ್ಯ ಬೇಡ : ಎಚ್ಚರಿಕೆ ಇರಲಿ- ತಕ್ಷಣ ಲಸಿಕೆ ಪಡೆದುಕೊಳ್ಳಿ-ಜಿಲ್ಲಾಧಿಕಾರಿ ಡಾ.ಆನಂದ ಕೆ. ಕರೆ

ಸಪ್ತಸಾಗರ ವಾರ್ತೆ, ವಿಜಯಪುರ ಅ.14: ನಾಯಿ ಕಡಿತಕ್ಕೊಳಗಾದಲ್ಲಿ ಸಾರ್ವಜನಿಕರು ನಿರ್ಲಕ್ಷ್ಯ ವಹಿಸದೇ ಎಚ್ಚರಿಕೆ ವಹಿಸಿ, ತಕ್ಷಣ ಲಸಿಕೆ ಪಡೆದುಕೊಳ್ಳುವ ಮೂಲಕ ರೇಬಿಸ್ ಬಾರದಂತೆ ತಡೆಗಟ್ಟಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಪಶುವೈದ್ಯಕೀಯ ಸಂಘ ಹಾಗೂ ಜಿಲ್ಲಾ ಘಟಕ ಇವರ ಸಹಯೋಗದಲ್ಲಿ ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ರೇಬಿಸ್ ತಡೆಗಟ್ಟಲು ಮುಂದಾಗೋಣ ನೀವು-ನಾವು ನಮ್ಮ ಸಮಾಜ ಎಂಬ ಘೋಷವಾಕ್ಯದಡಿ 2025-ರ…

Read More