‘ನಾನು-ನನ್ನದು’ ಮನೋಭಾವದಿಂದ ದೇಶ-ಸಮಾಜದ ಚಿಂತನೆ ಕ್ಷೀಣಿಸಿದೆ: ಡಾ. ದೇಸಾಯಿ ಯಡಹಳ್ಳಿ ಕಳವಳ

ಸಪ್ತಸಾಗರ ವಾರ್ತೆ,ವಿಜಯಪುರ, ಜು.12: ಸಮಾಜದಲ್ಲಿ ಹೆಚ್ಚುತ್ತಿರುವ ಅನಗತ್ಯ ಆಡಂಬರ, ದುಂದು ವೆಚ್ಚ ಮತ್ತು ಪ್ರದರ್ಶನದ ಮನೋಭಾವಕ್ಕೆ ಕಡಿವಾಣ ಹಾಕುವ ಅಗತ್ಯವಿದ್ದು, ದೇಶ ಹಾಗೂ ಸಮಾಜದ ಬಗ್ಗೆ ಕಾಳಜಿ ಹೊಂದಿದ ಜೀವನಶೈಲಿ ರೂಢಿಸಿಕೊಳ್ಳಬೇಕೆಂದು ಹಿರಿಯ ಸಹಕಾರಿ ಧುರೀಣ ಹಾಗೂ ಪರಿಸರ ತಜ್ಞ ಡಾ. ಎಂ.ಆರ್. ದೇಸಾಯಿ ಯಡಹಳ್ಳಿ ಕರೆ ನೀಡಿದರು.ಬಾಗಲಕೋಟೆ ಜಿಲ್ಲೆಯ ಬೀಳಗಿ ಸಮೀಪದ ಯಡಹಳ್ಳಿಯಲ್ಲಿ ಆಯೋಜಿಸಿದ್ದ ಅನಗತ್ಯ ಆಡಂಬರದ ಆಚರಣೆಗಳ ಕುರಿತ ಚಿಂತನ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇತ್ತೀಚಿನ ದಶಕಗಳಲ್ಲಿ “ನಾನು-ನನ್ನದು” ಎಂಬ ಸ್ವಾರ್ಥದ…

Read More

ಸ್ಥಳಾಂತರಗೊಂಡ ಮತದಾರರ ಪತ್ತೆಗೆ ಪಾಲಿಕೆಯ ವಿಶೇಷ ಕಾರ್ಯಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು.11: ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ನೈಜ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹರು ಪಟ್ಟಿಗೆ ಸೇರ್ಪಡೆಯಾಗದಂತೆ ತಡೆಯಲು ಮಹಾನಗರ ಪಾಲಿಕೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.ಮಹಾನಗರ ಪಾಲಿಕೆ ಆಯುಕ್ತರು ಹಾಗೂ ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳು ಈ ಕುರಿತು ಮಾಹಿತಿ ನೀಡಿ, ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಅಂಗವಾಗಿ ಜೂನ್ 30ರಿಂದ ಮನೆ-ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ನಡೆಯುತ್ತಿದ್ದು, ಇದುವರೆಗೆ 2,18,163 ಮತದಾರರಿಗೆ ಯಶಸ್ವಿಯಾಗಿ…

Read More

ಅಕ್ರಮ ವಲಸಿಗರಿಗೆ ಪಿಆರ್‌ಸಿ ನೀಡದಂತೆ ಸ್ವಾಮಿ ವಿವೇಕಾನಂದ ಸೇನೆ ಆಗ್ರಹ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ಸಪ್ತಸಾಗರ ವಾರ್ತೆ,ವಿಜಯಪುರ, ಜು.11: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿರುವ ಹಿನ್ನೆಲೆಯಲ್ಲಿ, ಖಾಯಂ ನಿವಾಸಿ ಪ್ರಮಾಣ ಪತ್ರ (ಪಿಆರ್‌ಸಿ) ವಿತರಣೆಯಲ್ಲಿ ಸರ್ಕಾರ ಅತ್ಯಂತ ಎಚ್ಚರಿಕೆ ವಹಿಸಬೇಕು ಎಂದು ಸ್ವಾಮಿ ವಿವೇಕಾನಂದ ಸೇನೆ ರಾಜ್ಯಾಧ್ಯಕ್ಷ ರಾಘವ ಅಣ್ಣಿಗೇರಿ ಆಗ್ರಹಿಸಿದ್ದಾರೆ.ಅವರು ಪತ್ರಿಕಾ ಪ್ರಕಟಣೆಯಲ್ಲಿ, ಪಿಆರ್‌ಸಿ ಪಡೆಯಲು ಅರ್ಜಿ ಸಲ್ಲಿಸುವವರನ್ನು ಕರ್ನಾಟಕ ಅಥವಾ ಭಾರತದ ಕಾನೂನುಬದ್ಧ ನಿವಾಸಿಗಳೇ ಅಥವಾ ಅಕ್ರಮ ವಲಸಿಗರೇ ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳು ಸಮಗ್ರವಾಗಿ ಪರಿಶೀಲಿಸಿ ಮಾತ್ರ ಪ್ರಮಾಣ ಪತ್ರ ನೀಡಬೇಕು ಎಂದು…

Read More

ಪಕ್ಷ ಸಂಘಟನೆಗೆ ಸುನೀಲಗೌಡ ಕರೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 11: ಸಕ್ರಿಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು‌ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಶನಿವಾರ ನಗರದಲ್ಲಿ ಕಾತ್ರಾಳ ಗ್ರಾಮದ ಬಿಜೆಪಿ‌ ಮುಖಂಡರು ಮತ್ತು ಕಾರ್ಯಕರ್ತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕಾಂಗ್ರೆಸ್ ಸರ್ವಜನರ ಏಳಿಗೆಗಾಗಿ ಕೆಲಸ ಮಾಡುತ್ತಿದೆ. ಹೊಸ ಕಾರ್ಯಕರ್ತರ ಸೇರ್ಪಡೆಯಿಂದ ಪಕ್ಷಕ್ಕೆ ಮತ್ತಷ್ಟು ಬಲ ಬರಲಿದೆ. ಹಳಬರು, ಹೊಸಬರು ಒಗ್ಗಟ್ಟಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ‌ ಮಾತನಾಡಿದ ಮುಖಂಡರು ಕೈಗಾರಿಕೆ,…

Read More

ಸಾಂಸ್ಕೃತಿಕ ಚಟುವಟಿಕೆ ವ್ಯಕ್ತಿತ್ವ ವಿಕಸನಕ್ಕೆ ಬುನಾದಿ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 11:ವಿದ್ಯಾರ್ಥಿಗಳಿಗೆ ಪಠ್ಯದ ಜತೆ ಪಠ್ಯೇತರ ಚಟುವಟಿಕೆ ಸಹ ಮುಖ್ಯ. ಸಾಂಸ್ಕೃತಿಕ ಚಟುವಟಿಕೆ ಅವರ ಜೀವನದ ಅವಿಭಾಜ್ಯ ಅಂಗವಾಗಬೇಕು. ಅವು ಇಡೀ ಜೀವನದ ಯಶಸ್ಸು ಮತ್ತು ವ್ಯಕ್ತಿತ್ವ ವಿಕಸನಕ್ಕೆ ಭದ್ರ ಬುನಾದಿಯಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಶನಿವಾರ ನಗರದ ಬಸವೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಹಾಗೂ 2026-27ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ,…

Read More

ಎಸ್‌ ಐ ಆರ್‌ ಗೆ ಸಹಾಯವಾಣಿ ಕೇಂದ್ರ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 10:ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆಮತದಾರರಿಗೆ ಗಣತಿ ನಮೂನೆಗಳನ್ನು ಭರ್ತಿ ಮಾಡುವ ಅನೂಕೂಲಕ್ಕಾಗಿ ಪ್ರತಿ ವಾರ್ಡ್ ನಲ್ಲಿ ಮತದಾರರ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಅವರು ತಿಳಿಸಿದ್ದಾರೆ.ಮಹಾನಗರ ಪಾಲಿಕೆಯ ಘನತ್ಯಾಜ್ಯ ವಾಹನಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಸಾರ್ವಜನಿಕರಿಗೆ ಧ್ವನಿ ಮುದ್ರಣ ಮೂಲಕ ಪ್ರಚಾರ ಮಾಡಲಾಗುತ್ತಿದೆ.ವಿಜಯಪುರ ನಗರ ಪ್ರದೇಶದಲ್ಲಿ ಈ ಮೊದಲು ವಾಸವಿದ್ದ ಸ್ಥಳದ ಮತದಾರ ಪಟ್ಟಿಯಲ್ಲಿ ಹೆಸರು ದಾಖಲೆಯಿದ್ದು, ಹೊಸ…

Read More

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ತುಳಸಿರಾಮ್ ಬನಸೋಡೆ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 10:ಜಿಲ್ಲೆಯ ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಚಟುವಟಿಕೆಗಳಲ್ಲಿ ತೊಡಗಿದ್ದಾನೆ ಎಂಬ ಆರೋಪದ ಮೇರೆಗೆ ವಿಜಯಪುರ ನಗರದ ಗಣೇಶನಗರ ನಿವಾಸಿ, ಮೂಲತಃ ಇಂಡಿ ತಾಲೂಕಿನ ಅರ್ಜನಾಳ ಗ್ರಾಮದ *ತುಳಸಿರಾಮ್ ತಂದೆ ಪಂಡಿತ ಹರಿಜನ @ ಬನಸೋಡೆ (27) ವಿರುದ್ಧ ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಹೊರಡಿಸಲಾಗಿದೆ.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಆನಂದ್ ಕೆ. ಅವರು ಕರ್ನಾಟಕ ಅಕ್ರಮ ಕಳ್ಳಭಟ್ಟಿ ಸಾರಾಯಿ ವ್ಯವಹಾರ, ಮಾದಕ ದ್ರವ್ಯ ಅಪರಾಧಿಗಳು, ಜೂಜುಕೋರರು,…

Read More

ಆಷಾಢ ಮಾಸ ಅಂಗವಾಗಿ ನಾಳೆ ವಿಜಯಪುರದಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು.10:ವಿಜಯಪುರ ಸೈಕ್ಲಿಂಗ್ ಗ್ರೂಪ್ (ವಿಸಿಜಿ) ವತಿಯಿಂದ ಆಷಾಢ ಮಾಸದ ಅಂಗವಾಗಿ ಪಂಡರಪುರಕ್ಕೆ ವಿಶೇಷ ಸೈಕಲ್ ಯಾತ್ರೆಯನ್ನು ಜುಲೈ 11ರಂದು (ಶನಿವಾರ) ಆಯೋಜಿಸಲಾಗಿದೆ ಎಂದು ವಿಸಿಜಿ ಸಂಘಟನಾ ಕಾರ್ಯದರ್ಶಿ ಸೋಮಶೇಖರ ಸ್ವಾಮಿ ತಿಳಿಸಿದ್ದಾರೆ.ವಿಜಯಪುರದ ಬಿ.ಎಂ. ಪಾಟೀಲ ವೃತ್ತದಿಂದ ಶನಿವಾರ ಬೆಳಿಗ್ಗೆ 5.30ಕ್ಕೆ ಯಾತ್ರೆಗೆ ಚಾಲನೆ ದೊರೆಯಲಿದ್ದು, ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಬಿ. ಪಾಟೀಲ ಚಾಲನೆ ನೀಡಲಿದ್ದಾರೆ. ವಿಸಿಜಿ ಅಧ್ಯಕ್ಷ ಡಾ. ಮಹಾಂತೇಶ ಬಿರಾದಾರ ಉಪಸ್ಥಿತರಿರಲಿದ್ದಾರೆ.ಈ ಯಾತ್ರೆಯಲ್ಲಿ ಡಾ. ರವಿ ಚೌಧರಿ, ವಿಸಿಜಿ ಉಪಾಧ್ಯಕ್ಷ ಶಿವನಗೌಡ…

Read More

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಕಲಿ ಡಿಎಸ್‌ಪಿ ಬಂಧನ; ಬೆಂಗಳೂರಿನಲ್ಲಿ ಆರೋಪಿ ಸೆರೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು.7: ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ, ತಾನು ಡಿಎಸ್‌ಪಿ ಎಂದು ನಂಬಿಸಿ ನಿರುದ್ಯೋಗಿ ಯುವಕರಿಗೆ ಪೊಲೀಸ್ ಹಾಗೂ ಇತರೆ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ವಂಚನೆ ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ ಜಿಲ್ಲೆಯ ಎಪಿಎಂಸಿ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತನನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ವರಗೋಡದಿನ್ನಿ ಗ್ರಾಮದ ಗ್ಯಾನನಗೌಡ @ ಜ್ಞಾನಗೌಡ @ ಗಣೇಶ @ ಸಿ. ಸಂಪತ್‌ಕುಮಾರ (31) ಎಂದು ಗುರುತಿಸಲಾಗಿದೆ. ಕೊಲೆ ಯತ್ನ ಪ್ರಕರಣದಲ್ಲೂ ಆರೋಪ 2014ರಲ್ಲಿ…

Read More

‘ಮನೆ ಮನೆಗೆ’ ಎಂದ ಸರ್ಕಾರ… ‘ಶಿಬಿರಕ್ಕೆ ಬನ್ನಿ’ ಎಂದ ಅಧಿಕಾರಿಗಳು?:

ವೃದ್ಧರು, ಅಂಗವಿಕಲರು, ದಿನಗೂಲಿ ಕಾರ್ಮಿಕರಿಗೆ ಹೆಚ್ಚಿದ ಸಂಕಷ್ಟ ರುದ್ರಪ್ಪ ಆಸಂಗಿ ಸಪ್ತಸಾಗರ ವಾರ್ತೆ,ವಿಜಯಪುರ, ಜು. 4:ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರಾಜ್ಯಾದ್ಯಂತ ಜೋರಾಗಿ ನಡೆಯುತ್ತಿದೆ. ಚುನಾವಣಾ ಆಯೋಗದ ಉದ್ದೇಶ ಸ್ಪಷ್ಟ—ಪ್ರತಿಯೊಬ್ಬ ಅರ್ಹ ಮತದಾರನ ಮನೆ ಬಾಗಿಲಿಗೆ ತೆರಳಿ ಮಾಹಿತಿ ಪರಿಶೀಲಿಸಿ, ದಾಖಲೆಗಳನ್ನು ಸಂಗ್ರಹಿಸಿ, ಯಾರೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು. ಈ ಉದ್ದೇಶಕ್ಕಾಗಿ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡುವ ಜವಾಬ್ದಾರಿಯನ್ನು ನೀಡಲಾಗಿದೆ.ಆದರೆ ವಿಜಯಪುರ ಸೇರಿದಂತೆ ಹಲವು ಭಾಗಗಳಿಂದ…

Read More