ಡಾ.ಬಾಬು ಜಗಜೀವನ ರಾಂ ಜಯಂತ್ಯುತ್ಸವ: ಪ್ರತಿಮೆಗೆ ಮಾಲಾರ್ಪಣೆ

ಸಪ್ತಸಾಗರ ವಾರ್ತೆ,ವಿಜಯಪುರ,ಏ. 5:ಭಾರತದ ಮಾಜಿ ಉಪಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ 119ನೇ ಜಯಂತಿ ಹಿನ್ನೆಲೆಯಲ್ಲಿ, ಏಪ್ರಿಲ್ 5ರಂದು ನಗರದ ಸೆಟ್‌ಲೈಟ್ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಡಾ.ಬಾಬು ಜಗಜೀವನ ರಾಂ ಪ್ರತಿಮೆಗೆ ಶಾಸಕ ವಿಠ್ಠಲ ಕಟಕಧೋಂಡ, ಪಾಲಿಕೆ ಮೇಯರ್ ಮಡಿವಾಳಪ್ಪ ಕರಡಿ, ಜಿಲ್ಲಾಧಿಕಾರಿ ಡಾ.ಆನಂದ ಕೆ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾಲಾರ್ಪಣೆ‌ ಮಾಡಿ,ಗೌರವ‌ ನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ,…

Read More

ಅನಗತ್ಯ ನೀರು ಪೋಲು ಮಾಡಿದರೆ 2 ಸಾವಿರ ರೂ. ದಂಡ: ಅನಧಿಕೃತ ಸಂಪರ್ಕ ಹೊಂದಿದ್ದರೆ 5 ಸಾವಿರ ರೂ. ದಂಡ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 4: ಅನವಶ್ಯಕವಾಗಿ ಕುಡಿಯುವ ನೀರು ಪೋಲು ಮಾಡುವರಿಗೆ 2 ಸಾವಿರ ರೂ. ಹಾಗೂ ಅನಧಿಕೃತ ನಳ ಸಂಪರ್ಕ ಪಡೆದುಕೊಳ್ಳುವ ಹಾಗೂ ಪಡೆದುಕೊಂಡವರಿಗೆ ಹೊಸ ನಳದ ಶುಲ್ಕದ ಜೊತೆಗೆ ಹೆಚ್ಚುವರಿ 5 ಸಾವಿರ ರೂ. ದಂಡ ವಿಧಿಸಲಾಗುವುದು ಕರ್ನಾಟಕ ನಗರ ನೀರು‌ ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.ನಗರದ ವಿವಿಧ ವಲಯ, ವಾರ್ಡಗಳಲ್ಲಿ ಪೂರೈಕೆಯಾಗುವ ನೀರನ್ನು ಕುಡಿಯುವ ಸಲುವಾಗಿ ಮಾತ್ರ ಪರಿಗಣಿಸಿ ನೀರಿನ ಪ್ರಮಾಣವನ್ನು ಅಂದಾಜಿಸಲಾಗಿರುತ್ತದೆ.ದಿನಂಪ್ರತಿ ಪ್ರತಿಯೊಬ್ಬರಿಗೆ ತಲಾ 135…

Read More

ಮಲ್ಲಿಕಾರ್ಜುನ ಸ್ವಾಮಿಗಳು ಭಕ್ತರ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ-ಸುನೀಲಗೌಡ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಎ. 4: ಸಮಾಜಮುಖಿ ಕಾರ್ಯಗಳ ಮೂಲಕ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಭಕ್ತರ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಶುಕ್ರವಾರ ರಾತ್ರಿ ವಿಜಯಪುರ ತಾಲೂಕಿನ ಹೊನಗನಹಳ್ಳಿ- ಸವನಹಳ್ಳಿಯ ಶ್ರೀ ಆತ್ಮಾನಂದ ಆಶ್ರಮದಲ್ಲಿ ನಡೆಯುತ್ತಿರುವ ಪ. ಪೂ. ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳ 5ನೇ ಪುಣ್ಯಸ್ಮರಣೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಹಾಗೂ ಅಡ್ಡಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೋಂಡು ಅವರು ಮಾತನಾಡಿದರು.ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಜಾತ್ಯತೀತ ತತ್ವಗಳನ್ನು ಅಳವಡಿಸಿಕೊಂಡಿದ್ದರು. ಹಸಿದು ಬಂದವರಿಗೆ ಅನ್ನ…

Read More

ಜ್ಞಾನ-ಪರಿಜ್ಞಾನ ಇದ್ದಾಗ ಮಾತ್ರ ಪತ್ರಕರ್ತ ಯಶಸ್ಸು ಗಳಿಸಲು ಸಾಧ್ಯ: ಸಂತೋಷ ಚಿನಗುಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಎ. 3: ಪತ್ರಕರ್ತನಿಗೆ ಜ್ಞಾನ ಮತ್ತು ಪರಿಜ್ಞಾನ ಇದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಪ್ರಜಾವಾಣಿಯ ಬೆಳಗಾವಿ ಜಿಲ್ಲಾ ಹಿರಿಯ ವರದಿಗಾರ ಸಂತೋಷ ಚಿನಗುಡಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವುಮನ್ ಮೀಡಿಯಾ ಕ್ಲಬ್ ಉದ್ಘಾಟಿಸಿ ಅವರು ಮಾತನಾಡಿದರು.ಪತ್ರಿಕೋದ್ಯಮವು ಕೇವಲ ತರಗತಿ ಕೋಣೆಗೆ ಸೀಮಿತವಾಗಿರದೆ, ವಿದ್ಯಾರ್ಥಿಗಳು ಪ್ರಾಯೋಗಿಕ ಜ್ಞಾನವನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ. ಪತ್ರಿಕೆಗಳನ್ನು ಕೇವಲ ನೋಡದೆ, ಅವನ್ನು ನಿಯಮಿತವಾಗಿ ಓದಿದಾಗ…

Read More

ಅಕಾಲಿಕ ಮಳೆ:ಬೆಳೆ ಹಾನಿ ಸಮೀಕ್ಷೆಗೆ ಎಂಬಿಪಿ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಎ. 3: ಜಿಲ್ಲೆಯಲ್ಲಿ ನಿನ್ನೆ ಗುರುವಾರ ಸುರಿದ ಅಕಾಲಿಕ ಮಳೆಯಿಂದಾಗಿ ಉಂಟಾಗಿರುವ ದ್ರಾಕ್ಷಿ ಬೆಳೆ ಹಾನಿಯ ಕುರಿತು ಕೂಡಲೇ ಸಮೀಕ್ಷೆ‌ ನಡೆಸಿ ವರದಿ ಸಲ್ಲಿಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಮಾರ್ಚ್ ತಿಂಗಳಲ್ಲಿ ಆಲಿಕಲ್ಲು ಮತ್ತು ಬಿರುಗಾಳಿ ಸಹಿತ ಮಳೆ ಸುರಿದ ಪರಿಣಾಮ ದ್ರಾಕ್ಷಿ ಸೇರಿದಂತೆ ನಾನಾ ಬೆಳೆಗಳು ಹಾನಿಯಾಗಿದ್ದವು. ‌ಈ ಕುರಿತು ಸಮಗ್ರ ಸಮೀಕ್ಷೆ ನಡೆಸುವಂತೆ ಮಾರ್ಚ್ 21 ರಂದು‌ ಜಿಲ್ಲಾಧಿಕಾರಿ,…

Read More

ರಾಷ್ಟ್ರದ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಅನನ್ಯ:ಹಿರೇಮಠ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 2 : ಕಾರ್ಮಿಕರು ದೇಶದ ಆಸ್ತಿ, ರಾಷ್ಟ್ರದ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಅನನ್ಯವಾಗಿದ್ದು, ಕಾರ್ಮಿಕರ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳನ್ನು ಲಾಭ ಪಡೆದುಕೊಳ್ಳುವ ನಿಟ್ಟಿನಲ್ಲಿ ಸ್ಮಾರ್ಟ್ ಕಾರ್ಡ್ ಅಗತ್ಯ. ಅಂತಹ ಸ್ಮಾರ್ಟ್ ಕಾರ್ಡ್ ಬಾಗಿಲಿಗೆ ಒದಗಿಸುವ ಕಾರ್ಯ ನಡೆಯುತ್ತಿರುವುದು ಸಂತಸದ ಸಂಗತಿ ಎಂದು ಸಿದ್ಧೇಶ್ವರ ಸಂಸ್ಥೆಯ ಚೇರ್ಮನ್ ಬಸಯ್ಯ ಹಿರೇಮಠ ಹೇಳಿದರು.ನಗರದ ಜೋರಾಪುರ ಪೇಟೆಯ ಶ್ರೀ ಶಂಕರಲಿಂಗ ದೇವಸ್ಥಾನದ ಆವರಣದಲ್ಲಿ ಕಾರ್ಮಿಕ ಇಲಾಖೆ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಸಂಘಟಿತರಿಗೆ ಕಾರ್ಮಿಕರ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ…

Read More

ಅಕ್ಕಮಹಾದೇವಿ ಸ್ತ್ರೀ ಸ್ವಾತಂತ್ರ‍್ಯ ಮತ್ತು ಸಮಾನತೆಯ ಸಂಕೇತ- ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅಭಿಮತ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 2: ಅನುಭವ ಮಂಟಪವು ಶರಣ ಚಳವಳಿಯ ಹೃದಯವಾಗಿತ್ತು. ಇಲ್ಲಿ ಮಹಿಳೆಯರು ಮೌನ ಶ್ರೋತೃಗಳಾಗಿರಲಿಲ್ಲ. ಅವರು ತರ್ಕಕಾರ್ತಿಯರು, ಪ್ರಶ್ನಕರೂ ಮತ್ತು ವಚನ ರಚನಾಕಾರರೂ ಆಗಿದ್ದರು. ಅಕ್ಕಮಹಾದೇವಿ ಅನುಭವ ಮಂಟಪದಲ್ಲಿ ಪುರುಷ ಶರಣರ ಮುಂದೆ ಧೈರ್ಯವಾಗಿ ಮಾತನಾಡಿದರು. ಹೀಗಾಗಿ ಅಕ್ಕಮಹಾದೇವಿ ಸ್ತ್ರೀ ಸ್ವಾತಂತ್ರ‍್ಯ ಮತ್ತು ಸಮಾನತೆಯ ಸಂಕೇತವಾಗಿದ್ದಾರೆ ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 12ನೇ…

Read More

ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಪೊಲೀಸರು ನೊಂದವರ ಭರವಸೆಯ ಆಶಾಕಿರಣ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆಗೆ ಹಗಲಿರುಳು ಶ್ರಮಿಸುವ ಪೊಲೀಸರ ಕಾರ್ಯ ಅನನ್ಯ: ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 2: ವರ್ಷದುದ್ದಕ್ಕೂ ಸದಾ ಒತ್ತಡದ ಮಧ್ಯೆಯೇ ಕಾರ್ಯನಿರ್ವಹಿಸುವ ಮೂಲಕ ಸಾರ್ವಜನಿಕರ ನೆಮ್ಮದಿಯ ಜೀವನಕ್ಕಾಗಿ, ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಪೊಲೀಸರು ನಿಭಾಯಿಸುವ ಕರ್ತವ್ಯಕ್ಕೆ ಬೆಲೆ ಕಟ್ಟಲಾಗದು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಪೊಲೀಸರ ಕಾರ್ಯವನ್ನು ಬಣ್ಣಿಸಿದರು.ಜಿಲ್ಲಾ ಪೊಲೀಸ್ ಇಲಾಖೆಯಿಂದ ಇಲ್ಲಿನ ಪೊಲಿಸ್ ಕವಾಯತು ಮೈದಾನದಲ್ಲಿ ಗುರುವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಸದಾ ಸಮಾಜದ ಒಳಿತಿಗಾಗಿ ಯಾವ ಪ್ರತಿಫಲಾಪೇಕ್ಷೆಯಿಲ್ಲದೇ ಹಗಲಿರುಳು ಶ್ರಮಿಸುವ ಪೊಲೀಸರು…

Read More

ಅಕ್ಕಮಹಾದೇವಿ ಕನ್ನಡ ಸಾಹಿತ್ಯದ ದೃವತಾರೆ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 2: ಅಕ್ಕಮಹಾದೇವಿ ಅಧ್ಯಾತ್ಮಿಕ ಸ್ವಾತಂತ್ರ್ಯದ ಸಂಕೇತ. ಅವರ ವಚನಗಳು ಕನ್ನಡ ಸಾಹಿತ್ಯದ ಅತ್ಯುನ್ನತ ಅನುಭಾವ ಕಾವ್ಯವಾಗಿದ್ದು, ಅವು ವೈರಾಗ್ಯ, ಭಕ್ತಿ ಮತ್ತು ಸ್ತ್ರೀವಾದದ ಮಿಶ್ರಣವಾಗಿವೆ.ಆಕೆಯ ವಚನಗಳು ಇಂದಿಗೂ ಪ್ರಸ್ತುತವಾಗಿದ್ದು, ವ್ಯಕ್ತಿತ್ವ ವಿಕಸನಕ್ಕೆ ದಾರಿದೀಪವಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ನಗರದ ಬಂಜಾರಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಅಕ್ಕಮಹಾದೇವಿ ಜಯಂತಿ ಆಚರಣೆಯಲ್ಲಿ ‘ಅಕ್ಕಮಹಾದೇವಿಯ ವಚನಗಳ ಪ್ರಸ್ತುತತೆ’ ಕುರಿತು ಅವರು ಮಾತನಾಡಿದರು.ಅಕ್ಕಳು ತನ್ನ ವಚನಗಳಲ್ಲಿ ಬುದ್ದಿಗಿಂತ ಭಾವಕ್ಕೆ,ಮಾತಿಗಿಂತ ಕ್ರಿಯೆಗೆ, ಅಧಿಕಾರಕ್ಕಿಂತ ಅಂತಃಕರಣಕ್ಕೆ ಹೆಚ್ಚಿನ…

Read More

ಸ್ವಯಂ ಗಣತಿ ಮಾಡಿಕೊಳ್ಳಲು ನಾಗರಿಕರಿಗೆ ಮೇಯರ್‌ ಎಂ. ಎಸ್.‌ ಕರಡಿ ಮನವಿ: ಸ್ವಯಂ ಗಣತಿ ಕಾರ್ಯಕ್ರಮಕ್ಕೆ ಮೇಯರ್ ಹಾಗೂ ಉಪ ಮೇಯರ್ ಚಾಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 1:ನಮ್ಮ ಜನಗಣತಿ, ನಮ್ಮ ಭವಿಷ್ಯ ಧ್ಯೇಯವಾಕ್ಯದಡಿ ದೇಶ ವ್ಯಾಪಿ ನಡೆಯಲಿರುವ ರಾಷ್ಟ್ರೀಯ ಜನಗಣತಿ 2027 ರ ಮೊದಲ ಹಂತದ ಸ್ವಯಂ ಗಣತಿ ಕಾರ್ಯಕ್ಕೆ ಇಲ್ಲಿನ ಮಹಾನಗರ ಪಾಲಿಕೆಯ ಮೇಯರ್ ಮಡಿವಾಳಪ್ಪ ಕರಡಿ ಹಾಗೂ ಉಪ‌ಮೇಯರ್ ಸುಮಿತ್ರಾ ಜಾಧವ ಬುಧವಾರ ಚಾಲನೆ ನೀಡಿದರು.ಮೇಯರ್ ಮಡಿವಾಳಪ್ಪ ಕರಡಿ ಅವರು ತಮ್ಮ ಸ್ವಯಂ ಗಣತಿ ಮಾಡುವುದರ‌ ಮೂಲಕ ನಗರ ವ್ಯಾಪ್ತಿಯಲ್ಲಿ ಸ್ವಯಂ ಗಣತಿ ಕಾರ್ಯಕ್ಕೆ ಚಾಲನೆ ನೀಡಿ, ನಗರದ ಜನತೆ ಸ್ವಯಂ ಗಣತಿ ಮಾಡಿಕೊಳ್ಳಲು ಕರೆ ನೀಡಿದರು.‌ರಾಷ್ಟ್ರೀಯ…

Read More