ಮಕ್ಕಳಾಗದೆ ಮನನೊಂದು ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ಮಕ್ಕಳಾಗದೆ ಮನನೊಂದು ಗೃಹಿಣಿ ಯೊಬ್ಬಳು ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಗಚ್ಚಿನ ಕಟ್ಟಿ ಕಾಲೋನಿಯಲ್ಲಿ ಸಂಭವಿಸಿದೆ.ಸ್ಮಿತಾ ರಾಕೇಶ್ (28) ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿ.ಮದುವೆಯಾಗಿ 8 ವರ್ಷವಾದರೂ ಮಕ್ಕಳಾಗದ್ದಕ್ಕೆ ಮಹಿಳೆ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಬೆಂಗಳೂರಿನ ರಾಕೇಶ ಎಂಬಾತನೊಂದಿಗೆ ಕಳೆದ ಎಂಟು ವರ್ಷಗಳ ಹಿಂದೆ ಸ್ಮಿತಾಳ ಮದುವೆಯಾಗಿತ್ತು.ಒಂದು ತಿಂಗಳ ಹಿಂದೆಯಷ್ಟೇ ಮಹಿಳೆ ನಗರದ ಗಚ್ಚಿನಕಟ್ಟಿ ಕಾಲೋನಿಯ ತವರು ಮನಗೆ ಆಗಮಿಸಿದ್ದಳು.ಮಕ್ಕಳಾಗದಕ್ಕೆ ಒಂದು ತಿಂಗಳಿನಿಂದ ಬಹಳಷ್ಟು ಮನಸ್ಸಿಗೆ ಹಚ್ಚಿಕೊಂಡು ಎರಡು…

Read More

ವಿಜಯಪುರದಲ್ಲಿ ಧಾರಾಕಾರ ಮಳೆ: ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ಜಿಲ್ಲೆಯಲ್ಲಿ ಮತ್ತೆ ಶುಕ್ರವಾರ ಸಂಜೆ ಧಾರಾಕಾರ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತವಾಗಿದೆ.ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿದು ಜನರು ತೀವ್ರ ತೊಂದರೆ ಅನುಭವಿಸಿದ್ದರು. ಈ ಮಧ್ಯೆ ಒಂದು ದಿನ ಮಾತ್ರ ಮಳೆ ನಿಂತು ಜನರು ಸೂರ್ಯನ ಮುಖ ಕಂಡಿದ್ದರು.ಶುಕ್ರವಾರ ಸಂಜೆ ನಗರ ಸೇರಿದಂತೆ ಮತ್ತೆ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿದಿದ್ದು, ಸತತ ಒಂದು ಗಂಟೆಗೂ ಹೆಚ್ಚು ಕಾಲ ನಗರದಲ್ಲಿ ಧಾರಾಕಾರ ಮಳೆ ಸುರಿದು…

Read More

ದೋಣಿ ನದಿ ಪ್ರವಾಹ: ಸಾತಿಹಾಳ ಸೇತುವೆ ಜಲಾವೃತ, ರಸ್ತೆ ಸಂಚಾರಕ್ಕೆ ವ್ಯತ್ಯಯ

ಸಪ್ತಸಾಗರ ವಾರ್ತೆ, ವಿಜಯಪುರ, ಆ. ಮಳೆ ಅಬ್ಬರ ಕಡಿಮೆಯಾದರೂ ದೋಣಿ ನದಿ ಪ್ರವಾಹ ಇನ್ನು ಇಳಿಕೆಯಾಗಿಲ್ಲ. ಹೆಚ್ಚಾದ ನೀರಿನ ಹರಿವಿನಿಂದ ದೇವರ ಹಿಪ್ಪರಗಿ ತಾಲೂಕಿನ ಸಾತಿಹಾಳ ಬಳಿ ಸೇತುವೆ ಜಲಾವೃತಗೊಂಡಿದೆ. ಇದರಿಂದ ರಸ್ತೆ ಸಂಚಾರಕ್ಕೆ ತೀವ್ರ ಅಡಚಣಿಯಾಗಿದೆ.ನಿನ್ನೆ ರಾತ್ರಿ ದೋಣಿ ನದಿ ಉಗಮ ಸ್ಥಾನದಲ್ಲಿ ಭಾರಿ ಪ್ರಮಾಣದ ಮಳೆ ಸುರಿದಿದ್ದರಿಂದ ದೇವರ ಹಿಪ್ಪರಗಿ ತಾಲೂಕಿನಲ್ಲಿ ಹರಿದಿರುವ ದೋಣಿ ನದಿಗೆಇಂದು ಮಳೆ ಕಡಿಮೆಯಾಗಿದ್ದರೂ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸಾತಿಹಾಳ ಗ್ರಾಮದ ಬಳಿಯ ಸೇತುವೆ…

Read More

ತಾಯಿಯ ಹಾಲು ಅಮೃತಕ್ಕೆ ಸಮಾನ : ಡಾ.ಶಿವಾನಂದ ಮಾಸ್ತಿಹೊಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ.6: ತಾಯಿ ಎದೆಹಾಲು ಅಮೃತಕ್ಕೆ ಸಮಾನವಾಗಿದ್ದು ಸದೃಢ ಮಗುವಿನ ಆರೋಗ್ಯದ ದೃಷ್ಠಿಯಿಂದ ತಾಯಂದಿರು ನವಜಾತ ಶಿಶುಗಳಿಗೆ ಎದೆಹಾಲು ನೀಡುವಲ್ಲಿ ನಿರ್ಲಕ್ಷ್ಯ ಮಾಡಬಾರದು ಎಂದು ಜಿಲ್ಲಾ ಸರಕಾರಿ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಕಿವಿಮಾತು ಹೇಳಿದರು.ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಗರ್ಭಿಣಿ ಹಾಗೂ…

Read More

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 6:ರೈತರಿಗೆ ರಸಗೊಬ್ಬರ ಪೂರೈಸುವಲ್ಲಿ ವಿಫಲವಾದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಬುಧವಾರ ನಗರದ ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.ನಂತರ ಪ್ರತಿಭಟನೆ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿಒಂದೇ ಒಂದು ರೈತಪರ ಯೋಜನೆ ಜಾರಿಗೊಳಿಸದೆ ತಾತ್ಸಾರ ಧೋರಣೆ ತಾಳಿರುವ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ರೈತರಿಗೆ ಪೊಳ್ಳು ಭರವಸೆ ಕೊಟ್ಟ…

Read More

ವಿಜಯಪುರ ವಿಮಾನ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.6:ನಗರದ ಹೊರ ವಲಯದ ಬುರಣಾಪುರದಲ್ಲಿ ನಿರ್ಮಾಣವಾಗುತ್ತಿರುವ ವಿಮಾ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ವಿಮಾನದ ನಿಲ್ದಾಣದ ಟರ್ಮಿನಲ್ ಕಟ್ಟಡ, ಎಟಿಸಿ ಕಟ್ಟಡ, ಏಪ್ರೋನ್, ಐಸೋಲೇಶನ್ ಬೇ, ರನ್‍ವೇ ಮಾರ್ಗ ಹಾಗೂ ಇತರೆ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಅವರು ಪರಿಶೀಲನೆ ನಡೆಸಿದರು.ವಿಮಾನದ ನಿಲ್ದಾಣದ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿ ಇರುವ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು. ಬಾಕಿ ಇರುವ ಅಡೆತಡೆಗಳನ್ನು ನಿವಾರಿಸಿಕೊಂಡು ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಅವರು ಸೂಚಿಸಿದರು.ಈ…

Read More

ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ:ಪರಿಹಾರ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವ ಎಂ.ಬಿ.ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 6: ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾದ, ಹಾನಿಗೊಳಗಾಗುವ ಗ್ರಾಮ, ಪ್ರದೇಶಗಳಿಗೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರೀಶಿಲನೆ ನಡೆಸಿ ಕೂಡಲೇ ನಿಯಮಾನುಸಾರ ಪರಿಹಾರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರೂ ಆದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಸೂಚನೆ ನೀಡಿದ್ದಾರೆ.ಜಿಲ್ಲೆಯಲ್ಲಿ ಕಳೆದ ರಾತ್ರಿ ವಾಡಿಕೆಗಿಂತ ಹೆಚ್ಚಾಗಿ ಅಂದರೆ 47ಎಂಎಂ ಮಳೆಯಾಗಿದ್ದು, ಅಲ್ಲದೇ, ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಂಭವವಿರುತ್ತದೆ. ಈ…

Read More

ಜಮೀನುಗಳಿಗೆ ನೀರು, ಐತಿಹಾಸಿಕ ಕೆರೆಗಳಿಗೆ ಮರುಜೀವ: ಸುನೀಲಗೌಡ

ಸಪ್ತಸಾಗರ ವಾರ್ತೆ, ವಿಜಯಪುರ, ಆ.3:ನೀರಾವರಿ ಯೋಜನೆಗಳಿಂದ ಜಮೀನುಗಳಿಗೆ ನೀರುಣಿಸಿದ್ದು ಮಾತ್ರವಲ್ಲ ಐತಿಹಾಸಿಕ ಕೆರೆಗಳಿಗೂ ಮರುಜೀವ ನೀಡಲಾಗಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.ಶನಿವಾರ ಮುಸ್ಸಂಜೆ ತಿಕೋಟಾ ತಾಲೂಕಿನ ರಾಂಪುರ ಗ್ರಾಮದಲ್ಲಿ ಎಪಿಎಂಸಿ ವತಿಯಿಂದ 2025-26ನೇ ವರ್ಷದ ವಾರ್ಷಿಕ ಕ್ರಿಯಾ ಯೋಜನೆ ಅಡಿಯಲ್ಲಿ ಮಂಜೂರಾದ ರೂ. 20.55 ಲಕ್ಷ ವೆಚ್ಚದ 150 ಎಂ. ಟಿ. ಸಾಮರ್ಥ್ತಯದ ಗೋದಾಮು ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.ಸಚಿವ ಎಂ. ಬಿ. ಪಾಟೀಲ ಅವರು ಅಸಾಧ್ಯವಾದ ಕೆಲಸವನ್ನು…

Read More

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ:ಡಿಸಿ ಡಾ. ಆನಂದ್ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ ಆ.2: ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಿ ವಿವಿಧ ಇಲಾಖೆಯಡಿ ಒದಗಿಸುವ ಯೋಜನೆಗಳ ಲಾಭವನ್ನು ಅರ್ಹ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಒದಗಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪರಿಶೀಲನಾ ಸಮಿತಿಯ ಪ್ರಥಮ ತ್ರೈಮಾಸಿಕ ಸಭೆ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…

Read More

ಆ.೭ರಂದು ಉದ್ಯೋಗ ಮೇಳ

ಸಪ್ತಸಾಗರ ವಾರ್ತೆ,ವಿಜಯಪುರ, ಆ.೧: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವಿಜಯಪುರ ಹಾಗೂ ಸಿಕ್ಯಾಬ್ ಸಂಸ್ಥೆಯ ಮಲಿಕ್ ಸಂದಲ್ ಪಾಲಿಟೆಕ್ನಿಕ್ ವಿಜಯಪುರ, ಇವರ ಸಹಯೋಗದೊಂದಿಗೆ ನಗರದ ಬಾಗಲಕೋಟೆ ರಸ್ತೆಯಲ್ಲಿರುವ ಸಿಕ್ಯಾಬ್ ಸಂಸ್ಥೆಯ ಮಲಿಕ್ ಸಂದಲ್ ಪಾಲಿಟೆಕ್ನಿಕ್ ಕಾಲೇಜ್‌ನಲ್ಲಿ ಆ.೭ರಂದು ಉದ್ಯೊಗ ಮೇಳ ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ ೧೦ ಗಂಟೆಗೆ ನಡೆಯುವ ಉದ್ಯೋಗ ಮೇಳದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಎಂಎನ್‌ಸಿ ಕಂಪನಿಗಳು ಹಾಗೂ ಸ್ಥಳೀಯ ಖಾಸಗಿ ಕಂಪನಿಗಳಿಂದ ವಿವಿಧ ಹುದ್ದೆಗಳ ನೇಮಕಾತಿ ನಡೆಯಲಿದೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ ಹಾಗೂ ಯಾವುದೇ ಪದವಿ,…

Read More