ಏಪ್ರಿಲ್ ನಿಂದ ಭಾರತ ಜನಗಣತಿ-2027 ಆರಂಭ: ಜಿಲ್ಲೆಯಲ್ಲಿ ಎರಡು ಹಂತದ ಜನಗಣತಿಗೆ ಬ್ಲಾಕ್ ರಚನೆ
ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 26:ನಮ್ಮ ಜನಗಣತಿ, ನಮ್ಮ ಭವಿಷ್ಯ ಧ್ಯೇಯ ವಾಕ್ಯದಡಿ ಭಾರತ ಜನಗಣತಿ-2027ರ ಮೊದಲ ಹಂತದ ಜನಗಣತಿಯನ್ನು ಏಪ್ರಿಲ್ ನಿಂದ ಜಿಲ್ಲೆಯಲ್ಲಿ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ತಿಳಿಸಿದ್ದಾರೆ.ಮೊದಲ ಹಂತ -1 ಮನೆಪಟ್ಟಿ ಮತ್ತು ಮನೆ ಗಣತಿ (ಎಚ್ಎಲ್ಒ) ಏಪ್ರಿಲ್ 1ರಿಂದ 15ರವರೆಗೆ ಇದೇ ಮೊದಲ ಬಾರಿಗೆ ಸ್ವಯಂ ಗಣತಿ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ಸ್ವಯಂ ಗಣತಿ ಐಚ್ಛಿಕವಾಗಿರುತ್ತದೆ. ಕುಟುಂಬಗಳು ಮಾತ್ರ ಸ್ವಯಂ ಗಣತಿ ಮಾಡಬಹುದಾಗಿದೆ ಎಂದವರು…


