ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 21:ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಆರ್ಟ್ ಆಫ್ ಲಿವಿಂಗ್ ಹಾಗೂ ಕೇಂದ್ರ ಕಾರಾಗೃಹದ ಸಂಯುಕ್ತ ಆಶ್ರಯದಲ್ಲಿ ವಿಶೇಷ ಯೋಗ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಕಳೆದ ಏಳು ದಿನಗಳಿಂದ ಕಾರಾಗೃಹ ಸಿಬ್ಬಂದಿ ಹಾಗೂ ಕೈದಿಗಳಿಗಾಗಿ ಡಾ. ಬಿ.ಎಂ. ಪಾಟೀಲ್ ಗುರೂಜಿಯವರ ನೇತೃತ್ವದಲ್ಲಿ ಸಂತಸದ ಕಾರ್ಯಕ್ರಮ ಮತ್ತು ಸುದರ್ಶನ ಕ್ರಿಯೆ ಶಿಬಿರ ಆಯೋಜಿಸಲಾಗಿತ್ತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾರಾಗೃಹ ಅಧೀಕ್ಷಕ ಡಾ. ಎಂ.ಎಸ್. ಮಾಳಿ, ಆರೋಗ್ಯಕರ ಜೀವನಕ್ಕೆ ಮನಸ್ಸಿನ ಶಾಂತಿ ಅತ್ಯಗತ್ಯವಾಗಿದೆ. ಮನಸ್ಸು…

Read More

ಆರ್‌ಎಸ್‌ಎಸ್‌ಗೆ ನೋಂದಣಿ ಕಡ್ಡಾಯವಲ್ಲ: ಪ್ರಿಯಾಂಕ ಖರ್ಗೆ ಆರೋಪಗಳಿಗೆ ಬಿಜೆಪಿ ತಿರುಗೇಟು

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 21:ಸರ್ಕಾರದಿಂದ ಅನುದಾನ ಪಡೆಯಲು ಬಯಸುವ ಸಂಘ-ಸಂಸ್ಥೆಗಳು ಮಾತ್ರ ನೋಂದಣಿ ಮಾಡಿಸಿಕೊಳ್ಳಬೇಕಿದ್ದು, ಯಾವುದೇ ಸಹಾಯ ಪಡೆಯದ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಹೇಳಿದರು.ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1925ರಿಂದ ಕಾರ್ಯ ನಿರ್ವಹಿಸುತ್ತಿರುವ ಆರ್‌ಎಸ್‌ಎಸ್‌ ಕಾನೂನುಬದ್ಧವಾಗಿ ಕೆಲಸ ಮಾಡುತ್ತಿದ್ದು, ಅದರ ವಿರುದ್ಧ ದಾಖಲಾದ ಹಲವು ಪ್ರಕರಣಗಳಲ್ಲೂ ಕಾನೂನು ಹೋರಾಟದ ಮೂಲಕ ಗೆಲುವು ಸಾಧಿಸಿದೆ ಎಂದು…

Read More

12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಆರೋಗ್ಯಯುತ ಜೀವನಕ್ಕಾಗಿ ಯೋಗ ಮಾಡಿ -ಜಿಲ್ಲಾಧಿಕಾರಿ ಡಾ. ಆನಂದ್ ಕೆ.

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 21:ಆರೋಗ್ಯಯುತ ಜೀವನ ರೂಪಿಸಿಕೊಳ್ಳಲು ಯೋಗವನ್ನು ಪ್ರತಿಯೊಬ್ಬರೂ ತಮ್ಮ ಬದುಕಿನ ದೈನಂದಿನ ಭಾಗವಾಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಕರೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಇವರ ಸಹಯೋಗದಲ್ಲಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬ ಘೋಷವಾಕ್ಯದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ಯೋಗವು ಜಗತ್ತಿಗೆ ನಮ್ಮ ದೇಶ…

Read More

ಉದ್ಯೋಗ ಮೇಳದಲ್ಲಿ ಬಿಎಲ್ಡಿಇ ಕಾಲೇಜಿನ 23 ವಿದ್ಯಾರ್ಥಿಗಳು ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 21:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ವಿದ್ಯಾಲಯದಲ್ಲಿ ಜೂನ್ 9ರಂದು ಬೆಂಗಳೂರಿನ ಸೆಂಟಮ್ ಎಲೆಕ್ಟ್ರಾನಿಕ್ಸ್ ಮತ್ತು ಬೆಳಗಾವಿಯ ಏಕಸ್ ಸಂಸ್ಥೆಗಳು ನಡೆಸಿದ ಕ್ಯಾಂಪಸ್ ಉದ್ಯೋಗ ಮೇಳದಲ್ಲಿ ಕಾಲೇಜಿನ ಒಟ್ಟು 23 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.ಸೆಂಟಮ್ ಎಲೆಕ್ಟ್ರಾನಿಕ್ಸ್ ಸಂಸ್ಥೆಗೆ 17 ಮತ್ತು ಏಕಸ್ ಸಂಸ್ಥೆಗೆ ಆರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.ಬೆಂಗಳೂರಿನ ಸೆಂಟಮ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ವತಿಯಿಂದ ಸಹಾಯಕ ವ್ಯವಸ್ಥಾಪಕ ಮತ್ತು ಮಾನವ ಸಂಪನ್ಮೂಲ ಅಧಿಕಾರಿ ಅಂಶಿತ್ ಸಿ. ಡಿ. ಅವರು ಖುದ್ದಾಗಿ ಆಗಮಿಸಿ…

Read More

ಜಿಲ್ಲೆಯಲ್ಲಿ ಲಸಿಕಾ ಅಭಿಯಾನಕ್ಕೆ ಸಕಲ ಸಿದ್ಧತೆ:2.92 ಲಕ್ಷ ಮಕ್ಕಳಿಗೆ ಪಲ್ಸ್‌ ಪೋಲಿಯೋ ಲಸಿಕೆ ಹಾಕುವ ಗುರಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 20: ಜಿಲ್ಲೆಯಲ್ಲಿ ಜೂನ್‌ 28 ರಿಂದ ಜುಲೈ 1ರವರೆಗೆ ರಾಷ್ಟ್ರೀಯ ಪಲ್ಸ್‌ ಪೊಲಿಯೋ ಲಸಿಕಾ ಅಭಿಯಾನಕ್ಕಾಗಿ ಅಗತ್ಯ ಸಿದ್ಧತೆ ಕೈಗೊಂಡು ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ.ಕೆ ಅವರು ಹೇಳಿದರು.ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪ್ರಮುಖವಾಗಿ 5 ವರ್ಷದೊಳಗಿನ ಒಟ್ಟು 2,92,495 ಮಕ್ಕಳಿಗೆ ಪಲ್ಸ್ ಪೊಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮ…

Read More

ವಿಜಯಪುರದಲ್ಲಿ ಬಿಜೆಪಿ ಓಬಿಸಿ ಮೋರ್ಚಾದಿಂದ ಸಂಭ್ರಮಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 20:ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವಿಜಯಪುರ ಜಿಲ್ಲಾ ಓಬಿಸಿ ಮೋರ್ಚಾ ವತಿಯಿಂದ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ನೂತನವಾಗಿ ರಾಜ್ಯಸಭೆಗೆ ಆಯ್ಕೆಯಾದ ಪ್ರೊ. ಎಂ. ನಾಗರಾಜ ಹಾಗೂ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ ರಘು ಕೌಟಿಲ್ಯ ಮತ್ತು ಲಿಂಗರಾಜ ಪಾಟೀಲ ಅವರನ್ನು ಅಭಿನಂದಿಸಿ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಸಿದ್ದು ಬುಳ್ಳಾ, ಪ್ರಾಧ್ಯಾಪಕರಾಗಿ ಹಾಗೂ ಪಕ್ಷದ ಮಾಜಿ ಉಪಾಧ್ಯಕ್ಷರಾಗಿ ದಶಕಗಳ ಕಾಲ ಸೇವೆ ಸಲ್ಲಿಸಿರುವ ಪ್ರೊ….

Read More

ನೀರಿಗಾಗಿ ಖಾಲಿ ಕೊಡಗಳೊಂದಿಗೆ ತೆಗ್ಗೆಹಳ್ಳಿ ಮಹಿಳೆಯರ ಪ್ರತಿಭಟನೆ

ಸಪ್ತಸಾಗರ ವಾರ್ತೆ,ಇಂಡಿ, ಜೂ. 20: ತಾಲೂಕಿನ ತೆಗ್ಗೆಹಳ್ಳಿ ಗ್ರಾಮದ ಹೊಸ ಊರಿನಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ನೂರಾರು ಮಹಿಳೆಯರು ಖಾಲಿ ಕೊಡಗಳೊಂದಿಗೆ ಆಡಳಿತ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.ತೆಗ್ಗೆಹಳ್ಳಿ ಗ್ರಾಮದ ಹೊಸ ಊರಿನಲ್ಲಿ ಸುಮಾರು 300 ಕುಟುಂಬಗಳು ವಾಸವಾಗಿದ್ದು, ಕುಡಿಯುವ ನೀರಿಗಾಗಿ ಕೇವಲ ಒಂದು ಬಾವಿಯನ್ನೇ ಅವಲಂಬಿಸಬೇಕಾಗಿದೆ. ಈ ಬಾವಿಯಿಂದ ದಿನಕ್ಕೆ ಕೇವಲ 15 ನಿಮಿಷಗಳ ಕಾಲ ಮಾತ್ರ ನೀರು ಪೂರೈಕೆಯಾಗುತ್ತಿದೆ. ನಂತರ ನೀರಿನ ಅಗತ್ಯಕ್ಕಾಗಿ ಗ್ರಾಮಸ್ಥರು ಸುತ್ತಮುತ್ತಲಿನ ತೋಟಗಳಿಗೆ ತೆರಳಿ…

Read More

ಶಿಫಾಗೆ ಮತ್ತೊಂದು ಜಾಗತಿಕ ಗೌರವ: ರಷ್ಯಾದ ಪರಮಾಣು ಶಕ್ತಿ ವಿಶ್ವ ಸಮ್ಮೇಳನದಲ್ಲಿ ಭಾರತದ ಪ್ರತಿನಿಧಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 20:ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ನಡೆದ ವಿಶ್ವ ಯುವ ಶೃಂಗಸಭೆಯಲ್ಲಿ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿ ಗಮನ ಸೆಳೆದಿದ್ದ ವಿಜಯಪುರದ ಕುಮಾರಿ ಶಿಫಾ ಜಮಾದಾರ ಅವರು ಇದೀಗ ಮತ್ತೊಂದು ಮಹತ್ವದ ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಏಜೆನ್ಸಿ (IAEA) ಹಾಗೂ ರಷ್ಯಾ ಸರ್ಕಾರದ ಸಹಯೋಗದಲ್ಲಿ ರಷ್ಯಾದ ಆಬ್ನಿನ್ಸ್ಕ್ ನಗರದಲ್ಲಿ ಜೂನ್ 25ರಿಂದ ಮೂರು ದಿನಗಳ ಕಾಲ ನಡೆಯಲಿರುವ ಪರಮಾಣು ಶಕ್ತಿಯ ಶಾಂತಿಯುತ ಬಳಕೆ, ಹಸಿವು ನಿವಾರಣೆ ಹಾಗೂ ಜಾಗತಿಕ ಅಭಿವೃದ್ಧಿಗೆ ಪರಮಾಣು…

Read More

ಸುಳ್ಳು ಫೈರಿಂಗ್ ಪ್ರಕರಣ ಬಯಲು – ದೂರುದಾರ ಸೇರಿ ಮೂವರ ಬಂಧನ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 19:ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಫೈರಿಂಗ್ ಪ್ರಕರಣದ ತನಿಖೆಯಲ್ಲಿ ಮಹತ್ವದ ತಿರುವು ದೊರೆತಿದ್ದು, ದೂರುದಾರನೇ ಸುಳ್ಳು ಕಥೆ ಸೃಷ್ಟಿಸಿದ್ದಾನೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.ಜೂ. 3ರಂದು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 255/2026 ದಾಖಲಿಸಲಾಗಿತ್ತು. ಇಟ್ಟಂಗಿಹಾಳ ದೊಡ್ಡಿಯ ನಿವಾಸಿ ದಯವಂತ ಡೇರೆ ಅವರು, ತೊರವಿ ಗ್ರಾಮದ ಹದ್ದಿಯಲ್ಲಿರುವ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಬ್ಬರು ಅಪರಿಚಿತರು ಮುಖ ಮುಚ್ಚಿಕೊಂಡು ಬಂದು ಗುಂಡು ಹಾರಿಸಿ ಗಾಯಗೊಳಿಸಿದ್ದಾರೆ ಎಂದು…

Read More

ಕ್ಯಾಂಪಸ್ ಸಂದರ್ಶನ:ಬಿಎಲ್ಡಿಇ ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಆಯ್ಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 18:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ನಲ್ಲಿ ಜೂನ್ 16 ಮಂಗಳವಾರ ಮತ್ತು ಜೂನ್ 17 ಬುಧವಾರ ಎರಡು ದಿನ ನಡೆದ ಕ್ಯಾಂಪಸ್ ಸಂದರ್ಶನದಲ್ಲಿ 46 ಡಿಪ್ಲೋಮಾ ಮತ್ತು 48 ಐಟಿಐ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.ಧಾರವಾಡದ ನಿಡೆಕ್(NIDEK) ಸಂಸ್ಥೆ ಮತ್ತು ಬಿ.ಎಲ್.ಡಿ.ಇ ಪಾಲಿಟೆಕ್ನಿಕ್ ಹಾಗೂ ಐಟಿಐ ವತಿಯಿಂದ ಆಯೋಜಿಸಲಾದ ಈ ಕ್ಯಾಂಪಸ್ ಸಂದರ್ಶನದಲ್ಲಿ ನಿಡೆಕ್ ಮುಖ್ಯ ವ್ಯವಸ್ಥಾಪಕ ಸೋಮಶೇಖರ, ವ್ಯವಸ್ಥಾಪಕ ಮಂಜುನಾಥ, ಮಾನವ ಸಂಪನ್ಮೂಲ ವಿಭಾಗದ ಚಂದನಾ ಹಾಗೂ ನಿಶ್ಮಿತಾ ಸಂದರ್ಶನ…

Read More