ಪ್ರೊ.ಭಗವಾನ್ ವಿರುದ್ಧ ಕಠಿಣ ಕ್ರಮಕ್ಕೆ ಸ್ವರಾಜ್ಯ ಸೇನಾ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 17:ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರನ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿದ ಪ್ರೊ.ಕೆ.ಎಸ್.ಭಗವಾನ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಜಯಪುರ ಸ್ವರಾಜ್ಯ ಸೇನಾ ವತಿಯಿಂದ ಮಂಗಳವಾರ ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಕಿರಣ ಕಾಳೆ, ಇಡೀ ವಿಶ್ವಕ್ಕೆ ಆದರ್ಶವಾಗಿರುವ ಶ್ರೀ ರಾಮನ ಬಗ್ಗೆ ಮತ್ತು ಹಿಂದೂ ಸಂಸ್ಕೃತಿ ಬಗ್ಗೆ ಪ್ರೊ. ಕೆ.ಎಸ್.ಭಗವಾನ್ ಅವಹೇಳನಕಾರಿ ಹೇಳಿಕೆ ನೀಡಿದ್ದು ಖಂಡನೀಯ. ಚುನಾವಣೆ ಸಮಯದಲ್ಲಿ ನನ್ನ…

Read More

ಗುಂಟಾ ಪ್ಲಾಟ್‌ಗಳಿಗೆ ವಿದ್ಯುತ್ ಮೀಟರ್ ನೀಡದ ಸರ್ಕಾರದ ಕ್ರಮ ಖಂಡನೀಯ: ಅಪ್ಪುರಾಜ್ ನಿಮಾದಾರ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 17:ಕರ್ನಾಟಕ ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ಗುಂಟಾ ಪ್ಲಾಟ್‌ಗಳಿಗೆ ವಿದ್ಯುತ್ ಮೀಟರ್‌ಗಳನ್ನು ನೀಡದೇ ಇರುವ ಸರ್ಕಾರದ ನೀತಿಯನ್ನು ಭೀಮ್ ರಾಜ್ಯ ದಲಿತ ಸೇವಾ ಸಮಿತಿ (ರಿ) ರಾಜ್ಯಾಧ್ಯಕ್ಷ ಅಪ್ಪುರಾಜ್ ನಿಮಾದಾರ ತೀವ್ರವಾಗಿ ಖಂಡಿಸಿದ್ದಾರೆ.ರಾಜ್ಯದ ವಿವಿಧ ಭಾಗಗಳಲ್ಲಿ ಬಡ ಹಾಗೂ ಮಧ್ಯಮ ವರ್ಗದ ಜನರು ತಮ್ಮ ಜೀವನಪೂರ್ತಿ ದುಡಿದು ಖರೀದಿಸಿರುವ ಸಣ್ಣ-ಸಣ್ಣ ಗುಂಟಾ ಪ್ಲಾಟ್‌ಗಳಲ್ಲಿ ಮನೆ ನಿರ್ಮಿಸಿ ವಾಸಿಸಲು ಮುಂದಾಗಿದ್ದಾರೆ. ಆದರೆ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿದರೂ ಮೀಟರ್ ನೀಡದೇ ಅಧಿಕಾರಿಗಳು ಹಾಗೂ ಸರ್ಕಾರ…

Read More

ಸಮಾಜದಲ್ಲಿ ಸತ್ಪ್ರಜೆಗಳನ್ನು ರೂಪಿಸುವಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಹಿರಿದು- ಶ್ರೀನಿವಾಸ ಬಿದರಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 17: ತಲೆತಲಾಂತರದಿಂದ ಬಂದ ಆಸ್ತಿಗಳನ್ನು ನಮ್ಮ ಹಿರಿಯರು ದಾನ ನೀಡಿದ್ದರ ಫಲವಾಗಿ ಆರಂಭಗೊಂಡ ಶಿಕ್ಷಣ ಸಂಸ್ಥೆಗಳು ಸಮಾಜದಲ್ಲಿ ಸತ್ಪ್ರಜೆಗಳನ್ನು ರೂಪಿಸಿವೆ ಎಂದು ಪಶ್ಚಿಮ ಬಂಗಾಳ ರಾಜ್ಯದಲ್ಲಿ ಆದಾಯ ತೆರಿಗೆ ಇಲಾಖೆ ಮುಖ್ಯ ಪ್ರಧಾನ ಆಯುಕ್ತರಾಗಿರುವ ವಿಜಯಪುರದ ಶ್ರೀನಿವಾಸ ಬಿದರಿ ಹೇಳಿದರು.ಆದಾಯ ತೆರಿಗೆ ಇಲಾಖೆಯಲ್ಲಿ ಪ್ರಧಾನ ಆಯುಕ್ತರಿಂದ ಮುಖ್ಯ ಪ್ರಧಾನ ಆಯುಕ್ತರೆಂದು ಬಡ್ತಿ ಪಡೆದಿರುವ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಅವರ ಸ್ನೇಹಿತರು, ಶಾಲಾ-ಕಾಲೇಜು ಸಹಪಾಠಿಗಳು ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ವಿಜಯಪುರದ ದರ್ಬಾರ್, ಪಿಡಿಜೆ,…

Read More

ಸಮಾಜ ಕಾರ್ಯದಲ್ಲಿ ಕೌಶಲ್ಯ ಎಂಬುದು ಜ್ಞಾನವನ್ನು ಕ್ರಿಯೆಗೆ ತಿರುಗಿಸುವ ಸೇತುವೆ : ಸಂತೋಷ ಹಳೆಮನಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 16:ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾನಿಲಯದಸಮಾಜ ಕಾರ್ಯ ವಿಭಾಗದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಉದ್ಯೋಗಾರ್ಹತೆಯನ್ನು ಹೆಚ್ಚಿಸುವ ಹಾಗೂ ವೃತ್ತಿ ಅವಕಾಶಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ವೃತ್ತಿ ಮಾರ್ಗದರ್ಶನಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಸಂತೋಷ ಹಳೆಮನಿ ಮಾತನಾಡಿ, ಸಮಾಜ ಕಾರ್ಯ ಎಂದರೆ ಕೇವಲಪುಸ್ತಕದಲ್ಲಿರುವ ಸಿದ್ಧಾಂತವಲ್ಲ. ಅದು ಬದುಕಿನ ನಡುವೆ ಇಳಿದು, ಜನರ ನೋವಿಗೆ ಕಿವಿಯಾಗಿ, ಅವರ ಶಕ್ತಿಯಾಗುವ ಪ್ರಯೋಗ ಶಾಲೆ ಎಂದರು. ನಂತರ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗೆಪ್ರಸ್ತುತ ಉದ್ಯೋಗಾವಕಾಶಗಳು, ವೃತ್ತಿಪರ ರೆಸ್ಯೂಮ್ತಯಾರಿಕೆ, ಸಂದರ್ಶನ ಕೌಶಲ್ಯಗಳು, ಸಂವಹನ ಮತ್ತುವ್ಯಕ್ತಿತ್ವ…

Read More

ಕ್ರೀಡಾ ವಸತಿ ಶಾಲೆಗೆ ಅಬುಜಿರ್ ಮಕಾನದಾರ ಆಯ್ಕೆ

ಸಪ್ತಸಾಗರ ವಾರ್ತೆ,ಇಂಡಿ, ಜೂ. 16 : ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆಯ 7ನೇ ವರ್ಗದ ವಿದ್ಯಾರ್ಥಿ ಅಬುಜಿರ್ ಮಕಾನದಾರ ಈತನು ಹಾವೇರಿ ಜಿಲ್ಲೆಯ ಕ್ರೀಡಾ ವಸತಿ ಶಾಲೆಗೆ ಆಯ್ಕೆಯಾಗಿದ್ದಾನೆ ಎಂದು ಶಾಲೆಯ ಮುಖ್ಯೋಪಾಧ್ಯಾಯ ವೈ. ಬಿ. ಗಿರಣಿವಡ್ಡರ ತಿಳಿಸಿದ್ದಾರೆ.ತಾಲೂಕು ಮಟ್ಟ, ಜಿಲ್ಲಾ ಮಟ್ಟ, ಬೆಳಗಾವಿ ವಿಭಾಗಮಟ್ಟದಲ್ಲಿ ಯುವ ಜನ ಸೇವಾ ಇಲಾಖೆಯ ವತಿಯಿಂದನಡೆದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿಜೇತನಾದಬಳಿಕ ಕ್ರೀಡಾ ವಸತಿ ಶಾಲೆಗೆ ಆಯ್ಕೆಯಾಗಿದ್ದಾನೆ.ಈತನ ಸಾಧನೆಗೆ ಶಾಲೆಯ ಸಹ ಶಿಕ್ಷಕ…

Read More

ನಿವೃತ್ತ ಯೋಧನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 16:ನಿವೃತ್ತ ಯೋಧನ ಮೇಲೆ ಮಾರಕಾಸ್ತ್ರಗಳಿಂದ ಅಮಾನುಷವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆಜಿಲ್ಲೆಯ ಇಂಡಿ ನಗರದ ಕೆಇಬಿ ಎದುರಿಗಿನ ಮಸೂತಿ ಹತ್ತಿರ ನಡೆದಿದೆ.ಇಂಡಿ ತಾಲೂಕಿನ ಹಿರೇ ಮಸಳಿ ಗ್ರಾಮದ ನಿವೃತ್ತ ಯೋಧ ಮಾರುತಿ ಕ್ಷತ್ರಿ (45)ಎಂಬ ವ್ಯಕ್ತಿಯ ಮೇಲೆ ಭೀಕರ ಹಲ್ಲೆ ನಡೆದಿದೆ.ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಮೂವರು ಮುಸುಕುಧಾರಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದೌಡಾಯಿಸಿ ಪರಿಶೀಲಿಸಿದ್ದಾರೆ.ಇಂಡಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಸರ್ವರ್ ಸಮಸ್ಯೆ ಬಗೆಹರಿಸಿ –ಅಪ್ಪುರಾಜ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 15:ಸರ್ವರ್ ಸಮಸ್ಯೆ ಬಗೆಹರಿಸಿ ಜನರಿಗೆ ಸಕಾಲಕ್ಕೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಒದಗಿಸಬೇಕು ಎಂದು ಭೀಮ ರಾಜ್ಯ ದಲಿತ್ ಸೇವಾ ಸಮೀತಿ (ರಿ) ರಾಜ್ಯಾಧ್ಯಕ್ಷ ಅಪ್ಪುರಾಜ ನಿಮಾದಾರ ಆಗ್ರಹಿಸಿದ್ದಾರೆ.ಜಿಲ್ಲೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಸಾರ್ವಜನಿಕರು ಮುಂಜಾನೆ 8 ಗಂಟೆಯಿಂದಲೇ ತಹಸೀಲ್ದಾರ್ ಕಚೇರಿ ಮುಂದೆ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಸರ್ವರ್ ಸಮಸ್ಯೆಯಿಂದ ಜನರು ದಿನವಿಡೀ ಕಾಯುವಂತಾಗಿದ್ದು, ವಿದ್ಯಾರ್ಥಿಗಳು, ರೈತರು ಹಾಗೂ ಸಾಮಾನ್ಯ ನಾಗರಿಕರು ತೀವ್ರ ಸಂಕಷ್ಟ…

Read More

ಕನಕದಾಸರ ಬದುಕು ನಮ್ಮೆಲ್ಲರ ಬದುಕಿಗೆ ಆದರ್ಶದ ಹೊತ್ತಿಗೆ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 15: ಕನಕದಾಸರ ಕೀರ್ತನೆಗಳು ಸಮಾನತೆ, ಮಾನವೀಯತೆ, ವೈಚಾರಿಕತೆಯ ಆಧಾರದ ಮೇಲೆ ಸ್ವಸ್ಥ ಸಮಾಜ ನಿರ್ಮಿಸುವ ಸಾಮಾಜಿಕ ಕಾಳಜಿ ಹೊಂದಿದ್ದು, ಅವು ಸಾಮಾಜಿಕ ಪರಿವರ್ತನೆಗೆ ದಾರಿದೀಪವಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ರವಿವಾರ ಸಂಜೆ ಶ್ರೀ ಕನಕದಾಸರ ಸಾಹಿತ್ಯ ಪ್ರಚಾರ ಸಮಿತಿ ವತಿಯಿಂದ ಹಮ್ಮಿಕೊಂಡ ರಾಜ್ಯ ಮಟ್ಟದ ಆನ್ ಲೈನ್ 116 ನೇ ಉಪನ್ಯಾಸದಲ್ಲಿ ‘ಕನಕದಾಸರ ಕೀರ್ತನೆಗಳಲ್ಲಿ ಸಾಮಾಜಿಕ ಮೌಲ್ಯಗಳು’ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡಿದರು.ಕನಕದಾಸರ ಬದುಕು ನಮ್ಮೆಲ್ಲರ ಬದುಕಿಗೆ ಆದರ್ಶದ…

Read More

ಗ್ರಾಮೀಣ ಮಹಿಳೆಯರು ಸಾಹಿತ್ಯದ ಸಾಧಕರು – ಭಾರತಿ ಪಾಟೀಲಅಭಿಮತ

ಸಪ್ತಸಾಗರ ವಾರ್ತೆ,ವಿಜಯಪುರ, 14: ವಚನ ಸಾಹಿತ್ಯವನ್ನು ಬೋಧನೆ ಮತ್ತು ಅಧ್ಯಯನಕ್ಕೆ ಮಾತ್ರಸೀಮಿತಗೊಳಿಸದೇ ಅದರ ವಿಚಾರಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ನಮ್ಮಜೀವನ ಸಾರ್ಥಕವಾಗುತ್ತದೆ.ರಾಜ್ಯಮಟ್ಟದ ಕೋ. ಚನ್ನಬಸಪ್ಪ ದತ್ತಿ ಪ್ರಶಸ್ತಿಗೆ ಈ ಬಾರಿ ರೂಪಾ ರಜಪೂತ ಆಯ್ಕೆಯಾಗಿದ್ದಾರೆ. ಗ್ರಾಮೀಣ ಮಹಿಳೆಯರೂ ಸಹಇಂದು ಸಾಹಿತ್ಯದ ಸಾಧಕರಾಗಿ ಹೊರಹೊಮ್ಮಿದ್ದು ನಾವೆಲ್ಲ ಹೆಮ್ಮೆಪಡುವ ಸಂಗತಿ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಅಧ್ಯಕ್ಷೆ ಭಾರತಿ ಪಾಟೀಲ ಅಭಿಪ್ರಾಯಪಟ್ಟರು.ರವಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ಕೋ. ಚನ್ನಬಸಪ್ಪ ದತ್ತಿ, ಸುಶೀಲಾಬಾಯಿ ಮತ್ತು ದಿ….

Read More

ರೋಜರ್ಸ್ ಅಂಡ್ ರೋವರ್ಸ್ ಘಟಕದ ಕಾರ್ಯಗಾರ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ.14:ನಗರದ ಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯ ದಿ ಪ್ರೆಸಿಡೆನ್ಸಿ ಶಿಕ್ಷಣಮಹಾವಿದ್ಯಾಲಯದ 2025-26 ನೇ ಸಾಲಿನ ರೋಜರ್ಸ್ ಅಂಡ್ ರೋವರ್ಸ್ಘಟಕದ ವತಿಯಿಂದ ಮಹಾ ವಿದ್ಯಾಲಯದ ಸಭಾಭವನದಲ್ಲಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಕರ್ನಾಟಕ ರಾಜ್ಯ ಸಂಘಟನಾ ಆಯುಕ್ತ ಡಿ. ಬಿ. ಅತ್ತಾರ ಅವರು ಮಾತನಾಡಿ, “ವ್ಯಕ್ತಿ, ಪುಸ್ತಕ ಮತ್ತು ಸ್ಥಳ” ಎಂಬ ಮೂರು ಅಂಶಗಳು ವ್ಯಕ್ತಿತ್ವ ವಿಕಸನದ ಪ್ರಮುಖ ತಳಹದಿಗಳಾಗಿವೆ ಎಂದು ತಿಳಿಸಿದರು.ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ತರಬೇತಿ ಆಯುಕ್ತ ಎಸ್….

Read More