ನಾಳೆ ಇಂಡಿಗೆ ಸಿಎಂ, ಡಿಸಿಎಂ ಭೇಟಿ: ಪೂರ್ವಭಾವಿ ಸಿದ್ಧತೆ ಪರಿಶೀಲಿಸಿದ ಡಿಸಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ,ಜು.13:ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಜು. 14 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಆಗಮಿಸಲಿರುವ ಹಿನ್ನಲೆಯಲ್ಲಿ ಜುಲೈ 13ರ ಭಾನುವಾರ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು, ಹಿರಿಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ,‌ಕೈಗೊಂಡಿರುವ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು.ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಆಗಮನ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಈ ಕಾರ್ಯಕ್ರಮದ ಸಂದರ್ಭದಲ್ಲಿ…

Read More

ಮಹಾನಗರ ಪಾಲಿಕೆ ನೌಕರರ ಧರಣಿ ಸ್ಥಳಕ್ಕೆ ಶಾಸಕ ಯತ್ನಾಳ ಭೇಟಿ:ಬೇಡಿಕೆ ಈಡೇರಿಸಲು ಗಟ್ಟಿಯಾಗಿ ನಿಲ್ಲುವ ಭರವಸೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 12:ಮಹಾನಗರ ಪಾಲಿಕೆ ನೌಕರರು ಸೇರಿದಂತೆ ಸ್ಥಳೀಯ ಸಂಸ್ಥೆಗಳ ನೌಕರರ ನ್ಯಾಯಯುತ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸಲು ತಮ್ಮೊಂದಿಗೆ ಗಟ್ಟಿಯಾಗಿ ನಿಲ್ಲುವುದಾಗಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ಅಭಯ ನೀಡಿದರು.ವಿಜಯಪುರ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ವಿಜಯಪುರ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ ಕಳೆದ 5 ದಿನಗಳಿಂದ ನಡೆಯುತ್ತಿರುವ ಧರಣೆ ಸ್ಥಳಕ್ಕೆ ಶನಿವಾರ ಭೇಟಿ ನೀಡಿ, ಬೆಂಬಲ ವ್ಯಕ್ತಪಡಿಸಿ ಅವರು ಮಾತನಾಡಿದರು.ರಾಜ್ಯದ…

Read More

ಕಲಬುರಗಿ ಎಪಿಎಂಸಿ ಕೃಷಿ ಉತ್ಪನ್ನೇತರ ಅಂಗಡಿ ತೆರವಿಗೆ ಸಚಿವರಿಗೆ ಮನವಿಧರಣಿ ಹೋರಾಟ ಕೈಬಿಡುವಂತೆ ಮನವೊಲಿಸಿದ ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 11 :ಕಲಬುರಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಕೃಷಿ ಉತ್ಪನ್ನ ವಹಿವಾಟಿನ‌ ಹೊರತಾದ ಅಂಗಡಿಗಳ ವ್ಯಾಪಾರಿಗಳನ್ನು ತೆರವುಗೊಳಿಸುವಂತೆ ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನಿಯೋಗ ಕೃಷಿ ಮಾರುಕಟ್ಟೆ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಅವರಿಗೆ ಮನವಿ ಸಲ್ಲಿಸಿತು.ಶುಕ್ರವಾರ ಸಚಿವರ ತವರು ಕ್ಷೇತ್ರದ ಬಸವನಬಾಗೇವಾಡಿ ಪಟ್ಟಣದಲ್ಲಿ ಸಂಘಟನೆಯ ಅಧ್ಯಕ್ಷ ಎಂ.ಎಸ್.ಪಾಟೀಲ ನರಿಬೋಳ ನೇತೃತ್ವದ ನಿಯೋಗದಲ್ಲಿ ಬಂದು ಸಚಿವ ಶಿವಾನಂದ ಪಾಟೀಲ ಅವರನ್ನು…

Read More

ಎಲ್ಲರಿಗಿಂತಲೂ ಗುರು ಪರಮ ಶ್ರೇಷ್ಠ: ಕಡ್ಲಿಮಟ್ಟಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 11: ಹರ ಮುನಿದರೆ ಕಾಯುವ ಗುರು ಎಲ್ಲರಿಗಿಂತ ಪರಮ ಶ್ರೇಷ್ಠನಾಗಿದ್ದಾನೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಹೇಳಿದ್ದಾರೆ.ಗುರುವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್(CBSE) ಶಾಲೆಯಲ್ಲಿ ನಡೆದ ಗುರು ಪೂರ್ಣಮೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಜಗತ್ತಿನಲ್ಲಿ ತಾಯಿ ಮತ್ತು ಗುರು ಮಾತ್ರ ನಿಷ್ಕಲ್ಮಶವಾದ ಪ್ರೀತಿ ಕೊಡಬಲ್ಲರು. ತಾಯಿ ಮತ್ತು ಗುರುವಿನ ಋಣದಿಂದ ಹೊರಬರಲು ಸಾಧ್ಯವಿಲ್ಲ. ಗುರುವಾದವರು. ನಿಷ್ಪಕ್ಷಪಾತವಾಗಿರಬೇಕು. ಧನಾತ್ಮಕ ಮನೋಭಾವ ಹೊಂದಿರಬೇಕು….

Read More

ವಿಜಯಪುರ ಕಾನಿಪ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ,11: ಜಿಲ್ಲೆಯಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಷ್ಕಾರ, ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಪತ್ರಿಕಾ ದಿನಾಚರಣೆ ಜು. 19ರಂದು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸುವಂತೆ ಸಚಿವ ಶಿವಾನಂದ ಪಾಟೀಲ, ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ, ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಕಾನಿಪ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರನ್ನು ಆವ್ಹಾನಿಸಲು ಜಿಲ್ಲೆಯ ಕಾನಿಪ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರರ್ಣಿ, ರಾಜ್ಯ ಕಾರ್ಯಕಾರಿ ನಾಮನಿರ್ದೇಶನ ಸದಸ್ಯ ಕೆ.ಕೆ.ಕುಲಕರ್ಣಿ ಹಾಗೂ ಜಿಲ್ಲಾ ಖಜಾಂಚಿ ರಾಹುಲ್ ಆಪ್ಟೆ ಅವರು…

Read More

ಮನಗೂಳಿ ಕ್ಯಾನರಾ ಬ್ಯಾಂಕ್ ಕಳ್ಳತನ ಪ್ರಕರಣ: ಮತ್ತೆ 12 ಜನರ ಬಂಧನ, 39 ಕೆಜಿ ಬಂಗಾರ ಹಾಗೂ 1.16 ಕೋಟಿ ನಗದು ಜಫ್ತು

ಸಪ್ತಸಾಗರ ವಾರ್ತೆ ವಿಜಯಪುರ, ಜು. 11: ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 12 ಜನರನ್ನು ಬಂಧಿಸಲಾಗಿದ್ದು, ಇದುವರೆಗೆ ಬಂದಿದ್ದರ ಸಂಖ್ಯೆ 15ಕ್ಕೇರಿದೆ ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಚೇತನಕುಮಾರ ರಾಠೋಡ ತಿಳಿಸಿದ್ದಾರೆ.ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ಪೊಲೀಸರು 3 ಆರೋಪಿಗಳನ್ನು ಬಂಧಿಸಿದ್ದಾರೆ. ಅವರು ನೀಡಿದ ಮಾಹಿತಿಯನ್ನು ಆಧರಿಸಿಪ್ರಕರಣದ ಮತ್ತೆ 12 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.ಮೇ 25ರಂದು ಮನಗೂಳಿ ಕೆನರಾ…

Read More

ಹಡಪದ ಅಪ್ಪಣ್ಣನವರ ವಚನಗಳು ಸಾರ್ವಕಾಲಿಕ : ಬಬಲೇಶ್ವರ

ಸಪ್ತಸಾಗರ ವಾರ್ತೆ, ವಿಜಯಪುರ ಜು.10 : ನಿಜಶರಣ ಹಡಪದ ಅಪ್ಪಣ್ಣನವರು ನಮ್ಮ ನಾಡಿನ ಸ್ವತ್ತು ಆಸ್ತಿ ಇದ್ದಂತೆ. ಬಸವಾದಿ ಕಾಲದ ಎಲ್ಲ ಶರಣರು ಸಮ ಸಮಾಜವನ್ನು ನಿರ್ಮಿಸುವಲ್ಲಿ ಬಹಳಷ್ಟು ಶ್ರಮಿಸಿದವರು ಎಂದ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಗುರುವಾರ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶರಣರ…

Read More

ಮಹಾಬಳೇಶ್ವರದಲ್ಲಿ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ನೇತೃತ್ವದಲ್ಲಿ ಗಂಗಾ ಪೂಜೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 10:ಉತ್ತರ ಕರ್ನಾಟಕ ಜೀವನಾಡಿ ಕೃಷ್ಣಾ ನದಿಯ ಉಗಮಸ್ಥಾನವಾದ ನೆರೆ ರಾಜ್ಯ ಮಹಾರಾಷ್ಟ್ರ ರಾಜ್ಯದ ಸಾತಾರಾ ಜಿಲ್ಲೆಯ ಮಹಾಬಳೇಶ್ವರ ಪಂಚಗಂಗಾ ದೇವಸ್ಥಾನಕ್ಕೆ ತೆರಳಿದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಅನ್ನದಾತರು ಮಾಜಿ ಸಚಿವ ಸಂಗಣ್ಣ ಬೆಳ್ಳುಬ್ಬಿ ಅವರ ನೇತೃತ್ವದಲ್ಲಿ 19 ನೇ ವರ್ಷದ ಗಂಗಾಪೂಜೆ ಸಲ್ಲಿಸಿ ಕೃಷ್ಣೆಗೆ ಬಾಗಿನ ಅರ್ಪಿಸಿದರು. ಮುಂಗಾರು ಆರಂಭವಾಗುವದರೊಂದಿಗೆ ಬರುವ ಕಡ್ಲಿಗರ ಪೂರ್ಣಿಮೆ ದಿನದಂದು ಈ ಭಾಗದ ನೂರಾರು ಮಣ್ಣಿನ ಮಕ್ಕಳು ಮಹಾಬಳೇಶ್ವರಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.ಈ…

Read More

ಬಸವನ ಬಾಗೇವಾಡಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 10:ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ಅವರು ತಮ್ಮ ವಚನಗಳ ಮೂಲಕ ಸಮಾಜ ಸುಧಾರಣೆ ಶ್ರಮಿಸಿದ ಮಹಾನ್ ಶರಣರಾಗಿದ್ದಾರೆ. ಅವರು ವಚನಗಳು ಹಾಗೂ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪಗಳಾಗಿವೆ ಎಂದು ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು.ಜಿಲ್ಲೆಯ ಬಸವನ ಬಾಗೇವಾಡಿಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ನಡೆದ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.ಹಡಪದ ಅಪ್ಪಣ್ಣ ಅವರು ಸಾಮಾಜಿಕ…

Read More

ಬಿ.ಎಲ್. ಡಿ. ಇ ಡೀಮ್ಡ್ ವಿವಿಯಲ್ಲಿ ಗುರು ಪೂರ್ಣಿಮೆ

ಸಪ್ತಸಾಗರ ವಾರ್ತೆ ವಿಜಯಪುರ, ಜು. 10:ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಇಂದು ಗುರುವಾರ ಗುರು ಪೂರ್ಣಿಮೆ ದಿನಾಚರಣೆ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ವಿವಿಯ ಗಣ್ಯರು ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ವಿವಿ ಸಮಕುಲಾಧಿಪತಿ, ಡಾ. ವೈ. ಎಂ. ಜಯರಾಜ, ಸಮಕುಲಪತಿ ಡಾ. ಅರುಣ ಚಂ. ಇನಾಮದಾರ, ಕುಲಸಚಿವ‌ ಡಾ. ಆರ್. ವಿ. ಕುಲಕರ್ಣಿ, ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ಪರೀಕ್ಷೆ ನಿಯಂತ್ರಣಾಧಿಕಾರಿ ಡಾ. ಎಸ್. ಎಸ್. ದೇವರಮನಿ, ವೈದ್ಯಕೀಯ ಅಧೀಕ್ಷಕ, ಡಾ. ಆರ್. ಎಂ….

Read More