ಸಮಾಜದಲ್ಲಿ ಗೌರವ ಸ್ಥಾನ ಹೊಂದಿರುವ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ-ರಮೇಶ ಜಿಗಜಿಣಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 5:ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಪಾತ್ರ ಸಮಾಜದಲ್ಲಿ ಮಹತ್ವದ್ದಾಗಿದ್ದು, ಶಿಕ್ಷಕರಿಗೆ ಸಮಾಜದಲ್ಲಿ ಬಹಳ ಗೌರವದ ಸ್ಥಾನವಿದ್ದು, ಶಿಕ್ಷಕರು ನಿರ್ವಹಿಸುವ ಕಾರ್ಯ ಅನನ್ಯವಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಾರ್ಯಾಲಯ ಹಾಗೂ ನಗರ ವಲಯ ವಿಜಯಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವರ ಸಹಯೋಗದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಪ್ರಯುಕ್ತ…

Read More

ಪಿಪಿಪಿ ಮಾದರಿ ಮೆಡಿಕಲ್ ಕಾಲೇಜ್ ಕೈ ಬಿಡಲು ಒತ್ತಾಯಮುಖ್ಯಮಂತ್ರಿ ಬಳಿ ನಿಯೋಗ ಹೋಗಲು ನಿರ್ಧಾರ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 5: ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜ್ ಸ್ಥಾಪನೆ ಕೈ ಬಿಟ್ಟು ಪೂರ್ಣವಾಗಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಯ ಕೂಗು ದಿನದಿಂದ ದಿನಕ್ಕೆ ಬಲಗೊಳ್ಳುತ್ತಿದ್ದು, ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ವಿವಿಧ ಸಂಘಟನೆ, ರೈತ ಸಂಘಟನೆಗಳು ಸೇರಿದಂತೆ ಒಂದೇ ವೇದಿಕೆಯಡಿಯಲ್ಲಿ ಹೋರಾಟ ನಡೆಸಲು `ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಹೋರಾಟ ಸಮಿತಿ’ ಅಸ್ತಿತ್ವಕ್ಕೆ ಬಂದಿದ್ದು, ಈ ಸಮಿತಿ ನೇತೃತ್ವದಲ್ಲಿ ವಿಜಯಪುರ ಜಿಲ್ಲೆಗೆ ನಾಳೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಈ…

Read More

ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಸೋಲಾಪುರ ಸ್ವಾಗತ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 5: ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ಗಳ ಮೂಲಕ ನಡೆಸುವ ಕರ್ನಾಟಕ ರಾಜ್ಯ ಸರ್ಕಾರದ ಕ್ರಮವನ್ನು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಬೋಗೇಶ ಸೋಲಾಪುರ ಸ್ವಾಗತಿಸಿದ್ದಾರೆ.ಇತ್ತೀಚೆಗೆ ಅನೇಕ ರಾಜ್ಯಗಳಲ್ಲಿ ನಡೆದ ಸಾರ್ವತ್ರಿಕ ಚುನಾವಣೆಗಳಲ್ಲಿ ಮತ ಕಳ್ಳತನ ಆಗಿದೆ ಎಂಬ ಸಾಕ್ಷ್ಯಸಮೇತದ ಇಂಡಿಯಾ ಒಕ್ಕೂಟದ ನಾಯಕರುಗಳ ಗುರುತರ ಆರೋಪಗಳಿಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡದ ಪ್ರಧಾನಿಗಳ ಉದ್ಧಟತನ ಒಂದು ಕಡೆ. ಮತ್ತೊಂದು ಕಡೆ ಆರೋಪಿತ ಸ್ಥಾನದ ಕೇಂದ್ರ ಚುನಾವಣಾ ಆಯೋಗವು ಸೂಕ್ತ ಸ್ಪಷ್ಟೀಕರಣಗಳನ್ನು…

Read More

ಬಿ ಎಲ್ ಡಿ ಇ ಡೀಮ್ಡ್ ವಿವಿಯಲ್ಲಿ ಶಿಕ್ಷಕ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 5: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ತಜ್ಞ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನ ಆಚರಿಸಲಾಯಿತು.ಶುಕ್ರವಾರ ಡೀಮ್ಡ್ ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಿವಿಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಶಿಕ್ಷಕರು ಸಮಾಜದ ನಿಜವಾದ ದಾರಿದೀಪ. ಅವರ ಮಾರ್ಗದರ್ಶನವಿಲ್ಲದೆ ಉತ್ತಮ ವಿದ್ಯಾರ್ಥಿಗಳನ್ನು ತಯಾರಿಸುವುದು ಅಸಾಧ್ಯ. ಶಿಕ್ಷಕರು ಕೇವಲ ಪಾಠ ಕಲಿಸುವವರಲ್ಲ. ಅವರು ಮೌಲ್ಯಗಳನ್ನು ಬೆಳೆಸುತ್ತ ವಿದ್ಯಾರ್ಥಿಗಳ ಜೀವನವನ್ನು ರೂಪಿಸುತ್ತಾರೆ. ಬಿ.ಎಲ್.ಡಿ.ಇ ವಿವಿ ಶ್ರೇಷ್ಠ ಶಿಕ್ಷಣ, ಗುಣಮಟ್ಟದ…

Read More

ಸೆ. 8ರಿಂದ 13ರ ವರೆಗೆ ಉಚಿತ ಆರೋಗ್ಯ ಶಿಬಿರ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 4: ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯದಲ್ಲಿ ಶಲ್ಯತಂತ್ರ ವಿಭಾಗದ ವತಿಯಿಂದ ಸೆಪ್ಟೆಂಬರ್ 8 ರಿಂದ ಸೆಪ್ಟೆಂಬರ್ 13ರ ವರೆಗೆ ಆರು ದಿನಗಳ ಕಾಲ ಉರುಪು ಮೂಲವ್ಯಾಧಿ ಮತ್ತು ಸೊಂಟ ನೋವು(ಸಿಯಾಟಿಕಾ) ಉಚಿತ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಚಿಕಿತ್ಸೆ ಶಿಬಿರವನ್ನು ಆಯೋಜಿಸಲಾಗಿದೆ.ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 7019656245 ಮತ್ತು‌ 8147740460ನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ…

Read More

ಸರಳ ರೀತಿಯಲ್ಲಿ ನಡೆದ ಗಜಾನನ ವಿಸರ್ಜನೆ ಮೆರವಣಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 4:ಗಣೇಶೋತ್ಸವ ವಿಸರ್ಜನೆ ವೇಳೆ ವಿದ್ಯುತ್ ಅವಘಡದಿಂದ ಯುವಕ ಅಸುನೀಗಿ, ಕೆಲವು ಯುವಕರು ಗಾಯಗೊಂಡಿರುವ ಘಟನೆ ನಡೆದ ಹಿನ್ನೆಲೆಯಲ್ಲಿ ಈ ಬಾರಿ ಗಜಾನನ ಮಹಾಮಂಡಳ ಗಣೇಶನ ಉತ್ಸವ ಮೂರ್ತಿಯ ಮೆರವಣಿಗೆ ಸಾಂಕೇತಿಕವಾಗಿ ನಡೆಯಿತು.ಪ್ರತಿ ವರ್ಷ ಹತ್ತಾರು ರೀತಿಯ ಕಲಾ ತಂಡಗಳೊಂದಿಗೆ ವಿಜೃಂಭಣೆಯಿಂದ ನಡೆಯುವ ಮೆರವಣಿಗೆಗೆ ಈ ಬಾರಿ ಸಾಂಪ್ರದಾಯಿಕತೆ ಮಾತ್ರ ಸೀಮಿತವಾಗಿತ್ತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದ ಸಾಧಕರಿಗೂ ಸಹ ಈ ಬಾರಿ ಪ್ರಶಸ್ತಿ ಪ್ರದಾನ ಮಾಡಲಿಲ್ಲ.ಗಣೇಶನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.ವಿವಿಧ…

Read More

ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಮಹಿಳಾ ಸಾಂಸ್ಕೃತಿಕ ಸಂಘಟನೆ ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 4: ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳಿಗೆ ಕೊನೆಹಾಕಿ ಸೂಕ್ತ ಭದ್ರತೆ ಒದಗಿಸಲು ಆಗ್ರಹಿಸಿ ಮಹಿಳಾ ಸಾಂಸ್ಕೃತಿಕ ಸಂಘಟನೆ ಪ್ರತಿಭಟನೆ ನಡೆಸಿತು.ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯು ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಖಿಲ ಭಾರತ ಸಾಂಸ್ಕೃತಿಕ ಸಂಘಟನೆ ಸಮಿತಿಯ ಕರೆಯ ಮೇರೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಸಂಘಟನೆಯು ದೇಶದಾದ್ಯಂತ ಮಹಿಳೆಯರ ಹಕ್ಕುಗಳಿಗಾಗಿ, ಮಹಿಳೆಯರ ಘನತೆಯ ಬದುಕಿಗಾಗಿ…

Read More

ಭೀಮಾ ನದಿಗೆ ಹಾರಿ ಮಹಿಳೆ ಆತ್ಮಹತ್ಯ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 4: ಸೊಲ್ಲಾಪುರ -ವಿಜಯಪುರ ಗಡಿಯ ಭೀಮಾ ನದಿಗೆ ಕಟ್ಟಲಾಗಿರುವ ಬ್ಯಾರೇಜ್ ಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಮೃತ ಮಹಿಳೆಯನ್ನು ಇಂಡಿ ಪಟ್ಟಣದ ಬೀರಪ್ಪನಗರ ನಿವಾಸಿ ಸುಶಿಲಾಬಾಯಿ ಶಾಂತಪ್ಪ ಬಿರಾದಾರ (62) ಎಂದು ಗುರುತಿಸಲಾಗಿದೆ.ವಿಜಯಪುರ -ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಭೀಮಾನದಿ ಬ್ಯಾರೇಜ್ ಮೇಲಿನಿಂದ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.ಮೃತ ಮಹಿಳೆಯ ಪತಿ ಮನೆ ಇಂಡಿ ಪಟ್ಟಣದಲ್ಲಿದ್ದು, ತವರು ಮನೆ ಸೊಲ್ಲಾಪುರ ಜಿಲ್ಲೆಯ ಟಾಕಳಿಯಲ್ಲಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು,…

Read More

ಸೆ.6ರಂದು ಆಲಮಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಕೃಷ್ಣಗೆ ಬಾಗಿನ ಅರ್ಪಣೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 4: ಆಲಮಟ್ಟಿಯ ಲಾಲ್ ಬಹಾದ್ದೂರ್‌ಶಾಸ್ತ್ರಿ ಜಲಾಶಯ ಈಗ ಭರ್ತಿಯಾಗಿದ್ದು, ಹೀಗಾಗಿ ಉತ್ತರ ಕರ್ನಾಟಕದ ಜೀವನದಿ ಕೃಷ್ಣಗೆ ಸೆ.6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ ಎಂದು ಕೆಬಿಜೆಎನ್‌ಎಲ್ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆಗಸ್ಟ್ ಎರಡನೆಯ ವಾರದವರೆಗೆ ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ವ್ಯಾಪಕ ಮಳೆಯಾಗಿ ಕೃಷ್ಣೆಯ ಮುಖ್ಯ ಹರಿವು ಹಾಗೂ ಅದರ ಉಪನದಿಗಳಲ್ಲಿ ಅಪಾರ ಪ್ರಮಾಣದ ನೀರು ಬಂದಿರುವುದರಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ.ಜನ, ಜಾನುವಾರಗಳಿಗೆ ಜೀವ ಹಾನಿಯಾಗದಿರಲಿ ಎನ್ನುವ ಉದ್ದೇಶದಿಂದ ಕರ್ನಾಟಕ ಹಾಗೂ…

Read More

ಹೈಟೆಕ್ ಹಾರ್ವೆಸ್ಟರ್ ಹಬ್ : ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.3: 2025-26 ನೇ ಸಾಲಿಗೆ ಕೃಷಿ ಇಲಾಖೆ ವತಿಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ ಕಾರ್ಯಕ್ರಮದಡಿ ಶುಗರ್ ಕೇನ ಹಾರ್ವೆಸ್ಟರ್ ಹಬ್ ಗಳನ್ನು ಹಾಗೂ ಕಂಬೈನ್ಸ್ ಹಾರ್ವೆಸ್ಟರ್ ಹಬ್‍ಗಳನ್ನು ಸಹಾಯಧನದಡಿ ವಿತರಿಸಲು ವೈಯಕ್ತಿಕ ಫಲಾನುಭವಿಗಳಿಗೆ ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಅವಕಾಶ ನೀಡುವ ನಿಟ್ಟಿನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.18 ಕೊನೆಯ ದಿನಾಂಕವಾಗಿದೆ.ಸಾಮಾನ್ಯ ಹಾಗೂ ಪರಿಶಿಷ್ಟ ವರ್ಗದಡಿ ವೈಯಕ್ತಿಕ ಫಲಾನುಭವಿಗಳಿಗೆ ಶುಗರ್ ಕೇನ ಹಾರ್ವೆಸ್ಟರ್ ಹಾಗೂ ಕಂಬೈನ್ಸ್ ಹಾರ್ವೆಸ್ಟರ್ ಹಬ್‍ಗಳನ್ನು ಸಹಾಯಧನದಡಿ ಅನುಷ್ಠಾನಗೊಳಿಸಲಾಗುತ್ತಿದ್ದು,…

Read More