ಸಿದ್ದರಾಮಯ್ಯ ಕೇವಲ ಕಾಂಗ್ರೆಸ್ ಸಿಎಂ ಅಲ್ಲ, ಕರ್ನಾಟಕದ ಸಿಎಂ: ಯತ್ನಾಳ
ಸಪ್ತಸಾಗರ ವಾರ್ತೆ, ವಿಜಯಪುರ, ಜ. 12:ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಅಲ್ಲ, ರಾಜ್ಯದ ಸಿಎಂ ಆಗಿದ್ದಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗಿನ ವೇದಿಕೆ ಹಂಚಿಕೆ ಹಾಗೂ ಅವರನ್ನು ಹೊಗಳಿದ ವಿಚಾರವಾಗಿ ಕೇಳಿಬಂದ ಟೀಕೆಗಳಿಗೆ,ಸಿದ್ದರಾಮಯ್ಯ ಅವರು ಕೇವಲ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯಲ್ಲ. ಅವರು ಇಡೀ ರಾಜ್ಯದ ಮುಖ್ಯಮಂತ್ರಿ. ನಮ್ಮ ಕ್ಷೇತ್ರಕ್ಕೆ ಬಂದಾಗ ಅವರಿಗೆ ಗೌರವ ನೀಡುವುದು ಶಿಷ್ಟಾಚಾರ ಮತ್ತು ನನ್ನ ಕರ್ತವ್ಯ. ನಾನು ಗೌರವ…


