ಬಿಎಲ್‌ಡಿಇ ಸಂಸ್ಥೆಯ ಎಸ್.ಎಸ್. ‘ಎ’ ಹೈಸ್ಕೂಲ್ ವಿದ್ಯಾರ್ಥಿಗಳು ಸೈಕ್ಲಿಂಗ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 16: ಜಿಲ್ಲಾಡಳಿತ ಶಾಲಾ ಶಿಕ್ಷಣ ಇಲಾಖೆ ವಿಜಯಪುರ ಮತ್ತು ಜಿಲ್ಲಾ ಸೈಕ್ಲಿಂಗ್ ಅಸೋಸಿಯೇಷನ್ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ನಡೆದ ರಾಜ್ಯಮಟ್ಟದ ಸೈಕ್ಲಿಂಗ್ ಕ್ರೀಡಾಕೂಟದಲ್ಲಿ ಎಸ್ ಎಸ್ ‘ಎ’ ಶಾಲೆಯ ವಿದ್ಯಾರ್ಥಿನಿ ಕುಮಾರಿ ಹರ್ಷಿತಾ ಭಜಂತ್ರಿ 2 ಕಿಮೀ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, 4—6ಕಿಮೀ ನಲ್ಲಿ ದ್ವಿತೀಯ ಸ್ಥಾನ ಹಾಗೂ ಶ್ರೀದೇವಿ ಹಿರೇಗೋಳ 500 ಮೀಟರ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಶಾಲೆಯ ಮತ್ತು ಸಂಸ್ಥೆಯ ಕೀರ್ತಿ ಹೆಚ್ಚಿಸಿದ್ದಾರೆ ….

Read More

ಕರ್ನಾಟಕ ಬಾಲವಿಕಾಸ ಅಕಾಡೆಮಿ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ಸಿಂದಗಿ ಡಿ. 16: ಬೆಳಗಾವಿಯ ಸುವರ್ಣ ಸೌಧದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಮಂಗಳವಾರ ಹಮ್ಮಿಕೊಂಡಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿಅಕಾಡೆಮಿ ನೀಡುವ 2022–23 ನೇ ಸಾಲಿನ ‘ಮಕ್ಕಳ ಚಂದಿರ’, ಪ್ರಶಸ್ತಿಯನ್ನು ಸಿಂದಗಿ ಪಟ್ಟಣದ ಮಕ್ಕಳ ಸಾಹಿತಿಗಳಾದ ಹ.ಮ. ಪೂಜರ, ಎಸ್.ಎಸ್. ಸಾತಿಹಳ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಪ್ರಶಸ್ತಿ ನೀಡಿ ಪುರಸ್ಕಾರ ಮಾಡಿದರು. ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹಾಗೂ ಇಲಾಖೆ ಅಧಿಕಾರಿಗಳು ಇದ್ದರು. ಮಕ್ಕಳ…

Read More

ಶಾಸಕ ಯತ್ನಾಳ ಜನ್ಮದಿನ: ಬಡ ವಿದ್ಯಾರ್ಥಿಗೆ ರೂ.50 ಸಾವಿರ ನೆರವು

ಸಪ್ತ ಸಾಗರ ವಾರ್ತೆ ವಿಜಯಪುರ, ಡಿ. 15:ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಜನ್ಮ ದಿನದ ಅಂಗವಾಗಿ ಶನಿವಾರ ನಗರದ ಆರಾಧ್ಯದೈವ ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬೆಂಗಳೂರಿನ ಆರ್.ವಿ.ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಎಂಜನಿಯರಿಂಗ್ ವಿದ್ಯಾರ್ಥಿಗೆ ರೂ. 50,000 ಆರ್ಥಿಕ ನೆರವು ನೀಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಯತ್ನಾಳ ಹುಟ್ಟು ಹಬ್ಬ ಆಚರಿಸಲಾಯಿತು. ಬೆಂಗಳೂರಿನ ಆರ್ ವಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ತಂದೆ ಇಲ್ಲದ ಬಡ ಯುವಕ ಗಿರೀಶ್ ಗೌಡರ ಎಂಬಾತನ ಕಾಲೇಜು…

Read More

ಕಲಿತ ಸರ್ಕಾರಿ ಶಾಲೆಗೆ ಅಪರ ಜಿಲ್ಲಾಧಿಕಾರಿ ₹ 50 ಸಾವಿರ ದೇಣಿಗೆ

ಸಪ್ತಸಾಗರ ವಾರ್ತೆ ಬಬಲೇಶ್ವರ, ಡಿ. 15: ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ತಾವು ಕಲಿತ ಬಬಲೇಶ್ವರ ತಾಲ್ಲೂಕಿನ ದೇವರಗೆಣ್ಣೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭಾನುವಾರ ₹ 50 ಸಾವಿರ ದೇಣಿಗೆ ಚೆಕ್ ನೀಡಿದ್ದಾರೆ.ಶಾಲೆಯ ಮುಖ್ಯಗುರುಗಳು ಹಾಗೂ ಎಸ್ಡಿಎಂಸಿ ಜಂಟಿ ಖಾತೆಗೆ ಸ್ಥಿರ ಠೇವಣಿಯಾಗಿ (ಎಫ್ ಡಿ) ಇಡಲು ಮುಖ್ಯಗುರುಗಳು ಹಾಗೂ ಶಾಲಾ ಎಸ್ಡಿಎಂಸಿ ಅಧ್ಯಕ್ಷರಿಗೆ ಚೆಕ್ ನೀಡಿದರು‌.ಶಾಲೆಯ ಜಂಟಿ ಖಾತೆಯಲ್ಲಿ ಇಟ್ಟ ಸ್ಥಿರ ಠೇವಣಿಯಿಂದ ಪ್ರತಿ ವರ್ಷ ಬರುವ ಬಡ್ಡಿ ಹಣವನ್ನು ಶಾಲೆಯ…

Read More

ಭಾರತ ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಮರು ಪರಾಮರ್ಶೆಗೆ ಮನವಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 15:ಕಳೆದ ಕೆಲವು ದಿನಗಳ ಹಿಂದೆ ಭಾರತ ಸರ್ವೋಚ್ಚ ನ್ಯಾಯಾಲಯವು ತಂದೆ ಪರಿಶಿಷ್ಟ ಜಾತಿ ಅಲ್ಲದಿದ್ದರೂ ತಾಯಿ ಪರಿಶಿಷ್ಟ ಜಾತಿ ಸೇರಿದ್ದರೆ ಶೈಕ್ಷಣಿಕ ಉದ್ದೇಶಕ್ಕಾಗಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಒದಗಿಸಬೇಕೆಂದು ಆದೇಶ ನೀಡಿದ್ದನ್ನು ಸುಪ್ರೀಂ ಕೋರ್ಟ್ ಮತ್ತೆ ಪರಾಮರ್ಶಿಸಬೇಕು ಎಂದು ಭೀಮ ಸರಕಾರ ಸಂಘಟನೆ ಮನವಿ ಸಲ್ಲಿಸಿದೆ.ಈ ತೀರ್ಪಿನಿಂದ ನಿಜ ಪರಿಶಿಷ್ಟ ಜಾತಿ ಜನರಿಗೆ ಅನ್ಯಾಯಾಗುತ್ತದೆ. ಜೊತೆಗೆ ಸರ್ವೋಚ್ಛ ನ್ಯಾಯಾಲಯದ ಆದೇಶ ದುರುಪಯೋಗ ಆಗುವ ಸಾಧ್ಯತೆ ಇದ್ದು, ಈ ನ್ಯಾಯಾಲಯದ ಆದೇಶವನ್ನು…

Read More

ಉತ್ತರ ಕರ್ನಾಟಕ ರೈಲ್ವೆ ಸಂಪರ್ಕ ಹಾಗೂ ಅಭಿವೃದ್ಧಿ ಕುರಿತು ಕೇಂದ್ರ ರೇಲ್ವೆ ಸಚಿವರ ಜೊತೆಗೆ ಚರ್ಚೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 15:ಉತ್ತರ ಕರ್ನಾಟಕ ಭಾಗದ ರೈಲ್ವೆ ಸಂಪರ್ಕ ಹಾಗೂ ಅಭಿವೃದ್ಧಿ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಜೊತೆಗೆ ರಾಜ್ಯದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದರಾದ ರಮೇಶ ಜಿಗಜಿಣಗಿ ಹಾಗೂ ಪಿ.ಸಿ. ಗದ್ದಿಗೌಡರ ಅವರು ಸೋಮವಾರ ಸಂಸತ್ ಭವನದಲ್ಲಿ ಭೇಟಿಯಾಗಿ ಚರ್ಚಿಸಿದರು.ಉತ್ತರ ಕರ್ನಾಟಕ ಭಾಗದಲ್ಲಿ ರೈಲ್ವೆ ಸಂಪರ್ಕ ಹಾಗೂ ಅಭಿವೃದ್ಧಿಯ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು.ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಈ ಕುರಿತು…

Read More

ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ: ಡಿ. 15 ರಿಂದ ಅಹೋರಾತ್ರಿ ಧರಣಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 14 : ಡಿ.15ರಿಂದ ಸರಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಕೈಗೊಳ್ಳಲು ಹೋರಾಟಗಾರರು ನಿರ್ಧರಿಸಿದ್ದಾರೆ.ವಿಜಯಪುರ ನಗರದ ಡಾ. ಬಿಆರ್ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲೆಗೆ ಸರ್ಕಾರಿ ವೇದಿಕೆಯ ಮಹಾವಿದ್ಯಾಲಯ ಸ್ಥಾಪನೆಗಾಗಿ ಆಗ್ರಹಿಸಿ ಸರ್ಕಾರದ ಉದ್ದೇಶಿತ ಖಾಸಗಿಕರಣವನ್ನು ವಿರೋಧಿಸಿ ನಡೆಯುತ್ತಿರುವ ಧರಣಿ ಭಾನುವಾರ 88ನೇ ದಿನ ಪೂರೈಸಿದ್ದು, ಸರ್ಕಾರ ಜಿಲ್ಲೆಯ ಹೋರಾಟಗಾರರು ಹಾಗೂ ಜನರ ಬೇಡಿಕೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಹೋರಾಟ ಸಮಿತಿ ಪ್ರಮುಖರು ಇಂದು…

Read More

ಶರಣರ ವಚನಗಳೇ ಮಾನವ ಹಕ್ಕುಗಳ ಮೂಲ – ಬಸನಗೌಡ ಪಾಟೀಲ ಹರನಾಳ ಅಭಿಮತ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 14: ಶರಣರ ವಚನಗಳೇ ಮಾನವ ಹಕ್ಕುಗಳ ಮೂಲ. ಆದರ್ಶ ಸಮಾಜದ ನಿರ್ಮಾಣದಲ್ಲಿ ಅವರು ನೀಡಿದ ಸಂದೇಶಗಳು ನಮ್ಮೆಲ್ಲರ ಜೀವನವನ್ನು ಬದಲಿಸುವ ದಿಕ್ಸೂಚಿಗಳಾಗಿವೆ ಎಂದು ವಿಜಯಪುರದ ಜಾಗತಿಕ ಲಿಂಗಾಯತ ಮಹಾಸಭೆಯ ಅಧ್ಯಕ್ಷ ಬಸನಗೌಡ ಪಾಟೀಲ ಹರನಾಳ ಅಭಿಪ್ರಾಯಪಟ್ಟರು. ರವಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ನೀಲಮ್ಮ ಮುತ್ತಪ್ಪ ಸಂಕಣ್ಣನವರ ದತ್ತಿ, ದಿ. ಪ್ರೊ.ತಿಪ್ಪಣ್ಣ ಕರೆಪ್ಪ ಕಲ್ಯಾಣಗೋಳ ದತ್ತಿ, ದಿ. ರಾಮಗೊಂಡಪ್ಪ ನಿಂಗಪ್ಪ ನಾಗಠಾಣ ದತ್ತಿ, ದಿ. ಗಂಗಾಧರ ಕೋರಳ್ಳಿ ದತ್ತಿ…

Read More

ಬೀದಿನಾಯಿಗಳ ಹಾವಳಿ: ಸಹಾಯವಾಣಿ ಸ್ಥಾಪನೆ

ಸಪ್ತಸಾಗರ ವಾರ್ತೆ,ವಿಜಯಪುರ, ಡಿ.12:ಮಹಾನಗರ ಪಾಲಿಕೆವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆ, ಆಸ್ಪತ್ರೆ, ಕ್ರೀಡಾ ಸಂಕೀರ್ಣ ಬಸ್ ಹಾಗೂ ರೈಲು ನಿಲ್ದಾಣಗಳ ಆವರಣದಲ್ಲಿ ಬೀದಿ ನಾಯಿಗಳು ಕಂಡುಬಂದಲ್ಲಿ ಸಂಬಂಧಿಸಿದವರು ಮಹಾನಗರ ಪಾಲಿಕೆ ಕಚೇರಿಯ ಸಹಾಯವಾಣಿ ಸಂಖ್ಯೆ: 08352-222474 ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ ಎಂದು ಮಹಾನಗರಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ನಾಡಗೀತೆ ಕರ್ನಾಟಕದ ಶ್ರೇಷ್ಠತೆ,ಗೌರವದ ಸಂಕೇತ-ಶಿವಚಂದ್ರ ಕತ್ನಳ್ಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 12: ಕುವೆಂಪು ರಚಿಸಿದ ನಾಡಗೀತೆಯು ಕನ್ನಡಿಗರ ಹೃದಯದ ನಾದವಾಗಿದ್ದು, ನಾಡಿನ ಶ್ರೀಮಂತ ಸಂಸ್ಕೃತಿ, ಇತಿಹಾಸ, ಭೂಗೋಳ, ವೈವಿಧ್ಯತೆಯನ್ನು ಸಾರುವ ಒಂದು ಅಮರ ಗೀತೆಯಾಗಿದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿ ಶಿವಚಂದ್ರ ಕತ್ನಳ್ಳಿ ಹೇಳಿದರು.ಶುಕ್ರವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ‘ನಾಡಗೀತೆಯ ನೂರರ ಹಾಗೂ ವಂದೇ ಮಾತರಂ ಗೀತೆಯ ನೂರೈವತ್ತರ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ನಾಡಗೀತೆಯು ಕರ್ನಾಟಕದ ಸ್ವಾಭಿಮಾನ ಮತ್ತು ಘನತೆಯನ್ನು ಎತ್ತಿ…

Read More