ಚನ್ನಬಸವ ಶ್ರೀಗಳಿಂದ ಇಂಗಳೇಶ್ವರದಲ್ಲಿ ವಚನ ಗುಮ್ಮಟ ನಿರ್ಮಾಣ

ಸಪ್ತಸಾಗರ ವಾರ್ತೆ ಇಂಗಳೇಶ್ವರ, ಡಿ. 12 : ರಾಗ, ಧ್ವೇಷಗಳಿಲ್ಲದ ಮಂದಹಾಸದ ಇಂಗಳೇಶ್ವರ ವಿರಕ್ತ ಮಠದ ಚನ್ನಬಸವ ಶ್ರೀಗಳು ಆದಿಲ್ ಶಾಹಿ ಗೋಲಗುಂಬಜ ಕಟ್ಟಿದ ಮಾದರಿಯಲ್ಲಿ ವಚನ ಶಿಲಾ ಮಂಟಪ ನಿರ್ಮಿಸಿ ಸಮಾಜಕ್ಕೆ, ಮಠಾಧೀಶರಿಗೆ ಸಾರ್ವಕಾಲಿಕ ಮಾದರಿ ರೀತಿ ಬದುಕಿ ತೋರಿದ ಮಹಾನ್ ಚೇತನವಾಗಿದ್ದರು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಬಣ್ಣಿಸಿದರು.ಶುಕ್ರವಾರ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ಬಸವೈಕ್ಯರಾದ ಚನ್ನಬಸವ ಶ್ರೀಗಳ ಭಕ್ತಿ ಶ್ರದ್ಧಾಂಜಲಿ ಸಮಾರಂಭದಲ್ಲಿ ಪಾಲ್ಗೊಂಡು…

Read More

ತನುಶ್ರೀ ಇಜೇರಿ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 11: ಸಂತ ಜೋಸೆಫ್ ವಿದ್ಯಾರ್ಥಿನಿ ತನುಶ್ರೀ ಇಜೇರಿ ತೆಲಂಗಾಣದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ೧೭ ವಯೋಮಿತಿಯ ಬಾಲಕಿಯರ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ.ಚಿನ್ನದ ನಾಡಿನಲ್ಲಿ ನಡೆದ ೨೦೨೫-೨೬ ನೇ ಸಾಲಿನ ೧೭ ವಯೋಮಿತಿಯ ಬಾಲಕಿಯರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಉಪನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಕೋಲಾರ ಜಿಲ್ಲೆ ಕೋಲಾರವರ ಆಶ್ರಯದಲ್ಲಿ ಜರುಗಿತು.ಈ ಪಂದ್ಯಾವಳಿಯಲ್ಲಿ ತನುಶ್ರೀ ಇಜೇರಿ ಭರ್ಜರಿ ಬ್ಯಾಟಿಂಗ್ ಹಾಗೂ ಮಾರಕ ಬೌಲಿಂಗ್ ನಿಂದ ಬೆಳಗಾವಿ ವಿಭಾಗದ ತಂಡ…

Read More

ವಿಜಯಪುರ-ಬೆಂಗಳೂರ ಕಲ್ಯಾಣ ರಥ ಸಾರಿಗೆಯ ಪ್ರಯಾಣ ದರದಲ್ಲಿ ರಿಯಾಯಿತಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.11: ಪ್ರಯಾಣಿಕರ ಬೇಡಿಕೆಯಂತೆ, ವಿಜಯಪುರ-ಬೆಂಗಳೂರ ಮಾರ್ಗದ ಕಲ್ಯಾಣ ರಥ ವೊಲ್ಲೋ ಮಲ್ಟಿ ಎಕ್ಸಲ್ ಎಸಿ ಸ್ಲಿಪರ್ ಬಸ್ ಪ್ರಯಾಣ ದರದಲ್ಲಿ ರೂ.100 ಅಂದರೆ, ಶೇ 6% ರಷ್ಟು ರಿಯಾಯಿತಿ ನೀಡಲಾಗಿದೆ.ವಿಜಯಪುರ-ಬೆಂಗಳೂರ ಕಲ್ಯಾಣ ರಥ ಬಸ್ಸಿನ ದರ ರೂ. 1,399 ನಿಗದಿಪಡಿಸಲಾಗಿದ್ದು, ಪ್ರಯಾಣಿಕರು ಈ ರಿಯಾಯತಿ ದರದ ಉಪಯೋಗ ಪಡೆದುಕೊಳ್ಳುವಂತೆಕೆಕೆಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಸಶಸ್ತ್ರ ಪಡೆಗಳ ಧ್ವಜ ಖರೀದಿಸಿ-ಸೈನಿಕರಿಗೆ ಬೆಂಬಲಿಸಿ-ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ ವಿಜಯಪುರ ಡಿ.11:ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು, 2025-26ನೇ ಸಾಲಿನ ಸಶಸ್ತ್ರ ಪಡೆಗಳ ಧ್ವಜ ಸಾಂಕೇತಿಕವಾಗಿಬಿಡುಗಡೆಗೊಳಿಸಿ, ನಂತರ ಸಾಂಕೇತಿಕವಾಗಿ ಧ್ವಜ ಸ್ವೀಕರಿಸಿ, ದೇಣಿಗೆ ನೀಡುವುದರ ಮೂಲಕ ಸಾರ್ವಜನಿಕರಿಗೆ ಧ್ವಜಗಳನ್ನು ಮಾರಾಟ ಮಾಡಿ ನಿಧಿ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು, ಧ್ವಜ ನಿಧಿ ಸಂಗ್ರಹದ ಈ ನಿಧಿಯನ್ನು ಯುದ್ಧ ಸಂತ್ರಸ್ತರಿಗೆ,ಮಾಜಿ ಸೈನಿಕರು ಅವರ ಅವಲಂಬಿತರ ಸಲುವಾಗಿ ಹಮ್ಮಿಕೊಂಡ ವಿವಿಧ ಕಲ್ಯಾಣ ಮತ್ತು…

Read More

ರಾಷ್ಟ್ರಮಟ್ಟದ ಸೈಕ್ಲಿಂಗ್ ನಲ್ಲಿ ಪುನೀತ ಬಿರಾದಾರಗೆ ಬೆಳ್ಳಿ ಪದಕ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 10 : ಭಾರತೀಯ ಸೈಕ್ಲಿಂಗ್ ಫೆಡರೇಶನ್ ಹಾಗೂ ಸೈಕ್ಲಿಂಗ್ ಅಸೋಶಿಯೇಶನ್ ಆಫ್ ಓರಿಸ್ಸಾ ಸಹಯೋಗದಲ್ಲಿ ಸಂಬಾಲಪುರಲ್ಲಿ ನಡೆದ 30ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನ್‌ಶಿಪ್‌ ನಲ್ಲಿ ಬಿ. ಎಲ್. ಡಿ. ಇ ಸಂಸ್ಥೆಯ ಎಸ್. ಎಸ್. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪುನೀತ ಬಿರಾದಾರ 16 ವಯೋಮಾನದ ಬಾಲಕರ ವಿಭಾಗದ 30 ಕಿ.ಮೀ ಟೀಮ್ ಟೈಮ್ ಟ್ರಯಲ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷ…

Read More

ಲಿಂಗ ತಾರತಮ್ಯ ಮತ್ತು ಬಾಲ್ಯ ವಿವಾಹ ಪದ್ಧತಿ ಕಿತ್ತೊಗೆಯಬೇಕು : ನ್ಯಾಯಾಧೀಶ ಅರವಿಂದ ಎಸ್ ಹಾಗರಗಿ ಕರೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 10:ಹೆಣ್ಣು ಮತ್ತು ಗಂಡು ಮಕ್ಕಳ ನಡುವೆ ಇರುವ ತಾರತಮ್ಯವನ್ನು ಕಡಿಮೆ ಮಾಡುವುದಲ್ಲದೆ ಇದನ್ನು ಸಮಾಜದಿಂದ ಬೇರು ಸಮೇತ ಕಿತ್ತೊಗೆಯುವ ಕಾರ್ಯವನ್ನು ಮಾಡಬೇಕು ಎಂದು ವಿಜಯಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ಅರವಿಂದ ಎಸ್ ಹಾಗರಗಿ ಅವರು ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಾಲಾ…

Read More

ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಪಾಲಕರ ಸಹಕಾರ ಅವಶ್ಯ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.9: ಮಕ್ಕಳಿಗೆ ಸಂವಹನ ಕಲೆಯನ್ನು, ಪ್ರಶಸ್ತಿ ಪಡೆದವರ ಸಾಧನೆಯನ್ನು ತಿಳಿಸುವುದು ಮತ್ತು ಅವರಿಗೆ ಶಿಕ್ಷಕರು ಪಾಲಕರು ಪ್ರೇರಣೆಯನ್ನು ನೀಡಿ ಸತ್ಪ್ರಜೆಗಳನ್ನಾಗಿ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು ಹೇಳಿದರು.ಎ.ಎಸ್.ಹಿಪ್ಪರಗಿ ಪ್ರತಿಷ್ಠಾನ ಮತ್ತು ಸಮನ್ವಯ ಆಂಗ್ಲ ಮಾಧ್ಯಮಿಕ ಶಾಲೆ ಬ ಇವುಗಳ ಸಹಯೋಗದಲ್ಲಿ ನಡೆದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕೃಷ್ಣಾಜಿ ದಂಪತಿ ಮತ್ತು ಶಂಭು ತುಪ್ಪದ ಕೊಡಮಾಡಿದ ದತ್ತಿ ದಾಸೋಹಿಗಳು ವಿದ್ಯಾರ್ಥಿಗಳಿಗೆ ಬಹುಮಾನ ನೀಡಲು ಇವರು…

Read More

ಅಹಿಂದ ವಿದ್ಯಾರ್ಥಿ ಪರಿಷತ್ ಘಟಕಕ್ಕೆ ರಾಜ್ಯಾಧ್ಯಕ್ಷರಾಗಿ ಶಂಕರ ವಡ್ರೆ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 9:ಅಹಿಂದ ವಿದ್ಯಾರ್ಥಿ ಪರಿಷತ್ ಘಟಕದ ರಾಜ್ಯಾದ್ಯಕ್ಷರಾಗಿ ಶಂಕರ ಘೋರಕನಾಥ ವಡ್ರೆ ಮರಗೂರ ಅವರು ಆಯ್ಕೆಯಾಗಿದ್ದಾರೆ.ಅಹಿಂದ ಕರ್ನಾಟಕ ರಾಜ್ಯ ಒಕ್ಕೂಟ (ರಿ) ಬೆಂಗಳೂರು ರಾಜ್ಯಾದ್ಯಕ್ಷ ಪ್ರಭುಲಿಂಗ ದೊಡ್ಡಿಣಿ ಅವರ ಆದೇಶದ ಮೇರೆಗೆ ಅಹಿಂದ ವಿದ್ಯಾರ್ಥಿ ಪರಿಷತ್ ಘಟಕ ರಾಜ್ಯಾದ್ಯಕ್ಷರನ್ನಾಗಿ ಶಂಕರ ಘೋರಕನಾಥ ವಡ್ರೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಬೀರಲಿಂಗೇಶ್ವರ ಪೂಜಾರಿ ಹಾಗೂ ವಿಠ್ಠಲ ಬಿರಾದಾರ, ರಾಜ್ಯ ಸಂಘಟನಾ ಕಾರ್ಯದರ್ಶಿ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಲ್ಲಭಭಾಯಿ ಪಟೇಲರು ಏಕತೆಯ ಹರಿಕಾರ: ನಂದಿನಿ ಬಿರಾದಾರ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 9: ದೇಶದ ರ‍್ಯೆತರ ಮೇಲಿನ ಶೋಷಣೆ ಹೋಗಲಾಡಿಸಿದ ದೇಶದ ಏಕತೆಗಾಗಿ ಹೋರಾಡಿದ ಹರಿಕಾರ ದೇಶಕಂಡ ಅಪರೂಪದ ವ್ಯಕ್ವತ್ವ ಸರದಾರ ವಲ್ಲಭಭಾಯಿ ಪಟೇಲರದು ಎಂದು ಉಪನ್ಯಾಸಕಿ ನಂದಿನಿ ಬಿರಾದಾರ ಹೇಳಿದರುನಗರದ ವೀರಶ್ಯೆವ ಲಿಂಗಾಯತ ಸಭಾ ಭವನದಲ್ಲಿ ಅಖಿಲ ಭಾರತ ವೀರಶ್ಯೆವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ಶಿವಾನುಭವ ಗೋಷ್ಟಿಯಲ್ಲಿ ಸರದಾರ ವಲ್ಲಭಭಾಯಿ ಪಟೇಲರ ಬದುಕು ಮತ್ತು ಹೋರಾಟ ಕುರಿತು ಉಪನ್ಯಾಸ ನೀಡಿದ ಅವರು, ಸರದಾರ ವಲ್ಲಭಬಾಯಿ ಪಟೇಲರು ೧೮೭೫ರಲ್ಲಿ ಜನ್ಮತಾಳಿ ಕಾನೂನು…

Read More

ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.9: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2025-26ನೇ ಸಾಲಿನ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡಲಾಗುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಆದರ್ಶವಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಹಾಗೂ ಸಂಸ್ಥೆಗಳು ಮತ್ತು ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿರುವ ಮಹಿಳೆಯರೂ ಸೇರಿದಂತೆ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿದಂತಹ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ…

Read More