ಜಿಲ್ಲಾಧಿಕಾರಿ ಡಾ. ಆನಂದ‌ ಬಬಲೇಶ್ವರ ತಾಲೂಕಿಗೆ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.9: ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಮಂಗಳವಾರ ಬಬಲೇಶ್ವರ ತಾಲೂಕಿನ ವಿವಿಧ ತಾಲೂಕು‌ ಕಚೇರಿಗೆ ಭೇಟಿ ನೀಡಿ,‌ಪರಿಶೀಲನೆ ನಡೆಸಿದರು.ತಾಲೂಕಾ ಆಡಳಿತ ಸೌಧಕ್ಕೆ ತೆರಳಿ,ತಾಲೂಕ ಖಜಾನೆ ಹಾಗೂ ತಹಶೀಲದಾರ ಕಾರ್ಯಾಲಯದ ಇ-ಪೌತಿ, ಭೂಮಿ, ಆಧಾರ ಸಿಡಿಂಗ್ ಹಾಗೂ ಮತದಾರ ಪಟ್ಟಿ ಮ್ಯಾಪಿಂಗ್ ಪ್ರಗತಿ ಪರಿಶೀಲಿಸಿದರು.ಬಬಲೇಶ್ವರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಬಿಸಿ ಊಟದ ಅಡುಗೆ ಕೊಠಡಿ ಹಾಗೂ ಮಕ್ಕಳಿಗೆ ವಿತರಿಸುವ ಆಹಾರದ ಕುರಿತ ಪರಿಶೀಲಿಸಿ ಅಡುಗೆ ಸಹಾಯಕರೊಂದಿಗೆ ಚರ್ಚಿಸಿ, ಅವರ ಕುಂದುಕೊರತೆ…

Read More

ಗ್ಯಾರಂಟಿ ಯೋಜನೆಗಳ ಕಲಾ ಜಾಥಾ ಪ್ರದರ್ಶನ: ಸಂಚಾರಿ ವಾಹನಕ್ಕೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.9: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಐದು ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಯುವನಿಧಿ ಹಾಗೂ ಸರ್ಕಾರದ ಜನಪರ ಯೋಜನೆಗಳ ಕುರಿತು ಜನಜಾಗೃತಿ ಮೂಡಿಸಲು ವಿಜಯಪುರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಎಲ್‌ಇಡಿ ಕಲಾ ಜಾಥಾ ಪ್ರದರ್ಶನ ಸಂಚಾರಿ ವಾಹನಕ್ಕೆ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಚಾಲನೆ ನೀಡಿದರು.ರಾಜ್ಯ ಸರ್ಕಾರವು ಜನರ ಜೀವನ ಮಟ್ಟ ಉತ್ತಮ ಪಡಿಸಲು ಹಲವಾರು ಜನಪರ…

Read More

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಗೌರವಧನ ಹೆಚ್ಚಳಕ್ಕೆ ಸದನದಲ್ಲಿ ಸುನೀಲಗೌಡ ಪ್ರಸ್ತಾಪ

ಸಪ್ತಸಾಗರ ವಾರ್ತೆ ವಿಜಯಪುರ,ಡಿ. 9: ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನ ಹೆಚ್ಚಿಸುವಂತೆ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಮತ್ತೊಮ್ಮೆ ವಿಧಾನಮಂಡಲದ ಅಧಿವೇಶನದಲ್ಲಿ ಧ್ವನಿ ಎತ್ತಿದ್ದಾರೆ.ಮಂಗಳವಾರ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಪರಿಷತ ಕಲಾಪದಲ್ಲಿ ಶಾಸಕರು ಈ ಕುರಿತು ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರಿಸಿದ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ, ಗೌರವಧನ ಹೆಚ್ಚಳ ಕುರಿತು ಇತರ ರಾಜ್ಯಗಳ ಚುನಾಯಿತ ಪ್ರತಿನಿಧಿಗಳ ಗೌರವಧನ ದಾಖಲೆಗಳನ್ನು ನಿಯಮಾನುಸಾರ…

Read More

ಬಿ.ಎಲ್.ಡಿ.ಇ ಧ್ವನಿ 98.6 FM ರೇಡಿಯೋ ಕೇಂದ್ರದ ಉದ್ಘಾಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 8: ನಗರದ ಪ್ರತಿಷ್ಟಿತ ಬಿ.ಎಲ್.ಡಿ.ಇ ಸಂಸ್ಥೆಯ “ಬಿ.ಎಲ್.ಡಿ.ಇ ಧ್ವನಿ 98.6 FM ಸಮುದಾಯ ಬಾನುಲಿ ಕೇಂದ್ರವನ್ನು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ.ಬಿ.ಪಾಟೀಲ ರವಿವಾರ ಉದ್ಘಾಟಿಸಿದರು.ಬಿ.ಎಲ್.ಡಿ.ಇ ಸಂಸ್ಥೆಯ ಬಂಗಾರಮ್ಮ ಸಜ್ಜನ ಆವರಣದಲ್ಲಿ ನೂತನವಾಗಿ ಆರಂಭವಾಗುತ್ತಿರುವ ಬಿ.ಎಲ್.ಡಿ.ಇ ಧ್ವನಿ 98.6 FM ಆಕಾಶವಾಣಿ ಕೇಂದ್ರವನ್ನು ಉದ್ಘಾಟಿಸಿ ಬಳಿಕ, ಯುವಕರು, ಮಹಿಳೆಯರು ಮತ್ತು ರೈತ ಸಮುದಾಯಗಳಿಗಾಗಿ ವಿನೂತನ ಕಾರ್ಯಕ್ರಮಗಳು ಮೂಡಿ ಬರಲಿ ಎಂದು ರೇಡಿಯೋ…

Read More

ರಾಣಿ ಚನ್ನಮ್ಮ ಮೂರ್ತಿ ಅನಾವರಣಕ್ಕೆ ಜಿಲ್ಲಾಧಿಕಾರಿಗೆ ಮನವಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 8 : ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚನ್ನಮ್ಮ ಮೂರ್ತಿಯನ್ನು ವಿಜಯಪುರ ಕೇಂದ್ರ ಬಸ್ ನಿಲ್ದಾಣದಲ್ಲಿ ಕೂಡಲೆ ಅನಾವರಣಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.ಕಳೆದ ೩ ವರ್ಷಗಳಾದರೂ ಮೂರ್ತಿ ಅನಾವರಣಗೊಳ್ಳದಿರುವುದು ರಾಣಿ ಚನ್ನಮ್ಮಳ, ಅಭಿಮಾನಿಗಳಿಗೆ ಹಾಗೂ ಸಾರ್ವಜನಿಕರಿಗೆ ನೋವು ತಂದಿದೆ. ಆದ್ದರಿಂದ ಆದಷ್ಟು ಬೇಗನೆ ಮೂರ್ತಿಯನ್ನು ಅದ್ಧೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಅನಾವರಣ ಮಾಡುವ ಕಾರ್ಯವನ್ನು ಕೂಡಲೇ ಕೈಗೊಳ್ಳಬೇಕು ಎಂದು ಸಮಿತಿಯವರು ಆಗ್ರಹಿಸಿದ್ದಾರೆ.ಚನ್ನಮ್ಮಳ ಮೂರ್ತಿಯ ಸುತ್ತಲೂ ತುಂಬಾ ಗಲೀಜಾಗಿದ್ದು, ನಾಯಿಗಳ…

Read More

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ತಿದ್ದುಪಡಿ ಕಾಯಿದೆ ವಿಧಾನಸಭೆಯಲ್ಲಿ ಮಂಡಿಸದಂತೆ ಆಗ್ರಹಿಸಿ ಡಿಸಿಗೆ ಮನವಿ

ಸಪ್ತ ಸಾಗರ ವಾರ್ತೆ ವಿಜಯಪುರ, ಡಿ. 8 : ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ ೨೦೨೦ರ ಪ್ರಸ್ತಾವಿತ ತಿದ್ದುಪಡಿಯು ಸಂವಿಧಾನದ ಅಶಯಕ್ಕೆ ಹಾಗೂ ರಾಜ್ಯದ ಮತ್ತು ಹಿಂದೂ ಸಮಾಜದ ಹಿತಾಸಕ್ತಿಗೆ ವಿರೋಧಿಯಾಗಿರುವುದರಿಂದ ಅದನ್ನು ವಿಧಾನ ಸಭೆಯಲ್ಲಿ ಮಂಡಿಸದಂತೆ ಸರ್ವ ಕ್ರಮ ಕೈಗೊಳ್ಳಲು ಆಗ್ರಹಿಸಿ ಮತ್ತು ಗೋ ಸಂರಕ್ಷಣೆ ಕಾನೂನು ಸಡಿಲಗೊಳಿಸುತ್ತಿರುವ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಕಾರ್ಯದರ್ಶಿ ಕರ್ನಾಟಕ ಸರ್ಕಾರ ಬೆಂಗಳೂರ ಅವರಿಗೆ ವಿಶ್ವ…

Read More

ಟೊಯೊಟಾ ಕಿರ್ಲೋಸ್ಕರ್ ಕಂಪನಿ ಅನುದಾನ ದಾನದಷ್ಟೇ ಶ್ರೇಷ್ಠ:ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 8: ಜಾಗತಿಕ ಖ್ಯಾತಿಯ ಟೊಯೊಟಾ ಕಿರ್ಲೋಸ್ಕರ್ ಕಂಪನಿ ಸಿ.ಎಸ್.ಆರ್. ಅನುದಾನದಡಿ ಸರಕಾರಿ ಶಾಲಾ, ಕಾಲೇಜುಗಳ ಅಭಿವೃದ್ಧಿಗೆ ಅನುದಾನ ಒದಗಿಸಿರುವುದು ದಾನಗಳಲ್ಲಿಯೇ ಶ್ರೇಷ್ಠವಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ರವಿವಾರ ಬಬಲೇಶ್ವರ ತಾಲೂಕಿನ ಮಮದಾಪುರ ಸರಕಾರಿ ಪದವಿ ಕಾಲೇಜು ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.ನಗರದ ಖಾಸಗಿ ಶಾಲೆ ಕಾಲೇಜುಗಳನ್ನು ಮೀರಿಸುವ ಕಟ್ಟಡಗಳನ್ಬು ಮಮದಾಪುರ ಭಾಗದಲ್ಲಿ ನಿರ್ಮಿಸಲಾಗಿದೆ. ಶಾಲೆಯೇ ದೇವಾಲಯ, ಮಕ್ಕಳೇ ದೇವರು…

Read More

ದಿವಟಗೇರಿ ಗಲ್ಲಿಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ 50 ವಸಂತಗಳ ಸಂಭ್ರಮ

ಸಪ್ತಸಾಗರ ವಾರ್ತೆ ವಿಜಯಪುರ,ಡಿ. 7 : ದಿವಟಗೇರಿ ಗಲ್ಲಿಯ ಶ್ರೀ ಗುರು ರಾಘವೇಂದ್ರ ಮಹಾಸ್ವಾಮಿಗಳ ಮಠಕ್ಕೆ 50 ವಸಂತಗಳ ಸಂಭ್ರಮದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ-ಭಕ್ತಿಯಿಂದ ನೆರವೇರಿದವು. ಉತ್ತರಾಧಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ಶ್ರೀಮಠಕ್ಕೆ ಭೇಟಿ ನೀಡಿ ರಾಯರ ಪವಿತ್ರ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ ನೆರವೇರಿಸಿದರು.ಅದಕ್ಕೂ ಮೊದಲು ಬೆಳಿಗ್ಗೆ 8 ಗಂಟೆಗೆ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರಿಗೆ ಪೂರ್ಣ ಕುಂಭ ಸ್ವಾಗತಿಸಲಾಯಿತು. ನಂತರ ಪಂಚಾಮೃತ ಅಭಿಷೇಕ, ಸಾವಿರಾರು ಭಕ್ತರಿಗೆ ಮುದ್ರಾಧಾರಣ, ಹೋಮದ ಪೂರ್ಣಾಹುತಿ ಕಾರ್ಯಕ್ರಮ ಜರುಗಿತು.ನಂತರ…

Read More

ಟಿಇಟಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ-ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.7: ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ರವಿವಾರ ನಗರದ ಮರಾಠಿ ವಿದ್ಯಾಲಯ ಹಾಗೂ ಅಂಜುಮನ್ ಬಾಲಕಿಯರ ಪದವಿ-ಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ಟಿಇಟಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರೀಕ್ಷಾ ವ್ಯವಸ್ಥೆ,ಪರೀಕ್ಷೆ ಕೇಂದ್ರಗಳಲ್ಲಿ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಾಜರಾತಿ, ಪರೀಕ್ಷಾ ಕೇಂದ್ರಗಳ ಕೊಠಡಿ, ವಿದ್ಯಾರ್ಥಿಗಳಿಗೆ ಆಸನಗಳ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಭದ್ರತಾ ವ್ಯವಸ್ಥೆ ಮಾಡಿರುವ ಕುರಿತು ಸಮಗ್ರ ಪರಿಶೀಲನೆ ನಡೆಸಿದ ಅವರು, ಪರೀಕ್ಷಾ…

Read More

ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹದಲ್ಲಿ ವಿಜಯಪುರ ಜಿಲ್ಲೆಗೆ ಪ್ರಶಸ್ತಿ ಗರಿ

ಸಪ್ತಸಾಗರ ವಾರ್ತೆ,ವಿಜಯಪುರ,ಡಿ.7:2022ನೇ ಸಾಲಿನಲ್ಲಿ ಜಿಲ್ಲೆಗೆ ನಿಗದಿಪಡಿಸಿದ ಗುರಿಗಿಂತ ಅತಿ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹ ಮಾಡಿದ ಹೆಗ್ಗಳಿಕೆಗೆ ವಿಜಯಪುರ ಜಿಲ್ಲೆಯು ಪ್ರಶಸ್ತಿಗೆ ಭಾಜನವಾಗಿದ್ದು, ಸಶಸ್ತ್ರ ಪಡೆಗಳ ದ್ವಜ ದಿನಾಚರಣೆ ಅಂಗವಾಗಿ ಬೆಂಗಳೂರಿನ ರಾಜಭವನದಲ್ಲಿ ಡಿಸೆಂಬರ್ 7ರಂದು ನಡೆದ ಸಮಾರಂಭದಲ್ಲಿ ಆಹಾರ ಇಲಾಖೆಯ ಉಪ ನಿರ್ದೇಶಕರೂ ಆದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರೂ ಆದ ವಿನಯಕುಮಾರ ಪಾಟೀಲ ಅವರು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.ಕಳೆದ ವರ್ಷವೂ ಕೂಡಾ ವಿಜಯಪುರ ಜಿಲ್ಲೆಗೆ…

Read More