ರಸಗೊಬ್ಬರ ಕೃತಕ ಅಭಾವ ಸ್ಟಷ್ಟಿಸಿದರೆ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ ಡಾ. ಆನಂದ‌ ಕೆ. ಎಚ್ಚರಿಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 16: ರಸಗೊಬ್ಬರ ಮಾರಾಟ ಸಂಬಂಧಿಸಿದಂತೆ ನಿಗದಿತ ದರಕ್ಕಿಂತ ಹೆಚ್ಚಿನ ದರ ವಸೂಲಿ, ಅಕ್ರಮ ದಾಸ್ತಾನು ಹಾಗೂ ಕೃತಕ ಅಭಾವ ಸೃಷ್ಟಿಸಿದರೆ ಸಂಬಂಧಪಟ್ಟವರ ವಿರುದ್ಧ ‌ನಿಯಮಾನುಸಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಎಚ್ಚರಿಕೆ ನೀಡಿದರು.ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ರಸಗೊಬ್ಬರ ಉತ್ಪಾದಕರು ಹಾಗೂ ಮಾರಾಟಗಾರರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಎಲ್ಲ ರಸಗೊಬ್ಬರಗಳನ್ನು ಪಿಒಎಸ್ (ಪಾಯಿಂಟ್ ಆಫ್‌ ಸೇಲ್) ಯಂತ್ರದ ಮೂಲಕವೇ ಕಡ್ಡಾಯವಾಗಿ…

Read More

ಒಂದು ಕಲಾಕೃತಿ ಒಂದು ಕಾದಂಬರಿಗೆ ಸಮ- ಅಶೋಕ ಯಡಳ್ಳಿ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 16:ಕ್ಯಾನವಾಸ್ ಆರ್ಟ್ ಫೌಂಡೇಶನ್ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯದೊಂದಿಗೆ ವಿಶ್ವ ದೃಶ್ಯಕಲಾ ದಿನಾಚರಣೆಯ ಅಂಗವಾಗಿ ಕ್ಯಾನವಾಸ್ ಆರ್ಟ್ ಫೌಂಡೇಶನ್ ನಾಡಿನ ಶ್ರೇಷ್ಠ ಕಲಾವಿದರ ಕಲಾಕೃತಿಗಳ ಪ್ರದರ್ಶನ ವಿಜಯಪುರದಲ್ಲಿ ಆಯೋಜಿಸಿರುವುದು ಅತ್ಯಂತ ಸಂತಸದ ಸಂಗತಿ. ದೃಶ್ಯಕಲಾ ಕ್ಷೇತ್ರದ ಪ್ರತಿಷ್ಠಿತ ಪ್ರಶಸ್ತಿ ವರ್ಣಶಿಲ್ಪಿ ವೆಂಕಟಪ್ಪ ಪುರಸ್ಕೃತ ಕಲಾವಿದರ ಕಲಾಕೃತಿಗಳು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕಲಾವಿದ ವಾಸುದೇವ ಕಾಮಾತ್ ಅವರ ಕಲಾ ಕೃತಿ ಜೊತೆಗೆ ನಾಡಿನ ಹಿರಿಯ ಮತ್ತು ಯುವ ಕಲಾವಿದರ ಕಲಾಕೃತಿಗಳು ಒಂದೆಡೆ…

Read More

ಆಯುರ್ಥಿಂಕ್ ಫೆಸ್ಟ-2026 ವಿಷಯ ಕುರಿತು ತರ್ಕ ಸಂಗ್ರಹಣೆ ಕಾರ್ಯಕ್ರಮ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 16: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಇ.ಡಿ ಸೆಲ್(ED Cell)ವತಿಯಿಂದ, ಆಯುರ್ವೇದ ವೈದ್ಯಕೀಯ ಪದ್ಧತಿಯ ತತ್ವಗಳನ್ನು ನವೀಕರಿಸುವ ಹೊಸ ತರ್ಕ ಮಂಡನೆಯ ಕುರಿತು ವಿದ್ಯಾರ್ಥಿಗಳಿಗೆ ಆಯುರ್ಥಿಂಕ್ ಫೆಸ್ಟ-2026 ವಿಷಯ ಕುರಿತು ತರ್ಕ ಸಂಗ್ರಹಣೆ ಕಾರ್ಯಕ್ರಮ ಶನಿವಾರ ನಡೆಯಿತು.ಈ ಕಾರ್ಯಕ್ರಮವನ್ನು ಉದ್ಘಾಟಸಿದ ಕೆ.ಎಲ್.ಇ ಸಂಸ್ಥೆಯ ನಿರ್ದೇಶಕ ಡಾ.ಬಿ.ಶ್ರೀನಿವಾಸ ಪ್ರಸಾದ, ಇಂದಿನ ದಿನಗಳಲ್ಲಿ ಆಯುರ್ವೇದ ಪದ್ಧತಿಯನ್ನು ವೈಜ್ಞಾನಿಕರಣ ಮಾಡುವುದು ಮುಖ್ಯವಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಡೀಮ್ಡ್…

Read More

ಆಯುರ್ವೇದದಲ್ಲಿ ಸಂಶೋಧನೆಗೆ ಹೆಚ್ಚೆಚ್ಚು ಸಂಶೋಧನೆ ಕೈಗೊಳ್ಳುವ ಮೂಲಕ ಆರೋಗ್ಯ ಕ್ಷೇತ್ರಕ್ಕೆ ಕೊಡುಗೆ ನುಡಬೇಕು- ಡಾ. ಗುಡ್ಡಾ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 16: ಆಯುರ್ವೇದದಲ್ಲಿ ಸಂಶೋಧನೆಗೆ ಹೆಚ್ಚೆಚ್ಚು ಸಂಶೋಧನೆ ಕೈಗೊಳ್ಳುವ ಮೂಲಕ ಆರೋಗ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಲು ಸಾಧ್ಯ ಎಂದು ನವದೆಹಲಿ ಎನ್.ಸಿ.ಐ.ಎಸ್.ಎಂ ಬೋರ್ಡ್ ಆಫ್ ಆಯುರ್ವೇದ ಅಧ್ಯಕ್ಷ ಡಾ. ಅಲ್ಲಮಪ್ರಭು ಗುಡ್ಡಾ ಹೇಳಿದ್ದಾರೆ.ಶನಿವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನದ ಕೇಂದ್ರದ ವತಿಯಿಂದ ಬೆಂಗಳೂರು ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ವಚನ ಪಿತಾಮಹ ಡಾ. ಪಿ.ಜಿ. ಹಳಕಟ್ಟಿ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾದ ರಾಷ್ಟ್ರಮಟ್ಟದ…

Read More

ಸಿಬಿಎಸ್ ಇ 10ನೇ ತರಗತಿ ಫಲಿತಾಂಶ: ಬಿಎಲ್ ಡಿಇ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆ ನೂರಕ್ಕೆ ನೂರರಷ್ಟು ಸಾಧನೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 16: ಸಿಬಿಎಸ್‌ಇ 10ನೇ ತರಗತಿಯ ಫಲಿತಾಂಶ ಪ್ರಕಟವಾಗಿದ್ದು, ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯು ಶೇ. 100 ರಷ್ಟು ಪಲಿತಾಂಶ ದಾಖಲಿಸಿದೆ.ಶಾಲೆಯ ವಿದ್ಯಾರ್ಥಿನಿ ಅನುಪ್ರಿಯಾ ರಾಘವೇಂದ್ರ ಕುಲಕರ್ಣಿ ಶೇ. 97.80 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಗಳಿಸಿದರೆ, ಸಾನ್ವಿ ಬಸವರಾಜ ಎಲಿಗಾರ ಶೇ. 97.20 ಅಂಕ ಗಳಿಸಿ ಶಾಲೆಗೆ ದ್ವಿತೀಯ ಸ್ಥಾನ ಹಾಗೂ ನೇಹಾ ಗಿರೀಶ ಪಾಟೀಲ ಶೇ. 95.40 ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿದ್ದಾಳೆ.ಪರೀಕ್ಷೆಗೆ…

Read More

ಏ.21ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 17ನೇ ವಾರ್ಷಿಕ ಘಟಿಕೋತ್ಸವ

ಸಪ್ತಸಾಗರ ವಾರ್ತೆ,ವಿಜಯಪುರ,ಏ.16: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಕುಲಪತಿಗಳು,ಸಿಂಡಿಕೇಟ್ ಹಾಗೂ ವಿದ್ಯಾವಿಷಯಕ ಪರಿಷತ್ತಿನ ಸಹಯೋಗದಲ್ಲಿ ಏ.21ರ ಬೆಳಿಗ್ಗೆ 11:30 ಗಂಟೆಗೆ ನಗರ ಹೊರವಲಯದಲ್ಲಿರುವ ವಿಶ್ವವಿದ್ಯಾನಿಲಯದ ಜ್ಞಾನಶಕ್ತಿ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ.ಕನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ಗೌರವಾನ್ವಿತ ಥಾವರ್ ಚಂದ್ ಗೆಹ್ಲೋಟ್ ಅವರು ಅಗ್ರಾಸನ ವಹಿಸುವರು.ಉನ್ನತ ಶಿಕ್ಷಣ ಸಚಿವರು ಹಾಗೂ ವಿಶ್ವವಿದ್ಯಾನಿಲಯದ ಸಮಕುಲಪತಿ ಡಾ.ಎಂ.ಸಿ ಸುಧಾಕರ್ ಉಪಸ್ಥಿತರಿರುವರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮುಂಬೈನ(ಎಸ್.ಎನ್.ಡಿಟಿ) ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ನಾಥಿಬಾಯಿ ದಾಮೋದರ್ ಠಾಕರ್ಸಿ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ…

Read More

ವಿಶ್ವ ಧ್ವನಿ ದಿನ ಆಚರಿಸಿದ ನಾಗಠಾಣದ ಚಿಣ್ಣರು

ಸಪ್ತಸಾಗರ ವಾರ್ತೆ , ವಿಜಯಪುರ, ಏ. 16:ವಿಶ್ವ ಧ್ವನಿ ದಿನವನ್ನು ಪ್ರತಿವರ್ಷ ಏಪ್ರಿಲ್ 16 ರಂದು ವಿಶ್ವಾದ್ಯಂತ ಆಚರಿಸಲಾಗುತ್ತದೆ. ಈ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ ಅನುಶ್ರೀ-ಶ್ರೀನಿಧಿ ಬಂಡೆ ಅವರು ಧ್ವನಿ ಮಾಡುವ ಮೂಲಕ ಈ ದಿನವನ್ನು ಆಚರಿಸಿದರು.ಧ್ವನಿಯು ಮನುಷ್ಯನ ವ್ಯಕ್ತಿತ್ವ, ಆರೋಗ್ಯ,ಭಾವನೆಯನ್ನುವ್ಯಕ್ತಪಡಿಸುವ ಪ್ರಮುಖ ಸಾಧನವಾಗಿದ್ದು, ಅದು ಸಂವಹನ, ಸಾಮಾಜಿಕ ಸಂಪರ್ಕ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ಆರೋಗ್ಯದ ದೃಷ್ಟಿಯಿಂದ, ಧ್ವನಿಯು ನಮ್ಮ ಮನಃಸ್ಥಿತಿ ಮತ್ತು ದೈಹಿಕ ಆರೋಗ್ಯವನ್ನು ಸೂಚಿಸುತ್ತದೆ. ಶೈಕ್ಷಣಿಕ, ವೃತ್ತಿಪರ ಮತ್ತು…

Read More

ಏ. 20ರಿಂದ 25 ರವರೆಗೆ ಅಧಿಕ ರಕ್ತದೊತ್ತಡ ಚಿಕಿತ್ಸಾ ಶಿಬಿರ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 16: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದದಲ್ಲಿ ಅಧಿಕ ರಕ್ತದೊತ್ತಡ (High blood pressure) ತಲೆನೋವು, ತಲೆ ತಿರುಗುವಿಕೆ, ಹೃದಯವು ವೇಗವಾಗಿ ಬಡಿದುಕೊಳ್ಳುವ ಕುರಿತು ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಏಪ್ರಿಲ್ 20 ರಿಂದ ಏಪ್ರಿಲ್ 25ರ ವರೆಗೆ ನಡೆಯಲಿದೆ.ಬಿ.ಎಲ್.ಡಿ.ಇ ಆಯುರ್ವೇದ ಆಸ್ಪತ್ರೆಯಲ್ಲಿ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಆರು ದಿನಗಳ ಕಾಲ ಆಯೋಜಿಸಲಾಗಿರುವ ಈ ಶಿಬಿರದಲ್ಲಿ ಮೇಲಿನ ಸಮಸ್ಯೆಗಳನ್ನು ಎದುರಿಸುತ್ತಿರುವ 18 ರಿಂದ 79…

Read More

ವಚನಾನಂದ ಶ್ರೀ ಸತ್ಯ ಹರಿಶ್ಚಂದ್ರ ಅಲ್ಲ: ಯತ್ನಾಳ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 14:ವಚನಾನಂದ ಸ್ವಾಮಿಜಿ ಸತ್ಯ ಹರಿಶ್ಚಂದ್ರ ಅಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ, ಹರಿಹರದ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಉಚ್ಛಾಟನೆ ವಿಚಾರ ಕುರಿತು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.ನಮ್ಮದೇ ಸರ್ಕಾರ ಇದ್ದರೂ ವಚನಾನಂದ ಸ್ವಾಮಿಗಳ ವಿರುದ್ದ ವಿಧಾನಸಭೆಯಲ್ಲಿ ಮಾತನಾಡಲು ಅವಕಾಶ ನೀಡಲಿಲ್ಲ. ಸ್ಪೀಕರ್ ಗೆ ಹೇಳಿ ಮಾತನಾಡಲು ಅವಕಾಶ ನೀಡಲಿಲ್ಲ ಎಂದರು.ಹರಿಹರ ಹಾಗೂ ಕೂಡಲಸಂಗಲ ಪೀಠಗಳ ಟ್ರಸ್ಟ್ ಗಳು ಜನರ ನಂಬಿಕೆ…

Read More

ದೇಶದ ಸಾಮರಸ್ಯಕ್ಕೆ ಅಂಬೇಡ್ಕರವರ ತಾಯ್ತನದ ನಿಲುವು ಅವಶ್ಯಕ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಏ. 14: ಅಂಬೇಡ್ಕರ್ ಚಿಂತನೆಗಳಲ್ಲಿ ಮಾನವೀಯತೆಯೇ ಜೀವಾಳವಾಗಿದ್ದು, ಇಂದಿನ ಸಮಾಜದಲ್ಲಿನ ಅಸಮಾನತೆ,ಅಶಾಂತಿ ಹೋಗಲಾಡಿಸಲು ಅವರ ವಿಚಾರಗಳು ದಿವ್ಯ ಮಂತ್ರಗಳಾಗಿವೆ ಎಂದು ಸಂಪನ್ಮೂಲ ವ್ಯಕ್ತಿ ಸಂತೋಷ ಬಂಡೆ ಹೇಳಿದರು.ಮಂಗಳವಾರ ಪಟ್ಟಣದ ಆದರ್ಶ ವಿದ್ಯಾಲಯದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವಿಜಯಪುರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇಂಡಿ ಇವರ ಸಹಯೋಗದಲ್ಲಿ ಜರುಗಿದ1-5 ನೇ ವರ್ಗದ ಶಿಕ್ಷಕರ ದ್ವಿಭಾಷಾ ತರಬೇತಿಯಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಆಚರಣೆಯನ್ನು ಉದ್ಧೇಶಿಸಿ ಅವರು…

Read More