ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಆರು ಎಕರೆ ಕಬ್ಬು ನಾಶ
ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 10 :ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆರು ಎಕರೆಯಲ್ಲಿದ್ದ ಕಬ್ಬು ಸುಟ್ಟು ಕರಕಲಾಗಿರುವ ಘಟನೆ ಸಿಂದಗಿ ತಾಲೂಕಿನ ಸುಂಗಠಾಣ ಗ್ರಾಮದಲ್ಲಿ ನಡೆದಿದೆ.ಸುಂಗಠಾಣ ಗ್ರಾಮದ ಹನಮಂತಪ್ಪ ಗುರಲಿಂಗಪ್ಪ ಬಿರಾದಾರ ಉರ್ಫ್ ಕುರನಳ್ಳಿ ಅವರ 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಪೂರ್ಣವಾಗಿ ಸುಟ್ಟಿದೆ.ಮಂಗಳವಾರ ಮಧ್ಯಾಹ್ನ ಸುಮಾರು 3 ಗಂಟೆ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ.ಜಮೀನಿನಲ್ಲಿ ಬೆಳೆದು ನಿಂತಿರುವ ಅಂದಾಜು 7…


