ಕಾನಿಪ ಸಂಘದಲ್ಲಿ ಅಂಬೇಡ್ಕರ್ ಜಯಂತಿ
ಸಪ್ತಸಾಗರ ವಾರ್ತೆ,ವಿಜಯಪುರ, ಏ. 14:ನಗರದ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಮಂಗಳವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವಿಧಿವತ್ತಾಗಿ ಪೂಜೆ ಸಲ್ಲಿಸಿ, ಪುಷ್ಪವೃಷ್ಠಿಗೈದು, ಡಾ.ಅಂಬೇಡ್ಕರ ಅವರ ಸಮಾಜ ಪರಿವರ್ತನೆಯ ಚಿಂತನೆಗಳು, ಶ್ರಮ ಮತ್ತು ಸಮಾನತೆಯ ಮಹತ್ವವನ್ನು ಸ್ಮರಿಸಲಾಯಿತು.ಸಂಘದ ಅಧ್ಯಕ್ಷ ಅಶೋಕ ಯಡಳ್ಳಿ ಮಾತನಾಡಿ, ಅಂಬೇಡ್ಕರ್ ಅವರು ಕೇವಲ ಸಂವಿಧಾನ ಶಿಲ್ಪಿಯಾಗಿರದೆ, ಒಬ್ಬ ಚಿಂತಕ ಪತ್ರಕರ್ತರೂ ಆಗಿದ್ದರು. ‘ಮೂಕನಾಯಕ’ ಮತ್ತು ‘ಬಹಿಷ್ಕೃತ ಭಾರತ’ ಪತ್ರಿಕೆಗಳ ಮೂಲಕ ಹಿಂದುಳಿದ ವರ್ಗಗಳ ಧ್ವನಿಯಾಗಿ…


