ಕಾನಿಪ ಸಂಘದಲ್ಲಿ ಅಂಬೇಡ್ಕರ್ ಜಯಂತಿ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 14:ನಗರದ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಮಂಗಳವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವಿಧಿವತ್ತಾಗಿ ಪೂಜೆ ಸಲ್ಲಿಸಿ, ಪುಷ್ಪವೃಷ್ಠಿಗೈದು, ಡಾ.ಅಂಬೇಡ್ಕರ ಅವರ ಸಮಾಜ ಪರಿವರ್ತನೆಯ ಚಿಂತನೆಗಳು, ಶ್ರಮ ಮತ್ತು ಸಮಾನತೆಯ ಮಹತ್ವವನ್ನು ಸ್ಮರಿಸಲಾಯಿತು.ಸಂಘದ ಅಧ್ಯಕ್ಷ ಅಶೋಕ ಯಡಳ್ಳಿ ಮಾತನಾಡಿ, ಅಂಬೇಡ್ಕರ್ ಅವರು ಕೇವಲ ಸಂವಿಧಾನ ಶಿಲ್ಪಿಯಾಗಿರದೆ, ಒಬ್ಬ ಚಿಂತಕ ಪತ್ರಕರ್ತರೂ ಆಗಿದ್ದರು. ‘ಮೂಕನಾಯಕ’ ಮತ್ತು ‘ಬಹಿಷ್ಕೃತ ಭಾರತ’ ಪತ್ರಿಕೆಗಳ ಮೂಲಕ ಹಿಂದುಳಿದ ವರ್ಗಗಳ ಧ್ವನಿಯಾಗಿ…

Read More

14ರಿಂದ 18ರವರೆಗೆ ಮಹಾಲ ಐನಾಪುರ ತಾಂಡಾದಲ್ಲಿ ದುರ್ಗಾದೇವಿ ಜಾತ್ರಾ ಮಹೋತ್ಸವ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 13: ತಾಲೂಕಿನ ಮಹಲ ಐನಾಪೂರ ತಾಂಡಾದಲ್ಲಿ ಏ. 14 ರಿಂದ 18 ರವರೆಗೆ ದುರ್ಗಾದೇವಿ ಜಾತ್ರಾ ಮಹೋತ್ಸವ ನಡೆಯಲಿದೆ.ಏ. 14 ರಂದು ಆಲಮಟ್ಟಿಯ ಚಂದ್ರಗಿರಿಯ ಹೊಳೆ ಮೂಲಕ ಗಂಗೆ ಸೀತಾಳ ಕಾರ್ಯಕ್ರಮ ನಡೆಯಲಿದೆ. ಏ 16 ಹಾಗೂ 17 ರಂದು ಮನೆ ಮನೆ ದೇವಿ ಭೇಟಿ ಕಾರ್ಯಕ್ರಮ ನಡೆಯಲಿದೆ.ಏ. 18 ರಂದು ಹೋಮ ಹವನ, ರುದ್ರಾಭಿಷೇಕ , ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದು ದುರ್ಗಾದೇವಿ ಗದ್ದುಗೆಯ ಆರಾಧಕ ಪುಜಾರಿಗಳಾದ ಪ….

Read More

ಶ್ರದ್ಧೆ ಹಾಗೂ ಆತ್ಮವಿಶ್ವಾಸವೇ ಯಶಸ್ಸಿನ ಮೂಲಮಂತ್ರ: ಮಾತಾಜಿ ಕೈವಲ್ಯಮಯಿ

ವಿಜಯಪುರ: “ಮಾನವನ ಜೀವನದಲ್ಲಿ ಗುರಿ ತಲುಪಲು ಶ್ರದ್ಧೆ ಅತ್ಯಗತ್ಯ. ಯಾರಲ್ಲಿ ಶ್ರದ್ಧೆ ಇರುತ್ತದೆಯೋ ಅವರು ಜೀವನದ ಪ್ರತಿ ಹಂತದಲ್ಲೂ ವಿಜಯಶಾಲಿಗಳಾಗುತ್ತಾರೆ,” ಎಂದು ವಿಜಯಪುರದ ಕೃಪಾಮಯಿ ಶಾರದಾಶ್ರಮದ ಪರಮಪೂಜ್ಯ ಕೈವಲ್ಯಮಯಿ ಮಾತಾಜಿಯವರು ಅಭಿಮತ ವ್ಯಕ್ತಪಡಿಸಿದರು.ವಿಜಯಪುರ ಜಿಲ್ಲೆಯ ಕನ್ನೂರಿನ ಶಾಂತಿ ಕುಟೀರ ಆಶ್ರಮದಲ್ಲಿ ಶಾಂತಿ ಕುಟೀರ ಟ್ರಸ್ಟ್ ಹಾಗೂ ಭಾರತೀಯ ಸ್ವರಾಜ್ಯ ಸಂಸ್ಥೆ ಮತ್ತು ಸಂಡೂರಿನ ಶ್ರೀ ಶೈಲೇಶ್ವರ ವಿದ್ಯಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಒಂದು ತಿಂಗಳ ಉಚಿತ ಶೈಕ್ಷಣಿಕ ಹಾಗೂ ಆಧ್ಯಾತ್ಮಿಕ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭದ…

Read More

15ರಂದು ಪಿಂಚಣಿದಾರರಿಂದ ನಿರಶನ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 13:ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಏ. 15ರಂದು ಪಿಂಚಣಿದಾರರು ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ.ಪಿಂಚಣಿದಾರರ ಕಚೇರಿಯಲ್ಲಿ ಈಚೆಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.ರಾಷ್ಟ್ರೀಯ ಅಧ್ಯಕ್ಷ ಕಮಾಂಡರ್ ಅಶೋಕ ರಾವುತ್ ಅವರು ಮಾತನಾಡಿ, ಏ. 15ರಂದು ಬೆಳಿಗ್ಗೆ 10-30 ರಿಂದ ಮಧ್ಯಾಹ್ನ 1 ಗಂಟೆವರೆಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಸಾಂಕೇತಿಕವಾಗಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ ಎಂದರು.ಬೃಹತ್ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ…

Read More

ಉತ್ತಮ ಕಾವ್ಯದಿಂದ ಸಮಾಜದ ಪ್ರಗತಿ ಸಾಧ್ಯ:ಸಾಹಿತಿ ಪ್ರೊ. ಎ. ಎಚ್. ಕೊಳಮಲಿ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 13:ಯುವ ಕವಿಗಳು ಹೆಚ್ಚು ಓದಿನತ್ತ ಒಲವು ತೋರಿಸಬೇಕು. ಶ್ರೇಷ್ಠ ಸಾಹಿತಿಗಳ ಕಥೆ, ಕಾದಂಬರಿ, ಸಾಹಿತ್ಯ ಕೃತಿಗಳನ್ನು ಓದಿದಾಗ ಜ್ಞಾನ ವೃದ್ಧಿಗೊಂಡು ಗಟ್ಟಿತನದ ಸಾಹಿತ್ಯವನ್ನು ರಚಿಸಲು ಸಾಧ್ಯ, ಕಾವ್ಯಕ್ಕೆ ಅದ್ಭುತವಾದ ಶಕ್ತಿಯಿದೆ. ಉತ್ತಮ ಕಾವ್ಯದಿಂದ ಸಮಾಜದ ಪ್ರಗತಿ ಸಾಧ್ಯ ಎಂದು ಸಾಹಿತಿ ಪ್ರೊ ಎ. ಎಚ್. ಕೊಳಮಲಿ ಹೇಳಿದರು.ರವಿವಾರ ಸಂಜೆ ದರ್ಬಾರ ಹೈಸ್ಕೂಲ್ ಮೈದಾನದಲ್ಲಿ ವಿಜಯಪುರ ಸಾಹಿತ್ಯ ಬಳಗ ಹಾಗೂ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ನಡೆದ ಬುದ್ಧ, ಬಸವ, ಅಂಬೇಡ್ಕರ…

Read More

ಬಾಲ್ಯ ವಿವಾಹ ನಿಷೇಧ: ಸಾರ್ವಜನಿಕರಿಗೆ ಎಚ್ಚರಿಕೆ

ಸಪ್ತಸಾಗರ ವಾರ್ತೆ,ವಿಜಯಪುರ,ಏ.13: ಅಕ್ಷಯ ತೃತೀಯ ಪ್ರಯುಕ್ತ ಏ.20 ರಂದು ಜಿಲ್ಲೆಯಲ್ಲಿ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಹಾಗೂ ವೈಯಕ್ತಿಕ ವಿವಾಹಗಳಲ್ಲಿ ಬಾಲ್ಯ ವಿವಾಹ ಜರುಗಿಸಿದಲ್ಲಿ, ಅದು ಬಾಲ್ಯವಿವಾಹ ನಿಷೇಧ ಕಾಯ್ದೆ-2006ರನ್ವಯ ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ಜಿಲ್ಲಾಡಳಿತ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.ಜಿಲ್ಲೆಯ ದೇವಸ್ಥಾನಗಳು, ಕಲ್ಯಾಣ ಮಂಟಪಗಳು ಹಾಗೂ ಇತರ ಧಾರ್ಮಿಕ ಸ್ಥಳಗಳಲ್ಲಿ ಬಾಲ್ಯವಿವಾಹ ನಿಷೇಧ ಎಂಬ ಫಲಕವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಬಾಲ್ಯ ವಿವಾಹವನ್ನು ನಡೆಸುವ, ನಿರ್ದೇಶಿಸುವ ಅಥವಾ ಪ್ರಚೋದಿಸುವ ಯಾವುದೇ ವ್ಯಕ್ತಿ ಕಾನೂನು ಪ್ರಕಾರ ಸಮಾನವಾಗಿ ಹೊಣೆಗಾರರಾಗುತ್ತಾರೆ.ವಿವಾಹ ಸಮಾರಂಭವನ್ನು…

Read More

ಸಂಶೋಧನೆ ಕಾರ್ಯದಲ್ಲಿ ಮಹಿಳೆಯರು ಮುಂದಾಳತ್ವ ವಹಿಸಬೇಕು-ಎಂ. ಎನ್. ಚೋರಗಸ್ತಿ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 13: ಸ್ವತಂತ್ರ ಪೂರ್ವದ ಸೀಮಿತ ಶಿಕ್ಷಣದಿಂದ ಇಂದಿನ ತಂತ್ರಜ್ಞಾನ ಆಧಾರಿತ ಶಿಕ್ಷಣದವರೆಗೆ ಬಂದಿರುವ ಬದಲಾವಣೆಗಳು ಮಹಿಳೆಯರಿಗೆ ಹೊಸ ಅವಕಾಶಗಳನ್ನು ನೀಡಿವೆ. ಆದ್ದರಿಂದ ಅವರು ತಂತ್ರಜ್ಞಾನವನ್ನು ಉಪಯೋಗಿಸಿ ಸಂಶೋಧನೆಯಲ್ಲಿ ಮುಂದಾಳತ್ವ ವಹಿಸಬೇಕು ಎಂದು ಮಾಜಿ ಕುಲಸಚಿವ ಎಮ್.ಎನ್.ಚೋರಗಸ್ತಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರ, ಜೈವಿಕ ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಅಧ್ಯಯನ ವಿಭಾಗಗಳ ಸಹಯೋಗದಲ್ಲಿ ವಿಷನ್ ಗ್ರೂಪ್ ಆಪ್ ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಇವರ ಪ್ರಾಯೋಜತ್ವದ ಅಡಿಯಲ್ಲಿ ಐದು…

Read More

15ರಂದು ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ನೇರ ಸಂದರ್ಶನ

ಸಪ್ತಸಾಗರ ವಾರ್ತೆ,ವಿಜಯಪುರ,ಏ.13ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವಿಜಯಪುರ ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ವಿಜಯಪುರ ಇವರ ಸಹಯೋಗದಲ್ಲಿ, ಏ. 15ರ ಬೆಳಿಗ್ಗೆ 10 ಗಂಟೆಗೆ ನಗರದ ಬಾಗಲಕೋಟೆ ರಸ್ತೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಅವರಣದಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.ಈ ಸಂದರ್ಶನದಲ್ಲಿ ಪ್ರತಿಷ್ಠಿತ ಕಂಪನಿಯಾದ SUZLON Energy Ltd. ಭಾಗವಹಿಸಿ, ತಮ್ಮಲ್ಲಿರುವ ಖಾಲಿ ಹುದ್ದೆಗಳಿಗೆ ಭಾರತದಾದ್ಯಂತ ಅಭ್ಯರ್ಥಿಗಳನ್ನುಆಯ್ಕೆ ಮಾಡಿಕೊಳ್ಳಲಿದೆ.ಡಿಪ್ಲೋಮಾ ಪದವಿಯಲ್ಲಿ ಮೆಕ್ಯಾನಿಕಲ್,ಎಲೆಕ್ಟ್ರಾನಿಕ್ಸ್, ಮತ್ತು ಕಮ್ಯುನಿಕೇಶನ್ ಆಟೋಮೊಬೈಲ್ ಪೂರೈಸಿದ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಸಂದರ್ಶನದಲ್ಲಿ ತಮ್ಮ ಸ್ವ-ವಿವರ (Resume) ಮತ್ತು ವಿದ್ಯಾರ್ಹತೆ…

Read More

ಇಬ್ಬರು ರೌಡಿಗಳ ಬಂಧನ:ಬಳ್ಳಾರಿ, ಮಂಗಳೂರು ಕೇಂದ್ರ ಕಾರಾಗೃಹಕ್ಕೆ ರವಾನೆ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 12:ರೌಡಿ ಕಾಯ್ದೆಯಡಿ ಇಬ್ಬರು ರೌಡಿಗಳನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ.ಹಂಚಿನಾಳ ತಾಂಡಾ ನ. 1 ರ ನಿವಾಸಿ ಸುರೇಶ @ ಸಾಗರ ತಂದೆ ಲಕ್ಷ್ಮಣ ರಾಠೋಡ ಹಾಗೂ ವಿಝಯಪುರ ಗಚ್ಚಿನಮಹಲ್ ನಿವಾಸಿ ಸೈಯದಫಜಲುಲ್ಲಾ ಸೈಫುದ್ದೀನ್ ಇನಾಂದಾರ ಬಂಧಿತ ರೌಡಿಗಳು.ರೌಡಿ ಸುರೇಶ ರಾಠೋಡ ಹಾಗೂ ಸೈಯದಫಜಲುಲ್ಲಾ ಸೈಫುದ್ದೀನ್ ಇನಾಂದಾರವಿಜಯಪುರ ಆದರ್ಶನಗರ ಮತ್ತು ಗೋಲಗುಮ್ಮಜ್ ಪೊಲೀಸ್ ಠಾಣಾ ಸರಹದ್ದಿನಲ್ಲಿ ವಿವಿಧ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ.ರೌಡಿ ಸುರೇಶ ಇತನು 1 ಕೊಲೆ, 3 ಕೊಲೆ ಪ್ರಯತ್ನ ಹಾಗೂ…

Read More

ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ: ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಸಂತಾಪ

ಸಪ್ತಸಾಗರ ವಾರ್ತೆ,ವಿಜಯಪುರ ಏ. 12: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರು ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಭಾರತೀಯ ಸಂಗೀತ ಕ್ಷೇತ್ರದ ಅನನ್ಯ ಕಂಠ ಧ್ವನಿಯೊಂದು ಮೌನವಾಗಿದ್ದು, ದೇಶದ ಸಾಂಸ್ಕೃತಿಕ ಲೋಕಕ್ಕೆ ಅಪಾರ ನಷ್ಟ ಉಂಟಾಗಿದೆ ಎಂದು ಅವರು ತಿಳಿಸಿದ್ದಾರೆ.ಅನೇಕ ದಶಕಗಳ ಕಾಲ ತಮ್ಮ ಸುಮಧುರ ಗಾಯನದಿಂದ ಭಾರತೀಯ ಚಿತ್ರರಂಗ ಹಾಗೂ ಸಂಗೀತಾಭಿಮಾನಿಗಳ ಮನಗೆದ್ದ ಆಶಾ ಭೋಸ್ಲೆ ಅವರು ಸಂಗೀತ ಕ್ಷೇತ್ರದ ದಿಗ್ಗಜರಾಗಿದ್ದು,…

Read More