ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ: ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಸಂತಾಪ

ಸಪ್ತಸಾಗರ ವಾರ್ತೆ,ವಿಜಯಪುರ ಏ. 12: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರು ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಭಾರತೀಯ ಸಂಗೀತ ಕ್ಷೇತ್ರದ ಅನನ್ಯ ಕಂಠ ಧ್ವನಿಯೊಂದು ಮೌನವಾಗಿದ್ದು, ದೇಶದ ಸಾಂಸ್ಕೃತಿಕ ಲೋಕಕ್ಕೆ ಅಪಾರ ನಷ್ಟ ಉಂಟಾಗಿದೆ ಎಂದು ಅವರು ತಿಳಿಸಿದ್ದಾರೆ.ಅನೇಕ ದಶಕಗಳ ಕಾಲ ತಮ್ಮ ಸುಮಧುರ ಗಾಯನದಿಂದ ಭಾರತೀಯ ಚಿತ್ರರಂಗ ಹಾಗೂ ಸಂಗೀತಾಭಿಮಾನಿಗಳ ಮನಗೆದ್ದ ಆಶಾ ಭೋಸ್ಲೆ ಅವರು ಸಂಗೀತ ಕ್ಷೇತ್ರದ ದಿಗ್ಗಜರಾಗಿದ್ದು,…

Read More

ಬುದ್ಧ, ಬಸವ, ಅಂಬೇಡ್ಕರ್ ಸಮಾಜಕ್ಕೆ ನೀಡಿದ ಕೊಡುಗೆ ದೊಡ್ಡದು -ಫ.ಗು. ಸಿದ್ದಾಪುರ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 11 (ಫಾತಿಮಾ ಶೇಖ, ಶಂ.ಗು. ಬಿರಾದಾರ, ಸಿಸು ಸಂಗಮೇಶ ವೇದಿಕೆ):ಯಾವುದೋ ಶತಮಾನದಲ್ಲಿ ಆಗಿ ಹೋದ ಬುದ್ಧ, ಬಸವ, ಅಂಬೇಡ್ಕರ್ ಅವರನ್ನು ನಾವು ಇವತ್ತಿಗೂ ನೆನೆಯುತ್ತೇವೆ. ಅಂದರೆ ಅವರು ಸಮಾಜಕ್ಕೆ ನೀಡಿದ ಕೊಡುಗೆ ದೊಡ್ಡದು ಎಂದು ಹಿರಿಯ ಸಾಹಿತಿ ಫ.ಗು. ಸಿದ್ದಾಪುರ ಅವರು ಹೇಳಿದರು.ನಗರದ ದರಾಬಾರ್ ಪ್ರೌಢ ಶಾಲೆ ಮೈದಾನದಲ್ಲಿ ಮೇ ಸಾಹಿತ್ಯ ಮೇಳ ವಿಜಯಪುರ ಬಳಗ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ಏಪ್ರಿಲ್ 10ರಿಂದ 14ರ ವರೆಗೆ 5ದಿನಗಳ ಕಾಲ…

Read More

ಭಕ್ತಿಪ್ರಧಾನ ಚಲನಚಿತ್ರ ‘ಸಂಕೀರ್ತನ’ ಏ.೧೭ ಕ್ಕೆ ತೆರೆಗೆ

ಸಪ್ತಸಾಗರ ವಾರ್ತೆ,ಬೆಂಗಳೂರು, ಏ. 11 : ಕೆ. ಪದ್ಮಕಲಾ ಗುಂಡೂರಾವ್ ಅರ್ಪಿಸುವ ಸಾಫಲ್ಯ ಮೂವೀಸ್ ಅವರ ‘ಸಂಕೀರ್ತನ’ ಎಂಬ ಭಕ್ತಿಪ್ರಧಾನ ಚಲನಚಿತ್ರ ಏ.17 ರಂದು ತೆರೆಗೆ ಬರಲಿದೆ ಎಂದು ಚಿತ್ರ ನಿರ್ದೇಶಕ ಡಿ.ಎಸ್. ಮಂಜುನಾಥ್(ಕಲಾ ಗಂಗೋತ್ರಿ ಮಂಜು) ಹೇಳಿದರು.ದಾಸ ಶ್ರೇಷ್ಠರ ಮಹಿಮೆಯ ಕೀರ್ತನೆಗಳ ಸಂಗಮವೇ ‘ಸಂಕೀರ್ತನ’ ಚಿತ್ರ. ಕರ್ನಾಟಕದ ಸುವರ್ಣಯುಗ ಎನ್ನಲಾದ ವಿಜಯನಗರ ಸಾಮ್ರಾಜ್ಯದ ಶ್ರೀಕೃಷ್ಣದೇವರಾಯರ ಕಾಲದಲ್ಲಿ ಅವತರಿಸಿದ ಯತಿ ಶ್ರೇಷ್ಠರ, ಕವಿ ಶ್ರೇಷ್ಠರ ಪರಸ್ಪರ ಸಮಾಗಮ, ಮಹಿಮಾ ಪ್ರದರ್ಶನ, ಕೀರ್ತನ ಗಾಯನದ ಅದ್ಭುತ ಚರಿತ್ರೆಯ ಕೆಲವು…

Read More

ಮಹಾತ್ಮಾ ಜ್ಯೋತಿಬಾ ಫುಲೆ ಜಯಂತಿ: ಶಿಕ್ಷಕ ದಂಪತಿಗಳಿಂದ ಜಾಥಾ, ಬುದ್ಧ ಬಸವ ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 11 : ವಿಜಯಪುರ ನಗರದ ದರಾಬಾರ್ ಪ್ರೌಢ ಶಾಲೆ ಮೈದಾನದಲ್ಲಿ ಮೇ ಸಾಹಿತ್ಯ ಮೇಳ ವಿಜಯಪುರ ಬಳಗ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ಏಪ್ರಿಲ್ 10ರಿಂದ 14ರ ವರೆಗೆ 5ದಿನಗಳ ಕಾಲ ಹಮ್ಮಿಕೊಂಡಿರುವ ಬಿಜಾಪುರ ಬುದ್ಧ, ಬಸವ, ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳದಲ್ಲಿ ಎರಡನೇ ದಿನ ಮಹಾತ್ಮಾ ಜ್ಯೋತಿಬಾ ಫುಲೆ ಜಯಂತಿ ಅಂಗವಾಗಿ ನಗರದ ಸಾವಿತ್ರಿಬಾಯಿ ಫುಲೆ ಮಾರ್ಗದಿಂದ ಪುಸ್ತಕ ಮೇಳದ ಸ್ಥಳದ ವರೆಗೆ ಶಿಕ್ಷಕ ದಂಪತಿಗಳ ಜಾಥಾ ಜರುಗಿತು.ಶಿಕ್ಷಕ ದಂಪತಿಗಳ…

Read More

13ರಂದು ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 11:ಈ ಸಲ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸುವ ಕುರಿತು ಏ. 13ರಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಮ್.ಬಿ. ಪಾಟೀಲ ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ(ಯತ್ನಾಳರು), ಸಂಸದರು, ವಿಜಯಪುರ ಜಿಲ್ಲಾ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು, ಸರಕಾರಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ಶ್ರೀ ಸಿದ್ಧೇಶ್ವರ ಸಂಸ್ಥೆಯ ಶಿವಾನುಭವ ಮಂಟಪದಲ್ಲಿ ಮುಂಜಾನೆ: 10-30 ಗಂಟೆಗೆ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.ಕಾರಣ ವಿಜಯಪುರ ಮಹಾನಗರ ಪಾಲಿಕೆಯ ಮಹಾಪೌರರು, ಉಪಮಹಾ ಪೌರರು ಮತ್ತು…

Read More

ಮಕ್ಕಳ ಸರಳ ಕಲಿಕೆಗೆ ದ್ವಿಭಾಷಾ ಮಾಧ್ಯಮ ಅಗತ್ಯ-ಎಸ್.ಆರ್. ನಡುಗಡ್ಡಿ ಅಭಿಮತ

ಸಪ್ತಸಾಗರ ವಾರ್ತೆ,ಇಂಡಿ, ಏ. 11: ದ್ವಿಭಾಷಾ ಮಾಧ್ಯಮವು 2026-27 ನೇ ಶೈಕ್ಷಣಿಕ ವರ್ಷದಿಂದ 1 ರಿಂದ 5 ನೇ ವರ್ಗದ ವಿಷಯಗಳನ್ನು ಮಾತೃಭಾಷೆ ಮತ್ತು ಇಂಗ್ಲಿಷ್ ನಲ್ಲಿ ಬೋಧಿಸಲು ಬಳಸುವ ಶಿಕ್ಷಣ ಪದ್ಧತಿಯಾಗಿದ್ದು, ಇದು ಜಾಗತಿಕ ಸ್ಪರ್ಧೆಗೆ ಮಕ್ಕಳನ್ನು ಸಿದ್ಧಗೊಳಿಸುತ್ತದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಆರ್. ನಡುಗಡ್ಡಿ ಹೇಳಿದರು.ಶನಿವಾರ ಪಟ್ಟಣದ ಆದರ್ಶ ವಿದ್ಯಾಲಯದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವಿಜಯಪುರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇಂಡಿ ಇವರ ಸಹಯೋಗದಲ್ಲಿ ಜರುಗಿದ1-5…

Read More

ಕಾವೇರಿ ಮಾದರಿಯಲ್ಲಿ ನಗರ ಕುಡಿಯುವ ನೀರು ಪೂರೈಕೆಗೆ ಪರ್ಯಾಯ ಯೋಜನೆ:ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 10 :ವಿಜಯಪುರ ನಗರಕ್ಕೆ ಸಮರ್ಪಕವಾಗಿ ಹಾಗೂ ಇನ್ನಷ್ಟೂ ಪರಿಣಾಮಕಾರಿಯಾಗಿ ಕುಡಿಯುವ ನೀರು ಪೂರೈಸುವ ನಿಟ್ಟಿನಲ್ಲಿ ಕಾವೇರಿ 1, 2 ನೇ ಹಂತದ ಯೋಜನೆಯ ಮಾದರಿಯಲ್ಲಿ ಕೃಷ್ಣಾ ನದಿಯಿಂದ ವಿಜಯಪುರಕ್ಕೆ ನೀರು ಪೂರೈಕೆ ಮಾಡುವ ಇನ್ನೊಂದು ಹಂತದ ಪರ್ಯಾಯ ಯೋಜನೆಯನ್ನು ರೂಪಿಸಲಾಗುತ್ತಿದ್ದು, ಸಮಗ್ರ ಯೋಜನಾ ವರದಿ ಸಿದ್ಧಗೊಳ್ಳುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಪ್ರಕಟಿಸಿದರು.ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ…

Read More

ಕಾಲುವೆ ಜಾಲಕ್ಕೆ ನೀರು, ಅನ್ಯ ಉದ್ದೇಶಕ್ಕೆ ಬಳಕೆ ಬೇಡ: ಬೆಳಗಾವಿ ಪ್ರಾದೇಶಿಕ ಆಯುಕ್ತೆ ಎಸ್‌. ಜಾನಕಿ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ.10:ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಆದಾಗ್ಯೂ ಜಿಲ್ಲಾಡಳಿತ ಜಿಲ್ಲೆಯಲ್ಲಿ ಉಲ್ಬಣಿಸಬಹುದಾದ ತಾಲೂಕುಗಳಲ್ಲಿ ಪರ್ಯಾಯ ಜಲಮೂಲಗಳ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತೆ ಜಾನಕಿ ಜಿಲ್ಲಾಡಳಿತಕ್ಕೆ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಬೇಸಿಗೆಯಲ್ಲಿ ಕುಡಿಯುವ ನೀರು ನಿರ್ವಹಣೆ ಹಾಗೂ ಭೂಸುರಕ್ಷಾ ಯೋಜನೆಯಡಿ ಬಾಕಿಯಿರುವ ಪ್ರಕರಣಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಬೇಸಿಗೆಯಲ್ಲಿ ಜನತೆಯ ಜನ ಜಾನುವಾರುಗಳ ಹಿತದೃಷ್ಟಿಯಿಂದ ಜಿಲ್ಲೆಯ ಕೆರೆಗಳಿಗೆ ಆಲಮಟ್ಟಿ ಜಲಾಶಯದಿಂದ ನೀರು ತುಂಬಿಸಬೇಕು ಎಂದು…

Read More

ಏ. 15ರಿಂದ 18ರವರೆಗೆ ಚಿಕ್ಕ ಮಕ್ಕಳ ಉಚಿತ ಆರೋಗ್ಯ ತಪಾಸಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 10: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆಯ ಕೌಮಾರಭೃತ್ಯ ವಿಭಾಗದ ವತಿಯಿಂದ ಮಕ್ಕಳಲ್ಲಿ ಕಂಡುಬರುವ ಚಂಚಲತೆ ಹಾಗೂ ಅತೀ ಚಟುವಟಿಕೆ (ADHD) ಕುರಿತು ಉಚಿತ ತಪಾಸಣೆ, ಪಂಚಕರ್ಮ ಚಿಕಿತ್ಸೆ ಮತ್ತು ಔಷಧ ವಿತರಣೆ ಸೌಲಭ್ಯ ಹಾಗೂ ಮಕ್ಕಳಲ್ಲಿ ಕಾಣಿಸುವ ಚರ್ಮರೋಗಗಳಿಗೆ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ ಏಪ್ರಿಲ್ 15 ರಿಂದ ಏಪ್ರಿಲ್ 18ರ ವರೆಗೆ ನಡೆಯಲಿದೆ.ಬುಧವಾರದಿಂದ ಶನಿವಾರದ ವರೆಗೆ 4 ದಿನ ಈ ಶಿಬಿರ ಆಯೋಜಿಸಲಾಗಿದೆ. ಮಕ್ಕಳಲ್ಲಿ ಕಂಡು…

Read More

ಡಾ.ಬಿ.ಆರ್. ಅಂಬೇಡ್ಕರವರ 135ನೇ ಜಯಂತಿ ಕಾರ್ಯಕ್ರಮ

ಸಪ್ತಸಾಗರ ವಾರ್ತೆ,ವಿಜಯಪುರ,ಏ.10: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಏಪ್ರಿಲ್ 14ರ ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಬೆಳಿಗ್ಗೆ 10 ಗಂಟೆಗೆ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮ ನಡೆಯಲಿದೆ.ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಕಾರ್ಯಕ್ರಮಕ್ಕೆ ಉದ್ಘಾಟಿಸಲಿದ್ದಾರೆ.ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ಕಾರ್ಯಕ್ರಮದ…

Read More