ನಾಳೆ 102 ನೂತನ ನಗರ ಸಾರಿಗೆ ವಾಹನಗಳ ಲೋಕಾರ್ಪಣೆ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.19 :ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ 102 ನೂತನ ನಗರ ಸಾರಿಗೆ ವಾಹನಗಳ ಲೋಕಾರ್ಪಣೆ ಸಮಾರಂಭವು ಡಿ.20ರಂದು ನಗರದ ದರಬಾರ ಶಾಲೆಯ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 10:30ಕ್ಕೆ ನಡೆಯುವ ಸಮಾರಂಭದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರು ಲೋಕಾರ್ಪಣೆಗೊಳಿಸುವರು. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಉದ್ಘಾಟಿಸುವರು. ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ…

Read More

ವಿಆರ್‌ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್‌ಗೆ ಪ್ರತಿಷ್ಠಿತ ಪ್ರಶಸ್ತಿ ಗರಿ

ಸಪ್ತಸಾಗರ ವಾರ್ತೆ, ಹುಬ್ಬಳ್ಳಿ, ಡಿ. 19 : ಸಾರಿಗೆ ಕ್ಷೇತ್ರದ ದಿಗ್ಗಜ ವಿಆರ್‌ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್‌ಗೆ ದೇಶದ ಪ್ರತಿಷ್ಠಿತ ಕಾನ್ಫಿಡರೇಶನ್ ಆ್ ಇಂಡಿಯನ್ ಇಂಡಸ್ಟ್ರಿ (ಸಿಐಐ) ಕೊಡಮಾಡುವ ಸಪ್ಲೈ ಚೈನ್ ಆೃಂಡ್ ಲಾಜಿಸ್ಟಿಕ್ಸ್ ಎಕ್ಸಲೆನ್ಸ್ ಅವಾರ್ಡ್ಸ್ (ಸ್ಕೇಲ್) – 2025 ಪ್ರಶಸ್ತಿ ಲಭ್ಯವಾಗಿದೆ. ತನ್ಮೂಲಕ ಈಗಾಗಲೇ ಹತ್ತಾರು ಗೌರವ, ಸನ್ಮಾನಗಳಿಗೆ ಪಾತ್ರವಾಗಿರುವ ಸಂಸ್ಥೆಯ ಸಾಧನೆಯ ಕಿರೀಟಕ್ಕೆ ವಿಶೇಷ ಗರಿ ಮೂಡಿದಂತಾಗಿದೆ.ಸಿಐಐ ಇನ್‌ಸ್ಟಿಟ್ಯೂಟ್ ಆ್ ಲಾಜಿಸ್ಟಿಕ್ಸ್ ಸ್ಕೇಲ್ ಅವಾರ್ಡ್ಸ್ ಟೀಂ ಹೈದ್ರಾಬಾದ್‌ನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಸಮಾರಂಭದಲ್ಲಿ 12ನೇ ಆವೃತ್ತಿಯ…

Read More

ಬಸವ ಧರ್ಮ ವಿಶ್ವ ಧರ್ಮ – ಪ್ರೊ.ಎಮ್.ಬಿ.ರೆಬಿನಾಳ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 18 :ಬಸವಾದಿ ಪ್ರಮಥರ ವಚನಗಳು ನಮ್ಮೆಲ್ಲರ ಬದುಕಿಗೆ ದಾರಿದೀಪಗಳಾಗಿವೆ, ಬಸವ ಧರ್ಮ ವಿಶ್ವ ಧರ್ಮವಾಗಬೇಕು ಎಂದು ಶ್ರೀ ಶಾಂತವೀರ ಪದವಿ ಪೂರ್ವ ಮಹಾವಿದ್ಯಾಲಯದಪ್ರಾಚಾರ್ಯ ಪ್ರೊ.ಎಮ್.ಬಿ.ರೆಬಿನಾಳ ಕರೆ ನೀಡಿದರು.ನಗರದ ಬಿ. ಎಲ್.ಡಿ.ಇ.ಸಂಸ್ಥೆಯ, ಜೆ.ಎಸ್. ಎಸ್.ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿ. ಧರೆಪ್ಪ ಮತ್ತು ಬಸಮ್ಮ ಐಹೊಳ್ಳಿ ದಂಪತಿಗಳ ಸ್ಮರಣಾರ್ಥ ದತ್ತಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಸಾಂಸ್ಕೃತಿಕ ನಾಯಕ ಬಸವಣ್ಣನವರು ಎಂದೆಂದಿಗೂ ಪ್ರಸ್ತುತ. ದಾನ, ದಾಸೋಹ, ಧರ್ಮ, ಪೂಜೆ ಇವೆಲ್ಲ ತೋರಿಕೆ ಮತ್ತು ಡಾಂಬಿಕತೆಯಿಂದ ಕೂಡಿರಬಾರದು….

Read More

ಬಿಎಲ್‌ಡಿಇ ಸಂಸ್ಥೆಯ ಎಸ್.ಎಸ್. ‘ಎ’ ಹೈಸ್ಕೂಲ್ ವಿದ್ಯಾರ್ಥಿಗಳು ಸೈಕ್ಲಿಂಗ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 16: ಜಿಲ್ಲಾಡಳಿತ ಶಾಲಾ ಶಿಕ್ಷಣ ಇಲಾಖೆ ವಿಜಯಪುರ ಮತ್ತು ಜಿಲ್ಲಾ ಸೈಕ್ಲಿಂಗ್ ಅಸೋಸಿಯೇಷನ್ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ನಡೆದ ರಾಜ್ಯಮಟ್ಟದ ಸೈಕ್ಲಿಂಗ್ ಕ್ರೀಡಾಕೂಟದಲ್ಲಿ ಎಸ್ ಎಸ್ ‘ಎ’ ಶಾಲೆಯ ವಿದ್ಯಾರ್ಥಿನಿ ಕುಮಾರಿ ಹರ್ಷಿತಾ ಭಜಂತ್ರಿ 2 ಕಿಮೀ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, 4—6ಕಿಮೀ ನಲ್ಲಿ ದ್ವಿತೀಯ ಸ್ಥಾನ ಹಾಗೂ ಶ್ರೀದೇವಿ ಹಿರೇಗೋಳ 500 ಮೀಟರ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಶಾಲೆಯ ಮತ್ತು ಸಂಸ್ಥೆಯ ಕೀರ್ತಿ ಹೆಚ್ಚಿಸಿದ್ದಾರೆ ….

Read More

ಕರ್ನಾಟಕ ಬಾಲವಿಕಾಸ ಅಕಾಡೆಮಿ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ಸಿಂದಗಿ ಡಿ. 16: ಬೆಳಗಾವಿಯ ಸುವರ್ಣ ಸೌಧದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಮಂಗಳವಾರ ಹಮ್ಮಿಕೊಂಡಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿಅಕಾಡೆಮಿ ನೀಡುವ 2022–23 ನೇ ಸಾಲಿನ ‘ಮಕ್ಕಳ ಚಂದಿರ’, ಪ್ರಶಸ್ತಿಯನ್ನು ಸಿಂದಗಿ ಪಟ್ಟಣದ ಮಕ್ಕಳ ಸಾಹಿತಿಗಳಾದ ಹ.ಮ. ಪೂಜರ, ಎಸ್.ಎಸ್. ಸಾತಿಹಳ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಪ್ರಶಸ್ತಿ ನೀಡಿ ಪುರಸ್ಕಾರ ಮಾಡಿದರು. ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹಾಗೂ ಇಲಾಖೆ ಅಧಿಕಾರಿಗಳು ಇದ್ದರು. ಮಕ್ಕಳ…

Read More

ಶಾಸಕ ಯತ್ನಾಳ ಜನ್ಮದಿನ: ಬಡ ವಿದ್ಯಾರ್ಥಿಗೆ ರೂ.50 ಸಾವಿರ ನೆರವು

ಸಪ್ತ ಸಾಗರ ವಾರ್ತೆ ವಿಜಯಪುರ, ಡಿ. 15:ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಜನ್ಮ ದಿನದ ಅಂಗವಾಗಿ ಶನಿವಾರ ನಗರದ ಆರಾಧ್ಯದೈವ ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬೆಂಗಳೂರಿನ ಆರ್.ವಿ.ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಎಂಜನಿಯರಿಂಗ್ ವಿದ್ಯಾರ್ಥಿಗೆ ರೂ. 50,000 ಆರ್ಥಿಕ ನೆರವು ನೀಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಯತ್ನಾಳ ಹುಟ್ಟು ಹಬ್ಬ ಆಚರಿಸಲಾಯಿತು. ಬೆಂಗಳೂರಿನ ಆರ್ ವಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ತಂದೆ ಇಲ್ಲದ ಬಡ ಯುವಕ ಗಿರೀಶ್ ಗೌಡರ ಎಂಬಾತನ ಕಾಲೇಜು…

Read More

ಕಲಿತ ಸರ್ಕಾರಿ ಶಾಲೆಗೆ ಅಪರ ಜಿಲ್ಲಾಧಿಕಾರಿ ₹ 50 ಸಾವಿರ ದೇಣಿಗೆ

ಸಪ್ತಸಾಗರ ವಾರ್ತೆ ಬಬಲೇಶ್ವರ, ಡಿ. 15: ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ತಾವು ಕಲಿತ ಬಬಲೇಶ್ವರ ತಾಲ್ಲೂಕಿನ ದೇವರಗೆಣ್ಣೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭಾನುವಾರ ₹ 50 ಸಾವಿರ ದೇಣಿಗೆ ಚೆಕ್ ನೀಡಿದ್ದಾರೆ.ಶಾಲೆಯ ಮುಖ್ಯಗುರುಗಳು ಹಾಗೂ ಎಸ್ಡಿಎಂಸಿ ಜಂಟಿ ಖಾತೆಗೆ ಸ್ಥಿರ ಠೇವಣಿಯಾಗಿ (ಎಫ್ ಡಿ) ಇಡಲು ಮುಖ್ಯಗುರುಗಳು ಹಾಗೂ ಶಾಲಾ ಎಸ್ಡಿಎಂಸಿ ಅಧ್ಯಕ್ಷರಿಗೆ ಚೆಕ್ ನೀಡಿದರು‌.ಶಾಲೆಯ ಜಂಟಿ ಖಾತೆಯಲ್ಲಿ ಇಟ್ಟ ಸ್ಥಿರ ಠೇವಣಿಯಿಂದ ಪ್ರತಿ ವರ್ಷ ಬರುವ ಬಡ್ಡಿ ಹಣವನ್ನು ಶಾಲೆಯ…

Read More

ಭಾರತ ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಮರು ಪರಾಮರ್ಶೆಗೆ ಮನವಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 15:ಕಳೆದ ಕೆಲವು ದಿನಗಳ ಹಿಂದೆ ಭಾರತ ಸರ್ವೋಚ್ಚ ನ್ಯಾಯಾಲಯವು ತಂದೆ ಪರಿಶಿಷ್ಟ ಜಾತಿ ಅಲ್ಲದಿದ್ದರೂ ತಾಯಿ ಪರಿಶಿಷ್ಟ ಜಾತಿ ಸೇರಿದ್ದರೆ ಶೈಕ್ಷಣಿಕ ಉದ್ದೇಶಕ್ಕಾಗಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಒದಗಿಸಬೇಕೆಂದು ಆದೇಶ ನೀಡಿದ್ದನ್ನು ಸುಪ್ರೀಂ ಕೋರ್ಟ್ ಮತ್ತೆ ಪರಾಮರ್ಶಿಸಬೇಕು ಎಂದು ಭೀಮ ಸರಕಾರ ಸಂಘಟನೆ ಮನವಿ ಸಲ್ಲಿಸಿದೆ.ಈ ತೀರ್ಪಿನಿಂದ ನಿಜ ಪರಿಶಿಷ್ಟ ಜಾತಿ ಜನರಿಗೆ ಅನ್ಯಾಯಾಗುತ್ತದೆ. ಜೊತೆಗೆ ಸರ್ವೋಚ್ಛ ನ್ಯಾಯಾಲಯದ ಆದೇಶ ದುರುಪಯೋಗ ಆಗುವ ಸಾಧ್ಯತೆ ಇದ್ದು, ಈ ನ್ಯಾಯಾಲಯದ ಆದೇಶವನ್ನು…

Read More

ಉತ್ತರ ಕರ್ನಾಟಕ ರೈಲ್ವೆ ಸಂಪರ್ಕ ಹಾಗೂ ಅಭಿವೃದ್ಧಿ ಕುರಿತು ಕೇಂದ್ರ ರೇಲ್ವೆ ಸಚಿವರ ಜೊತೆಗೆ ಚರ್ಚೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 15:ಉತ್ತರ ಕರ್ನಾಟಕ ಭಾಗದ ರೈಲ್ವೆ ಸಂಪರ್ಕ ಹಾಗೂ ಅಭಿವೃದ್ಧಿ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಜೊತೆಗೆ ರಾಜ್ಯದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದರಾದ ರಮೇಶ ಜಿಗಜಿಣಗಿ ಹಾಗೂ ಪಿ.ಸಿ. ಗದ್ದಿಗೌಡರ ಅವರು ಸೋಮವಾರ ಸಂಸತ್ ಭವನದಲ್ಲಿ ಭೇಟಿಯಾಗಿ ಚರ್ಚಿಸಿದರು.ಉತ್ತರ ಕರ್ನಾಟಕ ಭಾಗದಲ್ಲಿ ರೈಲ್ವೆ ಸಂಪರ್ಕ ಹಾಗೂ ಅಭಿವೃದ್ಧಿಯ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು.ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಈ ಕುರಿತು…

Read More

ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ: ಡಿ. 15 ರಿಂದ ಅಹೋರಾತ್ರಿ ಧರಣಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 14 : ಡಿ.15ರಿಂದ ಸರಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಕೈಗೊಳ್ಳಲು ಹೋರಾಟಗಾರರು ನಿರ್ಧರಿಸಿದ್ದಾರೆ.ವಿಜಯಪುರ ನಗರದ ಡಾ. ಬಿಆರ್ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲೆಗೆ ಸರ್ಕಾರಿ ವೇದಿಕೆಯ ಮಹಾವಿದ್ಯಾಲಯ ಸ್ಥಾಪನೆಗಾಗಿ ಆಗ್ರಹಿಸಿ ಸರ್ಕಾರದ ಉದ್ದೇಶಿತ ಖಾಸಗಿಕರಣವನ್ನು ವಿರೋಧಿಸಿ ನಡೆಯುತ್ತಿರುವ ಧರಣಿ ಭಾನುವಾರ 88ನೇ ದಿನ ಪೂರೈಸಿದ್ದು, ಸರ್ಕಾರ ಜಿಲ್ಲೆಯ ಹೋರಾಟಗಾರರು ಹಾಗೂ ಜನರ ಬೇಡಿಕೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಹೋರಾಟ ಸಮಿತಿ ಪ್ರಮುಖರು ಇಂದು…

Read More