ಭೀಮಾ, ಸೀನಾ ನದಿ ಪ್ರವಾಹ ನಿರ್ವಹಣೆಗೆ ಸಮಿತಿ ರಚನೆ ಅಗತ್ಯ: ಶಾಸಕ ಯಶವಂತರಾಯಗೌಡ

ಸಪ್ತಸಾಗರ ವಾರ್ತೆ ವಿಜಯಪುರ, ಅ. 6 :ಪ್ರತಿವರ್ಷ ಪ್ರವಾಹ ಬಂದಾಗಲೇ ಎಚ್ಚೆತ್ತುಕೊಳ್ಳುವುದಕ್ಕಿಂತ ಪ್ರಭಾವ ನಿರ್ವಹಣೆಗೆ ತುಂಗಭದ್ರಾ ಪ್ರವಾಹ ನಿರ್ವಹಣೆಯನ್ನು ಆಂಧ್ರಪ್ರದೇಶ ಹಾಗೂ ಕರ್ನಾಟಕ ಜಂಟಿಯಾಗಿ ನಿರ್ವಹಣೆ ಮಾಡುತ್ತದೆ. ಅದೇ ಮಾದರಿಯಲ್ಲಿ ಭೀಮಾ, ಸೀನಾ ನದಿ ವಿಚಾರದಲ್ಲೂ ಕರ್ನಾಟಕ ಹಾಗೂ ಮಹಾರಾಷ್ಟ್ರ ಜಂಟಿಯಾಗಿ ಪ್ರವಾಹ ನಿರ್ವಹಣೆ ಸಮಿತಿ ರಚಿಸುವುದು ತೀರಾ ಅಗತ್ಯ ಇದೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಅಭಿಪ್ರಾಯ ಪಟ್ಟರು.ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿ ವರ್ಷ ಪ್ರವಾಹ ವೇಳೆಯಲ್ಲಿ ಮಹಾರಾಷ್ಟ್ರ…

Read More

ಅಕ್ರಮವಾಗಿ ಗೃಹ ಬಳಕೆ ಸಿಲಿಂಡರ್ ಮಾರಾಟ : ಆಹಾರ ಇಲಾಖೆ ಅಧಿಕಾರಿಗಳ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 6: ವಿಜಯಪುರ ನಗರದ ಹುಡ್ಕೋ ಹಾಗೂ ರಾಘವೇಂದ್ರ ಕಾಲೋನಿ ಹತ್ತಿರದಲ್ಲಿ ಗೃಹ ಬಳಕೆ ಸಿಲಿಂಡರ್ ಗಳನ್ನು ಬಳಸಿ ಅಕ್ರಮವಾಗಿ ಆಟೋಗಳಿಗೆ ತುಂಬಿಸುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ನಾಲ್ಕು ಗೃಹ ಬಳಕೆ ಸಿಲಿಂಡರ್ ಹಾಗೂ ತೂಕ ಮಾಡುವ ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ.ದಾಳಿಯಲ್ಲಿ ಆಹಾರ ಇಲಾಖೆ ನಿರೀಕ್ಷಕ ವಿಜಯಕುಮಾರ ಗುಮಶೆಟ್ಟಿ, ಜಲನಗರ ಪೊಲೀಸ್ ಠಾಣೆ ಸಬ್ ಇನ್ಸಪೆಕ್ಟರ್ ಮಹೇಶ ಸಂಖ, ಪೋಲಿಸ ಸಿಬ್ಬಂದಿಗಳಾದ ವಿ.ಎಂ.ಪವಾರ, ಪಿ.ಆರ್.ರಾಠೋಡ, ಎಸ್.ವಾಯ್.ನಾಟಿಕಾರ, ಎಚ್.ಎನ್.ಪೂಜಾರಿ, ಎನ್.ಬಿ.ಚವ್ಹಾಣ,…

Read More

ಯುವನಿಧಿ ಅಭ್ಯರ್ಥಿಗಳು ಕೌಶಲ್ಯ ತರಬೇತಿಗೆ ನೋಂದಾಯಿಸಿಕೊಳ್ಳಲು ಮನವಿ

ಸಪ್ತಸಾಗರ ವಾರ್ತೆ ವಿಜಯಪುರ, ಅ. 6: ಯುವನಿಧಿ ಯೋಜನೆಯಡಿ ನೊಂದಾಯಿಸಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಹಾಗೂ ಪಡೆದಿರುವ ಅಭ್ಯರ್ಥಿಗಳು ಕಡ್ಡಾಯವಾಗಿ ತರಬೇತಿಯನ್ನು ಪಡೆಯಲು kaushalkar.com ಪೋರ್ಟಲ್‍ನಲ್ಲಿ ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳು ತಿಳಿಸಿದ್ದಾರೆ.ಯುವನಿಧಿ ಫಲಾನುಭವಿಗಳು ಕಡ್ಡಾಯವಾಗಿ ತರಬೇತಿ ಪಡೆಯಲು ನೋಂದಾಯಿಸಿಕೊಳ್ಳಬೇಕು. ಪೋರ್ಟಲ್‍ನಲ್ಲಿ ನೋಂದಾಯಿಸಿಕೊಳ್ಳುವುದರಿಂದ ಪ್ರಸ್ತುತ ತಾವು ಪಡೆಯುತ್ತಿರುವ ನಿರುದ್ಯೋಗ ಭತ್ಯೆ ಯಾವುದೇ ಕಾರಣಕ್ಕಾಗಿ ಸ್ಥಗಿತಗೊಳ್ಳವುದಿಲ್ಲ ಮತ್ತು ಈ ಕುರಿತು ಅಭ್ಯರ್ಥಿಗಳು ಆತಂಕ ಪಡುವ ಅವಶ್ಯಕತೆ ಇಲ್ಲ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳ ಕಚೇರಿ,…

Read More

ವಿಜಯಪುರದಲ್ಲಿ ಕವಿಗಳು ಏನು ಮಾಡಿದರು ಗೊತ್ತಾ?

ಸಪ್ತಸಾಗರ ವಾರ್ತೆ, ವಿಜಯಪುರ, ಅ. 5 : ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಭಾನುವಾರ ೧೮ನೇ ದಿನಕ್ಕೆ ಕಾಲಿಟ್ಟಿದೆ. ಕವಿಗಳು ಹೋರಾಟದ ವೇದಿಕೆಯಲ್ಲಿಯೇ ಕವಿಗೋಷ್ಠಿ ನಡೆಸಿ ಹೋರಾಟಕ್ಕೆ ವಿನೂತನ ರೀತಿಯಲ್ಲಿ ಬೆಂಬಲ ವ್ಯಕ್ತಪಡಿಸಿದರು.ಜಿಲ್ಲೆಯ ೨೦ಕ್ಕೂ ಹೆಚ್ಚು ಕವಿಗಳು ಕವಿತೆಗಳನ್ನು ವಾಚನ ಮಾಡುವ ಮೂಲಕ ಪಿಪಿಪಿ ಬೇಡ. ಸರ್ಕಾರಿ ವೈದ್ಯಕೀಯ ಕಾಲೇಜು ಬೇಕು ಎಂದು ಅರ್ಥವತ್ತಾದ ಕವಿತೆಗಳನ್ನು ಓದುವ ಮೂಲಕ ಸರ್ಕಾರದ ಗಮನ ಸೆಳೆದರು.ಕವಿತೆ ಓದುವ ಮೂಲಕ…

Read More

ಹಾಪ್ ಕಾಮ್ಸ್ ಜಿಲ್ಲಾ ಅಧ್ಯಕ್ಷರಾಗಿ ಸಿದ್ದಪ್ಪ ಕಬಾಡಗಿ, ಉಪಾಧ್ಯಕ್ಷರಾಗಿ ನಂದಕಿಶೋರ ರಾಠೋಡ ಅವಿರೋಧ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಅ.5.ಜಿಲ್ಲಾ ತೋಟಗಾರಿಕೆ ಸಂಸ್ಕರಣ ಸಂಘದ ಆಡಳಿತ ಮಂಡಳಿ ನೂತನ ಅಧ್ಯಕ್ಷರಾಗಿ ಸಿದ್ದಪ್ಪ ಕಬಾಡಗಿ ಹಾಗೂ ಉಪಾಧ್ಯಕ್ಷರಾಗಿ ನಂದಕಿಶೋರ ರಾಠೋಡ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಸಂಘದ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಮುಂದಿನ ಐದು ವರ್ಷದವರೆಗೆ ಅವರು ಅಧಿಕಾರಾವಧಿ ಹೊಂದಿದ್ದು, ಅಲ್ಲದೆ, ಆಡಳಿತ ಮಂಡಳಿಯ ಸದಸ್ಯರಾಗಿ ಗುರುಪಾದಪ್ಪಗೌಡ ಪಾಟೀಲ, ಎಸ್.ಪಿ. ಬಿರಾದಾರ, ಸಂಜೀವ ಮಠ, ವಿರುಪಾಕ್ಷಿ ಕಕಮರಿ, ಹಿದಾಯಿತಲ್ಲಾ ಖಾಜಿ, ಎಸ್‌ .ವಿ. ಪಾಟೀಲ, ಸಂಜಯ ನಾಯಕ, ಮಡಿವಾಳಪ್ಪ ವಾಲಿಕಾರ, ಗುರುಬಾಯಿ…

Read More

ಕೇಂದ್ರದ ಜಿಎಸ್‌ಟಿ ನೀತಿ ಮೂಲಕ ಜನರ ಲೂಟಿ: ಮಂಜುನಾಥ ಗೌಡ ಟೀಕೆ

ಸಪ್ತಸಾಗರ ವಾರ್ತೆ, ಮುದ್ದೇಬಿಹಾಳ, ಅ.5 :ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಗಿನ್ನಿಸ್ ದಾಖಲೆ ನಿರ್ಮಿಸಿದೆ. ಆದರೆ, ಕೇಂದ್ರದ ಬಿಜೆಪಿ ಸರ್ಕಾರ ಜಿಎಸ್‌ಟಿ, ಡಿಜಿಟಲ್ ಇಂಡಿಯಾ ಹೆಸರಿನಲ್ಲಿ ಜನರನ್ನು ಲೂಟಿ ಮಾಡುತ್ತಿದೆ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಮಂಜುನಾಥ ಗೌಡ ಗಂಭೀರ ಆರೋಪ ಮಾಡಿದರು.ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಯುವ ಕಾಂಗ್ರೆಸ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಸಾಧನೆಗಳನ್ನು ಮತ್ತು ಕೇಂದ್ರ…

Read More

ಸಚಿವ ಎಂ.ಬಿ. ಪಾಟೀಲ ಜನ್ಮದಿನ ನಿಮಿತ್ತ ಬೃಹತ್ ಉಚಿತ ಆರೋಗ್ಯ ಶಿಬಿರ

ಸಪ್ತಸಾಗರ ವಾರ್ತೆ ವಿಜಯಪುರ, ಅ. 4: ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಜನ್ಮದಿನದ ಅಂಗವಾಗಿ ಅಕ್ಟೋಬರ್ 7ರಂದು ಮಂಗಳವಾರ ಜಿಲ್ಲೆಯ ನಾಲ್ಕು ಕಡೆಗಳಲ್ಲಿ‌ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಬೃಹತ್ ಶಿಬಿರಗಳನ್ನು ಆಯೋಜಿಸಲಾಗಿದೆ.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನೆ ಕೇಂದ್ರದ ವತಿಯಿಂದ ತಿಕೋಟಾ, ಬಬಲೇಶ್ವರ, ದೇವರ ಗೆಣ್ಣೂರ ಮತ್ತು ಬಸವನ‌…

Read More

ಜಿಲ್ಲೆಯಲ್ಲಿ ನ.1 ರಿಂದ ಕಬ್ಬು ನುರಿಸುವ ಕಾರ್ಯ ಆರಂಭಿಸಿ: ಜಿಲ್ಲಾಧಿಕಾರಿ ಡಾ. ಆನಂದ ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 4: ಜಿಲ್ಲೆಯಲ್ಲಿ ಪಕ್ವವಾಗಿರುವ ಕಬ್ಬನ್ನು ಆದ್ಯತೆಯ ಮೇಲೆ ಕಟಾವು ಮಾಡಿ ನವೆಂಬರ್ 1 ರಿಂದ ಕಬ್ಬು ನುರಿಸುವ ಕಾರ್ಯ ಆರಂಭಿಸಿ ಕಬ್ಬು ಪೂರೈಸಿದ ರೈತರಿಗೆ 14 ದಿನಗಳೊಳಗಾಗಿ ಕಬ್ಬಿನ ಹಣ ಪಾವತಿಸಲು ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೂಚನೆ ನೀಡಿದ್ದಾರೆ.ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಭೆ ನಡೆಸಿದ ಅವರು, ಆಯುಕ್ತರು ಕಬ್ಬು ಅಭಿವೃದ್ದಿ ಹಾಗೂ ಸಕ್ಕರೆ ನಿರ್ದೇಶನಾಲಯ ಬೆಂಗಳೂರು ಇವರು ಪ್ರಸಕ್ತ…

Read More

ಬಿಜೆಪಿ ನಿಯೋಗದಿಂದ ಬೆಳೆ ಹಾನಿ ಸಮೀಕ್ಷೆ: ರೈತರ ಅಹವಾಲು ಕೇಳಿದ ಬಿಜೆಪಿ ಮುಖಂಡರು

ಸಪ್ತಸಾಗರ ವಾರ್ತೆ ವಿಜಯಪುರ, ಅ. 4 : ಧಾರಾಕಾರ ಮಳೆ, ಭೀಮೆ ಹಾಗೂ ಡೋಣಿ ನದಿ ಪ್ರವಾಹದಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಹಾಗೂ ಜಮೀನುಗಳಿಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ, ವಿಧಾನ ಪರಿಷತ್ ಪ್ರತಿಪಕ್ಷ ಮುಖ್ಯಸಚೇತಕ ಎನ್. ರವಿಕುಮಾರ್, ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಸೇರಿದಂತೆ ಅನೇಕ ಹಿರಿಯ ನಾಯಕರ ತಂಡ ಭೇಟಿ ನೀಡಿ ಹಾನಿ ಸಮೀಕ್ಷೆ ನಡೆಸಿ ರೈತರ ಅಹವಾಲು ಆಲಿಸಿತು.ಅಂಜುಟಗಿ, ಅಗರಖೇಡ, ಮಿರಗಿ, ದೇವಣಗಾಂವ ಸೇರಿದಂತೆ ಹಲವಾರು…

Read More

ಕಾಂಗ್ರೆಸ್ ಸರ್ಕಾರದಲ್ಲಿ ನೆರೆ ಪರಿಹಾರ ಬರೀ ಘೋಷಣೆಯಷ್ಟೇ: ಆರ್. ಅಶೋಕ ವಾಗ್ದಾಳಿ

ಸಪ್ತಸಾಗರ ವಾರ್ತೆ ವಿಜಯಪುರ, ಅ. 4:ಸಂತ್ರಸ್ತರಿಗೆ ಸರ್ಕಾರ ಪರಿಹಾರ ನೀಡಿಲ್ಲ.ಅಧಿಕಾರಿಗಳು ಪ್ರವಾಹ ಪೀಡಿತ ಪ್ರದೇಶದಲ್ಲಿ ಹಾನಿಯ ಸರ್ವೇ ಮಾಡಿಲ್ಲ.ಸರ್ಕಾರ ಪರಿಹಾರ ಘೋಷಣೆ ಮಾಡಿದೆಯಷ್ಟೇ. ಆದರೆ‌ ಪರಿಹಾರ ನೀಡಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ಶನಿವಾರ ವಿಜಯಪುರ ಜಿಲ್ಲೆಯ ಭೀಮಾನದಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಬಿಜೆಪಿ ತಂಡ ಭೇಟಿ‌ ನೀಡಿ ಹಾನಿಯ ಕುರಿತು ಖುದ್ದು ಪರಿಶೀಲನೆ ನಡೆಸಿದರು. ನಂತರ ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.ಉತ್ತರ…

Read More