ಬಿಜೆಪಿ ಕಚೇರಿಯಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ

ಸಪ್ತ ಸಾಗರ ವಾರ್ತೆ ವಿಜಯಪುರ, ಅ. 2: ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲೆಯ ಪಕ್ಷದ ಕಾರ್ಯಾಲಯದಲ್ಲಿ ಜಗದ್ಗುರು ಮಧ್ವಾಚಾರ್ಯರ, ಮಹಾತ್ಮಾ ಗಾಂಧಿಜಿ ಹಾಗೂ ಲಾಲ ಬಹದ್ದೂರ ಶಾಸ್ತ್ರಿರವರ ಜಯಂತಿಯನ್ನು ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು.ಈ ಸಂದರ್ಭದಲ್ಲಿ ಬೆಳಗಾವಿ ವಿಭಾಗ ಪ್ರಭಾರಿ ಚಂದ್ರಶೇಖರ ಕವಟಗಿ ಆವರು ಮಾತನಾಡಿ, ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಜೀವನ, ಎದುರಾದ ಸವಾಲುಗಳು, ಅವರ ವ್ಯಕ್ತಿತ್ವದ ಬಗ್ಗೆ ವಿವರವಾಗಿ ಮಾತನಾಡಿದರು. ಲಾಲ್ ಬಹದ್ದೂರ್ ಶಾಸ್ತ್ರೀಜಿಯವರು ನಮಗೆ ಕಲಿಸಿಕೊಟ್ಟ ಪಾಠಗಳು ಹಲವು. ಸತ್ಯ,…

Read More

ಬಿ.ಎಲ್.ಡಿ.ಇ ಡೀಮ್ಡ್ ವಿವಿಯಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 2:‌ ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಇಂದು‌ ಗುರುವಾರ ಮಹಾತ್ಮಾ ಗಾಂಧಿಯವರ 156ನೇ ಮತ್ತು ಲಾಲ ಬಹಾದ್ದೂರ ಶಾಸ್ತ್ರಿಯವರ 121ನೇ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಡೀಮ್ಡ್ ವಿವಿ ಹಂಗಾಮಿ ಕುಲಪತಿ, ಡಾ. ಅರುಣ ಚಂ.‌ಇನಾಮದಾರ ಅವರು ಗಾಂಧಿ ಮತ್ತು ಶಾಸ್ತ್ರಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.ಬಳಿಕ ಮಾತನಾಡಿದ ಅವರು, ಗಾಂಧಿಯವರು ಸತ್ಯ ಮತ್ತು ಅಹಿಂಸೆ ತತ್ವಗಳ ಮೂಲಕ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ. ಅವರ ಸತ್ಯ ಮತ್ತು ಅಹಿಂಸೆ ತತ್ವಗಳನ್ನು ಜೀವನದಲ್ಲಿ…

Read More

ವೈದ್ಯಕೀಯ ಮಹಾವಿದ್ಯಾಲಯ ಕೊಡಿ ಕವಿಗೋಷ್ಠಿಗೆ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. ಅ. 1: ಜಿಲ್ಲೆಗೆ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿ, ನಾಡಿನ ಕವಿಗಳಿಂದ ನಮಗೆ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಕೊಡಿ ಎಂಬ ವಿಷಯದ ಕುರಿತು(ಅಕ್ಟೋಬರ್-5)ರಂದು ಮುಂಜಾನೆ 10ಗಂಟೆಗೆ ಅಂಬೇಡ್ಕರ್ ವೃತ್ತದಲ್ಲಿಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ.ಕವಿಗೋಷ್ಠಿಯಲ್ಲಿ ಭಾಗವಹಿಸುವ ಕವಿಗಳು ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ಅಥವಾ ಜಿಲ್ಲೆಯ ಅಭಿವೃದ್ಧಿ ಮತ್ತು ಪ್ರಗತಿಗೆ ಸಂಬಂಧಪಟ್ಟ ವಿಷಯದ ಕುರಿತು ಕವನ ವಾಚಿಸಬಹುದು.ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ, ವಿಜಯಪುರ ಪರವಾಗಿ ಹೆಸರು ನೋಂದಾಯಿಸಿಕೊಳ್ಳಲು ಮೊ. 72042 79187 ,96320…

Read More

ಟೆಲೆಸ್ಕೋಪ ತರಬೇತಿಗೆ ಮುಳವಾಡ ಶಾಲೆಯ ವಿದ್ಯಾರ್ಥಿ ಕೃಷ್ಣ ಕುಂಬಾರ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 1: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ಬೆಂಗಳೂರ ವತಿಯಿಂದ ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಎಂಟು ದಿನಗಳ ಕಾಲ “ನಾನು ವಿಜ್ಞಾನಿ 2025” ಶೀರ್ಷಿಕೆಯಡಿಯಲ್ಲಿ ಶಾಲೆಗೊಂದು ಟೆಲೆಸ್ಕೋಪ ತಯಾರಿಸುವ ತರಬೇತಿಯನ್ನು ನುರಿತ ತಜ್ಞರಿಂದ ನೀಡಲಾಗುತ್ತದೆ.ಇದೊಂದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗುವ ಸದಾವಕಾಶ ಒದಗಿ ಬಂದಿದೆ. ಈ ತರಬೇತಿಯನ್ನು ದೊಡ್ಡಬಳ್ಳಾಪುರ ಬಳಿಯಿರುವ ಬ್ಯಾಸೆಂಟ್ ಉದ್ಯಾನವನ ಸ್ಕೌಟ್ ಕ್ಯಾಂಪಿನಲ್ಲಿ ನೀಡಲಾಗುವುದು.ವಿಜಯಪುರ ಜಿಲ್ಲೆಯ ಮುಳವಾಡ ಪ್ರೌಢಶಾಲೆಯ ಹತ್ತನೇ ವರ್ಗದ ವಿದ್ಯಾರ್ಥಿ ಕುಮಾರ ಕೃಷ್ಣ ಬಸಪ್ಪ…

Read More

ನವರಾತ್ರಿ ಅಂಗವಾಗಿ ವಿಶೇಷ ಕಲಾಕೃತಿ ರಚನೆ: ಚಿತ್ರ ಕಲಾವಿದ ಬಸವರಾಜ ಹಡಪದ ಕೈಚಳಕದಲ್ಲಿ ಅರಳಿದ ಕಲೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 1: ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಯರಗಲ್ಲ ಗ್ರಾಮದ ಪ್ರತಿಭಾವಂತ ಚಿತ್ರಕಲಾವಿದ ಬಸವರಾಜ ಹಡಪದ ಅವರು ನವರಾತ್ರಿಯ ಅಂಗವಾಗಿ ವಿಶೇಷ ಕಲಾಕೃತಿಯನ್ನು ರಚಿಸಿದ್ದಾರೆ.ಮಿಶ್ರ ಮಾಧ್ಯಮ ಶೈಲಿಯಲ್ಲಿ ಮೂಡಿಬಂದಿರುವ ಶ್ರೀ ದೇವಿಯ ಭಾವಚಿತ್ರವು ಕಲಾಭಿಮಾನಿಗಳ ಮನಸೂರೆಗೊಂಡಿದೆ.ನವರಾತ್ರಿಯ ಸಾಂಸ್ಕೃತಿಕ ವೈಭವವನ್ನು ತೋರಿಸುವ ಉದ್ದೇಶದಿಂದ ಕಲಾವಿದ ಬಸವರಾಜ ಅವರು ಭಕ್ತಿ, ಶಕ್ತಿ ಹಾಗೂ ನೈಜತೆಯ ಸಂಯೋಜನೆಯಲ್ಲಿ ಈ ಚಿತ್ರವನ್ನು ರಚಿಸಿದ್ದು, ಬಣ್ಣಗಳ ಸೊಗಸು ಮತ್ತು ಅಲಂಕಾರಿಕ ಕುಂಚಸ್ಪರ್ಶವು ಕಲಾಕೃತಿಗೆ ವಿಶೇಷತೆ ನೀಡಿದೆ.ದೇವಿಯ ಕರುಣಾಮಯ ಮುಖಭಾವ, ಆಯುಧಗಳು ಹಾಗೂ…

Read More

ಅ.6ರಂದು ಫೋನ್ ಇನ್ ಕಾರ್ಯಕ್ರಮ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 30: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರಯಾಣಿಕರ ಅಹವಾಲು- ಕುಂದುಕೊರತೆಗಳನ್ನು ಆಲಿಸಲು ಅಕ್ಟೋಬರ್ 6ರ ಮಧ್ಯಾಹ್ನ 3-30ರಿಂದ 4-30ರವರೆಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಮೊ : 6366423887ಗೆ ಸಾರ್ವಜನಿಕರು ಕರೆ ಮಾಡಿ ತಮ್ಮ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಫೋನ್-ಇನ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಯೋಗ ಶಿಕ್ಷಕ ಪ್ರಕಾಶ ಚವ್ಹಾಣ ವಿಶ್ವ ದಾಖಲೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 30: ಯೋಗ ಶಿಕ್ಷಕ ಪ್ರಕಾಶ ಚವ್ಹಾಣ ಅವರು ರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ವಿಶ್ವ ದಾಖಲೆ ಬರೆದಿದ್ದಾರೆ.ವಿಜಯಪುರ ಹೊರ ವಲಯದ ಬೇಗಂ ತಲಾಬ್ ತಾಂಡಾ ನಿವಾಸಿ ಹಾಗೂ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಯೋಗ ಶಿಕ್ಷಕ ಪ್ರಕಾಶ ಚವ್ಹಾಣ ಈಚೆಗೆ ಫಿಟ್ ಇಂಡಿಯಾ ಏರೋಬಿಕ್ಸ್ ಇನ್ಸ್ಟಿಟ್ಯೂಟ್ ಅನ್ ಲೈನ್ ಮೂಲಕ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ೫ನೇ ರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಮೂರು ನಿಮಿಷ ವೃಕ್ಷಾಸನ ಮಾಡುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ.ವಿಶ್ವ ದಾಖಲೆಗಾಗಿ ಕೇವಲ…

Read More

ಇಬ್ರಾಹಿಂಪುರದಲ್ಲಿ ಸಂಭ್ರಮದ ನಾಡದೇವಿ ಉತ್ಸವ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.30: ನಗರದ ಮನಗೂಳಿ ರಸ್ತೆಯ ಇಬ್ರಾಹಿಂಪುರದಲ್ಲಿ ನಾಡದೇವಿ ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ಮಲ್ಲಿಕಾರ್ಜುನ ಆದಿಶಕ್ತಿ ಯುವಕ ಮಂಡಳಿ ವತಿಯಿಂದ ಸೋಮವಾರ ರಾತ್ರಿ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಲಾ ಸಿಂಚನ ಮೆಲೋಡಿಸ್ ತಂಡದ ಕಲಾವಿದರಾದ ಗೋಪಾಲ ಹೂಗಾರ, ಗೋಪಾಲ ಇಂಚಗೇರಿ, ಮಲ್ಲು ಮುದ್ದೇಬಿಹಾಳ, ಮ್ಯೂಜಿಕ್ ಮೈಲಾರಿ, ಲಕ್ಷ್ಮೀ ಬಿಜಾಪುರ, ಶ್ರೀಶೈಲ ಜುಮನಾಳ, ಗಾಯಕ ಕೃಷ್ಣಾ ಅವರು ಪ್ರಸಿದ್ಧ ಜಾನಪದ ಹಾಗೂ ದೇಶಭಕ್ತಿಯ ಹಾಡುಗಳನ್ನು ಹಾಡಿ, ಹಾಸ್ಯ ಚಟಾಕಿಗಳನ್ನು ಹಾರಿಸಿ ಜನಮನ ರಂಜಿಸಿದರು.ಡಾನ್ಸರ್ ಪೂಜಾ ಡಿಕೆಡಿ…

Read More

ಸರ್ಕಾರಿ ಉದ್ಯೋಗಗಳನ್ನು ತಕ್ಷಣ ಭರ್ತಿ ಮಾಡಿಬೇಕೆಂದು ಸರ್ಕಾರದ ವಿರುದ್ಧ ಡಿವಿಪಿಯಿಂದ ಯುವ ಜನಾಕ್ರೋಶ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 30:ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಉದ್ಯೋಗಗಳನ್ನು ಕೂಡಲೇ ಭರ್ತಿ ಮಾಡಬೇಕು, ಉದ್ಯೋಗದ ವಯೋಮಿತಿಯನ್ನು ಹೆಚ್ಚಿಸಬೇಕೆಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದ ನೇತೃತ್ವದಲ್ಲಿ ಮಂಗಳವಾರ ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ಡಿ.ವಿ.ಪಿ ಸಂಘಟನೆಯ ರಾಜ್ಯಧ್ಯಕ್ಷ ಶ್ರೀನಾಥ ಪೂಜಾರಿ ಅವರು ಮಾತನಾಡಿ, ನಾಡಿನಾದ್ಯಂತ ವಿದ್ಯಾರ್ಥಿ ಯುವಜನರ ನಿರುದ್ಯೋಗದ ಸಮಸ್ಯೆ ತೀವ್ರವಾಗಿದೆ. ಹಿಂದಿನ ಬಿಜೆಪಿ ಸರ್ಕಾರ ಆಗಿರಬಹುದು ಇವತ್ತಿನ ಕಾಂಗ್ರೆಸ್ ಸರ್ಕಾರ ಆಗಿರಬಹುದು. ನಾಲ್ಕು ವರ್ಷದಿಂದ ಯಾವುದೇ ಸರ್ಕಾರಿ ಹುದ್ದೆಗಳನ್ನು ತುಂಬದೇ ಸತಾಯಿಸುತ್ತಿರುವುದು…

Read More

ಬೆಳಗಾವಿ ಎಪಿಎಂಸಿಗೆ ತರಕಾರಿ ಮಾರುಕಟ್ಟೆ ಸ್ಥಳಾಂತರ- ಸಚಿವ ಶಿವಾನಂದ ಪಾಟೀಲರಿಗೆ ರೈತರಿಂದ ಸನ್ಮಾನ

ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 30 :ಬೆಳಗಾವಿ ನಗರದಲ್ಲಿ ಖಾಸಗಿ ಹಿಡಿತದಲ್ಲಿದ್ದ ತರಕಾರಿ ಮಾರುಕಟ್ಟೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆಗೆ ಸ್ಥಳಾಂತರಿಸಲು ಕ್ರಮ ಕೈಗೊಂಡ ಕಾರಣ ರೈತರು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರನ್ನು ಸನ್ಮಾನಿಸಿದರು.ಮಂಗಳವಾರ ನಗರದಲ್ಲಿರುವ ಸಚಿವರ ಗೃಹ ಕಛೇರಿಗೆ ಆಗಮಿಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ (ಚುನ್ನಪ್ಪ ಪೂಜಾರಿ ಬಣ) ಕೊಲ್ಹಾರ ತಾಲೂಕ ಅಧ್ಯಕ್ಷ ಸೋಮು ಬಿರಾದಾರ ನೇತೃತ್ವದಲ್ಲಿ ರೈತರು ಸಚಿವ ಶಿವಾನಂದ ಪಾಟೀಲ ಅವರನ್ನು ಸನ್ಮಾನಿಸಿ, ಸಿಹಿ…

Read More