ದೇಶೀಯ ಎಲ್‌ಪಿಜಿ ಕಾಳಸಂತೆಗೆ ಕಡಿವಾಣ: ಅಕ್ರಮ ಬಳಕೆ ತನಿಖೆಗೆ ಕೇಂದ್ರದ ಸೂಚನೆ; ಪೆಟ್ರೋಲಿಯಂ ಸಚಿವಾಲಯಕ್ಕೆ ದೂರು ರವಾನೆ

ಸಪ್ತಸಾಗರ ವಾರ್ತೆ,ನವದೆಹಲಿ, ಆ.8: ದೇಶೀಯ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಹಾಗೂ ವಾಹನಗಳಿಗೆ ಅಕ್ರಮವಾಗಿ ಬಳಸುತ್ತಿರುವುದು, ಕಾಳಸಂತೆ ನಡೆಸುತ್ತಿರುವುದು ಮತ್ತು ಇದರಿಂದ ಸಾರ್ವಜನಿಕ ಸುರಕ್ಷತೆಗೆ ಅಪಾಯ ಉಂಟಾಗುತ್ತಿರುವ ಆರೋಪಗಳ ಕುರಿತು ಕೇಂದ್ರ ಸರ್ಕಾರ ಗಂಭೀರ ಕ್ರಮಕ್ಕೆ ಮುಂದಾಗಿದೆ.ಈ ಸಂಬಂಧ ಗ್ರಾಹಕ ದಕ್ಷತಾ ಕಲ್ಯಾಣ್ ಫೌಂಡೇಶನ್ ಸಲ್ಲಿಸಿರುವ ದೂರು ಹಾಗೂ ಪುರಾವೆಗಳನ್ನು ಪರಿಶೀಲನೆಗಾಗಿ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯಕ್ಕೆ ರವಾನಿಸಿದೆ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ,…

Read More

ವಿಜಯಪುರದಲ್ಲಿ ಅಕ್ರಮ ಎಲ್‌ಪಿಜಿ ಗ್ಯಾಸ್ ಪತ್ತೆ: 23 ಸಿಲಿಂಡರ್‌ಗಳ ವಶ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 24:ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿಯಾಗಿ ದಾಳಿ ನಡೆಸಿ, 10 ವಾಣಿಜ್ಯ ಎಲ್ ಪಿಜಿ ಹಾಗೂ 13 ಗೃಹ ಬಳಕೆ ಸಿಲಿಂಡರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.ನಗರದ ರಹಿಂನಗರ ಪ್ರದೇಶದಲ್ಲಿರುವ ರಾಜೇಶ್ವರಿ ಮಲ್ಲಪ್ಪ ಬರಟಗಿ ಅವರ ಖಾಲಿ ಜಾಗೆಯಲ್ಲಿನ ಶೆಡ್‌ನಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳಿಂದ ವಾಣಿಜ್ಯ ಸಿಲಿಂಡರ್‌ಗಳಿಗೆ ಅಕ್ರಮವಾಗಿ ಗ್ಯಾಸ್ ತುಂಬಿಸಿ ಹೋಟೆಲ್‌ಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ದಾಳಿಯ ವೇಳೆ 10…

Read More

ಟಿಪ್ಪರ್ – ಬಸ್ ಮಧ್ಯೆ ಭೀಕರ ರಸ್ತೆ ಅಪಘಾತ: ಮಹಿಳೆ ಸೇರಿ ಮೂವರ ಸಾವು

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 16:ಟಿಪ್ಪರ್ ಹಾಗೂ ಸರ್ಕಾರಿ ಬಸ್ ಮಧ್ಯೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಮೂವರು ಮೃತಪಟ್ಟು ಇತರ ಹತ್ತು ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ಮಂಗಳವಾರ ನಡೆದಿದೆ.ಟಿಪ್ಪರ್ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಗೊತ್ತಾಗಿದೆ.ಟಿಪ್ಪರ್ ನಲ್ಲಿದ್ದ ಚಾಲಕ ಹಾಗೂ ಆತನ ಪತ್ನಿ ಮತ್ತು ಸರ್ಕಾರಿ ಬಸ್ ಚಾಲಕ ಸೇರಿ ಮೂವರು ಮೃತಪಟ್ಟಿದ್ದಾರೆ.ಟಿಪ್ಪರ್ ಚಾಲಕ ಅಶೋಕ ಉಟಗಿ ಹಾಗೂ ಪತ್ನಿ ರಾಧಾಬಾಯಿ…

Read More

ಸಚಿವ ಎಂಬಿಪಿ ಸಾಧನೆಯನ್ನು ಪ್ರತ್ಯಕ್ಷವಾಗಿ ದರ್ಶನ ಮಾಡಿಸುತ್ತೇವೆ-ಗಣಿಹಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 16 :ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಸಚಿವ ಡಾ.ಎಂ.ಬಿ. ಪಾಟೀಲರಿಗೆ ನೀಡಿರುವ ಪಂಥಾಹ್ವಾನವನ್ನು ಸ್ವೀಕರಿಸಿದ್ದು, ನಾವೇ ದಾಖಲೆ ಸಮೇತ, ಆಧಾರ ಸಹಿತವಾಗಿ ಸಚಿವ ಡಾ.ಎಂ.ಬಿ. ಪಾಟೀಲರು ನೀರಾವರಿಗೆ ನೀಡಿದ ಕೊಡುಗೆಯನ್ನು ವಿವರಿಸುತ್ತೇವೆ, ಬಿಜೆಪಿ ನಾಯಕರೇ ವೇದಿಕೆ ಸಿದ್ದಪಡಿಸಲಿ, ಕೇವಲ‌ ಕಾಗದ ಅಷ್ಟೇ ಅಲ್ಲ ನೀರಾವರಿ ಆಗಿರುವ ಸ್ಥಳಕ್ಕೆ ಕರೆದುಕೊಂಡು ಹೋಗಿ ಅವರನ್ನು ತೋರಿಸುತ್ತೇವೆ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ. ಪಾಟೀಲ ಗಣಿಹಾರ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆರೆ ತುಂಬುವ ಯೋಜನೆ ಸಚಿವ ಡಾ.ಎಂ.ಬಿ. ಪಾಟೀಲರ…

Read More

ಮೇಲ್ಚಾವಣಿ ಕುಸಿತ ಪ್ರಕರಣ: ಬದುಕುಳಿದ ಎರಡು ಜೀವ- ಸಚಿವ ಎಂ. ಬಿ. ಪಾಟೀಲ್ ಭೇಟಿ ತಲಾ 5 ಲಕ್ಷ ಪರಿಹಾರ ಘೋಷಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 15: ಆಲಮೇಲ‌ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಸಾವಿಗೀಡಾದವರ ನಾಲ್ಕು ಜನರು ಸಾವಿಗೀಡಾದ ಘಟನಾ ಸ್ಥಳಕ್ಕೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಅವರು ಇಂದು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಡಾ. ಆನಂದ ಕೆ., ಎಸ್ಪಿ ಲಕ್ಷ್ಮಣ ನಿಂಬರಗಿ ಹಾಗೂ ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಸಚಿವರಿಗೆ ಘಟನೆಯ ಬಗ್ಗೆ…

Read More

ಮೋರಟಗಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ:ಮನೆ ಮೇಲ್ಚಾವಣಿ ಕುಸಿದು ನಾಲ್ವರು ಜೀವಂತ ಸಮಾಧಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 15:ಭಾರೀ ಗಾಳಿ ಸಹಿತ‌ ಮಳೆಗೆ ಮನೆಯ ಮೇಲ್ಚಾವಣೆ ಕುಸಿದು ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿಯಾಗಿರುವ ದುರಂತ ಜಿಲ್ಲೆಯ ಆಲಮೇಲ ತಾಲೂಕಿನ ಮೋರಟಗಿಯಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.ಈ ದುರಂತದಲ್ಲಿ ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.ಮೋರಟಗಿ ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13), ಕೀರ್ತಿ ಬಡಿಗೇರ (9) ಮೃತಪಟ್ಟ ನತದೃಷ್ಟರು.ತಮ್ಮ ಮನೆಯನ್ನು ದುರಸ್ತಿ ಮಾಡುವ ಕಾರಣ ಹಳೆಯ ಮನೆಯಲ್ಲಿ ಈ ಕುಟುಂಬ ಬಾಡಿಗೆಯಿಂದ ವಾಸವಾಗಿತ್ತು.ನಿನ್ನೆ…

Read More

ಸಿಲಿಂಡರ್ ಸ್ಪೋಟ: ಇಬ್ಬರಿಗೆ ಗಾಯ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 14:ನಗರದ ಜ್ಯುವೆಲರಿ ಶಾಪ್ ನಲ್ಲಿ ಗ್ಯಾಸ್ ಸಿಲೆಂಡರ್ ಬ್ಲಾಸ್ಟ್ ಆಗಿ ಇಬ್ಬರು ಗಾಯಗೊಂಡಿರುವ ಘಟನೆಸರಾಫ ಬಜಾರ್ ನಲ್ಲಿ ನಡೆದಿದೆ.ಬಂಗಾಲಿ ಮೂಲದ ಇಬ್ಬರು ಅಕ್ಕಸಾಲಿಗರಾದ ಬೀಜು (38), ನಾನಾ ಹಕ್ಕಿಂ (40) ಗಾಯಗೊಂಡಿದ್ದಾರೆ.ಬೆಳಿಗ್ಗೆ ಚಿನ್ನದ ಕುಲುಮೆ ಕೆಲಸ ಮಾಡುವಾಗ ಬ್ಲಾಸ್ಟ್ ಆಗಿದೆ. ಈ ವೇಳೆಇಬ್ಬರು ಅಕ್ಕಸಾಲಿಗರಿಗೆ ಸುಟ್ಟ ಗಾಯಗಳಾಗಿವೆ. ಆಟೋ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.ಗ್ಯಾಸ್ ಸೋರಿಕೆ ಸಿಲಿಂಡರ್ ಸ್ಫೋಟಕ್ಕೆ ಕಾರಣ ಇರಬಹುದು ಎಂದು…

Read More

ನನ್ನ ಹಾಗೂ ಜಮೀರ್ ಮಧ್ಯೆ ಯಾವ ಗಲಾಟೆ ನಡೆದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಸಪ್ತಸಾಗರ ವಾರ್ತೆ ನವದೆಹಲಿ, ಏ.17: “ನನ್ನ ಹಾಗೂ ಜಮೀರ್ ಮಧ್ಯೆ ಯಾವ ಗಲಾಟೆ ನಡೆದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದರು.ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.ಸಚಿವ ಜಮೀರ್ ಅಹ್ಮದ್ ಅವರು ರಾಜೀನಾಮೆ ನೀಡುತ್ತಾರೆ ಎಂಬ ವದಂತಿ ಹರಿದಾಡುತ್ತಿದೆ, ಸಚಿವ ಸಂಪುಟ ಸಭೆಯಲ್ಲಿ ನಿಮ್ಮ ಮಧ್ಯೆ ಗಲಾಟೆ ನಡೆದಿದೆಯೇ ಎಂದು ಕೇಳಿದಾಗ, “ಈ ವಿಚಾರವಾಗಿ ಪತ್ರಿಕೆಗಳಲ್ಲಿ ಬರೆಯಲಾಗಿದೆ. ಅದು ಸುಳ್ಳು. ಪಾಪ, ಜಮೀರ್ ನನ್ನ ಜತೆ ಮಾತನಾಡಿಲ್ಲ,…

Read More

ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಸಪ್ತಸಾಗರ ವಾರ್ತೆ,ಬೆಂಗಳೂರು, ಏ. 16:ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.ಇಂದು ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆ ಜರುಗಿತು.ಈ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ…

Read More

ಸಾತಿಹಾಳ ಬಳಿ ಬಸ್ ಪಲ್ಟಿ : 20 ಪ್ರಯಾಣಿಕರಿಗೆ ಗಾಯ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 13:ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾದ ಘಟನೆದೇವರಹಿಪ್ಪರಗಿ ತಾಲೂಕಿನ ಸಾತಿಹಾಳ ಗ್ರಾಮದ ಬಳಿ ನಡೆದಿದೆ.KA 28- F1958 ನಂಬರಿನ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಜಮೀನಿನಲ್ಲಿ ಪಲ್ಟಿಯಾಗಿ ಬಿದ್ದಿದೆ.ಬಸ್ ನಲ್ಲಿದ್ದ 20 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.ಗಾಯಾಳುಗಳಿಗೆ ಸ್ಥಳಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ್ ಸಹೋದರ ಸಚಿನಗೌಡ ಸಹಾಯ ನೀಡಿದರು.ದೇವರಹಿಪ್ಪರಗಿ ಪೊಲೀಸ್ ಠಾಣೆಯ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

Read More