ದೇಶೀಯ ಎಲ್‌ಪಿಜಿ ಕಾಳಸಂತೆಗೆ ಕಡಿವಾಣ: ಅಕ್ರಮ ಬಳಕೆ ತನಿಖೆಗೆ ಕೇಂದ್ರದ ಸೂಚನೆ; ಪೆಟ್ರೋಲಿಯಂ ಸಚಿವಾಲಯಕ್ಕೆ ದೂರು ರವಾನೆ

ಸಪ್ತಸಾಗರ ವಾರ್ತೆ,ನವದೆಹಲಿ, ಆ.8: ದೇಶೀಯ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಹಾಗೂ ವಾಹನಗಳಿಗೆ ಅಕ್ರಮವಾಗಿ ಬಳಸುತ್ತಿರುವುದು, ಕಾಳಸಂತೆ ನಡೆಸುತ್ತಿರುವುದು ಮತ್ತು ಇದರಿಂದ ಸಾರ್ವಜನಿಕ ಸುರಕ್ಷತೆಗೆ ಅಪಾಯ ಉಂಟಾಗುತ್ತಿರುವ ಆರೋಪಗಳ ಕುರಿತು ಕೇಂದ್ರ ಸರ್ಕಾರ ಗಂಭೀರ ಕ್ರಮಕ್ಕೆ ಮುಂದಾಗಿದೆ.ಈ ಸಂಬಂಧ ಗ್ರಾಹಕ ದಕ್ಷತಾ ಕಲ್ಯಾಣ್ ಫೌಂಡೇಶನ್ ಸಲ್ಲಿಸಿರುವ ದೂರು ಹಾಗೂ ಪುರಾವೆಗಳನ್ನು ಪರಿಶೀಲನೆಗಾಗಿ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯಕ್ಕೆ ರವಾನಿಸಿದೆ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ,…

Read More

ಟಿಪ್ಪರ್ – ಬಸ್ ಮಧ್ಯೆ ಭೀಕರ ರಸ್ತೆ ಅಪಘಾತ: ಮಹಿಳೆ ಸೇರಿ ಮೂವರ ಸಾವು

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 16:ಟಿಪ್ಪರ್ ಹಾಗೂ ಸರ್ಕಾರಿ ಬಸ್ ಮಧ್ಯೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಮೂವರು ಮೃತಪಟ್ಟು ಇತರ ಹತ್ತು ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ಮಂಗಳವಾರ ನಡೆದಿದೆ.ಟಿಪ್ಪರ್ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಗೊತ್ತಾಗಿದೆ.ಟಿಪ್ಪರ್ ನಲ್ಲಿದ್ದ ಚಾಲಕ ಹಾಗೂ ಆತನ ಪತ್ನಿ ಮತ್ತು ಸರ್ಕಾರಿ ಬಸ್ ಚಾಲಕ ಸೇರಿ ಮೂವರು ಮೃತಪಟ್ಟಿದ್ದಾರೆ.ಟಿಪ್ಪರ್ ಚಾಲಕ ಅಶೋಕ ಉಟಗಿ ಹಾಗೂ ಪತ್ನಿ ರಾಧಾಬಾಯಿ…

Read More

ಮೇಲ್ಚಾವಣಿ ಕುಸಿತ ಪ್ರಕರಣ: ಬದುಕುಳಿದ ಎರಡು ಜೀವ- ಸಚಿವ ಎಂ. ಬಿ. ಪಾಟೀಲ್ ಭೇಟಿ ತಲಾ 5 ಲಕ್ಷ ಪರಿಹಾರ ಘೋಷಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 15: ಆಲಮೇಲ‌ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಸಾವಿಗೀಡಾದವರ ನಾಲ್ಕು ಜನರು ಸಾವಿಗೀಡಾದ ಘಟನಾ ಸ್ಥಳಕ್ಕೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಅವರು ಇಂದು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಡಾ. ಆನಂದ ಕೆ., ಎಸ್ಪಿ ಲಕ್ಷ್ಮಣ ನಿಂಬರಗಿ ಹಾಗೂ ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಸಚಿವರಿಗೆ ಘಟನೆಯ ಬಗ್ಗೆ…

Read More

ಮೋರಟಗಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ:ಮನೆ ಮೇಲ್ಚಾವಣಿ ಕುಸಿದು ನಾಲ್ವರು ಜೀವಂತ ಸಮಾಧಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 15:ಭಾರೀ ಗಾಳಿ ಸಹಿತ‌ ಮಳೆಗೆ ಮನೆಯ ಮೇಲ್ಚಾವಣೆ ಕುಸಿದು ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿಯಾಗಿರುವ ದುರಂತ ಜಿಲ್ಲೆಯ ಆಲಮೇಲ ತಾಲೂಕಿನ ಮೋರಟಗಿಯಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.ಈ ದುರಂತದಲ್ಲಿ ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.ಮೋರಟಗಿ ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13), ಕೀರ್ತಿ ಬಡಿಗೇರ (9) ಮೃತಪಟ್ಟ ನತದೃಷ್ಟರು.ತಮ್ಮ ಮನೆಯನ್ನು ದುರಸ್ತಿ ಮಾಡುವ ಕಾರಣ ಹಳೆಯ ಮನೆಯಲ್ಲಿ ಈ ಕುಟುಂಬ ಬಾಡಿಗೆಯಿಂದ ವಾಸವಾಗಿತ್ತು.ನಿನ್ನೆ…

Read More

ಸಿಲಿಂಡರ್ ಸ್ಪೋಟ: ಇಬ್ಬರಿಗೆ ಗಾಯ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 14:ನಗರದ ಜ್ಯುವೆಲರಿ ಶಾಪ್ ನಲ್ಲಿ ಗ್ಯಾಸ್ ಸಿಲೆಂಡರ್ ಬ್ಲಾಸ್ಟ್ ಆಗಿ ಇಬ್ಬರು ಗಾಯಗೊಂಡಿರುವ ಘಟನೆಸರಾಫ ಬಜಾರ್ ನಲ್ಲಿ ನಡೆದಿದೆ.ಬಂಗಾಲಿ ಮೂಲದ ಇಬ್ಬರು ಅಕ್ಕಸಾಲಿಗರಾದ ಬೀಜು (38), ನಾನಾ ಹಕ್ಕಿಂ (40) ಗಾಯಗೊಂಡಿದ್ದಾರೆ.ಬೆಳಿಗ್ಗೆ ಚಿನ್ನದ ಕುಲುಮೆ ಕೆಲಸ ಮಾಡುವಾಗ ಬ್ಲಾಸ್ಟ್ ಆಗಿದೆ. ಈ ವೇಳೆಇಬ್ಬರು ಅಕ್ಕಸಾಲಿಗರಿಗೆ ಸುಟ್ಟ ಗಾಯಗಳಾಗಿವೆ. ಆಟೋ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.ಗ್ಯಾಸ್ ಸೋರಿಕೆ ಸಿಲಿಂಡರ್ ಸ್ಫೋಟಕ್ಕೆ ಕಾರಣ ಇರಬಹುದು ಎಂದು…

Read More

ಸಾತಿಹಾಳ ಬಳಿ ಬಸ್ ಪಲ್ಟಿ : 20 ಪ್ರಯಾಣಿಕರಿಗೆ ಗಾಯ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 13:ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾದ ಘಟನೆದೇವರಹಿಪ್ಪರಗಿ ತಾಲೂಕಿನ ಸಾತಿಹಾಳ ಗ್ರಾಮದ ಬಳಿ ನಡೆದಿದೆ.KA 28- F1958 ನಂಬರಿನ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಜಮೀನಿನಲ್ಲಿ ಪಲ್ಟಿಯಾಗಿ ಬಿದ್ದಿದೆ.ಬಸ್ ನಲ್ಲಿದ್ದ 20 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.ಗಾಯಾಳುಗಳಿಗೆ ಸ್ಥಳಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ್ ಸಹೋದರ ಸಚಿನಗೌಡ ಸಹಾಯ ನೀಡಿದರು.ದೇವರಹಿಪ್ಪರಗಿ ಪೊಲೀಸ್ ಠಾಣೆಯ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

Read More

ಜಿಲ್ಲಾಧಿಕಾರಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 16:ಕಿಡಿಗೇಡಿಗಳು ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಮೇಲ್ ಕಳಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಲ ಹೊತ್ತು ಆತಂಕಕ್ಕೀಡಾಗಿದ್ದರು.ಯಾರೋ ಕಿಡಿಗೇಡಿಗಳು ಜಿಲ್ಲಾಧಿಕಾರಿಗಳ ಕಚೇರಿ ಮೇಲ್ ಗೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಮೇಲ್ ಕಳಿಸಿದ್ದರು.ಈ ವಿಷಯ ಜಿಲ್ಲಾಧಿಕಾರಿಗಳ ಗಮನಕ್ಕೆ ಬರುತ್ತಿದ್ದಂತೆಯೇ ಪೊಲೀಸರಿಗೆ ತಕ್ಷಣ ಸುದ್ದಿ ಮುಟ್ಟಿಸಲಾಯಿತು. ವಿಳಂಬ ಮಾಡದೆ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ನೋಡು ನೋಡುತ್ತಿದ್ದಂತೆಯೇ ಬಾಂಬ್ ನಿಗ್ರಹದಳ ಶ್ವಾನದಳದ ಜೊತೆಗೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ…

Read More

ನವೆಂಬರ್ ಕ್ರಾಂತಿನೂ ಇಲ್ಲ, ಡಿಸೆಂಬರ್ ದೂ ಇಲ್ಲ, ಕ್ರಾಂತಿ ಏನಿದ್ದರೂ 2028ರಲ್ಲಿ, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ: ಡಿಸಿಎಂ ಡಿ.ಕೆ. ಶಿವಕುಮಾರ

There will be no revolution in November or December; whatever revolution happens will be in 2028, when the Congress returns to power, said Deputy Chief Minister D.K. Shivakumar.

Read More

ಚಡಚಣದಲ್ಲಿ ಎಸ್ ಬಿ ಐ ಬ್ಯಾಂಕ್ ದರೋಡೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 16:ಮುಸುಕುಧಾರಿ ದರೋಡೆಕೋರರ ಗುಂಪೊಂದು ಜಿಲ್ಲೆಯ ಚಡಚಣ ಪಟ್ಟಣದ ಎಸ್ ಬಿ ಐ ಬ್ಯಾಂಕಿಗೆ ಮಂಗಳವಾರ ರಾತ್ರಿ 8ಗಂಟೆ ಸುಮಾರಿಗೆ ನುಗ್ಗಿ ನಗದು, ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದೆ.ಐದಕ್ಕೂ ಹೆಚ್ಚು ಮುಸುಕುಧಾರಿ ದರೋಡೆಕೋರರಿಂದ ಈ ಕೃತ್ಯ ನಡೆದಿದ್ದು, ಮಿಲಿಟರಿ ಮಾದರಿ ಬಟ್ಟೆಯಲ್ಲಿ ಕೈಯಲ್ಲಿ ಕಂಟ್ರಿ ಪಿಸ್ತೂಲ್ ಹಾಗೂ ಮಾರಕಾಸ್ತ್ರಗಳನ್ನು ತೋರಿಸಿ ಎಸ್ ಬಿ ಐ ಬ್ಯಾಂಕ್ ನಲ್ಲಿನ‌ ಮ್ಯಾನೇಜರ್, ಕ್ಯಾಶಿಯರ್ ಹಾಗೂ ಇತರೆ ಸಿಬ್ಬಂದಿಗಳಿಗೆ ಹೆದರಿಸಿ ಕೈಕಾಲು ಕಟ್ಟಿ ಕೂಡಿ ಹಾಕಿ ದರೋಡೆ ನಡೆಸಲಾಗಿದೆ.ಬ್ಯಾಂಕಿನಲ್ಲಿದ್ದ…

Read More

ವಿಜಯಪುರ: ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಸಪ್ತಸಾಗರ ವಾರ್ತೆ, ಜು. 31:ಇಲ್ಲಿನ ಮಹಾನಗರ ಪಾಲಿಕೆಯ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.ಪಾಲಿಕೆ ಕಚೇರಿಯ ಮೂರು ವಲಯಗಳಲ್ಲಿ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.ಮಹಾನಗರ ಪಾಲಿಕೆಯ ನಿರ್ಲಕ್ಷ್ಯ , ಭ್ರಷ್ಟಾಚಾರದ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ.

Read More