ದೆಹಲಿ ಪೊಲೀಸ್ ನೋಟೀಸ್ ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಸಿಎಂ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ ದೆಹಲಿ, ಡಿ.16:“ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡುವ ಬಗ್ಗೆ ಕೇಳಿದಾಗ, “ಸೋಮವಾರ ದೆಹಲಿ ಪೊಲೀಸರಿಗೆ ಉತ್ತರ ನೀಡಲು ನಿರ್ಧರಿಸಿದ್ದೆ. ಆದರೆ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಶೇಷ ವಿಮಾನದಲ್ಲಿ ದಾವಣಗೆರೆಗೆ ತೆರಳುತ್ತಿದ್ದು, ಅಧಿವೇಶನ ಮುಗಿದ ಬಳಿಕ ಉತ್ತರ…

Read More

ದೇಶದ 140 ಕೋಟಿ ಜನರ ಮತದಾನದ ಹಕ್ಕಿಗಾಗಿ ಹೋರಾಟ:ಡಿಕೆಶಿ

ಸಪ್ತಸಾಗರ ವಾರ್ತೆ, ನವದೆಹಲಿ, ಡಿ.14:“ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.ವೋಟ್ ಚೋರಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಾವು ಮತಕಳ್ಳತನ ವಿರುದ್ಧದ ಹೋರಾಟ ಆರಂಭಿಸಿದ್ದೆವು. ಈಗ ರಾಮಲೀಲಾ…

Read More

ಉಪರಾಷ್ಟ್ರಪತಿಚುನಾವಣೆ; ನಮ್ಮಅಭ್ಯರ್ಥಿಪರವಾಗಿಆತ್ಮಸಾಕ್ಷಿಯಮತಗಳನ್ನುಕೇಳಿದ್ದೇವೆ: ಡಿಸಿಎಂಡಿ.ಕೆ.ಶಿವಕುಮಾರ್

ಸಪ್ತಸಾಗರ ವಾರ್ತೆ, ಕೊಯಮತ್ತೂರು, ಸೆ.9:ಇಂಡಿಯಾ ಒಕ್ಕೂಟ ಒಟ್ಟಾಗಿ ಉಪ ರಾಷ್ಟ್ರಪತಿ ಚುನಾವಣೆ ಎದುರಿಸಲಿದೆ. ನಾವು ಆತ್ಮಸಾಕ್ಷಿಯ ಮತಗಳನ್ನು ಕೋರಿದ್ದೇವೆ. ಇಂಡಿಯಾ ಒಕ್ಕೂಟ ಮತ್ತು ವಿರೋಧ ಪಕ್ಷಗಳು ಎನ್ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ವಿರುದ್ಧ ಮತ ಚಲಾಯಿಸುತ್ತವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ತಮಿಳುನಾಡಿನ ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ ಮಂಗಳವಾರ ಉಪರಾಷ್ಟ್ರಪತಿ ಚುನಾವಣೆಯ ಬಗ್ಗೆ ಕೇಳಿದಾಗ ಡಿಸಿಎಂ ಅವರು ಹೀಗೆ ಉತ್ತರಿಸಿದರು.ಉಪರಾಷ್ಟ್ರಪತಿ ಚುನಾವಣೆಯಲ್ಲಿ ಅಡ್ಡ ಮತದಾನವಾಗುವ ಸಾಧ್ಯತೆ ಇದೆಯೇ ಎಂದು ಕೇಳಿದಾಗ, ನಾನು ಆತ್ಮಸಾಕ್ಷಿಯ ಮತಗಳ ಬಗ್ಗೆ ನಂಬಿಕೆಯಿಟ್ಟಿದ್ದೇನೆ….

Read More

ಏಕರೂಪ ಮಾಸಾಶನ ಪದ್ಧತಿ ಜಾರಿಗೆ ಆಗ್ರಹಿಸಿ ಹಿರಿಯ ಪತ್ರಕರ್ತರ ಸಮಾವೇಶ ಕೇಂದ್ರ ಸರ್ಕಾರಕ್ಕೆ ಒತ್ತಾಯ

ಸಪ್ತಸಾಗರ ವಾರ್ತೆ ತಿರುವನಂತಪುರಂ, ಆ. 29:ದೇಶದ ಎಲ್ಲಾ ರಾಜ್ಯಗಳ ಹಿರಿಯ ನಿವೃತ್ತ ಪತ್ರಕರ್ತರಿಗೆ ಏಕರೂಪದ ಮಾಸಾಶನ ಪದ್ಧತಿಯನ್ನು ರೂಪಿಸಬೇಕೆಂದು ಕೇಂದ್ರ ಸರ್ಕಾರವನ್ನು ರಾಷ್ಟ್ರೀಯ ಹಿರಿಯ ಪತ್ರಕರ್ತರ ಒಕ್ಕೂಟವು ಸಮ್ಮೇಳನದಲ್ಲಿ ಒತ್ತಾಯಿಸಿತು.ಆಗಸ್ಟ್ 19, 20 ಹಾಗೂ 21ರಂದು ಕೇರಳ ರಾಜಧಾನಿ ತಿರುವನಂತನಪುರಂ ವಿ ಪ್ರತಾಪ ಚಂದ್ರನ್ ನಗರದಲ್ಲಿ ನಡೆದ ಹಿರಿಯ ಪತ್ರಕರ್ತರ ಪ್ರಪ್ರಥಮ ರಾಷ್ಟ್ರೀಯ ಸಮ್ಮೇಳನದಲ್ಲಿ ಒಕ್ಕೊರಲಿನ ನಿರ್ಣಯ ಅಂಗೀಕರಿಸಲಾಯಿತು.ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಕೇರಳ ಮುಖ್ಯಮಂತ್ರಿ ಪೀಣರಾಯಿ ವಿಜಯನ್, ಅತಿ ಹೆಚ್ಚು ಹಿರಿಯ ಪತ್ರಕರ್ತರಿಗೆ ಮಾಶಾಸನ ನೀಡುತ್ತಿರುವ ರಾಜ್ಯ…

Read More

ಮಹಾರಾಷ್ಟ್ರ ಡಿಸಿಎಂ ಜೊತೆಗೆ ದ್ರಾಕ್ಷಿ ಬೆಳೆ ಸಮಸ್ಯೆ ಕುರಿತು ಕೊಕರೆ ಚರ್ಚೆ

ಸಪ್ತಸಾಗರ ವಾರ್ತೆ, ಪುಣೆ, ಆ. 29:ಮಹಾರಾಷ್ಟ್ರ ರಾಜ್ಯದ ಪುಣೆಯಲ್ಲಿ ಇತ್ತೀಚೆಗೆ ದ್ರಾಕ್ಷಿ ಬೆಳೆಗಾರರ ಸಮಾವೇಶ ಜರುಗಿತು.ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಕೃಷಿ ಮಂತ್ರಿಗಳ ಜೊತೆಗೆ ಭಾರತೀಯ ಕಿಸಾನ್ ಸಂಘದ ಭೀಮಸೇನ ಕೊಕರೆ ಅವರು ದ್ರಾಕ್ಷಿ ಬೆಳೆಯ ವಿವಿಧ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ದ್ರಾಕ್ಷಿ ಬೆಳೆಗಾರರ ಮುಂದಿನ ಬೆಳವಣಿಗೆಗಳ ಬಗ್ಗೆ ಅದರಲ್ಲೂ ವಿಶೇಷವಾಗಿ ತಳಿಗಳ ಬಗ್ಗೆ ಹಾಗೂ ರಫ್ತಿನ ಕುರಿತು ಮತ್ತು ಭಾರತ ದೇಶಕ್ಕೆ ಹೊರದೇಶದಿಂದ ಕಳಪೆ ಮಟ್ಟದ ಒಣ ದ್ರಾಕ್ಷಿಯ ಕಳ್ಳ ಸಾಗಣೆಯ ಮೂಲಕ ಬರುತ್ತಿರುವುದರ ಬಗ್ಗೆ…

Read More

ಬೆಳಗಾವಿ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಶೆಟ್ಟರ್ ಆಹ್ವಾನ

ಸಪ್ತಸಾಗರ ವಾರ್ತೆ, ನವದೆಹಲಿ, ಆ. 4:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಸಂಸದ ಜಗದೀಶ ಶೆಟ್ಟರ ಸೋಮವಾರ ನವದೆಹಲಿಯಲ್ಲಿ ಭೇಟಿ ಮಾಡಿ ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.ಬೆಳಗಾವಿ ಬಾರ್ ಅಸೋಸಿಯೇಷನ್ ತನ್ನ ಅಸ್ತಿತ್ವದ 150 ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ 150 ನೇ ವಾರ್ಷಿಕೋತ್ಸವ ಸಮಾರಂಭವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಮಾರಂಭಕ್ಕೆ ಬೆಳಗಾವಿ ಬಾರ್ ಅಸೋಸಿಯೇಷನ್ ಅಧ್ಯಕ್ಷರ ಮನವಿಯಂತೆ ಮುಖ್ಯ ಅತಿಥಿಗಳಾಗಿ ಆಗಮಿಸುವ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಬೆಳಗಾವಿ ಲೋಕಸಭಾ ಸದಸ್ಯ ಹಾಗೂ ಕರ್ನಾಟಕದ…

Read More