ಬುದ್ನಿಯಲ್ಲಿ ಎನ್ ಎಸ್ ಎಸ್ ರಾಷ್ಟ್ರೀಯ ಶಿಬಿರ

ಸಪ್ತಸಾಗರ ವಾರ್ತೆ ಗೊಳಸಂಗಿ,ಡಿ. 17:ಜಿಲ್ಲೆಯ ನಿಡಗುಂದಿ ತಾಲೂಕಿನ ಬುದ್ನಿ ಗ್ರಾಮದಲ್ಲಿ ಡಿ. 12ರಿಂದ 17 ರವರೆಗೆ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಜರುಗಿತು.ಬಸನಗೌಡ ಪಾಟೀಲ್ ಅವರು ಸಸಿಗೆ ನೀರುಣಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು.ಮುಖ್ಯ ಅತಿಥಿ ಚನಗೌಡ ಪಾಟೀಲ್, ಮುಖ್ಯೋಪಾಧ್ಯಾಯ ಬೇವೂರ ಅವರು, ಎನ್ ಎಸ್ ಎಸ್ ವತಿಯಿಂದ ಸಮಾಜ ಸೇವೆ ಹಾಗೂ ಮುಂದಾಳತ್ವ ಮಹತ್ವ ಕುರಿತು ವಿವರಿಸಿದರು.ಎನ್ಎಸ್ಎಸ್ ಸಂಯೋಜನ ಅಧಿಕಾರಿ ಎಸ್ ಬಿ ಲಮಾಣಿ ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರ ಗೀತೆ ಹಾಡಿದರು.ಪ್ರಾಚಾರ್ಯ ವಿ.ಪಿ. ಕಟ್ಟಿ…

Read More

ಥಿಂಕ್ ಗ್ಯಾಸ್ CNG ಸ್ಟೇಷನ್ ಉದ್ಘಾಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 17 : ಥಿಂಕ್ ಗ್ಯಾಸ್ CNG ಸ್ಟೇಷನ್ ಉದ್ಘಾಟನೆವಿಜಯಪುರ,ಡಿ.16,2025: ಭಾರತದ ಪ್ರಮುಖ ನಗರ ಅನಿಲ ವಿತರಣಾ ಕಂಪನಿಗಳಲ್ಲೊಂದಾದ ಥಿಂಕ್ ಗ್ಯಾಸ್, ವಿಜಯಪುರದಲ್ಲಿ ಹಳೆಯ ಹಾಗೂ ಹೊಸ ನಗರ ಬಸ್ ನಿಲ್ದಾಣದ ಸಮೀಪ ತನ್ನ ಕಂಪನಿ-ಮಾಲೀಕತ್ವದ, ಕಂಪನಿ-ನಿರ್ವಹಿತ (COCO) CNG ಸ್ಟೇಷನ್ ಅನ್ನು ಉದ್ಘಾಟಿಸಿದೆ.ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಬಸನಗೌಡ ಪಾಟೀಲ ಯತ್ನಾಳ, ವಿಧಾನಸಭಾ ಸದಸ್ಯರು – ವಿಜಯಪುರ, ಮಡಿವಾಳಪ್ಪ ಕರಡಿ, ಮೇಯರ್, ನಗರ ನಿಗಮ, ವಿಜಯಪುರ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ರಂಗರಾಜನ್…

Read More

ತಿಕೋಟಾದಲ್ಲಿ ನಾಡ ಗೀತೆ ನೂರರ ಸಂಭ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.17: ತಿಕೋಟಾ ಪಟ್ಟಣದಲ್ಲಿ ನಾಡಗೀತೆಯ ನೂರರ ಸಂಭ್ರಮ ಕಾರ್ಯಕ್ರಮ ಹಮಿಕೊಳ್ಳಲಾಗುವುದು. ರಾಷ್ಟçಕವಿ ಕುವೆಂಪು ಅವರು ಬರೆದ ನಾಡಗೀತೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಜಿಲ್ಲಾ ಮತ್ತು ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ತಿಕೋಟಾ ಆಶ್ರಯದಲ್ಲಿ ಸಾವಿರಾರು ಮಕ್ಕಳನ್ನು ಒಳಗೊಂಡು ಕಾರ್ಯಕ್ರಮ ಆಯೋಜನೆ ಮಾಡುತ್ತೇವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.ಬುಧವಾರ ತಿಕೋಟಾ ಪಟ್ಟಣದ ವಿರಕ್ತಮಠದ ಸಭಾ ಭವನದಲ್ಲಿ ತಾಲೂಕಾ ಪ್ರಥಮ ಸಮ್ಮೇಳನದ ಲೆಕ್ಕಪತ್ರ ಹಾಗೂ ಮುಂದಿನ…

Read More

ಬಿ ಎಂ ಪಾಟೀಲ್ ಪಬ್ಲಿಕ್ ಶಾಲೆಗೆ ಎಕ್ಸಲೆನ್ಸ್ ಪ್ರಶಸ್ತಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 17: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ‌. ಪಾಟೀಲ ಪಬ್ಲಿಕ್(ಸಿ.ಬಿ.ಎಸ್.ಇ) ಶಾಲೆಗೆ ಇ ಟೆಕ್ಸ್ ಬ್ರೇನ್ ಫೀಡ್ ಮ್ಯಾಗಝಿನ್ ಅಕಾಡೆಮಿಯವರು ಪ್ರತಿ ವರ್ಷ ಕೊಡುವ ಬೆಸ್ಟ್ ಅಕಾಡೆಮಿಕ್ ಎಕ್ಸ್ ಲೆನ್ಸ್ 2025-26 ವಿಭಾಗದ ಸ್ಕೂಲ್ ಎಕ್ಸಲೆನ್ಸ್ ಪ್ರಶಸ್ತಿ ಲಭಿಸಿದೆ.ಅತ್ಯುತ್ತಮ ಸ್ಟೆಮ್/ಸ್ಟೀಮ್ (STEM/STEAM ) ಇಂಪ್ಲಿಮೆಂಟೇಶನ್ ಮತ್ತು ಇನ್ನೋವೇಟಿವ್ ಕಲಿಕಾ ಅನುಷ್ಠಾನದ ಮಾನದಂಡ, ಅಲ್ಲದೇ, ಈ ಶಾಲೆಯಲ್ಲಿ ಅಳವಡಿಸಲಾದ ಎಟಿಎಲ್ ಲ್ಯಾಬ್, ಲಾಂಗ್ವೇಜ್ ಲ್ಯಾಬ್ ಮತ್ತು ತರಗತಿಗಳಲ್ಲಿ ಕಂಟ್ರೋಲ್ ಪ್ಯಾನಲ್…

Read More

ವಿದ್ಯಾರ್ಥಿಗಳಿಗೆ ನೈಜ ಜ್ಞಾನ ಅವಶ್ಯ:ಡಾ. ಜೌದ್ರಾಮ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 17: ವಿದ್ಯಾರ್ಥಿಗಳಿಗೆ ಬರೀ ಅಂಕಗಳು ಮುಖ್ಯ ಅಲ್ಲ, ಸರ್ವತೋಮುಖ ಅಭಿವೃದ್ಧಿಗೆ ನೈಜ‌ ಜ್ಞಾನ ಅವಶ್ಯ ಎಂದು ಬಾಗಲಕೋಟೆ ವಿಶ್ವವಿದ್ಯಾಲಯ ಕುಲಸಚಿವ ಡಾ. ಜೌದ್ರಾಮ ಹೇಳಿದ್ದಾರೆ.ಮಂಗಳವಾರ ನಗರದ ಎ.‌ ಎಸ್.‌‌ ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ನಿರ್ವಹಣೆ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ಪ್ರಥಮ ವರ್ಷದ ಎಂ.ಬಿ.ಎ. ವಿದ್ಯಾರ್ಥಿಗಳಿಗಾಗಿ ನಡೆದ ಪರಿಚಯಾತ್ಮಕ ಕಾರ್ಯಕ್ರಮದ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಕೇವಲ ಪಠ್ಯ ಅಧ್ಯಯನ, ಫಲಿತಾಂಶಕ್ಕೆ ಗಮನ ನೀಡದೇ ಸಾಮಾನ್ಯ ಜ್ಞಾನ, ವ್ಯವಹಾರ ಜ್ಞಾನಕ್ಕೂ ಪ್ರಾಶಸ್ತ್ಯ…

Read More

ಸ್ಟಾಪ್ ಸ್ಕೇಟಿಂಗ್ ಮ್ಯಾರಾಥಾನ್

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 16: 79ನೇ ಸ್ವತಂತ್ರ್ಯ ದಿನಾಚರಣೆ ಅಂಗವಾಗಿ ಮಾಮ್ಸ ಸ್ಕೆಟ್ ಅಕಾಡೆಮಿ ವತಿಯಿಂದ ಆಲ್ ಇಂಡಿಯಾ ಸ್ಕೇಟಿಂಗ್ ತರಬೇತಿದಾರರ ಸಂಘಟನೆ ಆಯೋಜಿಸಿದ್ದ 79 ನಿಮಿಷಗಳ ನಿರಂತರ ಸ್ಟಾಪ್ ಸ್ಕೇಟಿಂಗ್ ಮ್ಯಾರಾಥಾನಲ್ಲಿ ನಗರದ ಪ್ರತಿಷ್ಠಿತ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಯು. ಎನ್. ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ದಾಖಲೆ ನಿರ್ಮಿಸಿದ್ದಾರೆ.ವಿಜಯಪುರದ ನಗರದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ದೇಶದ 22 ನಾನಾ ನಗರಗಳಲ್ಲಿ 572 ವಿದ್ಯಾರ್ಥಿಗಳು ವಿಶ್ವದಾಖಲೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು….

Read More

ಜಿಲ್ಲಾಧಿಕಾರಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 16:ಕಿಡಿಗೇಡಿಗಳು ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಮೇಲ್ ಕಳಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಲ ಹೊತ್ತು ಆತಂಕಕ್ಕೀಡಾಗಿದ್ದರು.ಯಾರೋ ಕಿಡಿಗೇಡಿಗಳು ಜಿಲ್ಲಾಧಿಕಾರಿಗಳ ಕಚೇರಿ ಮೇಲ್ ಗೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಮೇಲ್ ಕಳಿಸಿದ್ದರು.ಈ ವಿಷಯ ಜಿಲ್ಲಾಧಿಕಾರಿಗಳ ಗಮನಕ್ಕೆ ಬರುತ್ತಿದ್ದಂತೆಯೇ ಪೊಲೀಸರಿಗೆ ತಕ್ಷಣ ಸುದ್ದಿ ಮುಟ್ಟಿಸಲಾಯಿತು. ವಿಳಂಬ ಮಾಡದೆ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ನೋಡು ನೋಡುತ್ತಿದ್ದಂತೆಯೇ ಬಾಂಬ್ ನಿಗ್ರಹದಳ ಶ್ವಾನದಳದ ಜೊತೆಗೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ…

Read More

ದೆಹಲಿ ಪೊಲೀಸ್ ನೋಟೀಸ್ ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಸಿಎಂ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ ದೆಹಲಿ, ಡಿ.16:“ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡುವ ಬಗ್ಗೆ ಕೇಳಿದಾಗ, “ಸೋಮವಾರ ದೆಹಲಿ ಪೊಲೀಸರಿಗೆ ಉತ್ತರ ನೀಡಲು ನಿರ್ಧರಿಸಿದ್ದೆ. ಆದರೆ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಶೇಷ ವಿಮಾನದಲ್ಲಿ ದಾವಣಗೆರೆಗೆ ತೆರಳುತ್ತಿದ್ದು, ಅಧಿವೇಶನ ಮುಗಿದ ಬಳಿಕ ಉತ್ತರ…

Read More

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣಗಳು ಮತ್ತು ಗಳಿಕೆಯಲ್ಲಿ ಗಮನಾರ್ಹ ದಾಖಲೆ

ಸಪ್ತ ಸಾಗರ ವಾರ್ತೆ ಹುಬ್ಬಳ್ಳಿ, ಡಿ. 15:ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಟಿಕೆಟ್ ರಹಿತ ಮತ್ತು ಅಕ್ರಮ ಪ್ರಯಾಣ ಪ್ರಕರಣಗಳು ಗಣನೀಯವಾಗಿ ಪತ್ತೆಯಾಗಿದ್ದು, ರೈಲ್ವೆಗೆ ಆದಾಯದಲ್ಲಿ ಭಾರೀ ಹೆಚ್ಚಳವಾಗಿದೆ.2025-26ರ ಪ್ರಸಕ್ತ ಆರ್ಥಿಕ ವರ್ಷದ ನವೆಂಬರ್ ತಿಂಗಳಿನಲ್ಲಿ (2025) ಒಟ್ಟು 67,000 ಟಿಕೆಟ್ ತಪಾಸಣಾ ಪ್ರಕರಣಗಳನ್ನು ನೈಋತ್ಯ ರೈಲ್ವೆ ದಾಖಲಿಸಿದ್ದು, ಇದರಿಂದ ಬರೋಬ್ಬರಿ 5.36 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಕಳೆದ ವರ್ಷದ…

Read More

ವಿದ್ಯೆ ಎಂಬುದು ಅಭ್ಯಾಸ ಮಾಡುವವನ ಕೈವಶವಾಗುತ್ತದೆ-ಐಹೊಳ್ಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 15:ಜೀವನದಲ್ಲಿ ಯಾರು ಸಾಧನೆ ಮಾಡಬೇಕೆಂದು ಬಯಸಿ ಅಭ್ಯಾಸವನ್ನು ಮಾಡುತ್ತಾರೋ ಅವರ ಸಾಧನೆಗೆ ವಿದ್ಯೆಯ ಫಲಗಳು ಬರುತ್ತವೆ. ಶಿವಯೋಗಿ ಸಿದ್ದರಾಮರು ಇದನ್ನು ತಮ್ಮ ವಚನದಲ್ಲಿ ಪ್ರಸ್ತಾಪಿಸಿದ್ದಾರೆ. ಅವಿದ್ಯೆ ಹೋಗಲಾಡಿಸಲು ನಾವೆಲ್ಲ ಸಾಧನಾಶೀಲರಾಗಿ ಸಾಧಿಸಬೇಕೆಂದು ಫ .ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಸಂಯೋಜನಾಧಿಕಾರಿ ಡಾ.ವ್ಹಿ.ಡಿ. ಐಹೊಳ್ಳಿ ಇಂದಿಲ್ಲಿ ಅಭಿಪ್ರಾಯ ಪಟ್ಟರು. ನಗರದ ಆಶ್ರಮ ರಸ್ತೆಯ ಐಶ್ವರ್ಯ ಬಡಾವಣೆಯ ವರದಾಂಜನೇಯ ದೇವಸ್ಥಾನದಲ್ಲಿ ಹಮ್ಮಿಕೊಂಡ 549ನೇ ಸತ್ಸಂಗ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.ವಾಚಿಸಿ ಅನುಭವಿ…

Read More