ಬೆಂಬಲ‌ ಬೆಲೆಯಡಿ‌‌ ಕುಸುಬೆ ಖರೀದಿ

ಸಪ್ತಸಾಗರ ವಾರ್ತೆ,ವಿಜಯಪುರ, ಏ.7: 2026 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿನ ಏಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಉತ್ಪನ್ನಕ್ಕೆ ಪ್ರತಿ ಕ್ವಿಂಟಾಲ್‌ಗೆ 6540.ರೂ. ಗಳಂತೆ ಖರೀದಿ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆಯ ಸಮಿತಿ ಅಧ್ಯಕ್ಷ ಡಾ.ಆನಂದ.ಕೆ ಅವರು ತಿಳಿಸಿದ್ದಾರೆ.ಕುಸುಬೆ ಉತ್ಪನ್ನವನ್ನು ಪ್ರತಿ ಎಕರೆಗೆ 5 ಕ್ವಿಂಟಲ್‌ನಂತೆ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಖರೀದಿಸಲಾಗುತ್ತದೆ.ನೋಂದಣಿ ಅವಧಿ 80 ದಿನಗಳವರೆಗೆ ಇದೆ. ಖರೀದಿ ಅವಧಿ 90 ದಿನ ಇರುತ್ತದೆ. ನೋಂದಣಿಯೊಂದಿಗೆ…

Read More

ಮಾರಾಟಕ್ಕೆ‌ ಪುಸ್ತಕಗಳು ಲಭ್ಯ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 7:ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಪ್ರಕಟಣೆಯಾಗಿರುವ ಪುಸ್ತಕಗಳು ಮಾರಾಟಕ್ಕೆ ಲಭ್ಯವಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಯಲ್ಲಿ ಲಭ್ಯವಿರುತ್ತವೆ.ಸಾಹಿತ್ಯಾಸಕ್ತರು ಪುಸ್ತಕಗಳನ್ನು ಕಚೇರಿ ವೇಳೆಯಲ್ಲಿ ಖರೀದಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ:08352-251261 ಸಂಪರ್ಕಿಸಬಹುದಾಗಿದೆ ಎಂದು ಸಹಾಯಕ‌ ನಿರ್ದೇಶಕ ಸಂತೋಷ ಭೋವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

6 ವರ್ಷದ ಮಕ್ಕಳ ಸಮಗ್ರ ಸಮೀಕ್ಷೆ 3 ತಿಂಗಳಲ್ಲಿ ಪೂರ್ಣ:ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ನಿಸಾರ್ ಅಹ್ಮದ್

ಸಪ್ತಸಾಗರ ವಾರ್ತೆ ವಿಜಯಪುರ, ಏ. 6 : ಸಾಕ್ಷರತಾ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜೊತೆ ಸಮನ್ವಯ ಸಭೆ ನಡೆಸಿ 6 ವರ್ಷದ ಮಕ್ಕಳ ಸಮಗ್ರ ಸಮೀಕ್ಷೆ ನಡೆಸುವಂತೆ ಸಿಇಒ ಅವರಿಗೆ ನಿರ್ದೇಶನ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹ್ಮದ್ ಹೇಳಿದರು.ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆಯಲ್ಲಿರುವ 6 ವರ್ಷದ ಮಕ್ಕಳ ಸಂಖ್ಯೆ ಇದೆ. ಆದರೆ ಶಾಲೆಯಿಂದ ಅನೇಕ ಮಕ್ಕಳು…

Read More

ಏಕಾಏಕಿ ಪೊಲೀಸ್ ಠಾಣೆ ಮೇಲ್ಚಾವಣಿ ಕುಸಿತ: ಗಾಬರಿಯಿಂದ ಓಡಿ ಹೋದ ಪೊಲೀಸರು

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 16: ಠಾಣೆಯಲ್ಲಿ ಪೊಲೀಸರು ವ್ಯಕ್ತಿಯೊಂದಿಗೆ ಮಾತನಾಡುವಾಗ ಏಕಾಏಕಿ ಠಾಣೆಯ ಮೇಲ್ಚಾವಣಿ ಕುಸಿದು ಬಿದ್ದಿರುವ ಘಟನೆ ವಿಜಯಪುರ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ನಡೆದಿದೆ.ಪೊಲೀಸ್ ಅಧಿಕಾರಿಗಳು ವ್ಯಕ್ತಿಯೊಂದಿಗೆ ಚರ್ಚೆ ನಡೆಸಿದಾಗ ಮೇಲ್ಛಾವಣಿ ಕುಸಿದು ಪೊಲೀಸ್ ಹಾಗೂ ವ್ಯಕ್ತಿಯ ಮೇಲೆ ಕುಸಿಯುತ್ತಿತ್ತು. ಆದರೆ, ಅದೃಷ್ಟವಶಾತ್ ಯಾರ ಮೇಲೆಯು ಮೇಲ್ಛಾವಣಿ ಬಿದ್ದಿಲ್ಲ. ಇದರಿಂದ ಯಾರಿಗೂ ಹಾನಿಯಾಗಿಲ್ಲ. ಆದರೆ, ಪೊಲೀಸ ಅಧಿಕಾರಿ ಗಾಬರಿಯಿಂದ ಒಳಗಡೆಗೆ ಓಡಿ ಹೋಗಿದ್ದರು. ಇನ್ನು ಮೇಲ್ಛಾವಣಿ ಕುಸಿತ ಪೊಲೀಸ್ ಠಾಣೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Read More

ದೇಹ ದಾರ್ಡ್ಯ ಸ್ಪರ್ಧೆ: ಪ್ರಜ್ವಲ ಅಳ್ಳಗಿಗೆ ಬೆಳ್ಳಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 23 :ನಗರದಲ್ಲಿರುವ ಶ್ರೀ ಶರಣಬಸವೇಶ್ವರ ಕಾಲೇಜ್ ಆಫ್ ಫಾರ್ಮಸಿ ಏಳನೇ ಸೆಮಿಸ್ಟರ್ ವಿದ್ಯಾರ್ಥಿ ಪ್ರಜ್ವಲ್ ಅಳ್ಳಗಿ ಮಂಗಳೂರಿನಲ್ಲಿ ಜರುಗಿದ ರಾಜ್ಯ ಮಟ್ಟದ ದೇಹ ದಾರ್ಡ್ಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾನೆ.ಮಂಗಳೂರಿನ ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ಫಿಸಿಯೊಥೆರಪಿಯಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಆಯೋಜಿಸಿದ್ದ ರಾಜ್ಯ ಮಟ್ಟದ ದೇಹ ದಾರ್ಡ್ಯ ಸ್ಪರ್ಧೆಯಲ್ಲಿಬೆಸ್ಟ್ ಫಿಸಿಕ್ (75 ಕೆಜಿ) ವಿಭಾಗದಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ…

Read More

ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತ್ವರಿತ ಇತ್ಯರ್ಥ ಪಡಿಸಿ -ಜಿಲ್ಲಾಧಿಕಾರಿ ಡಾ. ಆನಂದ ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ ಡಿ.23: ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಆದ್ಯತೆ ಮೇಲೆ ತ್ವರಿತವಾಗಿ ಇತಥ್ಯಗೊಳಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದರು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತಿ ಪ್ರಕರಣಗಳನ್ನು ಅತ್ಯಂತ ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಬೇಕು. ಅಧಿಕಾರಿಗಳು ದೌರ್ಜನ್ಯ ಪ್ರಕರಣಗಳನ್ನು ತ್ವರಿತ ಇತ್ಯರ್ಥಕ್ಕೆ ಆದ್ಯತೆ ನೀಡಬೇಕು. ದೌರ್ಜನ್ಯ ಪ್ರಕರಣಗಳ ಪರಿಹಾರ…

Read More

ಬಸವನಬಾಗೇವಾಡಿ ಸಹಾಯಕ ಕೃಷಿ ನಿರ್ದೇಶಕರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 23:ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ದೂರಿನ ಹಿನ್ನೆಲೆಯಲ್ಲಿ ಬಸವನಬಾಗೇವಾಡಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ತಪಾಸಣೆ ಕೈಗೊಂಡು ಆದಾಯ ಮೀರಿ 2.50 ಕೋಟಿಗೂ ಹೆಚ್ಚು ಆಸ್ತಿ ಹೊಂದಿರುವುದನ್ನು ಪತ್ತೆ ಹಚ್ಚಿದ್ದಾರೆ.ಬಸವನ ಬಾಗೇವಾಡಿ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಪ್ಪ ಹನಮಂತಪ್ಪ ಯರಝರಿ ಎಂಬುವರ ವಿಜಯಪುರದ ನವರಸಪುರ ಬಡಾವಣೆಯಲ್ಲಿನ ಮನೆ, ಕಣಕಾಲ ಗ್ರಾಮದ ಫಾರ್ಮ್ ಹೌಸ್ ಹಾಗೂ ಮುದ್ದೇಬಿಹಾಳದಲ್ಲಿನ ಅವರ ಮಾವನ ಮನೆ…

Read More

ಪಿಪಿಪಿ ಬಿಜೆಪಿ ಕೂಸು:ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 23 :ಪಿಪಿಪಿ ಬಿಜೆಪಿ ಹಾಗೂ ಮೋದಿ ಅವರ ಕೂಸು. ಪಿಪಿಪಿ ಮಾದರಿಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಅಧಿಸೂಚನೆ ಹೊರಡಿಸಿದ್ದೇ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದರು.ಸೋಮವಾರ ಅವರ ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.ಹೋರಾಟಗಾರರ ಬಗ್ಗೆ ನನಗೆ ಅಪಾರ ಗೌರವವಿದೆ. ಅವರು ನಮ್ಮವರು. ಆದರೆ ಹೋರಾಟಗಾರರನ್ನು ದಿಕ್ಕು ತಪ್ಪಿಸುತ್ತಿರುವ ಕೆಲವು ಬಿಜೆಪಿ ನಾಯಕರು ಮೊದಲು ಹೋಗಿ ಪ್ರಧಾನಿ ಅವರನ್ನು ಖಾಸಗೀಕರಣದ…

Read More

ದ್ವೇಷ ಭಾಷಣ ಮಸೂದೆಗೆ ಅಂಕಿತ ಬೇಡ: ಈಶ್ವರಪ್ಪ ರಾಜ್ಯಪಾಲರಿಗೆ ಮನವಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 23: ದ್ವೇಷ ಭಾಷಣ ವಿರೋಧಿ ವಿಧೇಯಕಕ್ಕೆ ಯಾವುದೇ ಕಾರಣಕ್ಕೂ ರಾಜ್ಯಪಾಲರು ಅಂಕಿತ ಹಾಕಬಾರದು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಮನವಿ ಮಾಡಿಕೊಂಡಿದ್ದಾರೆ.ಸೋಮವಾರ ಮಧ್ಯಾಹ್ನ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ಮತ್ತೆ ಅಘೋಷಿತ ತುರ್ತು ಪರಿಸ್ಥಿತಿ ಹೇರಲು ಹುನ್ನಾರ ನಡೆಸಿದೆ. ಹೀಗಾಗಿ ಈ ವಿಧೇಯಕವನ್ನು ರಾಜ್ಯಪಾಲರು ಒಪ್ಪಲೇಬಾರದು ಎಂದು ಒತ್ತಾಯಿಸಿದರು.ಅಂದು ಸರ್ವಾಧಿಕಾರ ವರ್ತನೆ ತೋರಿದ ದಿ.ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿದ ಪರಿಣಾಮ ಕಾಂಗ್ರೆಸ್ ಪಕ್ಷ…

Read More

ಡಿ.29ರಂದು ರಾಷ್ಟ್ರಕವಿ ಕುವೆಂಪು-ಜನವರಿ 1 ರಂದು ವಿಶ್ವ ಕರ್ಮ ಅಮರಶಿಲ್ಪಿ ಜಕಣಾಚಾರಿಜಯಂತಿ ಆಚರಣೆಗೆ ನಿರ್ಧಾರ

ಸಪ್ತಸಾಗರ ವಾರ್ತೆ ವಿಜಯಪುರ, ಡಿ.23: ಡಿಸೆಂಬರ್.29 ರಂದು ರಾಷ್ಟ್ರಕವಿ ಕುವೆಂಪು ಜನ್ಮ ದಿನದ ಅಂಗವಾಗಿ ವಿಶ್ವ ಮಾನವ ದಿನಾಚರಣೆ ಹಾಗೂ ಜನೆವರಿ 1 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಅತ್ಯಂತ ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿಸಲು ನಿರ್ಧರಿಸಲಾಯಿತು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಂಡು, ಡಿ.29 ರಂದು ರಾಷ್ಟ್ರಕವಿ ಕುವೆಂಪು ಜನ್ಮ ದಿನದ ಅಂಗವಾಗಿ ವಿಶ್ವ ಮಾನವ…

Read More