ಜಿಲ್ಲಾಧಿಕಾರಿ ಡಾ.ಆನಂದ ವಿವಿಧೆಡೆ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ,ವಿಜಯಪುರ,ಆ. 7: ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ವಿಜಯಪುರ ನಗರದ ಶಿವಾಜಿ ಸರ್ಕಲ್ ಹತ್ತಿರ, ರಾಮನಗರ ರಸ್ತೆ, ನವಬಾಗ ರಸ್ತೆ, ಮನಗೂಳಿ ಅಗಸಿ, ಜುಮ್ಮಾ ಮಸೀದಿ, ಕಸ್ತೂರಿ ಕಾಲನಿ, ರೇಲ್ವೆ ಸ್ಟೇಶನ್ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗುರುವಾರ ಬೆಳಿಗ್ಗೆ ನಗರದ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನಗರದಾದ್ಯಂತ ಇರುವ ಕೋಟೆಗೋಡೆ ಆವರಣಗಳಲ್ಲಿ ಮಳೆ ನೀರು ನಿಲ್ಲದಂತೆ ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡಬೇಕು. ಮುಳ್ಳುಗಂಟಿಗಳನ್ನು ತೆರವುಗೊಳಿಸಿ ಸ್ವಚ್ಛತೆ…

Read More

ಡಿ.ದೇವರಾಜ ಅರಸು ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಯೋಜಿಸಲು ನಿರ್ಧಾರ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ.7 :ಹಿಂದುಳಿದ ವರ್ಗಗಳ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಆ.20ರಂದು ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ದೇವರಾಜ್ ಅರಸು ಅವರ 110ನೇ ಜನ್ಮ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ಅಂಗವಾಗಿ ಅಂದು ಬೆಳಿಗ್ಗೆ 9-30ಕ್ಕೆ ನಗರದ…

Read More

ಸಂಸದ ರಮೇಶ ಜಿಗಜಿಣಗಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲಕುಮಾರ್ ಶಿಂಧೆ ಜೊತೆಗೆ ಸೌಹಾರ್ದ ಭೇಟಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 7: ಕೇಂದ್ರದ ಮಾಜಿ ಸಚಿವ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ ಶಿಂಧೆ ಅವರನ್ನು ನವದೆಹಲಿ ನಿವಾಸದಲ್ಲಿ ಸಂಸದ ರಮೇಶ ಜಿಗಜಿಣಗಿ ಭೇಟಿ ಮಾಡಿ ಉಭಯಕುಶಲೋಪರಿ ವಿಚಾರಿಸಿದರು.ಸಂಸದ ಜಿಗಜಿಣಗಿ ಅವರು ಶಿಂಧೆ ಅವರನ್ನು ಭೇಟಿ ಮಾಡಿ ಉಭಯ ಕುಶಲೋಪರಿ ನಡೆಸಿ ಸೌಹಾರ್ದಯುತ ಮಾತುಕತೆ ನಡೆಸಿದರು.

Read More

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿ ಸಾವು

ಸಪ್ತಸಾಗರ ವಾರ್ತೆ ವಿಜಯಪುರ, ಆ. 7:ಕ್ಷುಲ್ಲಕ ಕಾರಣಕ್ಕೆ ಶಾಲಾ ವಿದ್ಯಾರ್ಥಿಗಳ ಮಧ್ಯೆ ಕಲಹ ಉಂಟಾಗಿ ಓರ್ವ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಅಸು ನೀಗಿದ ಘಟನೆ ನಗರ ಹೊರ ವಲಯದ ಯೋಗಾಪುರ ಗ್ರಾಮದಲ್ಲಿ ನಡೆದಿದೆ.ಶ್ರೀ ಸತ್ಯ ಸಾಯಿಬಾಬಾ ಶಾಲೆಯ ವಿದ್ಯಾರ್ಥಿ ಅನ್ಸ್ (11) ಮೃತಪಟ್ಟಿದ್ದಾನೆ. ಬಿಹಾರ ಮೂಲದ ಸುನೀಲ್ ಪುತ್ರ ಅನ್ಸ್5ನೇ ತರಗತಿಯಲ್ಲಿ ಓದುತ್ತಿದ್ದ. ಕೈಯಲ್ಲಿ ಕಟ್ಟುವ ವಾಚ್ ಗಾಗಿ ಬಾಲಕ ಅನ್ಸ್ ಈತನ ಮೇಲೆ 9ನೇ ತರಗತಿ ಬಾಲಕರು ಹಲ್ಲೆ ನಡೆಸಿದ್ದು, ಗಾಯಗೊಂಡಿದ್ದ ಅನ್ಸ್ ಈತನನ್ನು ಅವರ ಪೋಷಕರು…

Read More

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಸಪ್ತ ಸಾಗರ ವಾರ್ತೆ, ವಿಜಯಪುರ,ಆ.6: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹ ವಿದ್ಯಾರ್ಥಿಗಳು https://scholarships.gov.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-1 ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕಲ್ಬುರ್ಗಿ ವಲಯ ಮಟ್ಟದ ಮಹಿಳಾ ಚೆಸ್ ಪಂದ್ಯಾವಳಿ: ಬಿ ಎಲ್ ಡಿ ಇ ಆಯುರ್ವೇದ ಕಾಲೇಜಿನ ಮಹಿಳಾ ತಂಡಕ್ಕೆ ಪ್ರಥಮ ಸ್ಥಾನ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5: ನಗರದ ಬಿ.ಎಲ್.ಡಿ.ಇ‌ ಸಂಸ್ಥೆಯ ಎ.ವಿ.ಎಸ್‌ ಆಯುರ್ವೇದ ಕಾಲೇಜಿನ‌ ಮಹಿಳಾ ತಂಡ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ‌ ಆಯೋಜಿಸಿದ್ದ ಕಲಬುರಗಿ ವಲಯ‌ ಮಟ್ಟದ ಮಹಿಳಾ ಚೆಸ್ ಪಂದ್ಯಾವಳಿಯಲ್ಲಿ ಪ್ರಥಮ‌ ಸ್ಥಾನ‌ ಪಡೆದಿದೆ.ರಾಯಚೂರಿನ ನವೋದಯ ಡೆಂಟಲ್ ಕಾಲೇಜಿನಲ್ಲಿ ಆಗಷ್ಟ 1 ಮತ್ತು 2 ರಂದು ನಡೆದ ಈ ಪಂದ್ಯಾವಳಿಯಲ್ಲಿ ಬಿ.ಎಲ್.ಡಿ.ಇ‌ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಾದ ದೀಪ್ತಿ ಮಂಗಲಗಿ, ಗೀತಾಂಜಲಿ ಮುದ್ನೂರ, ಸಾನಿಕಾ ದೇಶಪಾಂಡೆ, ಅನುರಾಧಾ ರೆಡ್ಡಿ ಮತ್ತು ಪೂಜಾ ಬಿರಾಜದಾರ ಅವರನ್ನೊಳಗೊಂಡ ತಂಡ…

Read More

ಜಿರಿಯಾಟ್ರಿಕ್ ಕಾನ್ಸೆಪ್ಟ್ ಎರಡನೇ ಆವೃತ್ತಿ ಪುಸ್ತಕ ಬಿಡುಗಡೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 5: ನಗರದ ಬಿ. ಎಲ್. ಡಿ.‌ ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಜೆರಿಯಾಟ್ರಿಕ್ಸ್ ವಿಭಾಗದ ವತಿಯಿಂದ ಸಂಪಾದಿಸಲಾದ ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts) ಪುಸ್ತಕದ ಎರಡನೇ ಆವೃತ್ತಿಯನ್ನು ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಸೋಮವಾರ ಬಿಡುಗಡೆ ಮಾಡಿದರು.ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಮಾಡಿ‌ ಮಾತನಾಡಿದ ಅವರು, ಈ ಪುಸ್ತಕವು ವೈದ್ಯಕೀಯ, ನರ್ಸಿಂಗ್, ಫಾರ್ಮಾ ಮತ್ತು ಭೌತಚಿಕಿತ್ಸೆ ವಿದ್ಯಾರ್ಥಿಗಳಿಗೆ ಅತ್ಯಂತ…

Read More

ಬಸವಣ್ಣನವರ ತತ್ವ, ಆದರ್ಶಗಳು ಸಪ್ತಸಾಗರದ ಆಚೆಗೂ ಹರಡಬೇಕಿದೆ: ಚನ್ನಬಸವ ಸ್ವಾಮೀಜಿ

ಸಪ್ತಸಾಗರ ವಾರ್ತೆ ವಿಜಯಪುರ, ಆ. 5: ಸಾಮಾಜಿಕ ಸಮಾನತೆಯ ಹರಿಕಾರರಾದ ಬಸವಣ್ಣನವರ ತತ್ವ, ಆದರ್ಶಗಳು ಇಂದು ಸಪ್ತಸಾಗರದಾಚೆಗೂ ಹರಡಬೇಕಾದ ಅವಶ್ಯಕತೆ ಬಂದೊದಗಿದೆ. ಆ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಬಸವ ಸಂಸ್ಕೃತಿ ಅಭಿಯಾನ ಅನೇಕ ಯೋಜನೆಗಳನ್ನು ಹಾಕಿಕೊಂಡಿದೆ~ ಎಂದು ಅಥಣಿಯ ಮೋಟಗಿಮಠದ ಪ್ರಭು ಚನ್ನಬಸವ ಸ್ವಾಮೀಜಿ ಹೇಳಿದರು. ಬಸವನಬಾಗೇವಾಡಿ ತಾಲೂಕಿನ ರಾಬಿನಾಳ ಗ್ರಾಮದಲ್ಲಿ ರಾಷ್ಟ್ರೀಯ ಬಸವಸೈನ್ಯ ಆಯೋಜಿಸಿದ್ದ ಬಸವ ಸಂಸ್ಕೃತಿ ಅಭಿಯಾನದ ಚಿಂತನ ಮಂಥನ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು. ದೇವರು ನಮಗೆ ಎರಡು ಕೈಗಳನ್ನು ನೀಡಿದ್ದು, ಒಂದು…

Read More

ಛಾಯಾಗ್ರಾಹಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5: ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದಿಂದ ಜಿಲ್ಲೆಯ ಛಾಯಾಗ್ರಾಹಕರ ಮಕ್ಕಳಿಗೆ ೨೦೨೪-೨೫ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ.೮೦ ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಛಾಯಾಗ್ರಾಹಕರ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಸಂಘದಿಂದ ಪ್ರತಿಭಾ ಪುರಸ್ಕಾರ ಮಾಡಲು ನಿರ್ಧರಿಸಲಾಗಿದೆ. ವಿಜಯಪುರ ಜಿಲ್ಲೆಯ ಎಲ್ಲ ತಾಲೂಕಿನ ಛಾಯಾಗ್ರಾಹಕರು ತಮ್ಮ ಮಕ್ಕಳ ಪ್ರಸಕ್ತ ಸಾಲಿನ ಶಾಲೆಯ ಧೃಢೀಕೃತ ಎಸ್.ಎಸ್.ಎಲ್.ಸಿ. ಮತ್ತು ಧೃಢೀಕೃತ ಕಾಲೇಜಿನ ದ್ವಿತೀಯ ಪಿ.ಯು.ಸಿ ಅಂಕಪಟ್ಟಿ, ಆಧಾರ ಕಾರ್ಡ್, ವಿದ್ಯಾರ್ಥಿಯ ಬ್ಯಾಂಕ್…

Read More

ಇಬ್ರಾಹಿಂಪುರ ಶಾಲೆಯ ಮಕ್ಕಳಿಗೆ ಉಚಿತವಾಗಿ ಸ್ಮಾರ್ಟ್ ಬೋರ್ಡ್, ನೋಟ್ ಬುಕ್ ವಿತರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5:ಮುಂಬೈನ ತಾಪಿದಾಸ ತುಳಸಿದಾಸ ವ್ರಜದಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ಇಬ್ರಾಹಿಂಪುರ ಬಡಾವಣೆಯ ನಮ್ಮ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಂಬರ್ 6 ಮಕ್ಕಳಿಗೆ ಶೈಕ್ಷಣಿಕ ಅಭಿವೃದ್ಧಿಗಾಗಿ ಸ್ಮಾರ್ಟ್ ಬೋರ್ಡ ಹಾಗೂ ನೋಟು ಪುಸ್ತಕಗಳನ್ನು ವಿತರಿಸಲಾಯಿತು.ಚಾರಿಟೇಬಲ್ ಟ್ರಸ್ಟ್ ಸಂಯೋಜಕ ವಿಶ್ವನಾಥ ಸಿಂದಗಿ ಅವರು ಸ್ಮಾರ್ಟ್ ಬೋರ್ಡ್ ಹಾಗೂ ನೋಟ್ ಬುಕ್ ಗಳನ್ನು ಉಚಿತವಾಗಿ ವಿತರಿಸಿದರು.ಮಹಾನಗರ ಪಾಲಿಕೆ ಸದಸ್ಯ ಮಲ್ಲಿಕಾರ್ಜುನ ಗಡಗಿ, ಎಸ್. ಎನ್. ಸಿನ್ನೂರ್, ಎಸ್.ಎಂ. ಬ್ಯಾಹಟ್ಟಿ, ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮಣ…

Read More