ಮಾಜಿ ಸೈನಿಕ ಮಕ್ಕಳಿಂದ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 15: ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲಾ-ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ ಮಿಲಿಟರಿ ಶಿಷ್ಯ ವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಮಿಲಿಟರಿ ಪಿಂಚಣಿ ರಹಿತ ಕರ್ನಾಟಕದ ಮಾಜಿ ಸೈನಿಕರು ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರ ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಕಲ್ಯಾಣ ನಿಧಿಯಿಂದ 1ನೇ ತರಗತಿಯಿಂದ ದ್ವಿತೀಯ ಪಿಯುಸಿಯವರೆಗೆ ಓದುವ ಮಕ್ಕಳಿಗೆ ಪುಸ್ತಕ ಅನುದಾನವನ್ನು ಮತ್ತು ವಿಶೇಷ ನಿಧಿಯಿಂದ ಡಿಗ್ರಿ, ಡಿಪ್ಲೋಮಾ, ಜೆಓಸಿ- ಪ್ರೊಪೆಷನಲ್ ಕಾಲೇಜುಗಳಲ್ಲಿ…

Read More

ಪ್ರೋತ್ಸಾಹ ಧನ: ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15:ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹ ಧನ ಪಡೆಯಲು 2024-25ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿಯನ್ನುhttps://swdservice.karnataka.gov.in/PrizeMoneyClientAPP/ ವೆಬ್‌ಸೈಟ್ ಮೂಲಕ ಸಲ್ಲಿಸಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ-ತಾಲೂಕಾ ಮಟ್ಟದ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಅಂಚೆ ಜೀವ ವಿಮೆ ಮಾರಾಟ: ನೇರ ಪ್ರತಿನಿಧಿಗಳ ನೇಮಕ, ನೇರ ಸಂದರ್ಶನ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15 :ವಿಜಯಪುರ ಅಂಚೆ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ.ಆಸಕ್ತ ಅಭ್ಯರ್ಥಿಗಳ ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಜು. 18 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸ್ಟೇಷನ್ ರಸ್ತೆಯಲ್ಲಿರುವ ಗೋಲ್ ಗುಂಬಜ್ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.ಆಯ್ಕೆಯಾದ ಅಭ್ಯರ್ಥಿಗಳು 5,000 ರೂ.ಗಳ ರಾಷ್ಟ್ರೀಯ ಉಳಿತಾಯ…

Read More

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮುಳವಾಡ ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ, ಸದಸ್ಯರು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15 :ಜಿಲ್ಲೆಯ ಬಸವನ ಬಾಗೇವಾಡಿ ವಿಧಾನಸಭೆ ವ್ಯಾಪ್ತಿಯ ಮುಳವಾಡ ಗ್ರಾಮ ಪಂಚಾಯತಿ ಅಧ್ಯಕ್ಷ- ಉಪಾಧ್ಯಕ್ಷ ಸೇರಿದಂತೆ 6 ಸದಸ್ಯರು ಬಿಜೆಪಿ ತೊರೆದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ವಿಜಯಪುರ ನಗರದಲ್ಲಿರುವ ಸಚಿವ ಶಿವಾನಂದ ಪಾಟೀಲ ಅವರ ಗೃಹ ಕಛೇರಿಗೆ ಆಗಮಿಸಿದ ಮುಳವಾಡ ಗ್ರಾಮ ಪಂಚಾಯತಿ ಬಿಜೆಪಿ ಸದಸ್ಯರು ಅಧ್ಯಕ್ಷ ಬಾಳು ಚಿನಕೇಕರ, ಉಪಾಧ್ಯಕ್ಷೆ ಮಧುಮತಿ ಧನ್ಯಾಳ, ಗ್ರಾಮ ಪಂಚಾಯತಿ…

Read More

ಡಾ.ಅಂಬೇಡ್ಕರ್ ಅವರು ನಮ್ಮ ದೇಶದ ಆಸ್ತಿ-ಶಾಸಕ ಕಟಕದೊಂಡ

ಸಪ್ತಸಾಗರ ವಾರ್ತೆ, ವಿಜಯಪುರ, 14: ಜಗತ್ತಿನಲ್ಲಿ ಮೇರು ವ್ಯಕ್ತಿತ್ವ ಹೊಂದಿದ ಡಾ.ಅಂಬೇಡ್ಕರ್ ಅವರು ಜನಹಿತಕ್ಕಾಗಿ ಶಾಂತಿದೂತನಾಗಿಬದುಕು ಸಾಗಿಸುತ್ತಾ, ಸರ್ವರಲ್ಲಿ ಸಮಾನತಾ ಭಾವ ಬಿತ್ತಿದ್ದಾರೆ. ಸಂವಿಧಾನ ಪೀಠಿಕೆಯ ಮೂಲಾಂಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ನಾಗಠಾಣ ಮತಕ್ಷೇತ್ರದ ಶಾಸಕ ವಿಠಲ ಕಟಕದೊಂಡ ಹೇಳಿದರು.ರವಿವಾರದಂದು ತಾಲೂಕಿನ ಹುಣಶ್ಯಾಳ ಗ್ರಾಮದಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೂರ್ತಿ ಪ್ರತಿಷ್ಠಾಪನೆ ಹಾಗೂ 134 ನೇ ಜಯಂತ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಡಾ.ಅಂಬೇಡ್ಕರ್ ಅವರು ಎತ್ತಿಹಿಡಿದ ವಿಶ್ವ ಕುಟುಂಬದ ತತ್ವವನ್ನು ಅನುಪಾಲಿಸಿಕೊಂಡು, ಇಂದಿನ ಯುವಪೀಳಿಗೆ…

Read More

ಗುರುಗಳು ಪ್ರಗತಿಪರ ಚಿಂತಕರಾಗಬೇಕು- ಡಾ. ಕನ್ನೂರ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 13:ಗುರುವಿನ ಸ್ಥಾನ ಶ್ರೇಷ್ಠವಾದದ್ದು. ಅವರು ಶಿಷ್ಯರಿಗೆ ಮಾರ್ಗದರ್ಶಕರಾಗಿ ಮುನ್ನಡೆಸುವವರು. ಅವರಿಂದ ಆತ್ಮ ಜ್ಞಾನ ದೊರಕುತ್ತದೆ. ಪರಮಾನಂದವನ್ನು ಹೊಂದಲು ಸಾಧ್ಯವಿದೆ. ಗುರು ಭಗವಂತನ ಪ್ರತಿನಿಧಿಯಾಗಿ ಭೂಮಿಯ ಮೇಲೆ ಇರುತ್ತಾನೆ .ಜಾತಿ ,ಧರ್ಮ ಎಲ್ಲವನ್ನು ಮೀರಿ ಸಮಾನತೆಯ ತತ್ವದಲ್ಲಿ ವಿದ್ಯೆಯನ್ನು ದಾನ ಮಾಡುತ್ತಾನೆ ಎಂದು ಬಿಡಿಈ ಸಂಸ್ಥೆಯ ಪದವಿ ಮಹಿಳಾ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ. ಸುಭಾಷ ಕನ್ನೂರ ಹೇಳಿದರು.ನಗರದ ಆಶ್ರಮರಸ್ತೆಯ ಐಶ್ವರ್ಯ ಬಡಾವಣೆಯ ವರದಾಂಜನೆಯ ದೇವಸ್ಥಾನದಲ್ಲಿ ನಡೆದ ೫೪೫ ನೇ ಮಾಸಿಕ ಸತ್ಸಂಗ ಕಾರ್ಯಕ್ರಮದಲ್ಲಿ…

Read More

ಪಾಲಿಕೆ ನೌಕರರ ಹೋರಾಟಕ್ಕೆ ಬಿಜೆಪಿ ಬೆಂಬಲ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 12: ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ವಿಜಯಪುರ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ ಪಾಲಿಕೆ ಆವರಣದಲ್ಲಿ ಕಳೆದ 5 ದಿನಗಳಿಂದ ನಡೆಯುತ್ತಿರುವ ಧರಣಿ ಸ್ಥಳಕ್ಕೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಶನಿವಾರ ಭೇಟಿ ನೀಡಿ, ಪಾಲಿಕೆ ನೌಕರರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಅವರು ಮಾತನಾಡಿ, ಪಾಲಿಕೆ ನೌಕರರ ನ್ಯಾಯಯುತ ಹೋರಾಟಕ್ಕೆ ಬಿಜೆಪಿ ಸದಾ ಬೆಂಬಲವಾಗಿ ನಿಲ್ಲುತ್ತದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಸಿಂದಗಿ ವಿಧಾನಸಭಾ…

Read More

ಕೊಯಿಮತ್ತೂರು ಬ್ಲಾಸ್ಟ್ ಪ್ರಕರಣ: ಓರ್ವ ಆರೋಪಿ ಬಂಧನ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 10:ತಮಿಳುನಾಡಿನ ಕೊಯಿಮತ್ತೂರಿನಲ್ಲಿ ನಡೆದ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರದಲ್ಲಿ ವಾಸವಾಗಿದ್ದ ಪ್ರಮುಖ ಆರೋಪಿಯನ್ನು ತಮಿಳುನಾಡಿನ ಕೊಯಿಮತ್ತೂರು ಪೊಲೀಸರು ಗುರುವಾರ ಬಂಧಿಸಿದ್ದಾರೆ.ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಸಾದಿಕ್ ರಾಜಾ (50) ಬಂಧಿತ ಆರೋಪಿ.1998 ರಲ್ಲಿ ತಮಿಳುನಾಡಿನ ಕೊಯಿಮತ್ತೂರಿನಲ್ಲಿ ಬ್ಲಾಸ್ಟ್ ಪ್ರಕರಣ ನಡೆದಿತ್ತು. ಇದಾದ ಬಳಿಕ ಪ್ರಮುಖ ಆರೋಪಿ ಸಾದಿಕ್ ರಾಜಾ ಕಳೆದ 27 ವರ್ಷಗಳಿಂದ ಬೇರೆ ಬೇರೆ ಕಡೆಗಳಲ್ಲಿ ತಲೆ ಮರೆಸಿಕೊಂಡಿದ್ದ.ಕಳೆದ 12 ವರ್ಷಗಳಿಂದ ತರಕಾರಿ ಮಾರಾಟ ಮಾಡಿಕೊಂಡು ವಿಜಯಪುರದಲ್ಲಿ ಜೀವನ ನಡೆಸುತ್ತಿದ್ದ…

Read More

ಶಿವಮೊಗ್ಗದಲ್ಲಿ ಜು. 17ರಿಂದ ಬಾಕ್ಸಿಂಗ್ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 9:ಜುಲೈ 17 ರಿಂದ 19 ರ ವರೆಗೆ ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಸಂಸ್ಥೆಯ ವತಿಯಿಂದ ಶಿವಮೊಗ್ಗ ನಗರದಲ್ಲಿ 9 ನೇ ಕರ್ನಾಟಕ ರಾಜ್ಯ ಮಟ್ಟದ ಮಹಿಳಾ ಮತ್ತು ಪುರುಷರ ಬಾಕ್ಸಿಂಗ್ ಕ್ರೀಡಾಕೂಟ ನಡೆಯಲಿದೆ.ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಸಂಸ್ಥೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಓಲಂಪಿಕ್ ಸಂಸ್ಥೆ, ಭಾರತೀಯ ಅಮೆಚೂರ್ ಬಾಕ್ಸಿಂಗ್ ಒಕ್ಕೂಟದಿಂದ ಮಾನ್ಯತೆ ಪಡೆದ ಬಾಕ್ಸಿಂಗ್ ಕ್ರೀಡೆಯಾಗಿದೆ. ಬಾಕ್ಸಿಂಗ್ ಕ್ರೀಡೆಯು ಶಾಲಾ ಕಾಲೇಜುಗಳ…

Read More

ಜು. ೧೪ರಂದು ಇಂಡಿಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ-ಲೋಕಾರ್ಪಣೆ: ಶಾಸಕ ಯಶವಂತರಾಯಗೌಡ ಪಾಟೀಲ

ಜು. ೧೪ರಂದು ಇಂಡಿಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ-ಲೋಕಾರ್ಪಣೆ: ಶಾಸಕ ಯಶವಂತರಾಯಗೌಡ ಪಾಟೀಲ

Read More