ಜ.2ರಂದು ಅಂಚೆ ವಿಭಾಗದಲ್ಲಿ ನೇರ ಪ್ರತಿನಿಧಿಗಳ ಆಯ್ಕೆಗೆ ಸಂದರ್ಶನ

ಸಪ್ತಸಾಗರ ವಾರ್ತೆ, ವಿಜಯಪುರ ಡಿ.23: ವಿಜಯಪುರ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳ ಮಾರಾಟ ಮಾಡಲು ನೇರ ಪ್ರತಿನಿಧಿಗಳ ಆಯ್ಕೆಗೆ ಗೋಲಗುಂಬಜ್ ಹತ್ತಿರದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಜನವರಿ 2ರ ಬೆಳಿಗ್ಗೆ 11 ಗಂಟೆಗೆ ನೇರ ಸಂದರ್ಶನ ನಡೆಯಲಿದೆ.ಆಸಕ್ತರು ತಮ್ಮ ಸ್ವವಿವರ, ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ಪ್ರಮಾಣ ಪತ್ರದ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8971127772 ಸಂಪರ್ಕಿಸಬಹುದಾಗಿದೆ ಎಂದು ವಿಜಯಪುರ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ…

Read More

ಇಬ್ರಾಹಿಂಪುರದಲ್ಲಿ ನಂದಬಸವೇಶ್ವರ ಜಾತ್ರೆಯ ವೈಭವ: ಕಣ್ಮನ ಸೆಳೆದ ನಂದಿಕೋಲ ಮೆರವಣಿಗೆ

ಸಪ್ತಸಾಗರ ವಾರ್ತೆ,ವಿಜಯಪುರ, ಡಿ.17: ನಗರದ ಇಬ್ರಾಹಿಂಪುರದಲ್ಲಿ ಬುಧವಾರ ಶ್ರೀ ನಂದಬಸವೇಶ್ವರ ಜಾತ್ರೆಯ ಅಂಗವಾಗಿ ನಂದಿಕೋಲ ಮೆರವಣಿಗೆ ವೈಭವದಿಂದ ನಡೆಯಿತು.ಸಿದ್ಧೇಶ್ವರ ಸಂಕ್ರಮಣ ಜಾತ್ರೆಯ ಮಾದರಿಯಲ್ಲಿ ವಿವಿಧ ವಾದ್ಯ ಮೇಳದೊಂದಿಗೆ ನಡೆದ ಅಲಂಕೃತ ನಂದಿಕೋಲ ಮೆರವಣಿಗೆ ಭಕ್ತರ ಕಣ್ಮನ ಸೆಳೆಯಿತು.ಗ್ರಾಮದ ಹೃದಯ ಭಾಗದಲ್ಲಿರುವ ಶ್ರೀ ನಂದಬಸವೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ನಂದಿಕೋಲ ಮೆರವಣಿಗೆ ಭಕ್ತರ ಮನೆಗಳಿಗೆ ಭೇಟಿ ನೀಡುತ್ತ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಮುಂದೆ ಹಾಯ್ದು ಸಂಜೆ ನಗರದ ರೇಲ್ವೆ ಸ್ಟೇಷನ್ ಮುಂದುಗಡೆ ನಡೆಯುವ ಶ್ರೀ ಪವಾಡ ಬಸವೇಶ್ವರ ದೇವರ ಭೇಟಿಗೆ…

Read More

ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.17: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಸ್ಪರ್ಧೆಗಳನ್ನು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಡಿ.18 ಹಾಗೂ 19ರಂದು ನಡೆಯಲಿದ್ದು, ವಿವಿಧ ಕಲಾಪ್ರಕಾರಗಳಲ್ಲಿ ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವ ಪ್ರತಿಭೆಗಳ ಸ್ಪರ್ಧೆಗಳು ಬೆಳಗ್ಗೆ 10 ಗಂಟೆಗೆ ಪ್ರಾರಂಭಗೊಳ್ಳಲಿವೆ.ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಉದ್ಘಾಟಿಸುವರು. ಜವಳಿ, ಕಬ್ಬು…

Read More

ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆವಿಜಯಪುರ, ಡಿ.17: ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಯರಗಲ್ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಬುಧವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಸೂಚನೆಗಳನ್ನು ನೀಡಿದರು.ಕಾರ್ಖಾನೆಗಳಲ್ಲಿನ ಕಬ್ಬಿನ ತೂಕ ಹಾಗೂ ಸಕ್ಕರೆ ಇಳುವರಿಯ ಕುರಿತು ಪರಿಶೀಲನೆ ನಡೆಸಿದರು.ರೈತರಿಗೆ ಸಕಾಲದಲ್ಲಿ ಬಿಲ್ ಪಾವತಿಸುವಂತೆ ಸೂಚನೆ ನೀಡಿದ ಅವರು, ರೈತರಿಂದ ದೂರುಗಳು ಬಾರದಂತೆ ನೋಡಿಕೊಳ್ಳುವಂತೆಯೂ, ಕಾರ್ಖಾನೆಯಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಕಾರ್ಮಿಕರಿಗೆ ಸುರಕ್ಷತಾ ನಿಯಮಗಳನ್ನು ಪಾಲಿಸಲು ತಿಳಿಸಿ, ನಿಯಮಾನುಸಾರ ಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸುವಂತೆ ಅವರು…

Read More

ಬುದ್ನಿಯಲ್ಲಿ ಎನ್ ಎಸ್ ಎಸ್ ರಾಷ್ಟ್ರೀಯ ಶಿಬಿರ

ಸಪ್ತಸಾಗರ ವಾರ್ತೆ ಗೊಳಸಂಗಿ,ಡಿ. 17:ಜಿಲ್ಲೆಯ ನಿಡಗುಂದಿ ತಾಲೂಕಿನ ಬುದ್ನಿ ಗ್ರಾಮದಲ್ಲಿ ಡಿ. 12ರಿಂದ 17 ರವರೆಗೆ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಜರುಗಿತು.ಬಸನಗೌಡ ಪಾಟೀಲ್ ಅವರು ಸಸಿಗೆ ನೀರುಣಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು.ಮುಖ್ಯ ಅತಿಥಿ ಚನಗೌಡ ಪಾಟೀಲ್, ಮುಖ್ಯೋಪಾಧ್ಯಾಯ ಬೇವೂರ ಅವರು, ಎನ್ ಎಸ್ ಎಸ್ ವತಿಯಿಂದ ಸಮಾಜ ಸೇವೆ ಹಾಗೂ ಮುಂದಾಳತ್ವ ಮಹತ್ವ ಕುರಿತು ವಿವರಿಸಿದರು.ಎನ್ಎಸ್ಎಸ್ ಸಂಯೋಜನ ಅಧಿಕಾರಿ ಎಸ್ ಬಿ ಲಮಾಣಿ ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರ ಗೀತೆ ಹಾಡಿದರು.ಪ್ರಾಚಾರ್ಯ ವಿ.ಪಿ. ಕಟ್ಟಿ…

Read More

ಥಿಂಕ್ ಗ್ಯಾಸ್ CNG ಸ್ಟೇಷನ್ ಉದ್ಘಾಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 17 : ಥಿಂಕ್ ಗ್ಯಾಸ್ CNG ಸ್ಟೇಷನ್ ಉದ್ಘಾಟನೆವಿಜಯಪುರ,ಡಿ.16,2025: ಭಾರತದ ಪ್ರಮುಖ ನಗರ ಅನಿಲ ವಿತರಣಾ ಕಂಪನಿಗಳಲ್ಲೊಂದಾದ ಥಿಂಕ್ ಗ್ಯಾಸ್, ವಿಜಯಪುರದಲ್ಲಿ ಹಳೆಯ ಹಾಗೂ ಹೊಸ ನಗರ ಬಸ್ ನಿಲ್ದಾಣದ ಸಮೀಪ ತನ್ನ ಕಂಪನಿ-ಮಾಲೀಕತ್ವದ, ಕಂಪನಿ-ನಿರ್ವಹಿತ (COCO) CNG ಸ್ಟೇಷನ್ ಅನ್ನು ಉದ್ಘಾಟಿಸಿದೆ.ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಬಸನಗೌಡ ಪಾಟೀಲ ಯತ್ನಾಳ, ವಿಧಾನಸಭಾ ಸದಸ್ಯರು – ವಿಜಯಪುರ, ಮಡಿವಾಳಪ್ಪ ಕರಡಿ, ಮೇಯರ್, ನಗರ ನಿಗಮ, ವಿಜಯಪುರ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ರಂಗರಾಜನ್…

Read More

ತಿಕೋಟಾದಲ್ಲಿ ನಾಡ ಗೀತೆ ನೂರರ ಸಂಭ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.17: ತಿಕೋಟಾ ಪಟ್ಟಣದಲ್ಲಿ ನಾಡಗೀತೆಯ ನೂರರ ಸಂಭ್ರಮ ಕಾರ್ಯಕ್ರಮ ಹಮಿಕೊಳ್ಳಲಾಗುವುದು. ರಾಷ್ಟçಕವಿ ಕುವೆಂಪು ಅವರು ಬರೆದ ನಾಡಗೀತೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಜಿಲ್ಲಾ ಮತ್ತು ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ತಿಕೋಟಾ ಆಶ್ರಯದಲ್ಲಿ ಸಾವಿರಾರು ಮಕ್ಕಳನ್ನು ಒಳಗೊಂಡು ಕಾರ್ಯಕ್ರಮ ಆಯೋಜನೆ ಮಾಡುತ್ತೇವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.ಬುಧವಾರ ತಿಕೋಟಾ ಪಟ್ಟಣದ ವಿರಕ್ತಮಠದ ಸಭಾ ಭವನದಲ್ಲಿ ತಾಲೂಕಾ ಪ್ರಥಮ ಸಮ್ಮೇಳನದ ಲೆಕ್ಕಪತ್ರ ಹಾಗೂ ಮುಂದಿನ…

Read More

ಬಿ ಎಂ ಪಾಟೀಲ್ ಪಬ್ಲಿಕ್ ಶಾಲೆಗೆ ಎಕ್ಸಲೆನ್ಸ್ ಪ್ರಶಸ್ತಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 17: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ‌. ಪಾಟೀಲ ಪಬ್ಲಿಕ್(ಸಿ.ಬಿ.ಎಸ್.ಇ) ಶಾಲೆಗೆ ಇ ಟೆಕ್ಸ್ ಬ್ರೇನ್ ಫೀಡ್ ಮ್ಯಾಗಝಿನ್ ಅಕಾಡೆಮಿಯವರು ಪ್ರತಿ ವರ್ಷ ಕೊಡುವ ಬೆಸ್ಟ್ ಅಕಾಡೆಮಿಕ್ ಎಕ್ಸ್ ಲೆನ್ಸ್ 2025-26 ವಿಭಾಗದ ಸ್ಕೂಲ್ ಎಕ್ಸಲೆನ್ಸ್ ಪ್ರಶಸ್ತಿ ಲಭಿಸಿದೆ.ಅತ್ಯುತ್ತಮ ಸ್ಟೆಮ್/ಸ್ಟೀಮ್ (STEM/STEAM ) ಇಂಪ್ಲಿಮೆಂಟೇಶನ್ ಮತ್ತು ಇನ್ನೋವೇಟಿವ್ ಕಲಿಕಾ ಅನುಷ್ಠಾನದ ಮಾನದಂಡ, ಅಲ್ಲದೇ, ಈ ಶಾಲೆಯಲ್ಲಿ ಅಳವಡಿಸಲಾದ ಎಟಿಎಲ್ ಲ್ಯಾಬ್, ಲಾಂಗ್ವೇಜ್ ಲ್ಯಾಬ್ ಮತ್ತು ತರಗತಿಗಳಲ್ಲಿ ಕಂಟ್ರೋಲ್ ಪ್ಯಾನಲ್…

Read More

ವಿದ್ಯಾರ್ಥಿಗಳಿಗೆ ನೈಜ ಜ್ಞಾನ ಅವಶ್ಯ:ಡಾ. ಜೌದ್ರಾಮ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 17: ವಿದ್ಯಾರ್ಥಿಗಳಿಗೆ ಬರೀ ಅಂಕಗಳು ಮುಖ್ಯ ಅಲ್ಲ, ಸರ್ವತೋಮುಖ ಅಭಿವೃದ್ಧಿಗೆ ನೈಜ‌ ಜ್ಞಾನ ಅವಶ್ಯ ಎಂದು ಬಾಗಲಕೋಟೆ ವಿಶ್ವವಿದ್ಯಾಲಯ ಕುಲಸಚಿವ ಡಾ. ಜೌದ್ರಾಮ ಹೇಳಿದ್ದಾರೆ.ಮಂಗಳವಾರ ನಗರದ ಎ.‌ ಎಸ್.‌‌ ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ನಿರ್ವಹಣೆ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ಪ್ರಥಮ ವರ್ಷದ ಎಂ.ಬಿ.ಎ. ವಿದ್ಯಾರ್ಥಿಗಳಿಗಾಗಿ ನಡೆದ ಪರಿಚಯಾತ್ಮಕ ಕಾರ್ಯಕ್ರಮದ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಕೇವಲ ಪಠ್ಯ ಅಧ್ಯಯನ, ಫಲಿತಾಂಶಕ್ಕೆ ಗಮನ ನೀಡದೇ ಸಾಮಾನ್ಯ ಜ್ಞಾನ, ವ್ಯವಹಾರ ಜ್ಞಾನಕ್ಕೂ ಪ್ರಾಶಸ್ತ್ಯ…

Read More

ಸ್ಟಾಪ್ ಸ್ಕೇಟಿಂಗ್ ಮ್ಯಾರಾಥಾನ್

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 16: 79ನೇ ಸ್ವತಂತ್ರ್ಯ ದಿನಾಚರಣೆ ಅಂಗವಾಗಿ ಮಾಮ್ಸ ಸ್ಕೆಟ್ ಅಕಾಡೆಮಿ ವತಿಯಿಂದ ಆಲ್ ಇಂಡಿಯಾ ಸ್ಕೇಟಿಂಗ್ ತರಬೇತಿದಾರರ ಸಂಘಟನೆ ಆಯೋಜಿಸಿದ್ದ 79 ನಿಮಿಷಗಳ ನಿರಂತರ ಸ್ಟಾಪ್ ಸ್ಕೇಟಿಂಗ್ ಮ್ಯಾರಾಥಾನಲ್ಲಿ ನಗರದ ಪ್ರತಿಷ್ಠಿತ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಯು. ಎನ್. ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ದಾಖಲೆ ನಿರ್ಮಿಸಿದ್ದಾರೆ.ವಿಜಯಪುರದ ನಗರದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ದೇಶದ 22 ನಾನಾ ನಗರಗಳಲ್ಲಿ 572 ವಿದ್ಯಾರ್ಥಿಗಳು ವಿಶ್ವದಾಖಲೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು….

Read More