ಸ್ಟಾಪ್ ಸ್ಕೇಟಿಂಗ್ ಮ್ಯಾರಾಥಾನ್

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 16: 79ನೇ ಸ್ವತಂತ್ರ್ಯ ದಿನಾಚರಣೆ ಅಂಗವಾಗಿ ಮಾಮ್ಸ ಸ್ಕೆಟ್ ಅಕಾಡೆಮಿ ವತಿಯಿಂದ ಆಲ್ ಇಂಡಿಯಾ ಸ್ಕೇಟಿಂಗ್ ತರಬೇತಿದಾರರ ಸಂಘಟನೆ ಆಯೋಜಿಸಿದ್ದ 79 ನಿಮಿಷಗಳ ನಿರಂತರ ಸ್ಟಾಪ್ ಸ್ಕೇಟಿಂಗ್ ಮ್ಯಾರಾಥಾನಲ್ಲಿ ನಗರದ ಪ್ರತಿಷ್ಠಿತ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಯು. ಎನ್. ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ದಾಖಲೆ ನಿರ್ಮಿಸಿದ್ದಾರೆ.ವಿಜಯಪುರದ ನಗರದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ದೇಶದ 22 ನಾನಾ ನಗರಗಳಲ್ಲಿ 572 ವಿದ್ಯಾರ್ಥಿಗಳು ವಿಶ್ವದಾಖಲೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು….

Read More

ಜಿಲ್ಲಾಧಿಕಾರಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 16:ಕಿಡಿಗೇಡಿಗಳು ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಮೇಲ್ ಕಳಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಲ ಹೊತ್ತು ಆತಂಕಕ್ಕೀಡಾಗಿದ್ದರು.ಯಾರೋ ಕಿಡಿಗೇಡಿಗಳು ಜಿಲ್ಲಾಧಿಕಾರಿಗಳ ಕಚೇರಿ ಮೇಲ್ ಗೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಮೇಲ್ ಕಳಿಸಿದ್ದರು.ಈ ವಿಷಯ ಜಿಲ್ಲಾಧಿಕಾರಿಗಳ ಗಮನಕ್ಕೆ ಬರುತ್ತಿದ್ದಂತೆಯೇ ಪೊಲೀಸರಿಗೆ ತಕ್ಷಣ ಸುದ್ದಿ ಮುಟ್ಟಿಸಲಾಯಿತು. ವಿಳಂಬ ಮಾಡದೆ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ನೋಡು ನೋಡುತ್ತಿದ್ದಂತೆಯೇ ಬಾಂಬ್ ನಿಗ್ರಹದಳ ಶ್ವಾನದಳದ ಜೊತೆಗೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ…

Read More

ದೆಹಲಿ ಪೊಲೀಸ್ ನೋಟೀಸ್ ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಸಿಎಂ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ ದೆಹಲಿ, ಡಿ.16:“ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡುವ ಬಗ್ಗೆ ಕೇಳಿದಾಗ, “ಸೋಮವಾರ ದೆಹಲಿ ಪೊಲೀಸರಿಗೆ ಉತ್ತರ ನೀಡಲು ನಿರ್ಧರಿಸಿದ್ದೆ. ಆದರೆ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಶೇಷ ವಿಮಾನದಲ್ಲಿ ದಾವಣಗೆರೆಗೆ ತೆರಳುತ್ತಿದ್ದು, ಅಧಿವೇಶನ ಮುಗಿದ ಬಳಿಕ ಉತ್ತರ…

Read More

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣಗಳು ಮತ್ತು ಗಳಿಕೆಯಲ್ಲಿ ಗಮನಾರ್ಹ ದಾಖಲೆ

ಸಪ್ತ ಸಾಗರ ವಾರ್ತೆ ಹುಬ್ಬಳ್ಳಿ, ಡಿ. 15:ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಟಿಕೆಟ್ ರಹಿತ ಮತ್ತು ಅಕ್ರಮ ಪ್ರಯಾಣ ಪ್ರಕರಣಗಳು ಗಣನೀಯವಾಗಿ ಪತ್ತೆಯಾಗಿದ್ದು, ರೈಲ್ವೆಗೆ ಆದಾಯದಲ್ಲಿ ಭಾರೀ ಹೆಚ್ಚಳವಾಗಿದೆ.2025-26ರ ಪ್ರಸಕ್ತ ಆರ್ಥಿಕ ವರ್ಷದ ನವೆಂಬರ್ ತಿಂಗಳಿನಲ್ಲಿ (2025) ಒಟ್ಟು 67,000 ಟಿಕೆಟ್ ತಪಾಸಣಾ ಪ್ರಕರಣಗಳನ್ನು ನೈಋತ್ಯ ರೈಲ್ವೆ ದಾಖಲಿಸಿದ್ದು, ಇದರಿಂದ ಬರೋಬ್ಬರಿ 5.36 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಕಳೆದ ವರ್ಷದ…

Read More

ವಿದ್ಯೆ ಎಂಬುದು ಅಭ್ಯಾಸ ಮಾಡುವವನ ಕೈವಶವಾಗುತ್ತದೆ-ಐಹೊಳ್ಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 15:ಜೀವನದಲ್ಲಿ ಯಾರು ಸಾಧನೆ ಮಾಡಬೇಕೆಂದು ಬಯಸಿ ಅಭ್ಯಾಸವನ್ನು ಮಾಡುತ್ತಾರೋ ಅವರ ಸಾಧನೆಗೆ ವಿದ್ಯೆಯ ಫಲಗಳು ಬರುತ್ತವೆ. ಶಿವಯೋಗಿ ಸಿದ್ದರಾಮರು ಇದನ್ನು ತಮ್ಮ ವಚನದಲ್ಲಿ ಪ್ರಸ್ತಾಪಿಸಿದ್ದಾರೆ. ಅವಿದ್ಯೆ ಹೋಗಲಾಡಿಸಲು ನಾವೆಲ್ಲ ಸಾಧನಾಶೀಲರಾಗಿ ಸಾಧಿಸಬೇಕೆಂದು ಫ .ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಸಂಯೋಜನಾಧಿಕಾರಿ ಡಾ.ವ್ಹಿ.ಡಿ. ಐಹೊಳ್ಳಿ ಇಂದಿಲ್ಲಿ ಅಭಿಪ್ರಾಯ ಪಟ್ಟರು. ನಗರದ ಆಶ್ರಮ ರಸ್ತೆಯ ಐಶ್ವರ್ಯ ಬಡಾವಣೆಯ ವರದಾಂಜನೇಯ ದೇವಸ್ಥಾನದಲ್ಲಿ ಹಮ್ಮಿಕೊಂಡ 549ನೇ ಸತ್ಸಂಗ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.ವಾಚಿಸಿ ಅನುಭವಿ…

Read More

ಡಿ. 19ರಂದು ಬಿಎಲ್ ಡಿಇ ಡೀಮ್ಡ್ ವಿವಿ ಘಟಿಕೋತ್ಸವ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 15: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ ಡಿಸೆಂಬರ್ 19 ಶುಕ್ರವಾರ ವಿವಿಯ ಗ್ರಂಥಾಲಯ ಸಭಾಂಗಣದಲ್ಲಿ ನಡೆಯಲಿದೆ.ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಈ ಘಟಿಕೋತ್ಸವದಲ್ಲಿ ನವದೆಹಲಿ ರಾಷ್ಟ್ರೀಯ ವೈದ್ಯಕೀಯ ಆಯೋಗದ ವೈದ್ಯಕೀಯ ಮೌಲ್ಯಮಾಪನ ಮತ್ತು ಶ್ರೇಯಾಂಕ ಮಂಡಳಿಯ ಅಧ್ಯಕ್ಷ ಡಾ. ಎಂ. ಕೆ. ರಮೇಶ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ…

Read More

ಶಾಮನೂರ ನಿಧನಕ್ಕೆ ಸಚಿವ ಎಂ. ಬಿ. ಪಾಟೀಲ ಕಂಬನಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 14: ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಸಂತಾಪ ಸೂಚಿಸಿದ್ದಾರೆ.ಶಿಕ್ಷಣ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರವಾಗಿದೆ. ಸಾರ್ವಜನಿಕ ಜೀವನದಲ್ಲಿ ಅವರ ಸೇವೆ, ಸಂಘಟನೆಗೆ ನೀಡಿದ ನಾಯಕತ್ವ ಮತ್ತು…

Read More

ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ

ಸಪ್ತಸಾಗರ ವಾರ್ತೆ, ದಾವಣಗೆರೆ, ಡಿ. 14: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (94) ನಿಧನ ಹೊಂದಿದ್ದಾರೆ.ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಹಲವು ದಿನಗಳಿಂದ ಬೆಂಗಳೂರಿನ ಸ್ಪರ್ಶ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲ ನೀಡದೆ ಅವರು ಡಿ. 14ರ ಸಂಜೆ ಸಾವನಪ್ಪಿದ್ದಾರೆ.ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

Read More

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 14 :ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರೂ ಆಗಿರುವ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.ಕೆಪಿಸಿಸಿ ಖಜಾಂಚಿಯಾಗಿ ಸುದೀರ್ಘ ಅವಧಿಗೆ ಕೆಲಸ ಮಾಡಿರುವ ಅವರು, ಪಕ್ಷ ಸಂಘಟನೆಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಬಾಪೂಜಿ ಶಿಕ್ಷಣ ಸಂಸ್ಥೆ ಮೂಲಕ ದಾವಣಗೆರೆ ಜಿಲ್ಲೆ ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಳಲು ಕಾರಣರಾಗಿದ್ದಾರೆ. ಅವರ ಅಗಲಿಕೆಯಿಂದ ಸಾರ್ವಜನಿಕ ಕ್ಷೇತ್ರಕ್ಕೆ ಅಷ್ಟೇ ಅಲ್ಲ, ಶಿಕ್ಷಣ ಕ್ಷೇತ್ರಕ್ಕೂ ತುಂಬಲಾರದ ನಷ್ಟವನ್ನುಂಟು ಮಾಡಿದೆ…

Read More

ಅನುಪ್ರಿಯಾ ಬಾಲ ಗೌರವ ಪ್ರಶಸ್ತಿಗೆ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರಡಿ. 14: ನಗರದ ಪ್ರತಿಷ್ಠಿತ ಬಿ.ಎಲ್‌.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಅನುಪ್ರಿಯಾ ರಾಘವೇಂದ್ರ ಕುಲಕರ್ಣಿ ಅವರನ್ನು ಕರ್ನಾಟಕ ಬಾಲವಿಕಾಸ ಅಕಾಡೆಮಿ 2023-24ನೇ ವರ್ಷದ ಬಾಲ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಿದೆ.ಅಕಾಡೆಮಿಯ ಬಹುಮುಖ ಪ್ರತಿಭೆ ವಿಭಾಗದ ಅಡಿ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಡಿಸೆಂಬರ್ 16 ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿರುವ ಕಾರ್ಯಕರ್ಮದಲ್ಲಿ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಪ್ರಶಸ್ತಿ…

Read More