ಇಂಗ್ಲಿಷ್ ಕಂಠಪಾಠ ಸ್ಪರ್ಧೆಯಲ್ಲಿ ತಾಲೂಕಿಗೆ ಪ್ರಥಮ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 8: ಶಾಸ್ತ್ರಿ ನಗರದ ಇಂಡಿಯನ್ ಪಬ್ಲಿಕ್  ಶಾಲೆಯ ವಿದ್ಯಾರ್ಥಿ ಅಫ್ಫಾನ್  ಇ. ಬಾಗವಾನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾನೆ.ಇತ್ತೀಚೆಗೆ KBHPS No.5 ವಿಜಯಪುರ ಶಾಲೆಯಲ್ಲಿ  ಹಮ್ಮಿಕೊಂಡಿದ್ದ ತಾಲೂಕುಮಟ್ಟದ ಪ್ರತಿಭಾ ಕಾರಂಜಿಯ ಇಂಗ್ಲಿಷ್ ಕಂಠಪಾಠ ಸ್ಪರ್ಧೆಯಲ್ಲಿ ಭಾಗವಹಿಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ M. Y. Vaggar, ಇಟಗಿ ಕಾಲೋನಿ ವಿಜಯ ಪುರ ಹಾಗೂ ಕುಟುಂಬಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

Read More

2030 ರೊಳಗೆ 2.5 ಲಕ್ಷ ಮನೆಗಳಿಗೆ ಸಿ.ಎನ್.ಜಿ ಗ್ಯಾಸ್ ಸಂಪರ್ಕ ಗುರಿ: ಯತ್ನಾಳ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 6: ಮನೆಗಳಿಗೆ ನೇರವಾಗಿ ಸಿ.ಎನ್.ಜಿ ಸರಬರಾಜು ಮಾಡಿ, ನಗರವನ್ನು ಮಾಲಿನ್ಯ ಮುಕ್ತವಾಗಿಡುವ ಬಹಳ ದಿನಗಳ ಕನಸು ಥಿಂಕ್ ಗ್ಯಾಸ್ ಸಿ.ಎನ್.ಸಿ ಮೂಲಕ ನಡೆಯುತ್ತಿದೆ. 2030 ರೊಳಗೆ 2.5 ಲಕ್ಷ ಮನೆಗಳಿಗೆ ನೇರವಾಗಿ ಪಿ.ಎನ್.ಜಿ ಗ್ಯಾಸ್ ಸಂಪರ್ಕ ನೀಡುವ ಗುರಿ ಹೊಂದಲಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ತಿಳಿಸಿದರು.ನಗರದಲ್ಲಿ ಶುಕ್ರವಾರ ಥಿಂಕ್ ಗ್ಯಾಸ್ ಸಿ.ಎನ್.ಜಿ ಸ್ಟೇಶನ್ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ವಿಜಯಪುರ ನಗರದಲ್ಲಿ 120 ಮನೆಗಳು ಮತ್ತು…

Read More

ಭೂಮಿ ಉಳಿದರೆ ಮನುಸಂಕುಲ ಉಳಿಯಲು ಸಾದ್ಯ

ಸಪ್ತಸಾಗರ ವಾರ್ತೆ ವಿಜಯಪುರ, ಡಿ.6: ಭೂಮಿ ಉಳಿದರೆ ಮನುಸಂಕುಲ ಉಳಿಯಲು ಸಾಧ್ಯ. ಉತ್ತಮ ಪರಿಸರದಿಂದಲೇ ಉತ್ತಮ ಆರೋಗ್ಯ ಹೊಂದಬಹುದು. ನಮ್ಮ ಸುತ್ತಮುತ್ತಲಿನ ಪರಿಸರ ನಮ್ಮ ನಡವಳಿಕೆ ಹಾಗೂ ವಿಚಾರಗಳ ಮೇಲೆ ಸಾಕಷ್ಟು ಪರಿಣಾಮ ಬೀರುತ್ತದೆ ಎಂದು ಚಿಂತಕರು, ಇತಿಹಾಸ ತಜ್ಞರು, ಹಿರಿಯ ಅಧಿಕಾರಿಗಳು, ಪರಿಸರ ಪ್ರೇಮಿಗಳು ಹೇಳಿದ್ದಾರೆ.ವೃ,ಕ್ಷಥಾನ್ ಹೆರಿಟೇಜ್ ರನ್-2025ರ ಮುನ್ನಾ ದಿನವಾದ ಇಂದು ಶನಿವಾರ ನಗರದ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ನಾನಾ ಚರ್ಚಾಗೋಷ್ಠಿಯಲ್ಲಿ ಮಾತನಾಡಿದ ಗಣ್ಯರು ಪರಿಸರ ಸಂರಕ್ಷಣೆ, ಪ್ರಾಚೀನ…

Read More

7 ಜನ ಕೊಲೆ ಆರೋಪಿತರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 50,000 ರೂ. ದಂಡ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 6:ಜಿಲ್ಲೆಯ ಸಿಂದಗಿ ತಾಲೂಕಿನ ಕೋರವಾರದಲ್ಲಿ ನಡೆದ ಭೀಮನಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನ ಆರೋಪಿತರಿಗೆ ಜೀವಾವದಧಿ ಶಿಕ್ಷೆ ಹಾಗೂ ತಲಾ ಐವತ್ತು ಸಾವಿರ ರೂಪಾಯಿ ದಂಡ ವಿಧಿಸಿ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.ಮನೆ ಮುಂದಿನ ಖುಲ್ಲಾ ಜಾಗೆ ಸಲುವಾಗಿ ದಾಯಾದಿಗಳ ಮಧ್ಯೆ ಮೇಲಿಂದ ಮೇಲೆ ಕಲಹ ಉಂಟಾಗುತ್ತಿತ್ತು. 9-10-2013ರಂದು ಈ ಸಂಬಂಧ ಕಲಹ ವಿಕೋಪಕ್ಕೆ ಹೋಗಿ ಭೀಮನಗೌಡ ನಿಂಗನಗೌಡ ಪಾಟೀಲ ಹಾಗೂ ಆತನ ಸಹೋದರರಾದ…

Read More

ಮಕ್ಕಳ ಸರ್ವಾರ್ಗೀಣ ಅಭಿವೃದ್ದಿಗೆ ಕ್ರಮ ವಹಿಸಲು ಶಶಿಧರ ಕೋಸಂಬೆ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ ಡಿ.6: ಮಕ್ಕಳ ಸರ್ವಾಂಗಿಣ ವ್ಯಕ್ತಿತ್ವದ ಬೆಳವಣಿಗೆಗಾಗಿ ಶಿಕ್ಷಣ ಇಲಾಖೆಯೊಂದಿಗೆ ಎಲ್ಲ ಇಲಾಖಾಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಮಕ್ಕಳಿಗೆ ದೊರಬೇಕಾದ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಹೇಳಿದರು.ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಹಮ್ಮಿಕೊಂಡ ಉಚಿತ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಕುರಿತ…

Read More

ರಾಷ್ಟ್ರೀಯ ಆರೋಗ್ಯ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಶ್ರಮಿಸಿ : ಜಿಪಂ ಸಿಇಒ ರಿಷಿ ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 6:ಜಿಲ್ಲೆಯಲ್ಲಿರುವ ಎಲ್ಲ ಗರ್ಭಿಣಿ ಮಹಿಳೆಯರ ಮಾಹಿತಿಯನ್ನು ಆರ್.ಸಿ.ಹೆಚ್. ತಂತ್ರಾಂಶದಲ್ಲಿ ಕಡ್ಡಾಯವಾಗಿ ನಿಗದಿತ ಸಮಯದಲ್ಲಿ ನೋಂದಣಿ ಮಾಡಬೇಕು ಹಾಗೂ ನಿಯಮಿತವಾಗಿ ಆರೋಗ್ಯ ತಪಾಸಣೆಯನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಸೂಚನೆ ನೀಡಿದರು.ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಸಂಘದ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ, ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಯಾವುದೇ…

Read More

ಡಾ. ಬಿ.ಆರ್.ಅಂಬೇಡ್ಕರ್ ವರ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಗೌರವ ಸಮರ್ಪಣೆ

ಸಪ್ತಸಾಗರ ವಾರ್ತೆ, ವಿಜಯಪುರ ಡಿ.6:ಜಿಲ್ಲಾಡಳಿತದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಮಹಾನಗರ ಪಾಲಿಕೆ ಮೇಯರ್ ಎಂ.ಎಸ್ ಕರಡಿ, ಜಿಲ್ಲಾಧಿಕಾರಿ ಡಾ.ಆನಂದ ಕೆ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ನಗರದ ಅಂಬೇಡ್ಕರ್ ವೃತ್ತದಲ್ಲಿನ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ಮಾಡಿ, ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ಆರತಿ ಶಹಾಪೂರ,…

Read More

ವಿಶೇಷ ಘಟಕ ಯೋಜನೆಯ ಅನುದಾನ ಲ್ಯಾಪ್ಸ್ ಆಗದಂತೆ ಕ್ರಮ ಕೈಗೊಳ್ಳಿ – ಸುನೀಲ್ ಉಕ್ಕಲಿ

ಸಪ್ತಸಾಗರ ವಾರ್ತೆ,ವಿಜಯಪುರ,ಡಿ. 5: ವಿಶೇಷ ಘಟಕ ಯೋಜನೆ ಅನುದಾನ ಲ್ಯಾಪ್ಸ್ ಆಗದಂತೆ ನಿಗದಿತ ಅವಧಿಯಲ್ಲಿ ಕ್ರಿಯಾಯೋಜನೆಯನ್ವಯ ಕ್ರಮವಹಿಸಿ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯ ಸುನೀಲ ಉಕ್ಕಲಿ ಅವರು ಹೇಳಿದರು.ಗುರುವಾರ ನಗರದ ನೂತನ ಪ್ರವಾಸಿ ಮಂದಿರದ ಸಭಾ ಭವನದಲ್ಲಿ ವಿಶೇಷ ಘಟಕ ಯೋಜನೆಗೆ ಒಳಪಡುವ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, 2025-26ನೇ ಸಾಲಿನ ವಿಶೇಷ ಘಟಕ ಯೋಜನೆಗೆ ಸಂಬಂಧಿಸಿದ ಪ್ರಗತಿ ಮಾಹಿತಿಯನ್ನು ಪಡೆದುಕೊಂಡ ಅವರು, ಕೃಷಿ ಇಲಾಖೆ, ಕೈಗಾರಿಕೆ…

Read More

ನವೆಂಬರ್ ಕ್ರಾಂತಿನೂ ಇಲ್ಲ, ಡಿಸೆಂಬರ್ ದೂ ಇಲ್ಲ, ಕ್ರಾಂತಿ ಏನಿದ್ದರೂ 2028ರಲ್ಲಿ, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ: ಡಿಸಿಎಂ ಡಿ.ಕೆ. ಶಿವಕುಮಾರ

There will be no revolution in November or December; whatever revolution happens will be in 2028, when the Congress returns to power, said Deputy Chief Minister D.K. Shivakumar.

Read More