1001 ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 18: ಹಲವಾರು ಸಮಾಜಮುಖಿ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳಲು ಸ್ಥಾಪನೆಯಾಗಿರುವ ಶರತ್ ಪಾಟೀಲ ಫೌಂಡೇಶನ್ ಹಾಗೂ ನನನ್ನ ಗಿಡ ನನ್ನ ಭೂಮಿ ಸಂಘಟನೆ ವತಿಯಿಂದ ನಗರದ ಆಶ್ರಮ ರಸ್ತೆಯಲ್ಲಿರುವ ಜಾಗೆಯಲ್ಲಿ 1001 ಸಸಿ ನೆಡುವ ಪರಿಸರಮುಖಿ ಕಾರ್ಯಕ್ರಮ ನಡೆಯಿತು‌.ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿದ ಖ್ಯಾತ ಚಿಂತಕ ಹಾಗೂ ಯುವ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ಪರಿಸರ ರಕ್ಷಣೆ ಪ್ರತಿಯೊಬ್ಬರ ಹೊಣೆಗಾರಿಕೆ, ನಮ್ಮನ್ನು ಸಲುಹುತ್ತಿರುವ ಪರಿಸರ ನಮಗೆ ಬೆಲೆ ಕಟ್ಟಲಾಗದ…

Read More

ಆಡಳಿತ ನ್ಯಾಯಾಧೀಕರಣ ತರಬೇತಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ,ಆ. 18 : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ತರಬೇತಿಯ ಅವಧಿ ಎರಡು ವರ್ಷದಾಗಿದ್ದು, ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಮಾಸಿಕ ಆದಾಯ 10,000 ಶಿಷ್ಯ ವೇತನ ನೀಡಲಾಗುವುದು.ಅರ್ಜಿ ಸಲ್ಲಿಸುವ ಅಭ್ಯರ್ಥಿಯು ವಿಜಯಪುರ ಜಿಲ್ಲೆಯವರಾಗಿಬೇಕು. 40 ವರ್ಷ ವಯಸ್ಸು ಹಾಗೂ ಕುಟುಂಬದ ವಾರ್ಷಿಕ ಆದಾಯ 2ಲಕ್ಷ 50ಸಾವಿರ ರೂ. ಮೀರಿರಬಾರದು. ಎರಡು ವರ್ಷದ ಒಳಗೆ…

Read More

ತೋಟಗಾರಿಕೆ ಇಲಾಖೆಯಿಂದ ಶೇ.25ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ,ಆ. 18 : ಹೊಸದಾಗಿ ನಿರ್ಮಿಸಿದ ತೋಟಗಾರಿಕೆ ಉತ್ಪನ್ನಗಳ ಪೂರ್ಣ ಪ್ರಮಾಣದ ಮೌಲ್ಯವರ್ಧಿತ ಸಂಸ್ಕರಣೆ ಘಟಕಗಳು, ಔಷಧಿ ಮತ್ತು ಸುಗಂಧ ದ್ರವ್ಯಗಳ ಘಟಕಗಳನ್ನೊಳಗೊಂಡಂತೆ, ಪ್ರಾಯೋಗಿಕ ಉತ್ಪಾದನೆ ಮತ್ತು ವಾಣಿಜ್ಯ ಉತ್ಪಾದನೆ ಕೈಗೊಳ್ಳುವ ಘಟಕಗಳಿಗೆ ತೋಟಗಾರಿಕೆ ಇಲಾಖೆ ವತಿಯಿಂದ ಒದಗಿಸಲಾಗುವ ಶೇ.25ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ದ್ರಾಕ್ಷಾರಸ ಉತ್ಪಾದನಾ ಘಟಕ, ಹಣ್ಣು ಮತ್ತು ತರಕಾರಿ ಸಂಸ್ಕರಣೆ-ಕ್ಯಾನಿಂಗ್ ಘಟಕ, ಉಪ್ಪಿನಕಾಯಿ ಘಟಕ, ಸುಗಂಧದ್ರವ್ಯ-ಔಷಧಿ ಸಸ್ಯಗಳ ಸಂಸ್ಕರಣಾ ಘಟಕಗಳು, ಗರ್ಕಿನ್ ಘಟಕಗಳು ಇತ್ಯಾದಿ ಘಟಕಗಳನ್ನು ಸಹಾಯಧನಕ್ಕೆ ಪರಿಗಣಿಸಲಾಗುವುದು. ಈ ಕುರಿತಂತೆ…

Read More

ಆ. 24ರಂದು ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಕುರಿತು ಕಾರ್ಯಗಾರ, ಪೋಸ್ಟರ್ ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 18: ಜಿಲ್ಲೆಯಲ್ಲಿ ಸರಕಾರಿ ಉದ್ಯೋಗದ ಅಭಿಲಾಷೆಯಿಂದ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಮತ್ತು ದಲಿತ ವಿದ್ಯಾರ್ಥಿ ಪರಿಷತ್ ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಹೇಗೆ ? ಎಂಬ ಒಂದು ದಿನದ ಕಾರ್ಯಾಗಾರವನ್ನು ಆ. 24ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಅವರು ಕಾರ್ಯಗಾರದ ಪೋಸ್ಟರ್ ಬಿಡುಗಡೆ ಮಾಡಿದರು.ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯಕುಮಾರ ಅಜಮನಿ ಅವರು ಮಾತನಾಡಿ,…

Read More

ನೀರಾವರಿಯಿಂದ ಕೃಷಿ ಉಪಕರಣಗಳ ಮಾರಾಟಕ್ಕೂ ವರದಾನ: ಸಚಿವ ಎಂ.ಬಿ. ಪಾಟೀಲ್

ಸಪ್ತಸಾಗರ ವಾರ್ತೆ,ವಿಜಯಪುರ, ಆ. 17: ನೀರಾವರಿಯಿಂದಾಗಿ ಕೃಷಿಯಷ್ಟೇ ಅಲ್ಲ, ಟ್ರ್ಯಾಕ್ಟರ್ ಮತ್ತು ಕೃಷಿ ಉಪಕರಣಗಳನ್ನು ಮಾರಾಟ ಮಾಡುವವರಿಗೂ ವರದಾನವಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ಸಿಂದಗಿ ಪಟ್ಟಣದಲ್ಲಿ ಸ್ವರಾಜ್ ಟ್ರ್ಯಾಕ್ಟರ್ ನೂತನ ಶೋ ರೂಂ ಉದ್ಘಾಟಿಸಿ ಅವರು ಮಾತನಾಡಿದರು.ಜಗತ್ತು ಆಧುನೀಕರಣದತ್ತ ಸಾಗಿರುವುದರಿಂದ ಅದಕ್ಕೆ ತಕ್ಕಂತೆ ಕೃಷಿ ಸಲಕರಣೆಗಳನ್ನು ಬಳಸಬೇಕಾಗುತ್ತಿದೆ. ಟ್ರ್ಯಾಕ್ಟರ್ ರೈತರ ಬೆನ್ನೆಲುಬಾಗಿದ್ದು, ರೈತರ ಶ್ರಮವನ್ನು ಕಡಿಮೆ ಮಾಡಿ ಹೊಲದ ಕೆಲಸವನ್ನು ಬೇಗ ಮತ್ತು ಸುಲಭವಾಗಿ…

Read More

ಯತ್ನಾಳ್ ಕಾರ್ ಅಡ್ಡಗಟ್ಟಿ ಕಪ್ಪು ಬಾವುಟ ಪ್ರದರ್ಶನ: ಯುವಕರನ್ನು ವಶಕ್ಕೆ ಪಡೆದ ಪೊಲೀಸರು

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 17: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೀಡಿದ ಪ್ರಚೋದನೆಕಾರಿ ಹೇಳಿಕೆ ವಿರೋಧಿಸಿ ಒಂದು ಕೋಮಿನ ಯುವಕರು ಯತ್ನಾಳ್ ಕಾರಿಗೆ ಅಡ್ಡಗಟ್ಟಿ ಕಪ್ಪು ಬಟ್ಟೆ ಪ್ರದರ್ಶನ ನಡೆಸಿದ ಘಟನೆ ಭಾನುವಾರ ಆಲಮೇಲದಲ್ಲಿ ನಡೆದಿದೆ.ಇತ್ತೀಚೆಗೆ ಕೊಪ್ಪಳದಲ್ಲಿ ಯತ್ನಾಳ್ ಅವರು ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ಕೊಡುತ್ತೇವೆ ಎಂದು ಘೋಷಿಸುವ ಮೂಲಕ ವಿವಾದ ಹುಟ್ಟು ಹಾಕಿದ್ದರು.ಈ ಹೇಳಿಕೆ ವಿರೋಧಿಸಿ ಮುಸ್ಲಿಂ ಯುವಕರು ಯತ್ನಾಳ್ ಕಾರಿಗೆ ಅಡಗಟ್ಟಿ…

Read More

ಸ್ಕೇಟಿಂಗ್ ಸ್ಪರ್ಧೆಯಲ್ಲಿ ಬಿಎಲ್ ಡಿಇ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 17: ಬಿ.ಎಲ್.ಡಿ.ಇ ಸಂಸ್ಥೆಯ ಜಮಖಂಡಿಯಲ್ಲಿರುವ ಬಿ.ಎಲ್.ಡಿ.ಇ ಸ್ಪೋರ್ಟ್ ಅಕಾಡೆಮಿಯ ವಿದ್ಯಾರ್ಥಿಗಳು 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ 79 ನಿಮಿಷಗಳ ಸತತ ಸ್ಕೇಟಿಂಗ್ ನಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.ಯುನೈಟೆಟ್ ಸ್ಟೇಟ್ ಆಫ್ ಅಮೇರಿಕಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್, ಜೀನಿಯಸ್ ಇಂಡಿಯನ್ ಬುಕ್ ಆಫ್ ವರ್ಡ್ಲ್ ರೆಕಾರ್ಡ್ಸ್ ಮತ್ತು ಯು. ಎನ್. ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಜಂಟಿಯಾಗಿ ಶುಕ್ರವಾರ ದೇಶಾದ್ಯಂತ ಜಿಲ್ಲಾ ಕೇಂದ್ರದಲ್ಲಿ ಸ್ಕೇಟಿಂಗ್ ಆಯೋಜಿಸಿತ್ತು….

Read More

ತಿಕೋಟಾ ತಾಲೂಕಾ ಕಚೇರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.16: ಜಿಲ್ಲೆಯ ತಿಕೋಟಾ ತಾಲೂಕಾ ಕಚೇರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ. ಕೆ ಅವರು ಶನಿವಾರ ಭೇಟಿ ನೀಡಿ, ತಾಲೂಕಾ ಆಡಳಿತದ ಕಾರ್ಯ ನಿರ್ವಹಣೆಯ ಪ್ರಗತಿ ಪರಿಶೀಲನೆ ನಡೆಸಿದರು.ತಹಶೀಲ್ದಾರ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಬಾಕಿ ಕಡತಗಳ ಪರಿಶೀಲನೆ, ನ್ಯಾಯಾಲಯ ಪ್ರಕರಣಗಳ ಕಡತ, ಆಧಾರ ನೋಂದಣಿ, ಕಂದಾಯ ಗ್ರಾಮಗಳ ಮಾಹಿತಿ, ಭೂಮಿ ಪ್ರಗತಿ, ಮೋಜಣಿ ಕಡತ ಪ್ರಗತಿ ಮಾಹಿತಿ, ಪ್ರಮಾಣ ಪತ್ರಗಳ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು. ಇ ಪೌತಿ ಖಾತೆ ಪ್ರಗತಿ,…

Read More

ಅಂಬೇಡ್ಕರ್ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 16: ಇಲ್ಲಿನ ಮಾತೋಶ್ರೀ ರಮಾಬಾಯಿ ಅಂಬೇಡ್ಕರ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸ ದಿನಾಚರಣೆ ಆಚರಿಸಲಾಯಿತು.ಮಾತೋಶ್ರೀ ರಮಾಬಾಯಿ ಅಂಬೇಡ್ಕರ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಹಾಗೂ ಪದವಿ ಮಹಾವಿದ್ಯಾಲಯದಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮ ಆಚರಿಸಲಾಯಿತು.ಸಂಸ್ಥೆಯ ಅಧ್ಯಕ್ಷ ತುಕಾರಾಮ ಚಂಚಲಕರ ಅವರು ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿ, ಎಲ್ಲರೂ ದೇಶಪ್ರೇಮವನ್ನು ಮೈಗೂಢಿಸಿಕೊಳ್ಳಬೇಕು. ಡಾ. ಬಾಬಾ ಸಾಹೇಬ್ ಅಂಬೇಡ್ಕರ ಅವರ ತತ್ವ ಸಿದ್ಧಾಂತಗಳನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು ಮಾರ್ಮಿಕವಾಗಿ ಹೇಳಿದರು.ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಮುಖ್ಯಗುರುಗಳಾದ ಎಸ್.ಎಸ್. ಗುಡ್ಲೇನವರ,…

Read More

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ದೇಶ ಪ್ರೇಮ ಇತರರಿಗೆ ಆದರ್ಶ: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಆ.16: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ದೇಶಪ್ರೇಮ, ಹೋರಾಟದ ಕಿಚ್ಚು ಸದಾ ಆದರ್ಶವಾಗಿವೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ತಿಕೋಟಾ ತಾಲೂಕಿನ ರತ್ನಾಪುರ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನೆ ಮತ್ತು ಬಬಲೇಶ್ವರ ತಾಲೂಕಿನ ಕಾಖಂಡಕಿ ಬಳಿಯ ಅಗಸನಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣನವರ 229ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಸಂಗೊಳ್ಳಿ ರಾಯಣ್ಣ ನಾಡಿನ ಏಕತೆ ಮತ್ತು ಸ್ವಾಭಿಮಾನದ ಶಾಶ್ವತ ಸಂಕೇತ. ಕಿತ್ತೂರು ಸಂಸ್ಥಾನವನ್ನು…

Read More