ಗ್ಯಾರಂಟಿಗಳಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿ.ಎಂ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಅರಸೀಕೆರೆ, ಜು.26:ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ ಎಂದು ನುಡಿದರುಕ್ಷೇತ್ರದ ಜನಪರ ಅಭಿವೃದ್ಧಿ ಕೆಲಸ ಮಾಡುವುದರಲ್ಲಿ, ಸದನದಲ್ಲಿ ಕ್ಷೇತ್ರದ ಬಗ್ಗೆ ಧ್ವನಿ ಎತ್ತುವುದರಲ್ಲ ಶಾಸಕ ಶಿವಲಿಂಗೇಗೌಡರು ಮುಂದಿದ್ದಾರೆ. ನಾಲ್ಕು ಬಾರಿ ಚುನಾವಣೆಯಲ್ಲಿ ಗೆದ್ದಿರುವ ಅವರು ಮುಂದಿನ ಚುನಾವಣೆಯಲ್ಲೂ ಗೆಲ್ಲುವುದು ಶತಸಿದ್ಧ ಎಂದು…

Read More

ವಿಜಯಪುರ ಜಿಲ್ಲೆಯಲ್ಲಿ ಹೊಸ ರೈಲು ಮಾರ್ಗ: ಸಂಸದ ರಮೇಶ ಜಿಗಜಿಣಗಿ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 24:ಸಂಸದ ರಮೇಶ ಜಿಗಜಿಣಗಿ ಅವರುದೆಹಲಿಯಲ್ಲಿ ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ ಅವರನ್ನು ಭೇಟಿಯಾಗಿ ಜಿಲ್ಲೆಯಲ್ಲಿ ಹೊಸ ರೈಲು ಮಾರ್ಗಗಳ ಸ್ಥಾಪನೆಗೆ ಮನವಿ ಮಾಡಿಕೊಂಡರು. ಆಲಮಟ್ಟಿ- ಇಲಕಲ್ -ಕೊಪ್ಪಳದಿಂದ ಚಿತ್ರದುರ್ಗವರೆಗೆ ಹೊಸ ರೈಲ್ವೆ ಮಾರ್ಗವನ್ನು ಮಾಡುವಂತೆ ಸುಧೀರ್ಘವಾಗಿ ಚರ್ಚಿಸಿ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಶಿ ಹಾಗೂ ವಿ. ಸೋಮಣ್ಣ ಮತ್ತು ಬಾಗಲಕೋಟೆ ಜಿಲ್ಲೆಯ ಸಂಸದಪಿ. ಸಿ. ಗದ್ದಿಗೌಡರ ಅವರು ಸೇರಿದಂತೆ ಆಲಮಟ್ಟಿ, ಇಲಕಲ್ ಮತ್ತು ಕೊಪ್ಪಳದಿಂದ…

Read More

ನಾನು ಯಾವತ್ತೂ ಸಿಎಂ ಹುದ್ದೆ ಕ್ಲೇಮ್ ಮಾಡಿಯೇ ಇಲ್ಲ : ಸಚಿವ ಸತೀಶ ಜಾರಕಿಹೊಳಿ

ಸಪ್ತ ಸಾಗರ ವಾರ್ತೆ ವಿಜಯಪುರ, ಜು.22:ರಾಜ್ಯದ ಮುಖ್ಯಮಂತ್ರಿ ಬದಲಾವಣೆ ವಿಚಾರ ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಈ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಬೇಕು ಎಂದರು.ಸಿಎಂ ಈಗಾಗಲೇ ನಾನೇ 5 ವರ್ಷ ಇರ್ತಿನಿ ಎಂದಿದ್ದಾರೆ. ಸಿಎಂ ಜಾಗ ಖಾಲಿ ಇಲ್ಲ‌ ಎಂದು ಸ್ವತಃ ಡಿಸಿಎಂ ಹೇಳಿದ್ದಾರೆ.ಅವರೇ ಹೊಂದಾಣಿಕೆ ಆಗಿದ್ದಾರೆ. ನಾವು ಹೇಳುವುದು ಏನು ಇಲ್ಲ ಎಂದು ತಿಳಿಸಿದರು.ಸತೀಶ ಅಭಿಮಾನಿಗಳಿಂದ ಸಿಎಂ ಘೋಷಣೆ ವಿಚಾರವಾಗಿ…

Read More

ಧರ್ಮಸ್ಥಳ‌ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ: ಕಾನೂನು ರೀತಿ ಕ್ರಮ: ಸಿ.ಎಂ ಸಿದ್ಧರಾಮಯ್ಯ

ಸಪ್ತಸಾಗರ ವಾರ್ತೆ, ಮೈಸೂರು, ಜುಲೈ 18: ಬಿಜೆಪಿಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ನಾಳೆ ಮೈಸೂರಿನಲ್ಲಿ ನಡೆಯುತ್ತಿರುವ ಸಮಾವೇಶ, ಕಾಂಗ್ರೆಸ್ ಸರ್ಕಾರ ಮಾಡಿರುವ ಜನಪರ ಕೆಲಸವನ್ನು ಜನರ ಮುಂದಿಡುವ ಕಾರ್ಯಕ್ರಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಮೈಸೂರಿನಲ್ಲಿ ನಾಳೆ ನಡೆಯಲಿರುವ ಸಮಾವೇಶದ ಬಗ್ಗೆ ಬಿಜೆಪಿಯವರು ಟೀಕೆ ವ್ಯಕ್ತಪಡಿಸುತ್ತಿರುವ ಬಗ್ಗೆ ಉತ್ತರಿಸಿ, ನಾಳೆ ಸುಮಾರು 2600 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದ್ದು, ಬಿಜೆಪಿಯವರು ಯಾವ ಅಭಿವೃದ್ಧಿ ಕಾರ್ಯಗಳನ್ನು…

Read More

ಸಿಎಂ ಸಿದ್ದರಾಮಯ್ಯ ರಾಜ್ಯವನ್ನು ಸಾಲದ ಸುಳಿಗೆ ನೂಕಿದ್ದಾರೆ- ಯತ್ನಾಳ್ ಕಿಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 16: ಸಾರಿಗೆ ಸಂಸ್ಥೆಗಳನ್ನು ಆರ್ಥಿಕವಾಗಿ ಸದೃಢಗೊಳಿಸಬೇಕಾಗಿದ್ದ ಸರ್ಕಾರವು ತನ್ನ ವೋಟ್ ಬ್ಯಾಂಕ್ ರಾಜಕಾರಣಕ್ಕೆ ನಷ್ಟಕ್ಕೆ ನೂಕಿದೆ. ಭವಿಷ್ಯ ನಿಧಿ (ಪಿ.ಎಫ್) ಪಾವತಿ ಮಾಡುವುದಕ್ಕೂ ಹಣವಿಲ್ಲದೆ ಈಗ ಅದಕ್ಕೂ ಸಾಲ ಮಾಡಲು ನಿರ್ಧರಿಸಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದ್ದಾರೆ.ಎರಡು ದಿನಗಳ ಹಿಂದೆಯಷ್ಟೇ ‘ಶಕ್ತಿ’ ಯೋಜನೆಯ ಬಗ್ಗೆ ಸರ್ಕಾರ ಎಲ್ಲಾ ಪತ್ರಿಕೆಗಳಲ್ಲಿ, ಜಾಲತಾಣಗಳಲ್ಲಿ ಯೋಜನೆಯ ಯಶಸ್ಸಿನ ಬಗ್ಗೆ ಜಾಹೀರಾತು ನೀಡಿತ್ತು. ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ…

Read More

ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ವೀರೇಂದ್ರ ಹೆಗಡೆಯವರ ಕಾರ್ಯ ಸಮಾಜಕ್ಕೆ ಮಾದರಿ:ಜಿಗಜಿಣಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 16:ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿ ಡಾ. ಪರಮ ಪೂಜ್ಯ ಡಿ. ವೀರೇಂದ್ರ ಹೆಗಡೆಯವರು ಮದ್ಯ ವ್ಯಸನಿಗಳ ಮುಕ್ತ ಶಿಬಿರಗಳನ್ನು ರಾಜ್ಯಾದ್ಯಂತ ಆಯೋಜನೆ ಮಾಡಿ ಸಾಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.ಬುಧವಾರ ಓಂ ಶ್ರೀ ಮಂಜುನಾಥಯ ನಮಃ ಶ್ರೀ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ B C ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ ) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ…

Read More

ನಮ್ಮದು ಅಭಿವೃದ್ಧಿ ಪರ ಸರ್ಕಾರ: ಸಿದ್ದರಾಮಯ್ಯ ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಭಾಗಿ

ಸಪ್ತಸಾಗರ ವಾರ್ತೆ, ಜು. 14:ನಮ್ಮದು ಅಭಿವೃದ್ಧಿಪರ ಸರ್ಕಾರ. ಬಿಜೆಪಿ ಅಪಪ್ರಚಾರಕ್ಕೆ ಅಭಿವೃದ್ಧಿ ಮೂಲಕವೇ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಸೋಮವಾರ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಟಿ.ಸಿ ಬಸ್‌ಗೆ ಪೂಜೆ ನೆರವೇರಿಸಿ, ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ, ನಂತರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ, ಲಿಂಬೆ ಅಭಿವೃದ್ಧಿ ಮಂಡಳಿಯ ಲಾಂಛನವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.4157…

Read More

ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ: ಸಂಸದ ಜಿಗಜಿಣಗಿ ಆರೋಪ

ಸಪ್ತಸಾಗರ ವಾರ್ತೆ, ವಿಜಯಪುರ,ಜು. 13:ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಸಂಪೂರ್ಣ ಕುಂಠಿತಗೊಂಡಿದೆ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದರು.ಭಾನುವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,ರಾಜ್ಯದಲ್ಲಿ ಕಾಂಗ್ರೆಸ್ ಎಟಿಎಂ ಸರ್ಕಾರವಾಗಿದೆ. ಆದರೆ ಡೆಬಿಟ್ ಅಕೌಂಟ್ ನಲ್ಲಿ ಹಣವೇ ಇಲ್ಲ ಎಂದು ಛೇಡಿಸಿದರು.ರಾಜ್ಯದಲ್ಲಿ ಎಲ್ಲಿಯೂ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಹೊರಗುತ್ತಿಗೆ ಆಧಾರದ ಕೆಲಸಗಾರರಿಗೂ ಸಂಬಳವಿಲ್ಲ.ತಮ್ಮರು ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ದಲಿತಪರ ಸರ್ಕಾರಿ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದಾರೆ. ಆದರೆ ಯಾವುದೇ ಅಭಿವೃದ್ಧಿ ಇಲ್ಲ. ಎಲ್ಲವೂ ಗ್ಯಾರಂಟಿ ಯೋಜನೆಗಳಿಗೆ ಹಣ ಸೋರಿ ಹೋಗುತ್ತಿದೆ. ಗ್ಯಾರಂಟಿಯಿಂದ…

Read More

ಜು. 14ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂಡಿಗೆ

ಸಪ್ತಸಾಗರ ವಾರ್ತೆ ವಿಜಯಪುರ, ಜು.12: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜೂ.14 ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಅಂದು ಮಧ್ಯಾಹ್ನ 12-05ಕ್ಕೆ ಸೊಲ್ಲಾಪುರ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಹೊರಟು ಮಧ್ಯಾಹ್ನ 12-50ಕ್ಕೆ ವಿಜಯಪುರ ಜಿಲ್ಲೆಯ ಇಂಡಿಗೆ ಆಗಮಿಸಿ, ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಬೃಹತ್ ವಾಣಿಜ್ಯ ಸಂಕೀರ್ಣ ಉದ್ಘಾಟನೆ ಹಾಗೂ ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ ಗಡಿಯನ್ನು ದಾಟಿರುವ ಹಿನ್ನಲೆಯಲ್ಲಿ ಕೆ.ಕೆ.ಆರ್.ಟಿ.ಸಿ. ಬಸ್‍ಗೆ ಪೂಜೆ ಸಲ್ಲಿಸಲಿದ್ದಾರೆ.ಮಧ್ಯಾಹ್ನ 1-15ಕ್ಕೆ ಇಂಡಿ ಪೊಲೀಸ್ ಪರೇಡ್…

Read More

ಕಾಂಗ್ರೆಸಿನಲ್ಲಿ ಸಿಎಂ ಕುರ್ಚಿಗೆ ವ್ಯಾಪಾರ ನಡೆದಿದೆ- ಯತ್ನಾಳ್ ಆರೋಪ

ಸಪ್ತಸಾಗರ ವಾರ್ತೆ ವಿಜಯಪುರ, ಜು. 12ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ವ್ಯಾಪಾರ (ಆಕ್ಷನ್) ನಡೆದಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆರೋಪಿಸಿದರು.ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ದೆಹಲಿಯಲ್ಲಿ ಕುಳಿತಿದ್ದಾರೆ ಎಂದು ಟೀಕಿಸಿದರು.ಡಿಕೆಶಿ ಹಾಗೂ ಸಿದ್ದರಾಮಯ್ಯ ಸಿಎಂ ಕುರ್ಚಿಗಾಗಿ ಎಷ್ಟು ಕೋಟಿ ಕೊಡುತ್ತಾರೆ. ಮೂರನೇ ವ್ಯಕ್ತಿ ಎಷ್ಟು ಕೋಟಿ ಕೊಡುಬಹುದು ಎನ್ನುವ ವ್ಯಾಪಾರ (ಆಕ್ಷನ್) ನಡೆದಿದೆ ಎಂದು ಛೇಡಿಸಿದರು.ದೇಶದಲ್ಲಿ ಎಲ್ಲಿಯೂ ಕಾಂಗ್ರೆಸ್ ಆಧಿಕಾರದಲ್ಲಿ ಇಲ್ಲ. ಕಾಂಗ್ರೆಸ್…

Read More