ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಕ್ಕೆ ಗುಮ್ಮಟನಗರಿಯಲ್ಲಿ ವಿದ್ಯುಕ್ತ ತೆರೆ

ಸಪ್ತಸಾಗರ ವಾರ್ತೆ,ವಿಜಯಪುರ ಮೇ 23:ಐತಿಹಾಸಿಕ ಗುಮ್ಮಟ ನಗರಿಯಲ್ಲಿ ಮೇ 17 ರಿಂದ 7 ದಿನಗಳ ಕಾಲ ನಡೆದ ಕರ್ನಾಟಕ ರಾಜ್ಯ ಸಬ್ ಜೂನಿಯರ್ ರ‍್ಯಾಂಕಿಂಗ್ ಬ್ಯಾಡ್ಮಿಂಟನ್ ಟೂರ್ನಮೆಂಟ್ 2026 ಪಂದ್ಯಾವಳಿಗೆ ಶನಿವಾರ ವಿದ್ಯುಕ್ತವಾಗಿ ತೆರೆಬಿತ್ತು.‌ಇದೇ ಮೊದಲ ಬಾರಿಗೆ ನಡೆದ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಕ್ರೀಡಾಕೂಟ ಗುಮ್ಮಟ ನಗರಿಯ ಜನತೆಯನ್ನು ಕಳೆದ 7 ದಿನಗಳಿಂದ ಬ್ಯಾಡ್ಮಿಂಟನ್ ಲೋಕದಲ್ಲಿ ಮಿಂದೇಳಿಸಿತು.‌ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಶನ್ ನ ಅಧಿಕೃತ ಮಾನ್ಯತೆಯೊಂದಿಗೆ ಯೊನೆಕ್ಸ್ ಸನ್ ರೈಸ್ ಪ್ರಾಯೋಕತ್ವದಡಿ ನಗರದ ಬಿಎಲ್ ಡಿ ಸಂಸ್ಥೆ ಹಾಗೂ…

Read More

ವಿಜಯಪುರದಲ್ಲಿ ಮೇ 17 ರಿಂದ ಪ್ರಪ್ರಥಮ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ: ಪಂದ್ಯಾಟದಲ್ಲಿ 756 ಆಟಗಾರರು ಭಾಗಿ- ಕುಮಾರ ಬಂಗಾರಪ್ಪ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:ಐತಿಹಾಸಿಕ ಗುಮ್ಮಟ ನಗರಿ ವಿಜಯಪುರದಲ್ಲಿ ಇದೇ ಮೊದಲ ಬಾರಿಗೆ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಮೇ 17 ರಿಂದ ಆಯೋಜಿಸಲಾಗಿದೆ ಎಂದು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ರಾಜ್ಯ ಅಧ್ಯಕ್ಷ ಕುಮಾರ ಬಂಗಾರಪ್ಪ ತಿಳಿಸಿದರು.ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಹಾಗೂ ಬಿಎಲ್‌ಡಿಇ ಸಂಸ್ಥೆಯ ಸಹಯೋಗದಲ್ಲಿ ಅನೆಕ್ಸ್ ಸನ್ ರೈಸರ್ ಟೈಟಲ್ ಕಾರ್ಡ್ ನಡಿ ಈ ಪಂದ್ಯಾವಳಿ ನಡೆಯಲಿದೆ ಎಂದರು.ಈಗಾಗಲೇ ರಾಜ್ಯದ ವಿವಿಧ ಭಾಗಗಳಿಂದ 756 ಕ್ರೀಡಾಪಟುಗಳು ನೋಂದಾಯಿಸಿಕೊಂಡಿದ್ದು, ರಾಜ್ಯ, ರಾಷ್ಟ್ರ…

Read More

17ರಿಂದ 23ರ ವರೆಗೆ ಗುಮ್ಮಟನಗರಿಯಲ್ಲಿ ಬ್ಯಾಡ್ಮಿಂಟನ್‌ ಪಂದ್ಯ: 7 ದಿನಗಳವರೆಗೆ ಕ್ರೀಡಾ ಪ್ರೇಮಿಗಳಿಗೆ ಬ್ಯಾಡ್ಮಿಂಟನ್ ಆಕ್ಷನ್ ರಸದೌತಣ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ (KBA) ಅಧಿಕೃತ ಮಾನ್ಯತೆಯೊಂದಿಗೆ, ಯೋನೆಕ್ಸ್ ಸನ್‌ರೈಸ್ ಪ್ರಾಯೋಜಕತ್ವದಲ್ಲಿ ರಾಜ್ಯ ಮಟ್ಟದ ಯು-15 ಮತ್ತು ಯು-17 ಬ್ಯಾಡ್ಮಿಂಟನ್ ಪಂದ್ಯಾವಳಿ-2026 ಮೇ 17 ರಿಂದ ಮೇ 23 ರವರೆಗೆ ಐತಿಹಾಸಿಕ ನಗರಿ ವಿಜಯಪುರದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಎಂದು ಬ್ಯಾಡ್ಮಿಂಟನ್‌ ಅಸೋಸಿಯೇಶನ್‌ ಅಧ್ಯಕ್ಷ ಹಾಗೂ ಮಾಜಿ ಸಚಿವ ಕುಮಾರ ಬಂಗಾರಪ್ಪ ತಿಳಿಸಿದರು.ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಾದ್ಯಂತ ಇರುವ ಉದಯೋನ್ಮುಖ ಹಾಗೂ ಖ್ಯಾತ ಬ್ಯಾಡ್ಮಿಂಟನ್ ಆಟಗಾರರು ತಮ್ಮ ಕೌಶಲ್ಯ ಪ್ರದರ್ಶಿಸಲು ವಿಜಯಪುರಕ್ಕೆ ಲಗ್ಗೆ…

Read More

ಮೇ. 17ರಿಂದ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 14:ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಶನ್ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಇದೇ ಮೊದಲ ಬಾರಿಗೆ ನಗರದ ಐತಿಹಾಸಿಕ ಮಣ್ಣಿನಲ್ಲಿ ಯೋನೆಕ್ಸ್‌ ಸನ್‌ ರೈಸ್‌ (Yonex-Sunrise) ಕರ್ನಾಟಕ ರಾಜ್ಯ ಮಟ್ಟದ (U-15 & U-17) ಬ್ಯಾಡ್ಮಿಂಟನ್ ಪಂದ್ಯಾವಳಿ ಮೇ 17 ರಿಂದ 23ರವರೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇದಕ್ಕೆಂದೇ ಗುಮ್ಮಟ ನಗರಿ ಸಜ್ಜಾಗುತ್ತಿದೆ.ರಾಜ್ಯದ ವಿವಿಧ ಮೂಲೆಗಳಿಂದ ನೂರಾರು ಉದಯೋನ್ಮುಖ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಮೇ 17 ರಂದು ಬೆಳಿಗ್ಗೆ…

Read More

9ನೇ T-10 ಓವರ ಆರ್ಮ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕಕ್ಕೆ ದ್ವಿತೀಯ ಸ್ಥಾನ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 7:ಮೇ 4 ರಿಂದ 6ರವರೆಗೆ ಗೋವಾದ ಎಂ ಪಿ.ಟಿ ಮೈದಾನದಲ್ಲಿ ನಡೆದ 9ನೇ ಅಖಿಲ ಭಾರತೀಯ T -10 ಓವರ್ ಆರ್ಮ ಕ್ರಿಕೆಟ್ ಕ್ರೀಡಾಕೂಟದಲ್ಲಿ ಜೂನಿಯರ್ ಬಾಲಕರ ಕರ್ನಾಟಕ ತಂಡ ದ್ವಿತೀಯ ಸ್ಥಾನ ಪಡೆದು ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆಸುಶೀಲ್ ಬಿಶ್ವಕರ್ಮ( ನಾಯಕ), ಚಂದನ್ ಎಂ ನಾಯ್ಕ ( ಉಪನಾಯಕ ),ವೈಭವ ಅನಂತ್ ಶಾನಭಾಗ್, ರಾಜೇಶ್ ಮರಾಠಿ, ವಶಿಷ್ಟ ವಿ ನಾಯ್ಕ,ಪೃಥ್ವಿಶ್ ಎಸ್ ಬೇತಾಳಕರ್,ಧನುಷ್ ಆರ್ ನಾಯ್ಕ, ಪ್ರಣವ್ ಜಿ…

Read More

ಪ್ರಿ ಕ್ವಾರ್ಟರ್ ಫೈನಲ್ ತಲುಪಿದ ಮಹಿಳಾ ವಿವಿ ಖೋಖೋ ತಂಡ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 6: ದಾವಣಗೆರೆ ವಿವಿಯಲ್ಲಿ ಏ.1ರಿಂದ 4ವರೆಗೆ ನಡೆದ ದಕ್ಷಿಣ ವಲಯ ಅಂತರ್ ಮಹಾವಿದ್ಯಾಲಯಗಳ ಖೋಖೋ ಪಂದ್ಯದಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿವಿ ತಂಡ ಪ್ರಿ ಕ್ವಾರ್ಟರ್ ಫೈನಲ್ ಪ್ರವೇಶಿಸಿ ವಿವಿ ಕೀರ್ತಿ ಹೆಚ್ಚಿಸಿದೆ.ತಂಡದ ಸಾಧನೆಗೆ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.ಆಂಧ್ರದ ತಿರುಪತಿ ವಿವಿ, ತಮಿಳುನಾಡಿನ ಭಾರತೀಯರ ವಿವಿ ಹಾಗೂ ಕೇರಳದ ಕಣ್ಣೂರು ವಿವಿ ವಿರುದ್ಧ ಪಂದ್ಯದಲ್ಲಿ ಮಹಿಳಾ ವಿವಿ ತಂಡ ಜಯಗಳಿಸುವ ಮೂಲಕ ರಾಜ್ಯ ಪ್ರತಿನಿಧಿಸಿ ಸಾಧನೆ ಮೆರೆದಿದೆ.ತಂಡದ ನಾಯಕಿ, ಎಂಪಿಇಡಿ…

Read More

ಕ್ರೀಡೆಯಲ್ಲಿ ಗೆಲುವಿಗಿಂತ ಭಾಗವಹಿಸುವ ಮನೋಭಾವವೇ ಮುಖ್ಯ:ಶೇಖರಗೌಡ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 28: ಕ್ರೀಡೆಯಲ್ಲಿ ಗೆಲುವಿಗಿಂತ ಭಾಗವಹಿಸುವ ಮನೋಭಾವವೇ ಮುಖ್ಯ. ನಿರಂತರ ಪ್ರಯತ್ನಗಳ ನಡುವೆ ಎದುರಾಗುವ ವಿಫಲತೆಗಳೇ ಕೊನೆಗೆ ಯಶಸ್ಸಿನ ಮೆಟ್ಟಿಲಾಗುತ್ತವೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಮತ್ನಾಳ್ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಚಿಲ್ಡ್ರನ್ ಆಫ್ ಇಂಡಿಯಾ ಫೌಂಡೇಶನ್ ಇವರ ಸಹಯೋಗದಲ್ಲಿ ರವಿವಾರ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕಿಶೋರಿ ಮತ್ತು ಕಿಶೋರ ನಾಯಕರ ಕ್ರೀಡಾ ಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸರ್ಕಾರ…

Read More

ದಕ್ಷಿಣ ವಲಯ ರೋಲ್ ಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕ ಬಾಲಕಿಯರ ತಂಡಕ್ಕೆ ಬಂಗಾರ ಪದಕ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 4: ಸೆಪ್ಟೆಂಬರ್ 28ರಂದು ಮಲ್ಲಸಂದ್ರ ಮೈದಾನದಲ್ಲಿ ಸೆಪ್ಟೆಂಬರ್ 27 ರಿಂದ 28 ರವರೆಗೆ ಕರ್ನಾಟಕ ರೋಲ್ ಬಾಲ್ ಸಂಸ್ಥೆ ಮತ್ತು ಸ್ಕೇಟಿಂಗ್ ಅಕಾಡೆಮಿಯ ಸಂಯುಕ್ತ ಆಶ್ರಯದಲ್ಲಿ ನಡೆದ 6ನೇ ದಕ್ಷಿಣ ವಲಯ ರೋಲ್ ಬಾಲ್ ಕ್ರೀಡಾಕೂಟದಲ್ಲಿ 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಕರ್ನಾಟಕ ತಂಡವು ಬಂಗಾರ ಪದಕವನ್ನು ಗೆದ್ದಿದ್ದು, ಬಾಲಕರ ವಿಭಾಗದಲ್ಲಿ ಕಂಚಿನ ಪದಕ ಪಡೆದುಕೊಂಡು ರಾಜ್ಯಕ್ಕೆ ಕೀರ್ತಿ ತಂದಿದೆ.ಈ ಸಂದರ್ಭದಲ್ಲಿ ತಂಡದೊಂದಿಗೆ ಕರ್ನಾಟಕ ರಾಜ್ಯ ರೋಲ್ ಬಾಲ್ ಸಂಸ್ಥೆಯ ಅಧ್ಯಕ್ಷ…

Read More

ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ ಅವರ ಕ್ರೀಡಾ ಸಾಧನೆ ಎಲ್ಲರಿಗೂ ಸ್ಪೂರ್ತಿ:ಕೋರಿ

ಸಪ್ತಸಾಗರ ವಾರ್ತೆ ವಿಜಯಪುರ, ಆ. 29: ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ ಅವರ ಕ್ರೀಡಾ ಸಾಧನೆ ಎಲ್ಲರಿಗೂ ಸ್ಪೂರ್ತಿಯಾಗಿದೆ ಎಂದು ಬಿ.ಎಲ್.ಡಿ.ಇ. ಸಂಸ್ಥೆಯ ಕ್ರೀಡಾ ವಿಭಾಗದ ನಿರ್ದೇಶಕ ಎಸ್.ಎಸ್. ಕೋರಿ ಹೇಳಿದ್ದಾರೆ.ಶುಕ್ರವಾರ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಬಿ.ಎಲ್.ಡಿ.ಇ. ಸಂಸ್ಥೆಯ ಶ್ರೀ. ಬಿ. ಎಂ. ಪಾಟೀಲ ಪಬ್ಲಿಕ್ ಸಿ.ಬಿ.ಎಸ್.ಇ ಶಾಲೆಯ ವತಿಯಿಂದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಧುಮೇಹ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಕ್ರೀಡೆ ಮತ್ತು ಆರೋಗ್ಯ ಒಂದಕ್ಕೊಂದು ಪೂರಕವಾಗಿವೆ….

Read More

ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಕ್ರೀಡೆಗಳು ಪೂರಕ:ಜಯರಾಜ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 29: ಕ್ರೀಡೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಮತ್ತು ಶೈಕ್ಷಣಿಕ ಜೀವನದ ಸಮೃದ್ಧಿಗೆ ಪೂರಕವಾಗಿವೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಹೇಳಿದ್ದಾರೆ. ಶುಕ್ರವಾರ ಡೀಮ್ಡ್ ವಿಶ್ವವಿದ್ಯಾಲಯದ ಒಳಾಂಗಣ ಕ್ರೀಡಾಂಗಣದಲ್ಲಿ ವಿಶ್ವಪ್ರಸಿದ್ಧ ಹಾಕಿ ಕ್ರೀಡಾಪಟು ಮೇಜರ್ ಧ್ಯಾನಚಂದ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಮಾತನಾಡಿದರು.ಇದೇ ವೇಳೆ ವಿದ್ಯಾರ್ಥಿಗಳಿಗಾಗಿ ಬ್ಯಾಸ್ಕೆಟ್‌ಬಾಲ್ ಮತ್ತು ಚೆಸ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸುಭಗಾ ಅವರು ಫಿಟ್ ಇಂಡಿಯಾ…

Read More