ವಿಶ್ವ ಧ್ವನಿ ದಿನ ಆಚರಿಸಿದ ನಾಗಠಾಣದ ಚಿಣ್ಣರು

ಸಪ್ತಸಾಗರ ವಾರ್ತೆ , ವಿಜಯಪುರ, ಏ. 16:ವಿಶ್ವ ಧ್ವನಿ ದಿನವನ್ನು ಪ್ರತಿವರ್ಷ ಏಪ್ರಿಲ್ 16 ರಂದು ವಿಶ್ವಾದ್ಯಂತ ಆಚರಿಸಲಾಗುತ್ತದೆ. ಈ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ ಅನುಶ್ರೀ-ಶ್ರೀನಿಧಿ ಬಂಡೆ ಅವರು ಧ್ವನಿ ಮಾಡುವ ಮೂಲಕ ಈ ದಿನವನ್ನು ಆಚರಿಸಿದರು.ಧ್ವನಿಯು ಮನುಷ್ಯನ ವ್ಯಕ್ತಿತ್ವ, ಆರೋಗ್ಯ,ಭಾವನೆಯನ್ನುವ್ಯಕ್ತಪಡಿಸುವ ಪ್ರಮುಖ ಸಾಧನವಾಗಿದ್ದು, ಅದು ಸಂವಹನ, ಸಾಮಾಜಿಕ ಸಂಪರ್ಕ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ಆರೋಗ್ಯದ ದೃಷ್ಟಿಯಿಂದ, ಧ್ವನಿಯು ನಮ್ಮ ಮನಃಸ್ಥಿತಿ ಮತ್ತು ದೈಹಿಕ ಆರೋಗ್ಯವನ್ನು ಸೂಚಿಸುತ್ತದೆ. ಶೈಕ್ಷಣಿಕ, ವೃತ್ತಿಪರ ಮತ್ತು…

Read More

ಏ. 20ರಿಂದ 25 ರವರೆಗೆ ಅಧಿಕ ರಕ್ತದೊತ್ತಡ ಚಿಕಿತ್ಸಾ ಶಿಬಿರ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 16: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದದಲ್ಲಿ ಅಧಿಕ ರಕ್ತದೊತ್ತಡ (High blood pressure) ತಲೆನೋವು, ತಲೆ ತಿರುಗುವಿಕೆ, ಹೃದಯವು ವೇಗವಾಗಿ ಬಡಿದುಕೊಳ್ಳುವ ಕುರಿತು ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಏಪ್ರಿಲ್ 20 ರಿಂದ ಏಪ್ರಿಲ್ 25ರ ವರೆಗೆ ನಡೆಯಲಿದೆ.ಬಿ.ಎಲ್.ಡಿ.ಇ ಆಯುರ್ವೇದ ಆಸ್ಪತ್ರೆಯಲ್ಲಿ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಆರು ದಿನಗಳ ಕಾಲ ಆಯೋಜಿಸಲಾಗಿರುವ ಈ ಶಿಬಿರದಲ್ಲಿ ಮೇಲಿನ ಸಮಸ್ಯೆಗಳನ್ನು ಎದುರಿಸುತ್ತಿರುವ 18 ರಿಂದ 79…

Read More

ವಚನಾನಂದ ಶ್ರೀ ಸತ್ಯ ಹರಿಶ್ಚಂದ್ರ ಅಲ್ಲ: ಯತ್ನಾಳ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 14:ವಚನಾನಂದ ಸ್ವಾಮಿಜಿ ಸತ್ಯ ಹರಿಶ್ಚಂದ್ರ ಅಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ, ಹರಿಹರದ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಉಚ್ಛಾಟನೆ ವಿಚಾರ ಕುರಿತು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.ನಮ್ಮದೇ ಸರ್ಕಾರ ಇದ್ದರೂ ವಚನಾನಂದ ಸ್ವಾಮಿಗಳ ವಿರುದ್ದ ವಿಧಾನಸಭೆಯಲ್ಲಿ ಮಾತನಾಡಲು ಅವಕಾಶ ನೀಡಲಿಲ್ಲ. ಸ್ಪೀಕರ್ ಗೆ ಹೇಳಿ ಮಾತನಾಡಲು ಅವಕಾಶ ನೀಡಲಿಲ್ಲ ಎಂದರು.ಹರಿಹರ ಹಾಗೂ ಕೂಡಲಸಂಗಲ ಪೀಠಗಳ ಟ್ರಸ್ಟ್ ಗಳು ಜನರ ನಂಬಿಕೆ…

Read More

ದೇಶದ ಸಾಮರಸ್ಯಕ್ಕೆ ಅಂಬೇಡ್ಕರವರ ತಾಯ್ತನದ ನಿಲುವು ಅವಶ್ಯಕ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಏ. 14: ಅಂಬೇಡ್ಕರ್ ಚಿಂತನೆಗಳಲ್ಲಿ ಮಾನವೀಯತೆಯೇ ಜೀವಾಳವಾಗಿದ್ದು, ಇಂದಿನ ಸಮಾಜದಲ್ಲಿನ ಅಸಮಾನತೆ,ಅಶಾಂತಿ ಹೋಗಲಾಡಿಸಲು ಅವರ ವಿಚಾರಗಳು ದಿವ್ಯ ಮಂತ್ರಗಳಾಗಿವೆ ಎಂದು ಸಂಪನ್ಮೂಲ ವ್ಯಕ್ತಿ ಸಂತೋಷ ಬಂಡೆ ಹೇಳಿದರು.ಮಂಗಳವಾರ ಪಟ್ಟಣದ ಆದರ್ಶ ವಿದ್ಯಾಲಯದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವಿಜಯಪುರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇಂಡಿ ಇವರ ಸಹಯೋಗದಲ್ಲಿ ಜರುಗಿದ1-5 ನೇ ವರ್ಗದ ಶಿಕ್ಷಕರ ದ್ವಿಭಾಷಾ ತರಬೇತಿಯಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಆಚರಣೆಯನ್ನು ಉದ್ಧೇಶಿಸಿ ಅವರು…

Read More

ಕಾನಿಪ ಸಂಘದಲ್ಲಿ ಅಂಬೇಡ್ಕರ್ ಜಯಂತಿ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 14:ನಗರದ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಮಂಗಳವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವಿಧಿವತ್ತಾಗಿ ಪೂಜೆ ಸಲ್ಲಿಸಿ, ಪುಷ್ಪವೃಷ್ಠಿಗೈದು, ಡಾ.ಅಂಬೇಡ್ಕರ ಅವರ ಸಮಾಜ ಪರಿವರ್ತನೆಯ ಚಿಂತನೆಗಳು, ಶ್ರಮ ಮತ್ತು ಸಮಾನತೆಯ ಮಹತ್ವವನ್ನು ಸ್ಮರಿಸಲಾಯಿತು.ಸಂಘದ ಅಧ್ಯಕ್ಷ ಅಶೋಕ ಯಡಳ್ಳಿ ಮಾತನಾಡಿ, ಅಂಬೇಡ್ಕರ್ ಅವರು ಕೇವಲ ಸಂವಿಧಾನ ಶಿಲ್ಪಿಯಾಗಿರದೆ, ಒಬ್ಬ ಚಿಂತಕ ಪತ್ರಕರ್ತರೂ ಆಗಿದ್ದರು. ‘ಮೂಕನಾಯಕ’ ಮತ್ತು ‘ಬಹಿಷ್ಕೃತ ಭಾರತ’ ಪತ್ರಿಕೆಗಳ ಮೂಲಕ ಹಿಂದುಳಿದ ವರ್ಗಗಳ ಧ್ವನಿಯಾಗಿ…

Read More

14ರಿಂದ 18ರವರೆಗೆ ಮಹಾಲ ಐನಾಪುರ ತಾಂಡಾದಲ್ಲಿ ದುರ್ಗಾದೇವಿ ಜಾತ್ರಾ ಮಹೋತ್ಸವ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 13: ತಾಲೂಕಿನ ಮಹಲ ಐನಾಪೂರ ತಾಂಡಾದಲ್ಲಿ ಏ. 14 ರಿಂದ 18 ರವರೆಗೆ ದುರ್ಗಾದೇವಿ ಜಾತ್ರಾ ಮಹೋತ್ಸವ ನಡೆಯಲಿದೆ.ಏ. 14 ರಂದು ಆಲಮಟ್ಟಿಯ ಚಂದ್ರಗಿರಿಯ ಹೊಳೆ ಮೂಲಕ ಗಂಗೆ ಸೀತಾಳ ಕಾರ್ಯಕ್ರಮ ನಡೆಯಲಿದೆ. ಏ 16 ಹಾಗೂ 17 ರಂದು ಮನೆ ಮನೆ ದೇವಿ ಭೇಟಿ ಕಾರ್ಯಕ್ರಮ ನಡೆಯಲಿದೆ.ಏ. 18 ರಂದು ಹೋಮ ಹವನ, ರುದ್ರಾಭಿಷೇಕ , ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದು ದುರ್ಗಾದೇವಿ ಗದ್ದುಗೆಯ ಆರಾಧಕ ಪುಜಾರಿಗಳಾದ ಪ….

Read More

ಶ್ರದ್ಧೆ ಹಾಗೂ ಆತ್ಮವಿಶ್ವಾಸವೇ ಯಶಸ್ಸಿನ ಮೂಲಮಂತ್ರ: ಮಾತಾಜಿ ಕೈವಲ್ಯಮಯಿ

ವಿಜಯಪುರ: “ಮಾನವನ ಜೀವನದಲ್ಲಿ ಗುರಿ ತಲುಪಲು ಶ್ರದ್ಧೆ ಅತ್ಯಗತ್ಯ. ಯಾರಲ್ಲಿ ಶ್ರದ್ಧೆ ಇರುತ್ತದೆಯೋ ಅವರು ಜೀವನದ ಪ್ರತಿ ಹಂತದಲ್ಲೂ ವಿಜಯಶಾಲಿಗಳಾಗುತ್ತಾರೆ,” ಎಂದು ವಿಜಯಪುರದ ಕೃಪಾಮಯಿ ಶಾರದಾಶ್ರಮದ ಪರಮಪೂಜ್ಯ ಕೈವಲ್ಯಮಯಿ ಮಾತಾಜಿಯವರು ಅಭಿಮತ ವ್ಯಕ್ತಪಡಿಸಿದರು.ವಿಜಯಪುರ ಜಿಲ್ಲೆಯ ಕನ್ನೂರಿನ ಶಾಂತಿ ಕುಟೀರ ಆಶ್ರಮದಲ್ಲಿ ಶಾಂತಿ ಕುಟೀರ ಟ್ರಸ್ಟ್ ಹಾಗೂ ಭಾರತೀಯ ಸ್ವರಾಜ್ಯ ಸಂಸ್ಥೆ ಮತ್ತು ಸಂಡೂರಿನ ಶ್ರೀ ಶೈಲೇಶ್ವರ ವಿದ್ಯಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಒಂದು ತಿಂಗಳ ಉಚಿತ ಶೈಕ್ಷಣಿಕ ಹಾಗೂ ಆಧ್ಯಾತ್ಮಿಕ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭದ…

Read More

15ರಂದು ಪಿಂಚಣಿದಾರರಿಂದ ನಿರಶನ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 13:ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಏ. 15ರಂದು ಪಿಂಚಣಿದಾರರು ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ.ಪಿಂಚಣಿದಾರರ ಕಚೇರಿಯಲ್ಲಿ ಈಚೆಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.ರಾಷ್ಟ್ರೀಯ ಅಧ್ಯಕ್ಷ ಕಮಾಂಡರ್ ಅಶೋಕ ರಾವುತ್ ಅವರು ಮಾತನಾಡಿ, ಏ. 15ರಂದು ಬೆಳಿಗ್ಗೆ 10-30 ರಿಂದ ಮಧ್ಯಾಹ್ನ 1 ಗಂಟೆವರೆಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಸಾಂಕೇತಿಕವಾಗಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ ಎಂದರು.ಬೃಹತ್ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ…

Read More

ಉತ್ತಮ ಕಾವ್ಯದಿಂದ ಸಮಾಜದ ಪ್ರಗತಿ ಸಾಧ್ಯ:ಸಾಹಿತಿ ಪ್ರೊ. ಎ. ಎಚ್. ಕೊಳಮಲಿ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 13:ಯುವ ಕವಿಗಳು ಹೆಚ್ಚು ಓದಿನತ್ತ ಒಲವು ತೋರಿಸಬೇಕು. ಶ್ರೇಷ್ಠ ಸಾಹಿತಿಗಳ ಕಥೆ, ಕಾದಂಬರಿ, ಸಾಹಿತ್ಯ ಕೃತಿಗಳನ್ನು ಓದಿದಾಗ ಜ್ಞಾನ ವೃದ್ಧಿಗೊಂಡು ಗಟ್ಟಿತನದ ಸಾಹಿತ್ಯವನ್ನು ರಚಿಸಲು ಸಾಧ್ಯ, ಕಾವ್ಯಕ್ಕೆ ಅದ್ಭುತವಾದ ಶಕ್ತಿಯಿದೆ. ಉತ್ತಮ ಕಾವ್ಯದಿಂದ ಸಮಾಜದ ಪ್ರಗತಿ ಸಾಧ್ಯ ಎಂದು ಸಾಹಿತಿ ಪ್ರೊ ಎ. ಎಚ್. ಕೊಳಮಲಿ ಹೇಳಿದರು.ರವಿವಾರ ಸಂಜೆ ದರ್ಬಾರ ಹೈಸ್ಕೂಲ್ ಮೈದಾನದಲ್ಲಿ ವಿಜಯಪುರ ಸಾಹಿತ್ಯ ಬಳಗ ಹಾಗೂ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ನಡೆದ ಬುದ್ಧ, ಬಸವ, ಅಂಬೇಡ್ಕರ…

Read More

ಬಾಲ್ಯ ವಿವಾಹ ನಿಷೇಧ: ಸಾರ್ವಜನಿಕರಿಗೆ ಎಚ್ಚರಿಕೆ

ಸಪ್ತಸಾಗರ ವಾರ್ತೆ,ವಿಜಯಪುರ,ಏ.13: ಅಕ್ಷಯ ತೃತೀಯ ಪ್ರಯುಕ್ತ ಏ.20 ರಂದು ಜಿಲ್ಲೆಯಲ್ಲಿ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಹಾಗೂ ವೈಯಕ್ತಿಕ ವಿವಾಹಗಳಲ್ಲಿ ಬಾಲ್ಯ ವಿವಾಹ ಜರುಗಿಸಿದಲ್ಲಿ, ಅದು ಬಾಲ್ಯವಿವಾಹ ನಿಷೇಧ ಕಾಯ್ದೆ-2006ರನ್ವಯ ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ಜಿಲ್ಲಾಡಳಿತ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.ಜಿಲ್ಲೆಯ ದೇವಸ್ಥಾನಗಳು, ಕಲ್ಯಾಣ ಮಂಟಪಗಳು ಹಾಗೂ ಇತರ ಧಾರ್ಮಿಕ ಸ್ಥಳಗಳಲ್ಲಿ ಬಾಲ್ಯವಿವಾಹ ನಿಷೇಧ ಎಂಬ ಫಲಕವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಬಾಲ್ಯ ವಿವಾಹವನ್ನು ನಡೆಸುವ, ನಿರ್ದೇಶಿಸುವ ಅಥವಾ ಪ್ರಚೋದಿಸುವ ಯಾವುದೇ ವ್ಯಕ್ತಿ ಕಾನೂನು ಪ್ರಕಾರ ಸಮಾನವಾಗಿ ಹೊಣೆಗಾರರಾಗುತ್ತಾರೆ.ವಿವಾಹ ಸಮಾರಂಭವನ್ನು…

Read More