ಹೊರ್ತಿ ಕೆರೆಗೆ ಚಾನಲ್ ನಿರ್ಮಾಣ: ಜಿಲ್ಲಾಧಿಕಾರಿ ಡಾ. ಆನಂದ

ಸಪ್ತ ಸಾಗರ ವಾರ್ತೆ ವಿಜಯಪುರ, ಅ.3 :ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಕೆರೆಯ ಮುಂದಿರುವ ಕೃಷಿ ಜಮೀನುಗಳಿಗೆ ಮತ್ತು ಕೆರೆ ಏರಿಯ ಹಾನಿಯನ್ನು ತಡೆಯಲು ಮುನ್ನಚ್ಚರಿಕೆ ಕ್ರಮವಾಗಿ ಚಾನಲ್ ನಿರ್ಮಾಣ ಮಾಡಿ, ನೀರು ಹೊರಹಾಕಿರುವುದರಿಂದ ನೀರಿನ ಮಟ್ಟವು 10 ಅಡಿಗಳಷ್ಟು ಕಡಿಮೆಯಾಗಿದೆ. ಇನ್ನು ಮುಂದೆ ಯಾವುದೇ ಅಪಾಯ ಕಂಡುಬರುವುದಿಲ್ಲವೆಂದು ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ತಿಳಿಸಿದ್ದಾರೆ.ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹೊರ್ತಿ ಕೆರೆಯನ್ನು 1972 ರಲ್ಲಿ ನಿರ್ಮಾಣ ಮಾಡಲಾಗಿದ್ದ, ಈ ಕೆರೆಯ ಸಾಮರ್ಥ್ಯವು 19.50 ಎಂ.ಸಿ.ಎಫ್.ಟಿ….

Read More

ಕ್ಷುಲ್ಲಕ ಕಾರಣಕ್ಕೆ ಗಾಳಿಯಲ್ಲಿ ಗುಂಡು: ಬಾಲಕಿಗೆ ಗಾಯ, ಆಸ್ಪತ್ರೆಗೆ ದಾಖಲು

ಸಪ್ತಸಾಗರ ವಾರ್ತೆ ವಿಜಯಪುರ, ಅ. 3:ವಿಜಯಪುರ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ದಸರಾ ಹಬ್ಬದ ಮರು ದಿನವೇ ಗುಂಡಿನ ಸದ್ದು ಕೇಳಿ ಜನರು ಬೆಚ್ಚಿ ಬಿದ್ದಿದ್ದಾರೆ.ದುರ್ಗಾದೇವಿ ಜಾತ್ರೆಯ‌ಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ಮದ್ಯೆ ಜಗಳ ಉಂಟಾಗಿದೆ. ಆಗ ಜಗಳ ತಾರಕಕ್ಕೇರಿದ್ದು, ರಾಮ ಅಂಕಲಗಿ ಎಂಬಾತ ಪರವಾನಿಗೆ ಹೊಂದಿದ ರಿವಾಲ್ವಾರ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ.ನಿನ್ನೆ ಅಂಕಲಗಿ ಗ್ರಾಮದಲ್ಲಿ ದುರ್ಗಾದೇವಿ ಜಾತ್ರೆ ನಡೆದಿತ್ತು. ಈ ವೇಳೆ ಎರಡು ಗುಂಪುಗಳ ನಡುವೆ ಜಗಳವಾಗಿತ್ತು.ಇಂದು ಜಗಳದ ಬಗ್ಗೆ ಮಾತುಕತೆ ಮಾಡಲು ಸಭೆ ಕರೆಯಲಾಗಿತ್ತು.ಸಭೆ…

Read More

ಅಧಿಕಾರ ಹಂಚಿಕೆ: ಹೈಕಮಾಂಡ್ ಅಂತಿಮ ನಿರ್ಧಾರ- ಸಚಿವ ಎಂ.ಬಿ ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಅ. 3:ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳುತ್ತದೆ. ಈ ಬಗ್ಗೆ ಮಾತನಾಡಲು ಯಾರಿಗೂ ಅಧಿಕಾರ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.ಶುಕ್ರವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆ ಕುರಿತು ಮಾತನಾಡುವ ಅಧಿಕಾರ ಯಾರಿಗೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೇ ಹೇಳಿದ್ದಾರೆ ಎಂದರು.ಮುಂದಿನ ಎರಡೂವರೆ ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವ ಪಾಟೀಲ್, ಜನರು ಕೇಳಿದಾಗ ಹಾಗೆ…

Read More

ದೇವರನಿಂಬರಗಿ ಗ್ರಾಮದಲ್ಲಿ ಅಪ್ರಾಪ್ತ ಬಾಲಕನ ಅಪಹರಣಕ್ಕೆ ವಿಫಲ ಯತ್ನ: ಆರೋಪಿ ಸೆರೆ

ಸಪ್ತ ಸಾಗರ ವಾರ್ತೆ ವಿಜಯಪುರ, ಅ. 2:ಸೆಪ್ಟೆಂಬರ್ 3ರಂದು ಹಂತಕರ ಗುಂಡಿಗೆ ಬಲಿಯಾಗಿದ್ದ ದೇವರನಿಂಬರಗಿ ಗ್ರಾಮದ ಭೀಮನಗೌಡ ಬಿರಾದಾರ ಎಂಬುವರ ಅಪ್ರಾಪ್ತ ಪುತ್ರನ ಅಪಹರಣಕ್ಕೆ ಗುರುವಾರ ಸಂಜೆ ದೇವರನಿಂಬರಗಿ ಭೀಮನಗೌಡ ಬಿರಾದಾರ ತೋಟದ ನಿವಾಸದ ಬಳಿ ವಿಫಲ ಯತ್ನ ನಡೆದಿದ್ದು, ಈ ಬಗ್ಗೆ ಗ್ರಾಮಸ್ಥರಲ್ಲಿ ಮತ್ತೆ ಆತಂಕ ಮೂಡಿದೆ.ಕಳೆದ ಸಪ್ಟೆಂಬರ್ 3 ರಂದು ದೇವರನಿಂಬರಗಿ ಗ್ರಾಮದಲ್ಲಿ ಭೀಮನಗೌಡ ಬಿರಾದಾರ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಆದಾಗ್ಯೂ ಗುರುವಾರ ಸಂಜೆ ಭೀಮನಗೌಡ ಅವರ…

Read More

ಅ. 4ರಂದು ಹಜರತ್ ಅರ್ಕಾಟ್ ದರ್ಗಾದ ಉರುಸು

ಸಪ್ತ ಸಾಗರ ವಾರ್ತೆ, ವಿಜಯಪುರ, ಅ. 2 ವಿಜಯಪುರದ ಭಾವೈಕ್ಯತೆಯ ಪ್ರತೀಕವಾಗಿರುವ ಹಜರತ್ ಅರ್ಕಾಟ್ ದರ್ಗಾದ ಉರುಸು ಶ್ರದ್ಧಾ ಭಕ್ತಿಯಿಂದ ಜರುಗಲಿದ್ದು, ಇದರ ಅಂಗವಾಗಿ ಅ.4 ರಂದು ಝೂಲೂಸ್ ಏ. ಗೌಸಿಯಾ ಎಂಬ ಬೃಹತ್ ಶಾಂತಿಯಾತ್ರೆ ನಡೆಯಲಿದೆ ಎಂದು ಧರ್ಮಗುರು ಮೌಲಾನಾ ಯೂಸೂಫ್ ಖಾದ್ರಿ ಹೇಳಿದರು.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಉರುಸು ಅಂಗವಾಗಿ ಅನೇಕ ಸಿದ್ದತೆಗಳನ್ನು ಭರದಿಂದ ಕೈಗೊಳ್ಳಲಾಗುತ್ತಿದೆ. ಮಾನವೀಯತೆ, ಶಾಂತಿ, ಸಹೋದರತೆ ತತ್ವ ಸಾರಿದ ಅರ್ಕಾಟ್ ದರ್ಗಾದ ಹಜರತ್ ಸೈಯ್ಯದ್ ನಾ ಅಬ್ದುಲ್ ಷಾ…

Read More

ದಸರಾ: ಪರಸ್ಪರ ಬನ್ನಿ ವಿನಿಮಯ ಮಾಡಿಕೊಂಡ ಗೆಳೆಯರು

ಸಪ್ತಸಾಗರ ವಾರ್ತೆ, ವಿಜಯಪುರ, ಅ. 2: ದಸರಾ ಹಬ್ಬದ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಶಿಕ್ಷಕ ಸಂತೋಷ ಬಂಡೆ, ಸುರೇಶ ಗಿರಿಸಾಗರ, ಶ್ರೀಕಾಂತ ಗುಜ್ಜಲಕರ, ಅಶೋಕ ಪಾತ್ರೋಟ, ಲಕ್ಷ್ಮಣ ಗುಜ್ಜಲವರ, ಅನಿಲ ಗುಜ್ಜಲವರ, ವೆಂಕಟೇಶ ಗುಜ್ಜಲವರ, ಮಹಾಂತೇಶ ಗುಜ್ಜಲವರ ಸೇರಿದಂತೆ ಅನೇಕರು ಪರಸ್ಪರ ಬನ್ನಿ ವಿನಿಮಯ ಮಾಡಿಕೊಂಡು ವಿಜಯ ದಶಮಿ ಹಬ್ಬವನ್ನು ಆಚರಿಸಿದರು.

Read More

ಬಿಜೆಪಿ ಕಚೇರಿಯಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ

ಸಪ್ತ ಸಾಗರ ವಾರ್ತೆ ವಿಜಯಪುರ, ಅ. 2: ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲೆಯ ಪಕ್ಷದ ಕಾರ್ಯಾಲಯದಲ್ಲಿ ಜಗದ್ಗುರು ಮಧ್ವಾಚಾರ್ಯರ, ಮಹಾತ್ಮಾ ಗಾಂಧಿಜಿ ಹಾಗೂ ಲಾಲ ಬಹದ್ದೂರ ಶಾಸ್ತ್ರಿರವರ ಜಯಂತಿಯನ್ನು ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು.ಈ ಸಂದರ್ಭದಲ್ಲಿ ಬೆಳಗಾವಿ ವಿಭಾಗ ಪ್ರಭಾರಿ ಚಂದ್ರಶೇಖರ ಕವಟಗಿ ಆವರು ಮಾತನಾಡಿ, ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಜೀವನ, ಎದುರಾದ ಸವಾಲುಗಳು, ಅವರ ವ್ಯಕ್ತಿತ್ವದ ಬಗ್ಗೆ ವಿವರವಾಗಿ ಮಾತನಾಡಿದರು. ಲಾಲ್ ಬಹದ್ದೂರ್ ಶಾಸ್ತ್ರೀಜಿಯವರು ನಮಗೆ ಕಲಿಸಿಕೊಟ್ಟ ಪಾಠಗಳು ಹಲವು. ಸತ್ಯ,…

Read More

ಬಿ.ಎಲ್.ಡಿ.ಇ ಡೀಮ್ಡ್ ವಿವಿಯಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 2:‌ ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಇಂದು‌ ಗುರುವಾರ ಮಹಾತ್ಮಾ ಗಾಂಧಿಯವರ 156ನೇ ಮತ್ತು ಲಾಲ ಬಹಾದ್ದೂರ ಶಾಸ್ತ್ರಿಯವರ 121ನೇ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಡೀಮ್ಡ್ ವಿವಿ ಹಂಗಾಮಿ ಕುಲಪತಿ, ಡಾ. ಅರುಣ ಚಂ.‌ಇನಾಮದಾರ ಅವರು ಗಾಂಧಿ ಮತ್ತು ಶಾಸ್ತ್ರಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.ಬಳಿಕ ಮಾತನಾಡಿದ ಅವರು, ಗಾಂಧಿಯವರು ಸತ್ಯ ಮತ್ತು ಅಹಿಂಸೆ ತತ್ವಗಳ ಮೂಲಕ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ. ಅವರ ಸತ್ಯ ಮತ್ತು ಅಹಿಂಸೆ ತತ್ವಗಳನ್ನು ಜೀವನದಲ್ಲಿ…

Read More

ವೈದ್ಯಕೀಯ ಮಹಾವಿದ್ಯಾಲಯ ಕೊಡಿ ಕವಿಗೋಷ್ಠಿಗೆ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. ಅ. 1: ಜಿಲ್ಲೆಗೆ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿ, ನಾಡಿನ ಕವಿಗಳಿಂದ ನಮಗೆ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಕೊಡಿ ಎಂಬ ವಿಷಯದ ಕುರಿತು(ಅಕ್ಟೋಬರ್-5)ರಂದು ಮುಂಜಾನೆ 10ಗಂಟೆಗೆ ಅಂಬೇಡ್ಕರ್ ವೃತ್ತದಲ್ಲಿಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ.ಕವಿಗೋಷ್ಠಿಯಲ್ಲಿ ಭಾಗವಹಿಸುವ ಕವಿಗಳು ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ಅಥವಾ ಜಿಲ್ಲೆಯ ಅಭಿವೃದ್ಧಿ ಮತ್ತು ಪ್ರಗತಿಗೆ ಸಂಬಂಧಪಟ್ಟ ವಿಷಯದ ಕುರಿತು ಕವನ ವಾಚಿಸಬಹುದು.ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ, ವಿಜಯಪುರ ಪರವಾಗಿ ಹೆಸರು ನೋಂದಾಯಿಸಿಕೊಳ್ಳಲು ಮೊ. 72042 79187 ,96320…

Read More

ಟೆಲೆಸ್ಕೋಪ ತರಬೇತಿಗೆ ಮುಳವಾಡ ಶಾಲೆಯ ವಿದ್ಯಾರ್ಥಿ ಕೃಷ್ಣ ಕುಂಬಾರ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 1: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ಬೆಂಗಳೂರ ವತಿಯಿಂದ ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಎಂಟು ದಿನಗಳ ಕಾಲ “ನಾನು ವಿಜ್ಞಾನಿ 2025” ಶೀರ್ಷಿಕೆಯಡಿಯಲ್ಲಿ ಶಾಲೆಗೊಂದು ಟೆಲೆಸ್ಕೋಪ ತಯಾರಿಸುವ ತರಬೇತಿಯನ್ನು ನುರಿತ ತಜ್ಞರಿಂದ ನೀಡಲಾಗುತ್ತದೆ.ಇದೊಂದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗುವ ಸದಾವಕಾಶ ಒದಗಿ ಬಂದಿದೆ. ಈ ತರಬೇತಿಯನ್ನು ದೊಡ್ಡಬಳ್ಳಾಪುರ ಬಳಿಯಿರುವ ಬ್ಯಾಸೆಂಟ್ ಉದ್ಯಾನವನ ಸ್ಕೌಟ್ ಕ್ಯಾಂಪಿನಲ್ಲಿ ನೀಡಲಾಗುವುದು.ವಿಜಯಪುರ ಜಿಲ್ಲೆಯ ಮುಳವಾಡ ಪ್ರೌಢಶಾಲೆಯ ಹತ್ತನೇ ವರ್ಗದ ವಿದ್ಯಾರ್ಥಿ ಕುಮಾರ ಕೃಷ್ಣ ಬಸಪ್ಪ…

Read More