ಪ್ಲಾಸ್ಟಿಕ್ ಮಾಲಿನ್ಯವನ್ನು ಮುಕ್ತಗೊಳಿಸೋಣ: ಸಿ.ಎಂ. ಮಾಲಿಪಾಟೀಲ ಅಭಿಮತ

ಸಪ್ತಸಾಗರ ವಾರ್ತೆ,ವಿಜಯಪುರ,ಸೆ. 11: ನಮ್ಮ ಸುತ್ತಮುತ್ತಲಿನ ಭೂಮಿ ಹಾಗೂ ನೖಸರ್ಗಿಕ ಸಂಪನ್ಮೂಲಗಳನ್ನು ರಕ್ಷಣೆ ಮಾಡಿ ಮುಂದಿನ ಪೀಳಿಗೆಯಲ್ಲಿ ಪರಿಸರದ ಕುರಿತು ಜಾಗೃತಿ ಮೂಡಿಸುವ ಕಾರ್ಯವಾಗಬೇಕಾಗಿದೆ. ೨೦೨೫ರ ಪರಿಸರ ದಿನಾಚರಣೆಯ ಉದ್ದೇಶದಂತೆ ಪ್ಲಾಸ್ಟಿಕ್ ಮಾಲಿನ್ಯವನ್ನು ಮುಕ್ತಗೊಳಿಸುವುದಾಗಿದ್ದು, ಅದರಂತೆ ನಾವು ನೀವೆಲ್ಲರೂ ಮಾದರಿಯಾಗಿ ನಡೆದುಕೊಳ್ಳೋಣ ಎಂದು ಖ್ಯಾತ ಉದ್ದಿಮೆದಾರರೂ, ಸಮಾಜ ಸೇವಕರಾದ ಸಿ.ಎಂ. ಮಾಲಿಪಾಟೀಲ ಅಭಿಪ್ರಾಯಪಟ್ಟರು.ವಿಜಯಪುರ ನಗರದ ಅಥಣಿ ರಸ್ತೆಯಲ್ಲಿರುವ ಪರಿಸರ ಜಾಗೃತಿ ವೇದಿಕೆಯ ಸಭಾಂಗಣದಲ್ಲಿ ಪರಿಸರ ಜಾಗೃತಿ ವೇದಿಕೆಯ ೧೭ನೇ ವರ್ಷದ ವರ್ಷಾಚರಣೆಯನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ…

Read More

ಪಿಪಿಪಿ ವೈದ್ಯಕೀಯ ಕಾಲೇಜು ಸ್ಥಾಪನೆ ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ಬೃಹತ್ ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. ೧೧:ವಿಜಯಪುರ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಸಹಕಾರಿ ಸಹಭಾಗಿತ್ವದಲ್ಲೇ ಸ್ಥಾಪಿಸಬೇಕು. ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡುವುದನ್ನು ವಿರೋಧಿಸಿ ಗುರುವಾರ ಸಾವಿರಾರು ವಿದ್ಯಾರ್ಥಿಗಳು ಜನಾಂದೋಲನ ರ್ಯಾಲಿ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು.ಪ್ರತಿಭಟನೆ ರ್ಯಾಲಿ ನಗರದ ಶಿವಾಜಿ ವೃತ್ತದಿಂದ ಅಂಬೇಡ್ಕರ್ ಸರ್ಕಲ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟ ನಡೆಸಿ ಮನವಿ ಸಲ್ಲಿಸಲಾಯಿತು.ಈ ಹೋರಾಟವನ್ನು ಉದ್ದೇಶಿಸಿ ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ ಪೂಜಾರಿ ಅವರು ಮಾತನಾಡಿ, ಕಳೆದ ೨೦ ವರ್ಷಗಳಿಂದ ಡಿವಿಪಿ…

Read More

ಮಾನವ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ಹಾಸಿಂಪೀರ ವಾಲಿಕಾರ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 11 : ಮಾನವ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಕತ೯ವ್ಯ. ಮಾನವ ಹಕ್ಕುಗಳನ್ನು ಸರ್ಕಾರ ಹಾಗೂ ಸಮುದಾಯದ ಜೊತೆಯಾಗಿ ಪಾಲನೆ ಪರಿಣಾಮಕಾರಿಯಾಗಬೇಕು ಎಂದು ಮಾನವ ಹಕ್ಕುಗಳ ಕಲ್ಯಾಣ ಮಂಡಳಿಯ ರಾಜ್ಯಾಧ್ಯಕ್ಷ ಹಾಗೂ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.ಗುರುವಾರ ನಗರದ ಎಸ್.ಬಿ. ಜೆ. ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಹಾಗೂ ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಹಾಗೂ ಮಾನವ ಹಕ್ಕುಗಳ ಘಟಕದ ಸಹಯೋಗದಲ್ಲಿ ನಡೆದ ಮಾನವ ಹಕ್ಕುಗಳ ಅರಿವು ಕುರಿತು ಚಿಂತನ…

Read More

ಮನೆ ಕಳ್ಳತನ ಪ್ರಕರಣ: ಮೂವರು ಆರೋಪಿಗಳ ಬಂಧನ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 11:ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ ಪೊಲೀಸರು 65 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.ಝಂಡಾ ಕಟ್ಟಾ ಜೆ ಎಂ ರೋಡ ಹಳಕೇರಿ ಗಲ್ಲಿ ನಿವಾಸಿ ಸಮೀರ ಇನಾಮದಾರ, ಶಾಪೇಠಿ ಅಪ್ಸರಾ ಟಾಕೀಸ್ ಹತ್ತಿರ ಸುಹಾಗ ಕಾಲನಿ ನಿವಾಸಿ ಹಸನಡೊಂಗ್ರಿ ಮುಲ್ಲಾ, ನಿಸ್ಸಾರ ಮಡ್ಡಿ ನಿವಾಸಿಶಫೀಕ್ ಅಹ್ಮದ ಇನಾಮದಾರ ಬಂಧಿತ ಆರೋಪಿಗಳು.ಆರೋಪಿತರು ಅನುಮಾನಾಸ್ಪದವಾಗಿ ತಿರುಗಾಡುವಾಗ ಹಿಡಿದು ಠಾಣೆಗೆ ಕರೆತಂದು ವಿಚಾರಣೆ ಮಾಡಲಾಗಿ ಒಟ್ಟು ಮೂರು ಜನರು ಸೇರಿಕೊಂಡು ಮನೆಕಳ್ಳತನ ಮಾಡಿದ ಬಗ್ಗೆ ಒಪ್ಪಿಕೊಂಡಿದ್ದಾರೆ….

Read More

ಮಹಿಂದ್ರಾ ಬೋಲೆರೋ ವಾಹನ ಹಸ್ತಾಂತರ

ಸಪ್ತಸಾಗರ ವಾರ್ತೆ,ವಿಜಯಪುರ,ಸೆ. 10:ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2025-26 ನೇ ಸಾಲಿನಲ್ಲಿ ಮಂಜೂರಿಸಲಾದ ರೂ.11 ಲಕ್ಷ ಅನುದಾನದಲ್ಲಿ ಖರೀದಿಸಲಾದ ನೂತನ ಮಹಿಂದ್ರಾ ಬೋಲೆರೋ ವಾಹನವನ್ನು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬುಧವಾರ ವಾಹನ ಸಾರಿಗೆ ವಿಭಾಗ, ಆರಕ್ಷಕ ನಿರೀಕ್ಷಕರು, ಡಿಎಆರ್ ವಿಜಯಪುರ ಅವರಿಗೆ ಕೀ ನೀಡುವ ಮೂಲಕ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಡಿ.ವೈ.ಎಸ್.ಪಿಗಳಾದ ಸುನೀಲ ಕಾಂಬ್ಳೆ, ಮುರಗೆಪ್ಪ ಉಪಾಸೆ, ಸಿಪಿಐ ಗಳಾದ ರವಿ ಯಡವಣ್ಣವರ, ರಾಯಗೊಂಡ ಜಾನವಾರ, ಪರಶುರಾಮ ಮನಗೂಳಿ, ಪಿ.ಎಸ್.ಐ ಯತಿಂದ್ರ, ಆರ್.ಪಿ.ಐ ಈರಸಂಗಪ್ಪ…

Read More

ಬೈಕ್ ಕಳ್ಳರ ಬಂಧನ: 17 ಮೋಟಾರ್ ಸೈಕಲ್ ವಶ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 10:ನಗರದ ವಿವಿಧ ಕಡೆಗಳಲ್ಲಿ ಕಳ್ಳತನ ಮಾಡಿದ್ದ 17 ಮೋಟರ್ ಸೈಕಲ್ ಗಳನ್ನು ಪೊಲೀಸರು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಸಿಂದಗಿ ತಾಲೂಕಿನ ಗಣಿಹಾರದ ವೀರಭದ್ರ ಕುಂಬಾರ, ಶ್ರೀಶೈಲ ಬಿರಾದಾರ ಬಂಧಿತ ಆರೋಪಿಗಳು.ವಿಜಯಪುರ ನಗರದ ವಿವಿಧ ಕಡೆಗಳಲ್ಲಿ ಕಳ್ಳತನ ಮಾಡಿದ 11,00,000 ರೂ. ಮೌಲ್ಯದ 13 ಹೋಂಡಾ ಶೈನ್ ಮೋಟಾರ್ ಸೈಕಲ್‌ಗಳು ಮತ್ತು 4 ಹಿರೋ ಕಂಪನಿಯ ಮೋಟಾರ್ ಸೈಕಲ್‌ಗಳು ಸೇರಿ ಒಟ್ಟು 17 ಮೋಟಾರ್ ಸೈಕಲ್‌ಗಳನ್ನು ಪೊಲೀಸರು ಜಪ್ತು ಮಾಡಿಕೊಂಡಿದ್ದಾರೆ.ವಿಜಯಪುರ ಶಹರದಲ್ಲಿ ಇತ್ತೀಚೆಗೆ…

Read More

ವ್ಯಕ್ತಿಯ ಬರ್ಬರ ಹತ್ಯೆ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 10:ಓರ್ವ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಅಲಮೇಲ ಪಟ್ಟಣದಲ್ಲಿ ನಡೆದಿದೆ.ಅಜರುದ್ದೀನ್ ಅಬ್ದುಲ್ ರಜಾಲ್ ಮಕಾನದಾರ್ (38) ಕೊಲೆಯಾದ ವ್ಯಕ್ತಿ.ಅಜರುದ್ದೀನ್ ಬೈಕ್ ಮೇಲೆ ತೆರಳುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಚ್ಚಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವ ಉಂಟಾಗಿ ಅಜರುದ್ದೀನ್ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾನೆ.ನೆರೆಯ ಮಹಾರಾಷ್ಟ್ರದ ದಕ್ಷಿಣ ಸೊಲ್ಲಾಪುರದ ನಿವಾಸಿ ಅಜರುದ್ದೀನ್ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ…

Read More

ವೃಕ್ಷೋತ್ಥಾನ ಹೆರಿಟೇಜ್ ರನ್ ಗೆ ಟಿ. ಭೂ ಬಾಲ್ ನರಿಗೆ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.10: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್- 2025 ರಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವಂತೆ ರಾಜ್ಯ ಇ- ಆಡಳಿತ ಇಲಾಖೆಯ ನಾಗರಿಕರಿಗೆ ವಿದ್ಯುನ್ಮಾನ ಸೇವೆ ಪೂರೈಕೆ ನಿರ್ದೇಶಕ(Electronic Delivery Of Citizen Services) ಟಿ. ಭೂಬಾಲನ್ ಅವರಿಗೆ ಆಹ್ವಾನ ನೀಡಲಾಗಿದ್ದು, ಈ ಆಮಂತ್ರಣಕ್ಕೆ ಅವರು ಒಪ್ಪಿಗೆ ಸೂಚಿಸಿದ್ದಾರೆ.ಬುಧವಾರ ಬೆಂಗಳೂರಿನಲ್ಲಿ ವೃಕ್ಷಥಾನ್ ಹೆರಿಟೇಜ್ ರನ್- 2025ರ ರಾಯಭಾರಿ ಮತ್ತು ಭಾರತೀಯ ರೇಲ್ವೆಯ ಹಿರಿಯ ಅಧಿಕಾರಿ ಪ್ರವೀಣ ಕಾತರಕಿ ಮತ್ತು ಕೈಗಾರಿಕೆ…

Read More

ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.9:ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 17ರಂದು ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.ಸಾಂಸ್ಕೃತಿಕ ಸ್ಪರ್ಧೆಗಳಾದ ಗಾಯನ ಹಾಗೂ ಏಕ ಪಾತ್ರಾಭಿನಯ ಸ್ಪರ್ಧೆ ಹಾಗೂ ಕ್ರೀಡಾ ಸ್ಪರ್ಧೆಗಳಾದ ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ , ಬಕೆಟ್‍ನಲ್ಲಿ ಬಾಲ್ ಎಸೆಯುವುದು.60 ರಿಂದ 70 ವಯೋಮಾನ‌ದವರು ಭಾಗವಹಿಸಬಹುದು.ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಸಂಯೋಜಕರಾದ ಪ್ರತಿಭಾ ಮಾದರ ಮೊ:…

Read More

ಡಿಸಿಎಂ ಡಿಕೆಶಿ ವಿರುದ್ಧ ವಕೀಲರ ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 9:ಡಿಸಿಎಂ ಡಿ.ಕೆ. ಶಿವಕುಮಾರ ಅವರು ವಕೀಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಖಂಡಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಬಿಜಾಪುರ ಬಾರ್ ಅಸೋಸಿಯೇಷನ್ ನೇತೃತ್ವದಲ್ಲಿ ಮಂಗಳವಾರ ನ್ಯಾಯವಾದಿಗಳು ಪ್ರತಿಭಟನೆ ನಡೆಸಿದರು.ಇತ್ತೀಚೆಗೆ ವಿಜಯಪುರ ಜಿಲ್ಲೆಯ ಆಲಮಟ್ಟಿಗೆ ಡಿಸಿಎಂ ಶಿವಕುಮಾರ ಭೇಟಿ ನೀಡಿದ ಸಂದರ್ಭದಲ್ಲಿ ವಕೀಲರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ ವಕೀಲರು ಕೋರ್ಟ್ ಕಲಾಪದಿಂದ ದೂರ ಉಳಿದು ಪ್ರತಿಭಟನೆ ನಡೆಸಿದರು.ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ನ್ಯಾಯವಾದಿಗಳು ಡಿಸಿಎಂ ಶಿವಕುಮಾರ್ ಅವರು…

Read More