ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 9 :ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜ್ ನಿರ್ಮಾಣ ಕೈ ಬಿಟ್ಟು ಪೂರ್ಣ ಪ್ರಮಾಣದ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪಿಸಬೇಕೆಂದು ಆಗ್ರಹಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿಚೌಕ ಮಾರ್ಗವಾಗಿ ಸಾಗಿದ ರ‍್ಯಾಲಿಯಲ್ಲಿ ನೂರಾರು ವಿದ್ಯಾರ್ಥಿಗಳು `ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಬೇಕು, ಪಿಪಿಪಿ ಮಾದರಿ ಕೈಬಿಡಿ ಎಂದು ಘೋಷಣೆ ಕೂಗಿದರು.ಡಾ. ಬಿ.ಆರ್. ಅಂಬೇಡ್ಕರ್ ಸರ್ಕಲ್‌ವರೆಗೂ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.ಹೋರಾಟ ಸಮಿತಿ ಸದಸ್ಯ…

Read More

ರಿಯಾಯಿತಿ ದರದಲ್ಲಿ ಆರೋಗ್ಯ ಚಿಕಿತ್ಸೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 9: ನಗರದ ಬಿ.ಎಲ್‌.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಕಾಯಚಿಕಿತ್ಸೆ ವಿಭಾಗದ ವತಿಯಿಂದ ನಾಳೆ ಸೆಪ್ಟೆಂಬರ್ 10 ರಿಂದ ಸೆಪ್ಟೆಂಬರ್ 17ರ ವರೆಗೆ ಆರು ದಿನಗಳ ಕಾಲ ಪುರುಷರಲ್ಲಿ ಸಂತಾನ ಹೀನತೆ ಮತ್ತು ಪುರುಷರ ವೀರ್ಯದಲ್ಲಿನ ಸಮಸ್ಯೆಗೆ ಉಚಿತ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಚಿಕಿತ್ಸೆ ಶಿಬಿರ ನಡೆಯಲಿದೆ.ಈ ಸಮಸ್ಯೆ ಎದುರಿಸುತ್ತಿರುವ ಪುರುಷರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 8073518596 ಕ್ಕೆ ಸಂಪರ್ಕಿಸಬಹುದಾಗಿದೆ, ಎಂದು ಕಾಲೇಜಿನ ಪ್ರಾಚಾರ್ಯ…

Read More

ಶಸ್ತ್ರ ಚಿಕಿತ್ಸೆಗೆ ಆರೋಗ್ಯ ವಿಮೆ ಸೌಲಭ್ಯ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ.: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು ಆಸ್ಪತೆಯಲ್ಲಿ ಇ.ಸಿ.ಎಚ್ಎಸ್(Ex- Servicemen Contributory Health Scheme) ಮತ್ತು ಇ.ಎಸ್.ಐ.ಸಿ(Employees State Insurance Corporation) ವಿಮೆ ಅಡಿಯಲ್ಲಿ ನಗದು ರಹಿತವಾಗಿ ನಾನಾ ಕಾಯಿಲೆಗಳಿಗೆ ಸೂಪರ್ ಸ್ಪೇಷಾಲಿಟಿ ಚಿಕಿತ್ಸೆ ಸೌಲಭ್ಯ ಪ್ರಾರಂಭವಾಗಿದೆ.ಸೂಪರ್ ಸ್ಪೇಷಾಲಿಟಿ ಚಿಕಿತ್ಸೆಗಳಾದ ಹೃದಯ ರೋಗ, ನರರೋಗ, ಮೂತ್ರಪಿಂಡ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆ, ಮೊಳಕಾಲು ಮಂಡಿ, ಸೋಂಟದ ಕೀಲು ಶಸ್ತ್ರಚಿಕಿತ್ಸೆ, ಚಿಕ್ಕ ಮಕ್ಕಳ ಶಸ್ತ್ರಚಿಕಿತ್ಸೆಗಳಿಗೆ ಸಂಬಂಧಿಸಿದಂತೆ ಮೇಲಿನ ಎರಡು…

Read More

ಕೋಟ್ಪಾಕಾಯ್ದೆಪರಿಣಾಮಕಾರಿಅನುಷ್ಠಾನಕ್ಕೆಜಿಲ್ಲಾಧಿಕಾರಿಡಾ. ಆನಂದ.ಕೆಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 9:ಜಿಲ್ಲೆಯಾದ್ಯಂತ ಇರುವ ಶಾಲಾ-ಕಾಲೇಜ್ ಆವರಣದ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ತಂಬಾಕು ಉತ್ಪನ್ನಗಳ ಮಾರಾಟವಾಗದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ ನೀಡಿದರು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣಾ ಕಾರ್ಯಕ್ರಮದ 2025-26ನೇ ಸಾಲಿನ ಎರಡನೇ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಶಾಲೆಯ ಮುಖ್ಯೋಪಾಧ್ಯಾಯರು ಸೇರಿದಂತೆ ಶಾಲಾ ಅಭಿವೃದ್ಧಿ ಸಮಿತಿಯವರು ಕೊಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಸಂಬಂಧಿಸಿದ ಇಲಾಖೆಯ…

Read More

ಧರ್ಮಸ್ಥಳ ಯೋಜನೆಯ ಒಕ್ಕೂಟ ಪದಾಧಿಕಾರಿಗಳ ಮಾಹಿತಿ ಕಾರ್ಯಾಗಾರ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 9: ಜಿಲ್ಲೆಯ ತಾಳಿಕೋಟೆಯ ವಿಠ್ಠಲ್ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುದ್ದೇಬಿಹಾಳ ತಾಲ್ಲೂಕಿನ ಗಣೇಶನಗರ ವಲಯದ 10 ಒಕ್ಕೂಟದ ಪದಾಧಿಕಾರಿಗಳಿಗೆ ಒಂದು ದಿನದ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.ಜಿಲ್ಲಾ ನಿರ್ದೇಶಕ ಸಂತೋಷ ಕುಮಾರ ಅವರು ಕಾರ್ಯಾಗಾರ ಉದ್ಘಾಟಿಸಿದರು.ವಲಯ ಮಟ್ಟದಲ್ಲಿ 25 ರಿಂದ 30 ತಂಡಗಳನ್ನು ಒಳಗೊಂಡಂತೆ ಒಂದು ಒಕ್ಕೂಟದಂತೆ 10 ಒಕ್ಕೂಟಗಳು ಕಾರ್ಯ ನಿರ್ವಹಿಸುತ್ತಿದ್ದು. 10 ಒಕ್ಕೂಟದಿಂದ 50 ಜನ ಪದಾಧಿಕಾರಿಗಳು ಈ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿದ್ದರು.ವಿಜಯಪುರ ಜಿಲ್ಲಾ ನಿರ್ದೇಶಕ…

Read More

ತೆಲಂಗಾಣದ ಮಾಂಗಳ್ಯ ಮಾಲ್ ಗುಮ್ಮಟ ನಗರಿಯಲ್ಲೂ ಆರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 8 : ಐತಿಹಾಸಿಕ ವಿಜಯಪುರ ಮಹಾನಗರದಲ್ಲಿತೆಲಂಗಾಣದ ವಾರಂಗಲ್‌ ಮೂಲದ ಮಾಂಗಳ್ಯ ಶಾಪಿಂಗ್ ಮಾಲ್ ತನ್ನ ಶಾಖೆಯನ್ನು ಆರಂಭಿಸಿದ್ದು ಅದ್ಧೂರಿ ಚಾಲನೆ ಪಡೆದಿದೆ. ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ, ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹಾಗೂ ಕನ್ನಡ ಚಲನಚಿತ್ರದ ಪ್ರಖ್ಯಾತ ನಟಿ ಆಶಿಕಾ ರಂಗನಾಥ ಜ್ಯೊತಿ ಬೆಳಗಿಸಿ ಚಾಲನೆ ನೀಡಿದರು.ತೆಲಂಗಾಣ ರಾಜ್ಯದ ವಾರಂಗಲ್ ಮೂಲದ ಮಾಂಗಳ್ಯ ಶಾಪಿಂಗ್ ಮಾಲ್ 2012 ರಲ್ಲಿ ಆರಂಭಗೊಂಡು ವಿವಿಧ ಮಹಾನಗರದಲ್ಲಿ ತನ್ನ 24 ಶಾಖೆಗಳನ್ನು ತೆರೆದಿದೆ….

Read More

ಗೃಹ ಬಳಕೆ ಸಿಲಿಂಡರ್ ಅನಧಿಕೃತ ರಿಫಿಲಿಂಗ್ : ಆಹಾರ ಇಲಾಖೆ ದಾಳಿ, ಸಿಲಿಂಡರ್ ವಶಕ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.8: ಗೃಹ ಬಳಕೆಯ ಸಿಲಿಂಡರ್ ಗಳಿಂದ ಅನಧಿಕೃತವಾಗಿ ರಿಫಿಲಿಂಗ್ ಮಾಡುತ್ತಿರುವ ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, 31920 ರೂ. ಮೌಲ್ಯದ ಒಟ್ಟು 10 ಹೆಚ್‍ಪಿ ಕಂಪನಿ ಸಿಲಿಂಡರ್ ಗಳನ್ನು ವಶಪಡಿಸಿಕೊಂಡಿದ್ದಾರೆ.ವಿಜಯಪುರ ನಗರದ ಇಬ್ರಾಹಿಂ ರೋಜಾ ಹತ್ತಿರದಲ್ಲಿ ಪತ್ರಾಸ ಶೆಡ್‍ನಲ್ಲಿ ಹಾಗೂ ನಗರದ ಬಾಗಲಕೋಟೆ ಕ್ರಾಸ್ ಹತ್ತಿರದ ಒಂದು ಪತ್ರಾಸ್ ಶೆಡ್‍ನಲ್ಲಿ ಅನಧಿಕೃತವಾಗಿ ಗೃಹ ಬಳಕೆ ಎಲ್‍ಪಿಜಿ ಸಿಲಿಂಡರ್ ಸಂಗ್ರಹಣೆ ಮಾಡಿ ರಿಫಿಲಿಂಗ್ ಮಾಡುತ್ತಿದ್ದ ಸ್ಥಳದಲ್ಲಿ ಅಧಿಕಾರಿಗಳು ದಾಳಿ ನಡೆಸಿ, ಸಿಲಿಂಡರ್…

Read More

ಬಿ ಎಲ್ ಡಿ ಇ ಟೀಚರ್ಸ್ ಕಾಲೋನಿಯಲ್ಲಿ ಮಹಾಮೃತ್ಯುಂಜಯ ಜಪ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 8: ರಾಹುಗ್ರಸ್ತ ಚಂದ್ರಗ್ರಹಣ ಅಂಗವಾಗಿ ನಗರದ ಬಿ.ಎಲ್.ಡಿ.ಇ ಟೀಚರ್ಸ್ ಕಾಲನಿಯ ಬಿ. ಎಂ.‌ಪಾಟೀಲ ನಗರದ ಶಿವಾಲಯದಲ್ಲಿ ಲೋಕಕಲ್ಯಾಣಕ್ಕಾಗಿ ಮತ್ತು ಅಶುಭ ಫಲ ಇರುವ ರಾಶಿಯವರಿಗೆ ಶುಭ ಫಲವನ್ನು ಬಯಸಿ ಸಂಕಲ್ಪಿಸಿ ಶ್ರೀ ಫಕೀರಯ್ಯ ಶಾಸ್ತ್ರಿಗಳು ಹಾಗೂ ಶ್ರೀ ಸಿದ್ದರಾಮಯ್ಯ ಶಾಸ್ತ್ರಿಗಳ ನೇತೃತ್ವದಲ್ಲಿ ಮಹಾಮೃತ್ಯುಂಜಯ ಜಪ ನಡೆಯಿತು.ಬಡಾವಣೆಯ ಸದ್ಭಕ್ತರು ಇದರಲ್ಲಿ ಪಾಲ್ಗೊಂಡರು. ಸೋಮವಾರ ಗ್ರಹಣ ಮೋಕ್ಷದ ನಂತರ ಮಹಾಶಿವನಿಗೆ ವಿಶೇಷವಾಗಿ ರುದ್ರಾಭಿಷೇಕ ನೆರವೇರಿಸಿ ಸಮಾಜದ ಒಳಿತಿಗಾಗಿ, ಸಾರ್ವಜನಿಕರ ಆಯುಷ್ಯ ಆರೋಗ್ಯ ಅಭಿವೃದ್ಧಿಗಾಗಿ ಮಹಾಮೃತ್ಯುಂಜಯ…

Read More

ಖಾದಿ ಸ್ವಾಭಿಮಾನ-ಸ್ವಾವಲಂಬನೆ ಸಂಕೇತ- ಮಂಡಳಿ ಅಧ್ಯಕ್ಷ ಬಸನಗೌಡ ತುರವಿಹಾಳ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.8:ಖಾದಿ ಬಟ್ಟೆ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಖಾದಿ ದೇಶಾಭಿಮಾನದ ಪ್ರತೀಕವಾಗಿದೆ. ಖಾದಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಉದ್ಯೋಗಾವಕಾಶ ಹೆಚ್ಚಿಸಿದೆ ಎಂದು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರಾದ ಮಸ್ಕಿ ಶಾಸಕರಾದ ಬಸನಗೌಡ ತುರವಿಹಾಳ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ನಗರದ ಇಂಡಿ ರಸ್ತೆಯ ಚಾಂದಿನಿ ಫಂಕ್ಷನ್ ಹಾಲ್‍ನಲ್ಲಿ…

Read More

ಸಾಧಕರು ಯಾರೇ ಇರಲಿ ದಸರಾ ಉದ್ಘಾಟನೆ ವಿರೋಧಿಸುವುದು ಸರಿಯಲ್ಲ: ನಿಡುಮಾಮಿಡಿ ಶ್ರೀಗಳು

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 8:ಕನ್ನಡ ನಾಡು ನುಡಿಗಾಗಿ ಶ್ರಮಿಸಿದ ಸಾಧಕರು ಯಾರೇ ಆಗಿದ್ದರೂ ಅವರು ಒಪ್ಪಿಕೊಂಡು ದಸರಾ ಉತ್ಸವದಲ್ಲಿ ಪಾಲ್ಗೊಳ್ಳುವುದಾದರೆ ಅದನ್ನು ಸ್ವೀಕಾರ ಮಾಡಬೇಕು. ವಿರೋಧ ಮಾಡಬಾರದು ಎಂದು ಚನ್ನಮಲ್ಲಿಕಾರ್ಜುನ ಶ್ರೀಗಳು ಪ್ರತಿಕ್ರಿಯೆ ನೀಡಿದರು.ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಾನು ಮುಸ್ತಾಕ ಅವರು ದಸರಾ ಉತ್ಸವದ ಉಧ್ಘಾಟನೆ ಮಾಡುವುದು ತಪ್ಪೇನಿಲ್ಲ. ಹಿಂದು, ಮುಸ್ಲಿಂ, ಜೈನ್, ಬೌದ್ಧ ಯಾವುದೇ ಧರ್ಮದವರಿರಲಿ. ಸಾಧಕರು ಪಾಲ್ಗೊಳ್ಳುವುದು ತಪ್ಪಿಲ್ಲ ಎಂದು ಸಮರ್ಥಿಸಿಕೊಂಡರು.ವೀರಶೈವ ಲಿಂಗಾಯತ ಗೊಂದಲವನ್ನು ಮತದಾನದ ಮೂಲಕ ಬಗೆಹರಿಸಿಕೊಳ್ಳಬೇಕು….

Read More