ಸೆ. 8ರಿಂದ 13ರ ವರೆಗೆ ಉಚಿತ ಆರೋಗ್ಯ ಶಿಬಿರ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 4: ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯದಲ್ಲಿ ಶಲ್ಯತಂತ್ರ ವಿಭಾಗದ ವತಿಯಿಂದ ಸೆಪ್ಟೆಂಬರ್ 8 ರಿಂದ ಸೆಪ್ಟೆಂಬರ್ 13ರ ವರೆಗೆ ಆರು ದಿನಗಳ ಕಾಲ ಉರುಪು ಮೂಲವ್ಯಾಧಿ ಮತ್ತು ಸೊಂಟ ನೋವು(ಸಿಯಾಟಿಕಾ) ಉಚಿತ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಚಿಕಿತ್ಸೆ ಶಿಬಿರವನ್ನು ಆಯೋಜಿಸಲಾಗಿದೆ.ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 7019656245 ಮತ್ತು‌ 8147740460ನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ…

Read More

ಸರಳ ರೀತಿಯಲ್ಲಿ ನಡೆದ ಗಜಾನನ ವಿಸರ್ಜನೆ ಮೆರವಣಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 4:ಗಣೇಶೋತ್ಸವ ವಿಸರ್ಜನೆ ವೇಳೆ ವಿದ್ಯುತ್ ಅವಘಡದಿಂದ ಯುವಕ ಅಸುನೀಗಿ, ಕೆಲವು ಯುವಕರು ಗಾಯಗೊಂಡಿರುವ ಘಟನೆ ನಡೆದ ಹಿನ್ನೆಲೆಯಲ್ಲಿ ಈ ಬಾರಿ ಗಜಾನನ ಮಹಾಮಂಡಳ ಗಣೇಶನ ಉತ್ಸವ ಮೂರ್ತಿಯ ಮೆರವಣಿಗೆ ಸಾಂಕೇತಿಕವಾಗಿ ನಡೆಯಿತು.ಪ್ರತಿ ವರ್ಷ ಹತ್ತಾರು ರೀತಿಯ ಕಲಾ ತಂಡಗಳೊಂದಿಗೆ ವಿಜೃಂಭಣೆಯಿಂದ ನಡೆಯುವ ಮೆರವಣಿಗೆಗೆ ಈ ಬಾರಿ ಸಾಂಪ್ರದಾಯಿಕತೆ ಮಾತ್ರ ಸೀಮಿತವಾಗಿತ್ತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದ ಸಾಧಕರಿಗೂ ಸಹ ಈ ಬಾರಿ ಪ್ರಶಸ್ತಿ ಪ್ರದಾನ ಮಾಡಲಿಲ್ಲ.ಗಣೇಶನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.ವಿವಿಧ…

Read More

ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಮಹಿಳಾ ಸಾಂಸ್ಕೃತಿಕ ಸಂಘಟನೆ ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 4: ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳಿಗೆ ಕೊನೆಹಾಕಿ ಸೂಕ್ತ ಭದ್ರತೆ ಒದಗಿಸಲು ಆಗ್ರಹಿಸಿ ಮಹಿಳಾ ಸಾಂಸ್ಕೃತಿಕ ಸಂಘಟನೆ ಪ್ರತಿಭಟನೆ ನಡೆಸಿತು.ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯು ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಖಿಲ ಭಾರತ ಸಾಂಸ್ಕೃತಿಕ ಸಂಘಟನೆ ಸಮಿತಿಯ ಕರೆಯ ಮೇರೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಸಂಘಟನೆಯು ದೇಶದಾದ್ಯಂತ ಮಹಿಳೆಯರ ಹಕ್ಕುಗಳಿಗಾಗಿ, ಮಹಿಳೆಯರ ಘನತೆಯ ಬದುಕಿಗಾಗಿ…

Read More

ಭೀಮಾ ನದಿಗೆ ಹಾರಿ ಮಹಿಳೆ ಆತ್ಮಹತ್ಯ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 4: ಸೊಲ್ಲಾಪುರ -ವಿಜಯಪುರ ಗಡಿಯ ಭೀಮಾ ನದಿಗೆ ಕಟ್ಟಲಾಗಿರುವ ಬ್ಯಾರೇಜ್ ಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಮೃತ ಮಹಿಳೆಯನ್ನು ಇಂಡಿ ಪಟ್ಟಣದ ಬೀರಪ್ಪನಗರ ನಿವಾಸಿ ಸುಶಿಲಾಬಾಯಿ ಶಾಂತಪ್ಪ ಬಿರಾದಾರ (62) ಎಂದು ಗುರುತಿಸಲಾಗಿದೆ.ವಿಜಯಪುರ -ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಭೀಮಾನದಿ ಬ್ಯಾರೇಜ್ ಮೇಲಿನಿಂದ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.ಮೃತ ಮಹಿಳೆಯ ಪತಿ ಮನೆ ಇಂಡಿ ಪಟ್ಟಣದಲ್ಲಿದ್ದು, ತವರು ಮನೆ ಸೊಲ್ಲಾಪುರ ಜಿಲ್ಲೆಯ ಟಾಕಳಿಯಲ್ಲಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು,…

Read More

ಸೆ.6ರಂದು ಆಲಮಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಕೃಷ್ಣಗೆ ಬಾಗಿನ ಅರ್ಪಣೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 4: ಆಲಮಟ್ಟಿಯ ಲಾಲ್ ಬಹಾದ್ದೂರ್‌ಶಾಸ್ತ್ರಿ ಜಲಾಶಯ ಈಗ ಭರ್ತಿಯಾಗಿದ್ದು, ಹೀಗಾಗಿ ಉತ್ತರ ಕರ್ನಾಟಕದ ಜೀವನದಿ ಕೃಷ್ಣಗೆ ಸೆ.6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ ಎಂದು ಕೆಬಿಜೆಎನ್‌ಎಲ್ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆಗಸ್ಟ್ ಎರಡನೆಯ ವಾರದವರೆಗೆ ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ವ್ಯಾಪಕ ಮಳೆಯಾಗಿ ಕೃಷ್ಣೆಯ ಮುಖ್ಯ ಹರಿವು ಹಾಗೂ ಅದರ ಉಪನದಿಗಳಲ್ಲಿ ಅಪಾರ ಪ್ರಮಾಣದ ನೀರು ಬಂದಿರುವುದರಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ.ಜನ, ಜಾನುವಾರಗಳಿಗೆ ಜೀವ ಹಾನಿಯಾಗದಿರಲಿ ಎನ್ನುವ ಉದ್ದೇಶದಿಂದ ಕರ್ನಾಟಕ ಹಾಗೂ…

Read More

ಹೈಟೆಕ್ ಹಾರ್ವೆಸ್ಟರ್ ಹಬ್ : ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.3: 2025-26 ನೇ ಸಾಲಿಗೆ ಕೃಷಿ ಇಲಾಖೆ ವತಿಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ ಕಾರ್ಯಕ್ರಮದಡಿ ಶುಗರ್ ಕೇನ ಹಾರ್ವೆಸ್ಟರ್ ಹಬ್ ಗಳನ್ನು ಹಾಗೂ ಕಂಬೈನ್ಸ್ ಹಾರ್ವೆಸ್ಟರ್ ಹಬ್‍ಗಳನ್ನು ಸಹಾಯಧನದಡಿ ವಿತರಿಸಲು ವೈಯಕ್ತಿಕ ಫಲಾನುಭವಿಗಳಿಗೆ ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಅವಕಾಶ ನೀಡುವ ನಿಟ್ಟಿನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.18 ಕೊನೆಯ ದಿನಾಂಕವಾಗಿದೆ.ಸಾಮಾನ್ಯ ಹಾಗೂ ಪರಿಶಿಷ್ಟ ವರ್ಗದಡಿ ವೈಯಕ್ತಿಕ ಫಲಾನುಭವಿಗಳಿಗೆ ಶುಗರ್ ಕೇನ ಹಾರ್ವೆಸ್ಟರ್ ಹಾಗೂ ಕಂಬೈನ್ಸ್ ಹಾರ್ವೆಸ್ಟರ್ ಹಬ್‍ಗಳನ್ನು ಸಹಾಯಧನದಡಿ ಅನುಷ್ಠಾನಗೊಳಿಸಲಾಗುತ್ತಿದ್ದು,…

Read More

ಕ್ರೀಡಾ ಕ್ಷೇತ್ರದಲ್ಲಿ ಸಾಧಕರಾಗಿ ಜಿಲ್ಲೆಯ ಕೀರ್ತಿ ಹೆಚ್ಚಿಸಿ -ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.3: ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಹೆಚ್ಚು ಹೆಚ್ಚು ಪ್ರಶಸ್ತಿ ಪಡೆದು ಜಿಲ್ಲೆಗೆ ಕೀರ್ತಿ ತರಬೇಕು ಎಂದು ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಡಾ. ಬಿ.ಆರ್.ಅಂಬೆಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ಪಠ್ಯದೊಂದಿಗೆ ಕ್ರೀಡೆಗಳಲ್ಲಿಯೂ ಭಾಗಿಯಾಗಿ ಸತತ ಪರಿಶ್ರಮದಿಂದ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ…

Read More

ಪೌರಕಾರ್ಮಿಕರಿಗೆಉಚಿತಮಧುಮೇಹಚಿಕಿತ್ಸೆ: ಡಾ. ಬಾಬುರಾಜೇಂದ್ರನಾಯಕಘೋಷಣೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 3 : ಜಿಲ್ಲೆಯ ಮನಗೂಳಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣೆ ಶಿಬಿರವು ಯಶಸ್ವಿಯಾಗಿ ನೆರವೇರಿತು.ಈ ಶಿಬಿರವನ್ನು ಶ್ರೀ ತುಳಸಿಗಿರೀಶ ಫೌಂಡೇಶನ್‌ ಸಂಸ್ಥಾಪಕ ಅಧ್ಯಕ್ಷ, ಖ್ಯಾತ ಮಧುಮೇಹ ತಜ್ಞ ಡಾ. ಬಾಬುರಾಜೇಂದ್ರ ನಾಯಿಕ ಹಾಗೂ ಭೀಮವಾದ ದಲಿತ ಸಂಘರ್ಷ ಸಮಿತಿಯ ತಾಲೂಕಾಧ್ಯಕ್ಷ ಮಹೇಶ ಪಿರಗಾ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಡಿಎಸ್ ಧುರೀಣ ಸೋಮನಗೌಡ ಪಾಟೀಲ ವಹಿಸಿಕೊಂಡಿದ್ದರು.ಕಾರ್ಯಕ್ರಮದ ಉದ್ಘಾಟನೆಯನ್ನು ವಿಶ್ವನಾಥಗೌಡ ಪಾಟೀಲ ನೆರವೇರಿಸಿದವರು. ಡಾ. ಬಾಬುರಾಜೇಂದ್ರ…

Read More

7ನೇ ಕರ್ನಾಟಕ ರಾಜ್ಯ ರೋಪ್ ಸ್ಕಿಪ್ಪಿಂಗ್ ಚಾಂಪಿಯನ್‌ಶಿಪ್ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 3:ಬಬಲೇಶ್ವರ ತಾಲೂಕಿನ ಕೃಷ್ಣಾನಗರದ ದಿ. ಶ್ರೀ ಬಿ.ಟಿ. ಪಾಟೀಲ್ ಮೆಮೋರಿಯಲ್ ನಂದಿ ಅಂತರರಾಷ್ಟ್ರೀಯ ವಸತಿ ಶಾಲೆಯು ರೋಪ ಸ್ಕಿಪ್ಪಿಂಗ್ ಅಸೋಸಿಯೇಶನ್ ಆಫ್ ಕರ್ನಾಟಕ ಇವರ ಸಹಯೋಗದೊಂದಿಗೆ ಇತೀಚೆಗೆ 7ನೇ ಕರ್ನಾಟಕ ರಾಜ್ಯ ರೋಪ್ ಸ್ಕಿಪ್ಪಿಂಗ್ ಚಾಂಪಿಯನ್‌ಶಿಪ್ ಕ್ರೀಡಾಕೂಟವನ್ನು ನಂದಿ ಅಂತರರಾಷ್ಟ್ರೀಯ ವಸತಿ ಶಾಲೆಯ ರೋಪ ಸ್ಕಿಪ್ಪಿಂಗ್ ತರಬೇತುದಾರ ವಿಶ್ವನಾಥ ಸಿದ್ದಾಪೂರ ನೇತೃತ್ವದಲ್ಲಿ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಏರ್ಪಡಿಸಿತ್ತು.ವಿವಿಧ ಜಿಲ್ಲೆಗಳಿಂದ ಸುಮಾರು 210 ವಿದ್ಯಾರ್ಥಿಗಳು ರೋಪ ಸ್ಕಿಪ್ಪಿಂಗ್…

Read More

ಗಣಪ ಹೋದ, ಜೋಕುಮಾರ ಬಂದ…

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 3: ‘ಅಡ್ಡಡ್ಡ ಮಳಿ ಬಂದು..ದೊಡ್ಡದೊಡ್ಡ ಕೆರೆ ತುಂಬಿ..‌ಗೊಡ್ಡುಗಳೆಲ್ಲ ಹೈನಾಗಿ..ಜೋಕುಮಾರ ಮಳಿ ತಂದ’..ಎಂಬ ಜೋಕುಮಾರನ ಬಗ್ಗೆ ಮಹಿಳೆಯರು ಪದಗಳ ಮೂಲಕ ಹಾಡುತ್ತಾ, ಉತ್ತರ ಕರ್ನಾಟಕದಲ್ಲಿ ಗಣಪತಿ ಹೋದ ಮಾರನೇ ದಿನ ಜನ್ಮ ತಾಳುವ ಜೋಕುಮಾರ ರೈತರ ಪಾಲಿಗೆ ವರವಾಗಿ ಪರಿಣಮಿಸಿದ್ದಾನೆ. ತಾಲೂಕಿನ ನಾಗಠಾಣ ಗ್ರಾಮದಲ್ಲಿ ಬಹಳ ವರ್ಷಗಳಿಂದ ಈ ಜೋಕುಮಾರನ ಹಬ್ಬ ಚಾಲ್ತಿಯಲ್ಲಿದೆ.ಮಳೆಗಾಗಿ ಜೋಕುಮಾರನನ್ನು ನೆನೆದು ಪ್ರಾರ್ಥಿಸುವ ಮಹಿಳೆಯರು ಜೋಕುಮಾರ ಮೂರ್ತಿಯನ್ನು ಏಳು ದಿನಗಳ ಕಾಲ ಗ್ರಾಮದಲ್ಲಿನ ಮನೆ ಮನೆಗೆ ಹೊತ್ತು ಸಂಚರಿಸುತ್ತಾರೆ….

Read More