ಸ್ವಚ್ಛತಾ ಅಭಿಯಾನಕ್ಕೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಪ್ರವಾಸೋದ್ಯಮ ಇಲಾಖೆ, ಮಹಾನಗರ ಪಾಲಿಕೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಗುರುವಾರ ನಗರದಲ್ಲಿ ಹಮ್ಮಿಕೊಂಡ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮದ “ಏಕ್ ದಿನ್, ಏಕ್ ಘಂಟಾ, ಏಕ್ ಸಾಥ (ಒಂದು ದಿನ, ಒಂದು ಘಂಟೆ, ಎಲ್ಲರೂ ಒಟ್ಟಿಗೆ)” ಎಂಬ ಘೋಷವಾಕ್ಯದೊಂದಿಗೆ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಯಿತು.ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಹತ್ತಿರದ ಕೋಟೆಗೋಡೆ ಆವರಣದಲ್ಲಿ ಸ್ವಚ್ಛಗೊಳಿಸುವ ಮೂಲಕ ಅಭಿಯಾನಕ್ಕೆ ಜಿಲ್ಲಾಧಿಕಾರಿ ಡಾ. ಆನಂದ ಕೆ….

Read More

ಕಾದಂಬರಿಕಾರ ಎಸ್ ಎಲ್ ಬೈರಪ್ಪನವರ ಅಗಲಿಕೆಗೆ ಸಾಹಿತಿ, ಪ್ರೊ ಎ ಎಚ್ ಕೊಳಮಲಿ ಸಂತಾಪ.

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 25:ಕಾದಂಬರಿಕಾರ ಎಸ್.ಎಲ್. ಬೈರಪ್ಪನವರ ಅಗಲಿಕೆಗೆ ಸಾಹಿತಿ, ಪ್ರೊ. ಎ.ಎಚ್. ಕೊಳಮಲಿ ಸಂತಾಪ ಸೂಚಿಸಿದ್ದಾರೆ.ಕನ್ನಡ ಸಾರಸತ್ವ ಲೋಕದ ಬಹು ದೊಡ್ಡ ಶಕ್ತಿ. ಡಾ. ಎಸ್.ಎಲ್. ಭೈರಪ್ಪ ಅವರ ದಾಟು, ಪರ್ವ ಕಾದಂಬರಿ ಸೇರಿದಂತೆ ಕನ್ನಡ ಸಾಹಿತ್ಯ ಲೋಕಕ್ಕೆ ಹಲವಾರು ಗಟ್ಟಿತನದ ಕಾದಂಬರಿಯನ್ನು ರಚಿಸಿದ ಕಾದಂಬರಿಯ ಅಗ್ರಮಾನ್ಯ ಲೇಖಕನೆಂದು ಹೆಸರುವಾಸಿಯಾದ ಎಸ್.ಎಲ್. ಭೈರಪ್ಪನವರನ್ನು ಕಳೆದುಕೊಂಡು ಕರುನಾಡು ಅಷ್ಟೇಯಲ್ಲ. ಇಡೀ ಭಾರತ ದೇಶವೇ ಕಂಬನಿಯಲ್ಲಿ ಮಿಂದುಹೋಗಿದೆ ಎಂದು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.ಅತ್ಯಂತ ಶಕ್ತಿ ಭರಿತವಾದ ಸಾಹಿತ್ಯವನ್ನು…

Read More

ಆರೋಗ್ಯಯುತ ಜೀವನಕ್ಕೆ ದೈಹಿಕ-ಮಾನಸಿಕ ಸ್ಥಿರತೆ ಕಾಪಾಡಿಕೊಳ್ಳುವುದು ಅತ್ಯವಶ್ಯಕ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.25:ಒತ್ತಡದ ಜೀವನದ ಮಧ್ಯೆ ಆರೋಗ್ಯಯುತ ಬದುಕಿಗೆ ದೈಹಿಕ ಹಾಗೂ ಮಾನಸಿಕ ಸ್ಥಿರತೆ ಕಾಪಾಡಿಕೊಳ್ಳುವುದು ಅತ್ಯಂತ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಕ್ರೀಡಾ ಚಟುವಟಿಕೆಗಳನ್ನು ನಮ್ಮ ದೈನಂದಿನದ ಜೀವನದಲ್ಲಿ ಅಳವಡಿಸಿಕೊಂಡು ಮಾನಸಿಕ ಹಾಗೂ ದೈಹಿಕ ಸದೃಢತೆ ಹೊಂದಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಕರೆ ನೀಡಿದರು.ನಗರದ ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಗುರುವಾರ ಹಮ್ಮಿಕೊಂಡಿದ್ದ ವಿಭಾಗ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಮಾನಸಿಕ…

Read More

ಸಾಹಿತಿ ಭೈರಪ್ಪ ನಿಧನಕ್ಕೆ ಯುವ ಭಾರತ ಸಂಸ್ಥೆ ಶ್ರದ್ಧಾಂಜಲಿ, ನುಡಿನಮನ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 24 ಅಕಾಲಿಕವಾಗಿ ನಿಧನರಾದ ಸಾಹಿತ್ಯದ ಮೇರು ದಿಗ್ಗಜ ದಿ.ಎಸ್.ಎಲ್. ಭೈರಪ್ಪ ಅವರಿಗೆ ಯುವ ಭಾರತ ಸಂಸ್ಥೆ ವತಿಯಿಂದ ಸಿದ್ಧೇಶ್ವರ ದೇವಸ್ಥಾನದ ಹತ್ತಿರ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಿ ಅವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಿ ನುಡಿನಮನ ಅರ್ಪಿಸಲಾಯಿತು.ನುಡಿನಮನ ಅರ್ಪಿಸಿದ ಯುವ ಭಾರತ ಸಂಸ್ಥಾಪಕ ಉಮೇಶ ಕಾರಜೋಳ ಮಾತನಾಡಿ, ಕನ್ನಡ ಸಾರಸ್ವತ ಲೋಕದ ಮಹಾನ್ ದಿಗ್ಗಜ ಡಾ.ಎಸ್.ಎಲ್. ಭೈರಪ್ಪ ಅವರ ಅಕಾಲಿಕ ನಿಧನದಿಂದ‌ ನಾವು ಒಬ್ಬ ಶ್ರೇಷ್ಠ ಚಿಂತಕ, ಸಾಹಿತಿಯನ್ನು ಕಳೆದುಕೊಂಡಿದ್ದೇವೆ,ಅವರ ಅನೇಕ ಕಾದಂಬರಿಗಳು ಬೇರೆ…

Read More

ವಿಜಯಪುರದಲ್ಲಿ ರಸ್ತೆ ದುರಸ್ತಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 24: ವಿಜಯಪುರ ನಗರದಲ್ಲಿ ರಸ್ತೆ ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದ್ದು, ರಾಜ್ಯ ಸರ್ಕಾರ ರಸ್ತೆ ಅಭಿವೃದ್ಧಿ ವಿಷಯದಲ್ಲಿ ಬೇಜವಾಬ್ದಾರಿತನಪ್ರದರ್ಶಿಸುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದ ಅಥಣಿ ರಸ್ತೆ ತಡೆ ನಡೆಸಿ ಗುಂಡಿಗಳಲ್ಲಿ ಸಸಿಗಳನ್ನು ನೆಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.ಪ್ರವಾಸಿ ಮಂದಿರದ ಮುಂಭಾಗದಲ್ಲಿ ಅಥಣಿ ರಸ್ತೆಗೆ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿದರು.ಕಾಂಗ್ರೆಸ್ ಸರ್ಕಾರ – ಜೀವಕ್ಕೆ ಸಂಚಾರ’, ಗುಂಡಿ ಮುಚ್ಚದೇ ರಾಜ್ಯದ ಜನತೆ…

Read More

ನಾನಾ ಕ್ಷೇತ್ರಗಳ ಗಣ್ಯರ ವಿಜನ್ ಗ್ರುಪ್ ರಚನೆ: ಸದಸ್ಯರಾಗಿ ಡಾ. ಬಿರಾದಾರ ನೇಮಕ

ಸಪ್ತ ಸಾಗರ ವಾರ್ತೆ, ವಿಜಯಪುರ, ಸೆ. 24: ರಾಜ್ಯ ಧಾರ್ಮಿಕ ಇಲಾಖೆ ವ್ಯಾಪ್ತಿಯ ಐತಿಹಾಸಿಕ ದೇವಾಲಯಗಳ ಸಮಗ್ರ ಅಭಿವೃದ್ಧಿ ಕೈಗೊಳ್ಳಲು ನಾನಾ ಕ್ಷೇತ್ರಗಳ ಗಣ್ಯರ ವಿಜನ್ ಗ್ರುಪ್ ರಚಿಸಲಾಗಿದ್ದು, ಸಮಿತಿಯ ಸದಸ್ಯರಾಗಿ ಡಾ. ಮಹಾಂತೇಶ ಬಿರಾದಾರ ಅವರನ್ನು ನೇಮಕ ಮಾಡಲಾಗಿದೆ. ಇವರು ಉತ್ತರ ಕರ್ನಾಟಕದ ಏಕೈಕ ಪ್ರತಿನಿಧಿಯಾಗಿದ್ದಾರೆ.ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅವರ ಸಾರ್ವಜನಿಕ ಸಂಪರ್ಕಾಧಿಕಾರಿಯೂ ಆಗಿರುವ ಡಾ. ಮಹಾಂತೇಶ ಬಿರಾದಾರ ಅವರನ್ನು ಏಳು ಜನ ಸದಸ್ಯರನ್ನು ಹೊಂದಿರುವ ವಿಜನ್ ಗ್ರುಪ್ ಸದಸ್ಯರನ್ನಾಗಿ ಧಾರ್ಮಿಕ ಇಲಾಖೆ ಆಯುಕ್ತರು…

Read More

ಅ. 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌ ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ,ಸೆ.24:ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ‌ ಹಾಗೂ ಅಚ್ಚುಕಟ್ಟಾಗಿ ಆಯೋಜನೆ ಮಾಡುವಂತೆ ಜಿಲ್ಲಾಧಿಕಾರಿ ಡಾ. ಆನಂದ‌ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದರು.ಸಾರ್ವಜನಿಕರಿಗೆ ಮಹಾತ್ಮ ಗಾಂಧೀಜಿಯವರ ಬದುಕು, ಆದರ್ಶ ಹಾಗೂ ಅವರ ಜೀವನ…

Read More

ಸೆ. 26ರಂದು ಐಫೋನ್ ಕಂಪನಿ ಫಾಕ್ಸ್ ಕಾನ್ ಸಿಬ್ಬಂದಿ ನೇಮಕಕ್ಕೆ ವಿಜಯಪುರಕ್ಕೆ ಆಗಮನ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 24: ವಿಶ್ವಾದ್ಯಂತ ಮೊಬೈಲ್ ಪ್ರೀಯರು ಹೊಸ ಮಾದರಿ ಐಫೋನ್ ಖರೀದಿಗೆ ನಾನಾ ಮಹಾನಗರಗಳಲ್ಲಿ ಸಾಲಿನಲ್ಲಿ ನಿಲುತ್ತಿದ್ದಾರೆ. ಇಂಥ ಐಫೋನ್ ತಯಾರಿಸುವ ಅಂತಾರಾಷ್ಟ್ರೀಯ ದೈತ್ಯ ಕಂಪನಿ ಫಾಕ್ಸ್ ಕಾನ್, ತನ್ನ ಕಂಪನಿಯಲ್ಲಿ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಬಸವನಾಡು ವಿಜಯಪುರಕ್ಕೆ ಆಗಮಿಸುತ್ತಿರುವುದು ಗಮನ ಸೆಳೆದಿದೆ.ಈ ಕಂಪನಿ ಬಿ.ಎಲ್.ಡಿ.ಇ ಸಂಸ್ಥೆ ಸಹಯೋಗದಲ್ಲಿ ನಗರದ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜನಿಯರಿಂಗ್ ಕಾಲೇಜಿನಲ್ಲಿ ಸೆಪ್ಟೆಂಬರ್ 26 ರಂದು ಶುಕ್ರವಾರ ಎಂಜನಿಯರಿಂಗ್ ಮತ್ತು ಡಿಪ್ಲೋಮಾ ಪಾಸಾದ ವಿದ್ಯಾರ್ಥಿಗಳಿಗಾಗಿ…

Read More

ಸಾಹಿತಿ ಭೈರಪ್ಪ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 24: ಪದ್ಮಭೂಷಣ, ಪದ್ಮಶ್ರೀ ಸೇರಿದಂತೆ ಹಲವು ಗೌರವ, ಪುರಸ್ಕಾರಗಳಿಗೆ ಭಾಜನರಾಗಿದ್ದ ಖ್ಯಾತ ಕಾದಂಬರಿಕಾರ, ನಾಡೋಜ ಎಸ್‌.ಎಲ್‌. ಭೈರಪ್ಪ ಅವರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಕಂಬನಿ ಮಿಡಿದಿದ್ದಾರೆ.ಕನ್ನಡ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಮಹನೀಯರಲ್ಲಿ ಒಬ್ಬರಾದ ಎಸ್‌. ಎಲ್‌. ಭೈರಪ್ಪ ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ಹಾನಿ ಉಂಟಾಗಿದೆ. ಕನ್ನಡ ಸಾರಸ್ವತ ಲೋಕಕ್ಕೆ ಮೊದಲ ಸರಸ್ವತಿ ಸಮ್ಮಾನ್‌ ಗೌರವ ತಂದು ಕೊಟ್ಟ ಹೆಗ್ಗಳಿಕೆ ಅವರದ್ದು ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.ಭೈರಪ್ಪನವರ…

Read More

ಏಕತಾರಿ ರಾಮಯ್ಯನವರಿಗೆ ರಾಜ್ಯ ಪ್ರಶಸ್ತಿ ನೀಡಲು ಸಿಎಂಗೆ ಯತ್ನಾಳ್ ಒತ್ತಾಯ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 24: ಜಾನಪದ ಗಾಯಕ, ತಂತಿ ವಾದ್ಯಗಳ ತಯಾರಕರಾದ ಏಕತಾರಿ ರಾಮಯ್ಯನವರ ಅವರಿಗೆ ರಾಜ್ಯ ಪ್ರಶಸ್ತಿ ನೀಡುವಂತೆ ಒತ್ತಾಯಿಸಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು, ಮುಖ್ಯಮಂತ್ರಿಗಳಾದ ಸಿದ್ದರಾಯಯ್ಯನವರಿಗೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ ಅವರಿಗೆ ಬುಧವಾರ ಪತ್ರ ಬರೆದಿದ್ದಾರೆ.ಬೆಂಗಳೂರಿನ ಗೊಲ್ಲಹಳ್ಳಿ ಹೋಬಳಿಯ ಕೆಂಚನಪಾಳ್ಯ ಗ್ರಾಮದ ನಿವಾಸಿಯಾಗಿರುವ ಜಾನಪದ ಗಾಯಕ ಏಕತಾರಿ ರಾಮಯ್ಯನವರು ತಮ್ಮ ಕಂಚಿನ ಕಂಠ ಹಾಗೂ ವಿಶಿಷ್ಟ ಪ್ರತಿಭೆಯ ಮೂಲಕ ಜಾನಪದ ಲೋಕಕ್ಕೆ ಸಾಕಷ್ಟು…

Read More