ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಬೃಹತ್ ಹೋರಾಟದ ಪೋಸ್ಟರ್ ಬಿಡುಗಡೆ

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 14:ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಇಂದು ದ್ರಾವಿಡ ವಿದ್ಯಾರ್ಥಿ ಪರಿಷತ್ ವತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಹಮ್ಮಿಕೊಳ್ಳಲಿರುವ ಬೃಹತ್ ಹೋರಾಟದ ಪೋಸ್ಟರ್ ಬಿಡುಗಡೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿ, ದ್ರಾವಿಡ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಹಾಗೂ ವಿದ್ಯಾರ್ಥಿ ನಾಯಕ ಅಕ್ಷಯ್ ಕುಮಾರ್ ಅಜಮನಿ, ರಾಜ್ಯದಾದ್ಯಂತ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಶೈಕ್ಷಣಿಕ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಲು ಹಾಗೂ ಹೋರಾಟವನ್ನು ಸಂಘಟಿಸಲು ಈ ಅಭಿಯಾನವನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.ಪ್ರಸ್ತುತ ಶೈಕ್ಷಣಿಕ ವ್ಯವಸ್ಥೆಯಲ್ಲಿ…

Read More

ಸಂವಿಧಾನದ ಆಶಯದಂತೆ ನಡೆಯುವುದಾದರೆ ಇಂಡಿ ವಿಧಾನಸಭಾ ಕ್ಷೇತ್ರಕ್ಕೆ ಸಚಿವ ಸ್ಥಾನ ನೀಡಿ-ಪ್ರೊ. ಮಾಡ್ಯಾಳ

ಸಪ್ತಸಾಗರ ವಾರ್ತೆ, ವಿಜಯಪುರ,ಜೂ. 14:ಭಾರತದ ಸಂವಿಧಾನದ ಆಶಯ ಎಲ್ಲರಿಗೂ ಸಮಾನ ಅವಕಾಶಗಳು ಸ್ಥಾನಮಾನಗಳು ಸಿಗಬೇಕೆಂಬುದಾಗಿದೆ. ಆದರೆ 1952 ರಿಂದ 2026 ರ ವರೆಗೆ ಇಂಡಿ ಕ್ಷೇತ್ರದಿಂದ ಯಾರು ಸಚಿವರಾಗಿಲ್ಲ ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಲ್ಲಿ 223 ಕ್ಷೇತ್ರಗಳಿಗೆ ಸಚಿವ ಸ್ಥಾನ ಸಿಕ್ಕಿದೆ.ಆದರೆ ಇಂಡಿಯು ಸಚಿವ ಸ್ಥಾನ ಸಿಗದ ಏಕೈಕ ವಿಧಾನಸಭಾ ಕ್ಷೇತ್ರವಾಗಿದೆ. ಇದೆ ತಿಂಗಳು ೨೦ರ ನಂತರ ಹೊಸ ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಇಂಡಿ ಶಾಸಕ ಯಶಾವಂತರಾಯಗೌಡ ಪಾಟೀಲ ಅವರಿಗೆ ಸಚಿವಸ್ಥಾನ ನೀಡಬೇಕು ಎಂದು ಶಿವಯೋಗಪ್ಪ…

Read More

ನ್ಯಾಯಾಧೀಕರಣದ “ಐ” ತೀರ್ಪಿನ ಅಧಿಸೂಚನೆಗೆ ಹೋರಾಟ ಕುರಿತು ಪೂರ್ವಭಾವಿ ಸಭೆ 16ರಂದು

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 14:ನ್ಯಾ. ಬ್ರಿಜೇಶ್‌ಕುಮಾರ ನೇತೃತ್ವದ 2ನೇ ನ್ಯಾಯಾಧೀಕರಣದ“ಐ” ತೀರ್ಪಿನಂತೆ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರದಮೇಲೆ ಒತ್ತಡ ಹೇರಲು ಮುಂದಿನ ಹೋರಾಟದ ರೂಪರೇಷತಯಾರಿಸುವದು ಮತ್ತು ಹೋರಾಟ ಸಮೀತಿ ರಚಿಸುವುದರ ಕುರಿತುಪೂರ್ವಭಾವಿ ಸಭೆಯನ್ನು ವಿಜಯಪುರ ನಗರದ ಅಂಬೇಡ್ಕರವೃತ್ತದ ಬಳಿ ಇರುವ ಡಾ. ಬಿ.ಆರ್.ಅಂಬೇಡ್ಕರ ಸಭಾ ಭವನದಲ್ಲಿಜೂ. 16ರಂದು ಬೆಳಗ್ಗೆ 10-30 ಗಂಟೆಗೆ ಪೂರ್ವಭಾವಿ ಸಭೆ ಕರೆಯಲಾಗಿದೆ.ಈ ಸಭೆಗೆ ನೀರಾವರಿ ತಜ್ಞ ಡಾ. ಕೃಷ್ಣ ಕೋಲಾರ ಕುಲಕರ್ಣಿ, ಧಾರವಾಡ ಕೃಷಿವಿಶ್ವವಿದ್ಯಾಲಯದ ನಿವೃತ್ತ ಅಧ್ಯಾಪಕ ಡಾ. ರಾಜೇಂದ್ರಪೋದ್ದಾರ, ಜಿಲ್ಲಾ…

Read More

ಡಾ. ಸುರೇಶ ಕಾಗಲ್ಕರ್ ಅವರಿಗೆ ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 13:ಇತ್ತೀಚೆಗೆ ಬೆಂಗಳೂರಿನ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದರಾಜ್ಯಮಟ್ಟದ ಕರ್ನಾಟಕ ಮೀಡಿಯಾ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿವಿಜಯಪುರದ ಪ್ರಸಿದ್ಧ ಮೂತ್ರಪಿಂಡ ತಜ್ಞ ಡಾ. ಸುರೇಶ ಕಾಗಲ್ಕರ್ ಅವರಿಗೆರಾಜ್ಯಮಟ್ಟದ “ಪ್ರೈಡ್ ಆಫ್ ಕರ್ನಾಟಕ “ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.ಸಿನಿಮಾ ನಟ ಚೇತನಅಹಿಂಸ ಹಾಗೂ ಪ್ರಸಿದ್ಧ ವೈದ್ಯ ಪದ್ಮ ಪ್ರಕಾಶ ಹಾಗೂ ತಂಡದಅಧ್ಯಕ್ಷ ರಮೇಶ ಎಸ್.ಜಿ ಪ್ರಶಸ್ತಿ ನೀಡಿ ಸನ್ಮಾನ ಮಾಡಿದರು.ವೇದಿಕೆ ಮೇಲೆ ಲೋಕಸಭಾ ಸದಸ್ಯರಾದ ಪಿ.ಸಿ ಮೋಹನ್ ಹಾಗೂ ವಿಧಾನಸಭೆಯಪ್ರತಿಪಕ್ಷದ ನಾಯಕ ಆರ್. ಅಶೋಕ, ಚಲನಚಿತ್ರ ನಟ ಚೇತನಅಹಿಂಸ…

Read More

ಜಿಲ್ಲಾ ಮಟ್ಟದ ಆಸ್ಮಿತಾ ವುಮೆನ್ಸ್ ಸೈಕ್ಲಿಂಗ್ ಲೀಗ್‌ಗೆ ಸಂಸದ ರಮೇಶ ಜಿಗಜಿಣಗಿ ಚಾಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 13:ಸೈಕ್ಲಿಂಗ್ ಕ್ರೀಡೆಗೆ ರಾಜ್ಯದಲ್ಲೇ ವಿಶಿಷ್ಟ ಗುರುತನ್ನು ಹೊಂದಿರುವ ವಿಜಯಪುರ ನಗರದಲ್ಲಿ ಜಿಲ್ಲಾ ಮಟ್ಟದ ಆಸ್ಮಿತಾ ಖೇಲೋ ಇಂಡಿಯಾ ಮಹಿಳಾ ಸೈಕ್ಲಿಂಗ್ ಸಿಟಿ ಲೀಗ್ ಸ್ಪರ್ಧೆಯನ್ನು ಶನಿವಾರ ಅದ್ಧೂರಿಯಾಗಿ ಆಯೋಜಿಸಲಾಯಿತು.ಕೇಂದ್ರ ಸರ್ಕಾರದ ಕ್ರೀಡಾ ಪ್ರಾಧಿಕಾರ, ಸೈಕ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ, ಕರ್ನಾಟಕ ರಾಜ್ಯ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಶನ್, ಜಿಲ್ಲಾ ಸೈಕ್ಲಿಂಗ್ ಅಸೋಸಿಯೇಶನ್, ವಿಶಾಲ್ ಸೈಕಲ್ ಮಾಲ್, ಜಿಲ್ಲಾಡಳಿತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಲೀಗ್‌ಗೆ ಸಂಸದ…

Read More

ರಾಜ್ಯ ಸರ್ಕಾರದ ವಿಶೇಷಾಧಿಕಾರಿ ಡಾ. ರಾಜಶೇಖರ ದ್ಯಾಬೇರಿ ಜಿಲ್ಲಾ ಆಸ್ಪತ್ರೆಗೆ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 13:ಜಿಲ್ಲೆಯ ಜನರ ಬಹುಕಾಲದ ಕನಸಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ರಾಜ್ಯ ಸರ್ಕಾರದ ವಿಶೇಷಾಧಿಕಾರಿ ಡಾ. ರಾಜಶೇಖರ್ ದ್ಯಾಬೇರಿ ಅವರು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯವಿರುವ ಮೂಲ ಸೌಕರ್ಯ, ಆಸ್ಪತ್ರೆಯ ಸೌಲಭ್ಯಗಳು ಹಾಗೂ ಲಭ್ಯವಿರುವ ಸಂಪನ್ಮೂಲಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದರು.ಪರಿಶೀಲನೆ ವೇಳೆ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿಯ ಸದಸ್ಯರು ವಿಶೇಷಾಧಿಕಾರಿಗಳನ್ನು ಭೇಟಿ ಮಾಡಿ ಜಿಲ್ಲೆಯ…

Read More

ಹೈಮಾಸ್ಟ್ ಅಳವಡಿಕೆ ಕಾಮಗಾರಿಗೆ ರೂ.1 ಕೋಟಿ ಮಂಜೂರು

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 13: ನಗರ ಮತಕ್ಷೇತ್ರದಲ್ಲಿ ಬರುವ ತೊರವಿ ಗ್ರಾಮ ಪಂಚಾಯಿತಿಯಲ್ಲಿ ಅತೀ ಹೆಚ್ಚು ಪರಿಶಿಷ್ಟ ಜಾತಿ ಜನಾಂಗದವರು ವಾಸಿಸುವ ಕಾಲೊನಿಗಳಲ್ಲಿ ಹೈಮಾಸ್ಟ್ ಅಳವಡಿಸುವ ಕಾಮಗಾರಿಗೆ 2026-27ನೇ ಸಾಲಿನ ಕಾಲೊನಿ ಅಭಿವೃದ್ಧಿ/ಪ್ರಗತಿ ಕಾಲೊನಿ ಯೋಜನೆಯಡಿ ರೂ.1 ಕೋಟಿ ಅನುದಾನ ಮಂಜೂರಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಕೈಗೊಳ್ಳಲಾಗುವುದು.ತೊರವಿ ಗ್ರಾಮದ ಅತಾಲಟ್ಟಿ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದ ಹತ್ತಿರ, ಎಸ್.ಸಿ ಕಾಲೊನಿಯ ಹನುಮಾನ ದೇವಸ್ಥಾನ ಹತ್ತಿರ, ಇಂದಿರಾ ನಗರದ ಝೆಂಡಾ ಕಟ್ಟಿ ಹತ್ತಿರ, ಪರಿಶಿಷ್ಟ ಜಾತಿಯ ಸ್ಮಶಾನದಲ್ಲಿ, ಹರಳಯ್ಯ ಸಮಾಜದ ಮರಗಮ್ಮ…

Read More

ಜೂ. 16,17 ಅಪ್ರೆಂಟಿಸ್ ತರಬೇತಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 13:ನಗರದ ಬಿ.ಎಲ್.ಡಿ.ಇ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ ಜೂನ್ 16 ಮತ್ತು 17 ರಂದು ಅಪ್ರೆಂಟಿಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ.ಧಾರವಾಡದಲ್ಲಿರುಬ ನಿಡೆಕ್ ಇಂಡಿಯಾ ಪ್ರೈ. ಲಿ.‌ ಕಂಪನಿ ತರಬೇತುದಾರ(Production Trainee) ಮತ್ತು ಅಪ್ರಂಟಿಸ್ ತರಬೇತಿಗಾಗಿ ಈ‌ ಕ್ಯಾಂಪಸ್ ಸಂದರ್ಶನ ನಡೆಸಲಿದೆ.ಐಟಿಐನ‌ ನಾನಾ ಟ್ರೇಡುಗಳಲ್ಲಿ ಪಾಸಾದ ಮತ್ತು ದ್ವಿತೀಯ ವರ್ಷದಲ್ಲಿ ತರಬೇತಿ ಪಡೆಯುತ್ತಿರುವ 18 ರಿಂದ 25 ವರ್ಷದೊಳಗಿನ ತರಬೇತುದಾರರಿಗೆ ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನ ನಡೆಸಲಾಗುತ್ತದೆ. ಜಿಲ್ಲೆಯ ನಾನಾ ಐಟಿಐ ಕಾಲೇಜಿನ…

Read More

ಪಡಿತರ ಚೀಟಿದಾರರಿಗೆ ಜೂನ್ 25 ರವರೆಗೆ ಐರಿಸ್ ಮೂಲಕ ಇ-ಕೆವೈಸಿ ಮಾಡಿಸಲು ವಿಶೇಷ ಅವಕಾಶ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ.12:ನಗರ ಪ್ರದೇಶದಲ್ಲಿ ತಾಂತ್ರಿಕ ಕಾರಣಗಳಿಂದ ಇ-ಕೆವೈಸಿ ಮಾಡಿಸಲು ಬಾಕಿ ಇರುವ ಪಡಿತರ ಚೀಟಿದಾರರಿಗೆ ಐರಿಸ್ ಸಾಧನದ ಮೂಲಕ ಇ-ಕೆವೈಸಿ ಮಾಡಿಸಿಕೊಳ್ಳಲು ಆಹಾರ ಇಲಾಖೆಯು ಜೂನ್ 25 ರವರೆಗೆ ವಿಶೇಷ ಅವಕಾಶ ಕಲ್ಪಿಸಿದೆ.ವಿಜಯಪುರ ನಗರ ಪ್ರದೇಶದಲ್ಲಿ ಇನ್ನೂ ಸುಮಾರು 697 ಪಡಿತರ ಚೀಟಿದಾರರ ಇ-ಕೆವೈಸಿ ಬಾಕಿ ಇರುವುದು ಕಂಡು ಬಂದಿದೆ. ಬಯೋಮೆಟ್ರಿಕ್ (ಬೆರಳು ಗುರುತು) ಸರಿಯಾಗಿ ಮೂಡದ ಕಾರಣ ಇ-ಕೆವೈಸಿ ಪ್ರಕ್ರಿಯೆ ನೂರಕ್ಕೆ ನೂರರಷ್ಟು ಪೂರ್ಣಗೊಂಡಿಲ್ಲದೇ ಇರುವುದರಿಂದ ಇಲಾಖೆಯ ವತಿಯಿಂದಲೇ ವಿಶೇಷ ಇ-ಕೆವೈಸಿ ಮಾಡಿಸಲು ಅವಕಾಶ…

Read More

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಿ-ನ್ಯಾಯಾಧೀಶ ಹರೀಶ

ಸಪ್ತಸಾಗರ ವಾರ್ತೆ, ವಿಜಯಪುರ,ಜೂ.12:ಸಮಾಜದಲ್ಲಿನ ಅನಿಷ್ಠ ಪಿಡುಗಾಗಿರುವ ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಕೈಜೋಡಿಸಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ. ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಇವರ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಚರಿಸಲಾದ ವಿಶ್ವ…

Read More