ಪೌರ ಕಾರ್ಮಿಕರಿಗೆ ಸಮರ್ಪಕ ಸುರಕ್ಷತಾ ಪರಿಕರ ವಿತರಿಸಿ- ಡಾ. ಔದ್ರಾಮ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ.17: ಪೌರ ಕಾರ್ಮಿಕ ವೇತನ ವಿಳಂಬ ಮಾಡದೆ ನಿಗದಿತ ಅವಧಿಯಲ್ಲಿ ಪಾವತಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಧಿಕಾರಿಗಳಿಗೆ ಸೂಚಿಸಿದರು.ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ನಗರಾಭಿವೃದ್ಧಿ ಕೋಶ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮ್ಯಾನುಯಲ್ ಸ್ಕೆವೆಂಜರ್ಸ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ 2013 ಜಿಲ್ಲಾ ಮಟ್ಟದ 3ನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಹೊರಗುತ್ತಿಗೆ ಆಧಾರ ಮೇಲೆ ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯತ…

Read More

ಮುದ್ದೇಬಿಹಾಳದಲ್ಲಿ ಅಕಾಲಿಕ ಆಲಿಕಲ್ಲು ಮಳೆ: ತೋಟಗಾರಿಕೆ ಬೆಳೆಗಳಿಗೆ ಅಪಾರ ನಷ್ಟ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 17:ಜಿಲ್ಲೆಯ ಮುದ್ದೇಬಿಹಾಳ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಂಗಳವಾರ ಆಲಿಕಲ್ಲು ಮಳೆ ಬಿದ್ದಿದೆ.ಕೆಲ ಹೊತ್ತು ಸುರಿದ ಆಲಿಕಲ್ಲು ಮಳೆಯಿಂದ ಜನರು ಕೂಲ್ ಕೂಲ ಆಗಿದ್ದಾರೆ.ನಿತ್ಯ ಸುಮಾರು 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದೆ. ಬಿಸಿಲಿನ ಹೊಡೆತಕ್ಕೆ ತತ್ತರಿಸಿದ ಜನರಿಗೆ ಅಕಾಲಿಕ ಆಲಿಕಲ್ಲು ಮಳೆ ತಂಪೆರೆಯಿತು.ಸುಡು ಬಿಸಿಲಿನ ಮಧ್ಯೆ ಸುರಿದ ಆಲಿಕಲ್ಲು ಮಳೆಯಿಂದಾಗಿರಸ್ತೆ ಮೇಲೆಲ್ಲ ರಾಶಿರಾಶಿ ಆಲಕಲ್ಲುಗಳು ಬಿದ್ದಿದ್ದು, ಜನರು, ಮಕ್ಕಳುಆಲಿಕಲ್ಲುಗಳನ್ನು ಪಾತ್ರೆಗಳಲ್ಲಿ ತುಂಬಿಕೊಂಡು ಹೋಗುತ್ತಿರುವುದು ಕಂಡು ಬಂತು.ಅಕಾಲಿಕ ಆಲಿಕಲ್ಲು ಮಳೆಯುದ್ರಾಕ್ಷಿ, ದಾಳಿಂಬೆ ಮುಂತಾದ…

Read More

ಶೀಘ್ರದಲ್ಲೇ ರಾಜ್ಯ ಮಟ್ಟದ‌‌ ಮಕ್ಕಳ‌ ಸಾಹಿತ್ಯ ಸಮ್ಮೇಳನ ಆಯೋಜನೆ:ಕರ್ನಾಟಕ ಬಾಲ‌ ವಿಕಾಸ ಅಕಾಡೆಮಿ ನೂತನ ಅಧ್ಯಕ್ಷ ಅಡಿವೇಶ‌ ಇಟಗಿ‌ ಹೇಳಿಕೆ‌

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 17:ರಾಜ್ಯದಲ್ಲಿ ಇದೇ ಮೊದಲ ಬಾರಿಗೆರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲು ಬಾಲ ವಿಕಾಸ ಅಕಾಡೆಮಿ ನಿರ್ಧರಿಸಲಾಗಿದೆ ಎಂದು ಕರ್ನಾಟಕ ಬಾಲ‌ ವಿಕಾಸ ಅಕಾಡೆಮಿ ನೂತನ ಅಧ್ಯಕ್ಷ ಅಡಿವೇಶ‌ ಇಟಗಿ‌ ಹೇಳಿದರು.ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಗೆ ಇದೇ ಮೊದಲ‌ ಬಾರಿಗೆ ಭೇಟಿ ನೀಡಿ, ರಾಜ್ಯ ಮಟ್ಟದ ಮಕ್ಕಳ‌ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುವ‌ ಕುರಿತು‌ ನಡೆದ ಪೂರ್ವಭಾವಿ‌ ಸಭೆಯ ಅಧ್ಯಕ್ಷತೆ‌ ವಹಿಸಿ‌ ಅವರು ಮಾತನಾಡಿದರು.ರಾಜ್ಯದ ಎಲ್ಲ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು…

Read More

ವಿಜಯಪುರದಲ್ಲಿ 15ಕ್ಕೂ ಹೆಚ್ಚು ಗೃಹಬಳಕೆ ಸಿಲಿಂಡರ್ ಜಪ್ತಿ: ಹೊಟೇಲ್ ಗಳ‌ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ

ಸಪ್ತಸಾಗರ ವಾರ್ತೆ ವಿಜಯಪುರ,ಮಾ. 17:ಹೊಟೇಲ್‌ಗಳಲ್ಲಿ ಅನಧಿಕೃತವಾಗಿ ಗೃಹ ಬಳಕೆ ಸಿಲಿಂಡರ್ ಬಳಕೆಯಾಗುತ್ತಿರುವುದನ್ನು ಗಂಭೀರವಾಗಿ‌ ಪರಿಗಣಿಸಿರುವ ಆಹಾರ, ನಾಗರಿಕ ಸರಬರಾಜು ಹಾಗೂ‌ ಗ್ರಾಹಕ‌ ವ್ಯವಹಾರಗಳ ಇಲಾಖೆ‌ ಅಧಿಕಾರಿಗಳು ಮಂಗಳವಾರ ಹೊಟೇಲ್ ಗಳ‌ ಮೇಲೆ ದಾಳಿ ನಡೆಸಿ 15ಕ್ಕೂ ಗೃಹಬಳಕೆ ಸಿಲಿಂಡರ್ ಗಳನ್ನು ಜಪ್ತಿ ಮಾಡಿದ್ದಾರೆ.ನಗರದ ಸೊಲ್ಲಾಪುರ ರಸ್ತೆ ಪಕ್ಕದಲ್ಲಿರುವ ಹೋಟೆಲ್ ಗಳಲ್ಲಿ ಅನಧಿಕೃತವಾಗಿ ಗೃಹ ಬಳಕೆ ಸಿಲಿಂಡರಗಳನ್ನು ಬಳಕೆಯಾಗುತ್ತಿರುವುದನ್ನು ಖಚಿತಪಡಿಸಿಕೊಂಡ ಅಧಿಕಾರಿಗಳು, ಒಟ್ಟು 15 ಗೃಹ ಬಳಕೆ ಸಿಲಿಂಡರ್ ಗಳನ್ನು ಜಪ್ತಿ ಮಾಡಿದ್ದಾರೆ. ತನ್ಮೂಲಕ ಹೊಟೇಲ್‌ಗಳಲ್ಲಿ ಅನಧಿಕೃತವಾಗಿ ಗೃಹ…

Read More

ವೈದ್ಯಕೀಯ ವೃತ್ತಿಯಲ್ಲಿ ಪ್ರಾಕ್ಟೀಸ್ ಮಾಡಲು ನ್ಯಾಯ ಸಮ್ಮತ ಅಂಶಗಳ ಕಡೆಗೆ ಗಮನವಿರಲಿ:ಡಾ. ಅರುಣ ಇನಾಮದಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 17:ವೈದ್ಯಕೀಯ ವೃತ್ತಿಯಲ್ಲಿ ಪ್ರ್ಯಾಕ್ಟಿಸ್ ಮಾಡಲು ನ್ಯಾಯಸಮ್ಮತ ಅಂಶಗಳನ್ನು ಗಮದಲ್ಲಿಡಬೇಕು ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಕುಲಪತಿ ಡಾ. ಅರುಣ ಚಂ. ಇನಾಮದಾರ ಹೇಳಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಶಾಲೆಯಲ್ಲಿ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣೆ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಲಾದ ವೈದ್ಯಕೀಯ ನಿರ್ಲಕ್ಷ್ಯಕ್ಕೆ ಸಂಬಂಧಿಸಿದ ಕಾನೂನು ವಿಷಯದ ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪಾಲ್ಗೋಂಡು ಮಾತನಾಡಿದರು.ವೈದ್ಯಕೀಯ ವೃತ್ತಿಯಲ್ಲಿ ನ್ಯಾಯಸಮ್ಮತವಾಗಿ ಪ್ರಾಕ್ಟೀಸ ಮಾಡಲು ಐದು ಪ್ರಮುಖ ನ್ಯಾಯಾಂಗ ಕೇಸುಗಳನ್ನು…

Read More

ಪುನೀತ ರಾಜಕುಮಾರ ಸಾಧನೆ, ಸೇವೆ ಯುವಪೀಳಿಗೆಗೆ ಪ್ರೇರಣೆ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 17:ಪುನೀತ ರಾಜಕುಮಾರ ಅವರ ಸಾಧನೆ, ಸೇವೆಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡರೆ ಜೀವನ ಸಾರ್ಥಕವಾಗುತ್ತದೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಮಂಗಳವಾರ ತಾಲೂಕಿನ ನಾಗಠಾಣ ಗ್ರಾಮದ ಅರಿವು ಕೇಂದ್ರದಲ್ಲಿ ಪುನೀತ ರಾಜಕುಮಾರ ಅವರ ಜನ್ಮದಿನದ ನಿಮಿತ್ತ ಹಮ್ಮಿಕೊಂಡ ‘ಸ್ಫೂರ್ತಿ ದಿನ’ ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಪುನೀತ ರಾಜಕುಮಾರ ತಮ್ಮ ವಿನಯಶೀಲ ನಡವಳಿಕೆ ಮತ್ತು ನಟನೆಯಿಂದ ಕನ್ನಡಿಗರ ಮನೆಮಾತಾಗಿದ್ದರು. ತಮ್ಮಸಮಾಜ ಸೇವೆ, ಮಾನವೀಯ ಗುಣಗಳಿಂದ ಜನಮನ ಗೆದ್ದು, ಎಲ್ಲರಿಗೂ ಸ್ಪೂರ್ತಿಯಾಗಿದ್ದಾರೆ. ತಮ್ಮ ಜೀವನದಲ್ಲಿ ಮಾಡಿದ…

Read More

ಸಾಲ ಸೌಲಭ್ಯಕ್ಕೆ‌ ಸಲ್ಲಿಸಿದ‌ ಫಲಾನುಭವಿಗಳ ಅರ್ಜಿಗಳನ್ನು ತಕ್ಷಣಕ್ಕೆ ವಿಲೇವಾರಿ ಮಾಡಿ: ಜಿಪಂ‌ ಸಿಇಒ ರಿಷಿ ಆನಂದ ಕಟ್ಟುನಿಟ್ಟಿನ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ‌ ಮಾ. 17:ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಸೇರಿದಂತೆ ಸರಕಾರದ ವಿವಿಧ ಯೋಜನೆಯಡಿ ಅನೇಕ ಫಲಾನುಭವಿಗಳು ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿರುತ್ತಾರೆ. ಆದರೆ ಈವರೆಗೂ ಅರ್ಜಿಗಳನ್ನು‌ ಬ್ಯಾಂಕ್ ಗಳು ಬಾಕಿ ಉಳಿಸಿಕೊಂಡಿದ್ದನ್ನು ಗಂಭೀರವಾಗಿ ಪರಿಗಣಿಸಿದ್ದು, ತಕ್ಷಣಕ್ಕೆ ಫಲಾನುಭವಿಗಳ ಅರ್ಜಿಗಳನ್ನು ತುರ್ತಾಗಿ ಪರಿಶೀಲಿಸಿ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ‌ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚಿಸಿದರು.ಜಿಲ್ಲಾ ಅಗ್ರಣೀಯ ಬ್ಯಾಂಕ್ ವತಿಯಿಂದ ತ್ರೈಮಾಸಿಕ ಡಿಸ್ಟ್ರಿಕ್ಟ್ ಕನ್ಸಲ್ಟೇಟಿವ್ ಕಮಿಟಿ ಸಭೆ ಹಾಗೂ ಡಿಸ್ಟ್ರಿಕ್ಟ್ ಲೆವೆಲ್…

Read More

ಸರಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 17:ಕರ್ನಾಟಕ ರಾಜ್ಯದಲ್ಲಿ ಸರಕಾರಿ ಹುದ್ದೆಗಳ ನೇಮಕಾತಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ನಗರದಲ್ಲಿ ಎಬಿವಿಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.ಮನವಿ ಸ್ವೀಕರಿಸಲು ಡಿ.ಸಿ. ತಡ ಮಾಡಿದ್ದಕ್ಕೆ ಜಿಲ್ಲಾಧಿಕಾರಿಗಳ ಕಚೇರಿಗೆ ನುಗ್ಗಲು ವಿದ್ಯಾರ್ಥಿಗಳು ವಿಫಲ ಯತ್ನ ಮಾಡಿದರು.ನಂತರ ಆಗಮಿಸಿದ ಜಿಲ್ಲಾಧಿಕಾರಿಗಳು ಮನವಿ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಎಬಿವಿಪಿಯ ಕೇಂದ್ರೀಯ ಕಾರ್ಯ ಸಮಿತಿ ಸದಸ್ಯರಾದ ಸಚಿನ ಕುಳಗೇರಿ ಮಾತನಾಡಿ, ರಾಜ್ಯದಲ್ಲಿ ಕಳೆದ 5-6 ವರ್ಷಗಳಿಂದ ವಿದ್ಯಾರ್ಥಿಗಳ ಪರಿಸ್ಥಿತಿ ಶೋಚನೀಯವಾಗಿದೆ. ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ವಿದ್ಯಾರ್ಥಿಗಳ…

Read More

22 ವಿವಿಧ ಸ್ವತ್ತಿನ ಪ್ರಕರಣ: 36 ಆರೋಪಿಗಳ ಬಂಧನ

ಸಪ್ತಸಾಗರ ವಾರ್ತೆ ವಿಜಯಪುರ, ಮಾ. 16: ಕಳ್ಳತನ, ಸುಲಿಗೆ ಪ್ರಕರಣಗಳಲ್ಲಿ2025-26 ನೇ ಸಾಲಿನಲ್ಲಿ ಬಸವನ ಬಾಗೇವಾಡಿ ಉಪ-ವಿಭಾಗದ ಮುದ್ದೇಬಿಹಾಳ, ನಿಡಗುಂದಿ, ತಾಳಿಕೋಟೆ, ಬಸವನ ಬಾಗೇವಾಡಿ ಹಾಗೂ ಕೂಡಗಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದಾಖಲಾದ ತೋಟದ ಮನೆ, ದೇವಸ್ಥಾನದ ಬಾಗಿಲು, ಮನೆಗಳ ಬಾಗಿಲು ಮುರಿದು ಬಂಗಾರ, ಬೆಳ್ಳಿ ಆಭರಣಗಳು ಹಾಗೂ ನಗದು ಕಳ್ಳತನ, ಬಂಗಾರದ ತಾಳಿಸರ ಸುಲಿಗೆ ಪ್ರಕರಣ, ಮೋಸ ಮಾಡಿ ಕಳವು ಪ್ರಕರಣ, ಮೋಟಾರ್ ಬೈಕ್ ಹಾಗೂ ರೈತರ ಜಮೀನಿನಲ್ಲಿರುವ ಬೋರವೆಲ್ ಪಂಪಸೆಟ್ ಕಳ್ಳತನ ಪ್ರಕರಣಗಳನ್ನು ಪತ್ತೆ…

Read More

ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಆಸಂಗಿಯವರಿಗೆ ಸನ್ಮಾನ

ಸಪ್ತಸಾಗರ ವಾರ್ತೆ ವಿಜಯಪುರ, ಮಾ. 16:ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶ್ರೀ ರುದ್ರಪ್ಪ ಆಸಂಗಿ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಹಾಗೂ ಪ್ರಕಾಶಕರ ಸಂಘ ಬೆಂಗಳೂರು ವತಿಯಿಂದ ಸೋಮವಾರ ವಿಜಯಪುರದಲ್ಲಿ ಸನ್ಮಾನಿಸಲಾಯಿತು.ಸಂಘದ ರಾಜ್ಯಾಧ್ಯಕ್ಷ ಡಾ. ಮೆಹಬೂಬ ಮಾಲಬಾವಡಿ ಹಾಗೂ ಪದಾಧಿಕಾರಿಗಳು ಸಂಘದ ಕಚೇರಿಯಲ್ಲಿ ಆಸಂಗಿಯವರಿಗೆ ಸನ್ಮಾನಿಸಿದರು.ಇದೇ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಡಾ. ಮೆಹಬೂಬ ಮಾಲಬಾವಡಿ ಅವರು ಮಾತನಾಡಿ, ಹಿರಿಯ ಪತ್ರಕರ್ತ ರುದ್ರಪ್ಪ ಆಸಂಗಿ ಅವರು ಕನ್ನಡಪ್ರಭ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದನ್ನು ಪರಿಗಣಿಸಿ ಕರ್ನಾಟಕ…

Read More